ಪಕ್ಷಗಳಲ್ಲಿ ಸ್ಫೋಟಗೊಂಡಿದೆ ಭಿನ್ನಮತ ಗೊಂದಲ ಬೇಗ ನಿವಾರಿಸಿ 


Team Udayavani, Jun 11, 2018, 10:19 AM IST

logo.jpg

ರಾಜ್ಯದ ರಾಜಕೀಯ ಸಂಪೂರ್ಣ ಗೊಂದಲಮಯವಾಗಿದೆ. ಚುನಾವಣೆ ಮುಗಿದು ಒಂದು ತಿಂಗಳಾಗುತ್ತಾ ಬಂದಿದ್ದರೂ ರಾಜ್ಯದಲ್ಲಿನ್ನೂ ಆಡಳಿತ ಯಂತ್ರ ಕಾರ್ಯಾರಂಭ ಮಾಡಿಲ್ಲ. ಸಮ್ಮಿಶ್ರ ಸರಕಾರ ರಚನೆಯ ಕಗ್ಗಂಟು ದಿನ ಕಳೆದಂತೆ ಇನ್ನಷ್ಟು ಬಿಗಿಯಾಗುತ್ತಿದ್ದು, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರು ಈಗ ತಲೆದೋರಿರುವ ಬಿಕ್ಕಟ್ಟಿನಿಂದ ಪಾರಾಗುವ ದಾರಿ ಕಾಣದೆ ಕತ್ತಲಲ್ಲಿ ತಡಕಾಡುತ್ತಿದ್ದಾರೆ. ತೃತೀಯ ಸ್ಥಾನಿಯಾದ ಪಕ್ಷವನ್ನು ದ್ವಿತೀಯ ಸ್ಥಾನಿಯಾದ ಪಕ್ಷ ಬೆಂಬಲಿಸಿ ಸರಕಾರ ರಚಿಸಲು ಮುಂದಾದಾಗಲೇ ಈ ರೀತಿಯ ಪರಿಸ್ಥಿತಿ ಉದ್ಭವಿಸಬಹುದು ಎಂಬ ಅಂದಾಜು ಇತ್ತು. ಅದೀಗ ನಿಜವಾಗಿದೆ. ಎರಡೂ ಪಕ್ಷಗಳಲ್ಲಿ ಸಾಕಷ್ಟು ಸಂಖ್ಯೆಯ ಸಚಿವ ಪದವಿ ಆಕಾಂಕ್ಷಿಗಳು ಇರುವುದರಿಂದ ಒಬ್ಬರಿಗೆ ಕೊಟ್ಟರೆ ಇನ್ನೊಬ್ಬರಿಗೆ ಅಸಮಾಧಾನ ಉಂಟಾಗುತ್ತಿದೆ. 

ಒಂದು ರೀತಿಯಲ್ಲಿ ಇದು ಕಾಂಗ್ರೆಸ್‌ ಸ್ವತಹ ಆಹ್ವಾನಿಸಿಕೊಂಡ ಗೊಂದಲ. ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯಬೇಕೆಂಬ ಏಕೈಕ ಗುರಿಯಿಂದ ಅದು ಬರೀ 38 ಸ್ಥಾನಗಳಿದ್ದ ಪಕ್ಷಕ್ಕೆ ಮುಖ್ಯಮಂತ್ರಿ ಪಟ್ಟವನ್ನು ಧಾರೆಯೆರೆದು ನೀಡಿತು. ಆಗ ಬೇಷರತ್ತು ಬೆಂಬಲ ಘೋಷಿಸಿದ ಪಕ್ಷ ಅನಂತರ ಒಂದೊಂದೇ ಷರತ್ತುಗಳನ್ನು ಮುಂದಿಡತೊಡಗಿತು. ಸಾಕಷ್ಟು ಹೆಣಗಾಡಿದ ಬಳಿಕ ಹೇಗೋ ಸರಕಾರವೊಂದು ಅಸ್ತಿತ್ವಕ್ಕೆ ಬಂದು ಇನ್ನೇನು ಎಲ್ಲವೂ ಸರಿಯಾಗುತ್ತಿದೆ ಎಂದುಕೊಳ್ಳುತ್ತಿರುವಾಗಲೇ ಭಿನ್ನಮತ ಘಟಸ್ಫೋಟವಾಗಿದೆ. ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಗದವರು ಬಂಡೆದಿದ್ದರೆ ಜೆಡಿಎಸ್‌ನಲ್ಲಿ ಸಮರ್ಪಕ ಖಾತೆ ಸಿಗಲಿಲ್ಲ ಎಂದು ಹಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಪರಿಸ್ಥಿತಿ ಎಷ್ಟು ಹದಗೆಟ್ಟಿದೆಯೆಂದರೆ ಸ್ವತಹ ಹೈಕಮಾಂಡ್‌ ಸೂಚಿಸಿದರೂ ಭಿನ್ನಮತ ಶಮನವಾಗುತ್ತಿಲ್ಲ.

ಮುಖ್ಯವಾಗಿ ಸಚಿವ ಪದವಿ ವಂಚಿತರಾಗಿರುವ ಎಂ. ಬಿ. ಪಾಟೀಲ್‌ ಅವರು ಸಿಟ್ಟಿನಿಂದ ಕುದಿಯುತ್ತಿದ್ದು, ಮುಖ್ಯಮಂತ್ರಿಯೇ ಬಂದರೂ ಅವರ ಆಕ್ರೋಶ ತಣಿದಿಲ್ಲ. ಕಾಂಗ್ರೆಸ್‌ ಈಗ ಒಡೆದ ಮನೆಯಾಗಿದೆ. ಪರಮೇಶ್ವರ್‌ ಮತ್ತು ಸಿದ್ದರಾಮಯ್ಯ ಬಣದ ಜತೆಗೆ ಇನ್ನೂ ಕೆಲವು ಬಣಗಳು ಹುಟ್ಟಿಕೊಂಡು ಪಕ್ಷವೀಗ ಈ ಬಣಗಳನ್ನು ಹದ್ದುಬಸ್ತಿನಲ್ಲಿಡಲು ಸಾಧ್ಯವಾಗದೆ ಒದ್ದಾಡುತ್ತಿದೆ. ಸ್ಥಾನಮಾನ ಸಿಗದ ನಾಯಕರ ಬೆಂಬಲಿಗರು ನಡೆಸುತ್ತಿರುವ ಬಹಿರಂಗ ಪ್ರತಿಭಟನೆಗಳಿಂದ ಕಾನೂನು ಸಮಸ್ಯೆಯೂ ತಲೆದೋರುತ್ತಿದ್ದು, ಇದನ್ನೆಲ್ಲ ನಿಭಾಯಿಸಬೇಕಾಗಿದ್ದ ಸರಕಾರ ಇನ್ನೂ ಈ ಗೋಜಲಿನಿಂದ ಹೊರ ಬರುವ ಪ್ರಯತ್ನವನ್ನು ಮಾಡದಿರುವುದು ಸರಿಯಾದ ನಡೆಯಲ್ಲ. ಜೆಡಿಎಸ್‌ನ ಜಿ.ಟಿ. ದೇವೆಗೌಡ ಮತ್ತು ಪುಟ್ಟರಾಜು ತಮಗೆ ಸಿಕ್ಕಿರುವ ಖಾತೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಬರೀ ಎಂಟನೇ ತರಗತಿಯಾಗಿರುವ ಜಿ.ಟಿ.ಗೆ ಉನ್ನತ ಶಿಕ್ಷಣ ಖಾತೆ ನೀಡಿರುವ ಕ್ರಮವೂ ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದೇ ವಿಪಕ್ಷಗಳು ಅಂದು ಪ್ರಧಾನಿ ಮೋದಿ ಮತ್ತು ಸಚಿವೆ ಸ್ಮತಿ ಇರಾನಿಯವರ ವಿದ್ಯಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದವು ಎನ್ನುವುದನ್ನು ನೆನಪಿಸಿಕೊಳ್ಳಬೇಕು. 

ಸ್ಥಾನಮಾನ ಸಿಗದವರು ಬಂಡೇಳುವ ಸಾಧ್ಯತೆಯಿದೆ ಎಂಬ ಸೂಚನೆ ಆರಂಭದಲ್ಲೇ ಇತ್ತು. ಇದರ ಹೊರತಾಗಿಯೂ ಎರಡೂ ಪಕ್ಷಗಳು ಇದನ್ನು ಶಮನಗೊಳಿಸಲು ಸಮರ್ಪಕವಾಗಿ ತಂತ್ರವನ್ನು ರೂಪಿಸಿಕೊಂಡಿರಲಿಲ್ಲ. ಕನಿಷ್ಠ ಅತೃಪ್ತರನ್ನು ಸಮಾಧಾನಿಸುವ ಸಲುವಾಗಿಯೇ ಸರಕಾರ ರಚಿಸುವಾಗ ಮಾಡಿದಂತೆ ನಾಯಕರದೊಂದು ತಂಡವನ್ನು ರಚಿಸಬಹುದಿತ್ತು. ಆದರೆ ಇದ್ಯಾವುದನ್ನೂ ಮಾಡದೆ ಈಗ ಭಿನ್ನಮತ ಶಮನ ಕಸರತ್ತು ಮಾಡುತ್ತಿದೆ. 

ರಾಜ್ಯದಲ್ಲಿ ಒಂದು ವರ್ಷದ ಹಿಂದೆಯೇ ಚುನಾವಣಾ ಕಾವು ಕಾಣಿಸಿಕೊಂಡಿತ್ತು. ಅನಂತರ ನಡೆದದ್ದೆಲ್ಲ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕಾರ್ಯಕ್ರಮಗಳೇ. ಆಡಳಿತ ಯಂತ್ರವೂ ಸಂಪೂರ್ಣವಾಗಿ ಚುನಾವಣೆಯಲ್ಲಿ ತೊಡಗಿಕೊಂಡಿತ್ತು. ಚುನಾವಣೆ ಘೋಷಣೆಯಾದ ಮೇಲಂತೂ ಸರಕಾರಿ ಕೆಲಸಗಳೆಲ್ಲ ನನೆಗುದಿಗೆ ಬಿದ್ದಿವೆ. ಚುನಾವಣೆ ಮುಗಿದು ಹೊಸ ಸರಕಾರ ರಚನೆಯಾದ ಬಳಿಕ ಜಡವಾಗಿರುವ ಆಡಳಿತ ಯಂತ್ರಕ್ಕೆ ಚುರುಕುಮುಟ್ಟಿಸುವ ಕೆಲಸ ಮೊದಲು ಆಗಬೇಕಿತ್ತು. ಆದರೆ ಅತಂತ್ರ ಸ್ಥಿತಿಯಿಂದಾಗಿ ಆಡಳಿತದಲ್ಲಿ ಸ್ಥಿರತೆಯೇ ಇಲ್ಲದಂತಾಗಿದೆ. ಇದರಿಂದ ಜನರಿಗೆ ಆಗಿರುವ ಸಮಸ್ಯೆಗಳು ಒಂದೆರಡಲ್ಲ. ಆದರೆ ಗೆದ್ದು ಬಂದಿರುವವರು ಇದ್ಯಾವುದರ ಪರಿವೆ ಇಲ್ಲದಂತೆ ಕಿತ್ತಾಡುವುದರಲ್ಲಿ ಮಗ್ನರಾಗಿದ್ದಾರೆ. 

ಸ್ವತಹ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾದಿಯಾಗಿ ಸರಕಾರದಲ್ಲಿರುವ ಪ್ರಮುಖರೆಲ್ಲ ಬಂಡಾಯ ಶಮನದಲ್ಲಿ ನಿರತರಾದರೆ ಆಡಳಿತ ನಡೆಸುವವವರು ಯಾರು? ಆರಂಭದಲ್ಲೇ ಅಧಿಕಾರಕ್ಕಾಗಿ ಈ ರೀತಿ ಕಿತ್ತಾಡುವುದರಿಂದ ಯಾವ ರೀತಿಯ ಆಡಳಿತವನ್ನು ನಿರೀಕ್ಷಿಸಬಹುದು ಎಂಬೆಲ್ಲ ಪ್ರಶ್ನೆಗಳು ಜನರಲ್ಲಿ ಸುಳಿದಾಡುತ್ತಿವೆ. ಭಿನ್ನಮತ ಶಮನವನ್ನು ಪಕ್ಷದ ಉಸಾಬರಿಗೆ ಬಿಟ್ಟು ಆಡಳಿದತ್ತ ಗಮನ ನೀಡಬೇಕಾದುದು ಸದ್ಯದ ಅಗತ್ಯ. ಸರಕಾರ ಈ ನಿಟ್ಟಿನಲ್ಲಿ ಮುಂದಡಿಯಿಡಲಿ. ಅಂತೆಯೇ ವಿಪಕ್ಷವೂ ಕದಡಿದ ನೀರಿನಲ್ಲಿ ಮೀನು ಹಿಡಿಯುವ ಪ್ರಯತ್ನ ಮಾಡದೆ ಜವಾಬ್ದಾರಿಯುತವಾಗಿ ವರ್ತಿಸಬೇಕು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.