ಬಜೆಟ್‌ ಮಂಡನೆ ತಪ್ಪಲ್ಲ, ವೈಯಕ್ತಿಕ ಪ್ರತಿಷ್ಠೆ ಅಡ್ಡಿಯಾಗದಿರಲಿ


Team Udayavani, Jun 18, 2018, 10:38 AM IST

budget.jpg

2 ಪಕ್ಷಗಳ ನಡುವಿನ ಹಗ್ಗಜಗ್ಗಾಟದಂತೆ ಇದು ಕಾಣಿಸುತ್ತಿಲ್ಲ. ಇಬ್ಬರು ನಾಯಕರ ರಾಜಕೀಯ ಪ್ರತಿಷ್ಠೆಯಂತೆ ವೇದ್ಯವಾಗುತ್ತಿದೆ. ತಾವು ಮಂಡಿಸಿದ ಯೋಜನೆಗಳನ್ನು ರದ್ದು ಮಾಡಬಹುದು ಎಂಬುದು ಸಿದ್ದರಾಮಯ್ಯನವರ ಆತಂಕ.

ರಾಜ್ಯದಲ್ಲಿ ಹೊಸ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹಂತ ಹಂತಕ್ಕೂ ಸವಾಲುಗಳು ಎದುರಾಗುತ್ತಲೇ ಇವೆ. ಗಮನಿಸಬೇಕಾದ ಸಂಗತಿಯೆಂದರೆ, ಇವ್ಯಾವುವೂ ಬಾಹ್ಯ ಸವಾಲುಗಳಲ್ಲ. ಮಿತ್ರ ಪಕ್ಷಗಳ ನಡುವೆ ಹಾಗೂ ಪಕ್ಷದೊಳಗೇ ಹುಟ್ಟಿಕೊಂಡ ಸಮಸ್ಯೆಗಳು. ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯಲ್ಲೇ ಮೀನಾಮೇಷ ಎಣಿಸುತ್ತ ತಿಂಗಳು ಕಳೆದು ಹೋಯಿತು. ಆಡಳಿತ ಹಳಿಯೇರತೊಡಗಿದೆ ಎಂದುಕೊಳ್ಳುವಷ್ಟರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಮಧ್ಯೆ ಬಜೆಟ್‌ ಮಂಡನೆ ವಿಚಾರವಾಗಿ ಹಗ್ಗಜಗ್ಗಾಟ ಆರಂಭವಾಗಿದೆ. ಉಭಯ ಪಕ್ಷಗಳ ನಡುವೆ ಸಮನ್ವಯ ಏರ್ಪಡುವ ದೃಷ್ಟಿಯಿಂದ ರಚಿಸಲಾದ ಸಮನ್ವಯ ಸಮಿತಿಯ ಸಭೆಯಲ್ಲೇ ಬಜೆಟ್‌ ಮಂಡಿಸಬೇಕೇ, ಬೇಡವೇ ಎಂಬ ವಿಚಾರಕ್ಕೆ ಬಿಸಿಬಿಸಿ ಚರ್ಚೆ ನಡೆದಿದೆ. ಸಭೆ ಮುಗಿದರೂ ಆ ವಿಷಯ ಮಾತ್ರ ಇತ್ಯರ್ಥವಾಗಿಲ್ಲ ಎಂಬುದಕ್ಕೆ ಆ ನಂತರ ಉಭಯ ನಾಯಕರು ಬಹಿರಂಗವಾಗಿ ನೀಡಿದ ಹೇಳಿಕೆಗಳೇ ಸಾಕ್ಷಿಗಳಾಗಿವೆ. ಸಿಎಂ ಕುಮಾರಸ್ವಾಮಿ ತಾವು ಬಜೆಟ್‌ ಮಂಡಿಸಿಯೇ ಸಿದ್ಧ, ಈಗಾಗಲೇ ಅಧಿಕಾರಿಗಳಿಗೆ ಸಿದ್ಧತೆ ಆರಂಭಿಸು ವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಬಜೆಟ್‌ ಅಗತ್ಯವಿಲ್ಲ, ಪೂರಕ ಅಂದಾಜು ಗಳಲ್ಲಿ ಹೊಸ ಕಾರ್ಯಕ್ರಮ ಸೇರಿಸಿದರೆ ಸಾಕು ಎಂದಿದ್ದಾರೆ.

ಇದು ಎರಡು ಪಕ್ಷಗಳ ನಡುವಿನ ಹಗ್ಗಜಗ್ಗಾಟದಂತೆ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲ. ಇಬ್ಬರು ನಾಯಕರ ರಾಜಕೀಯ ಪ್ರತಿಷ್ಠೆಯಂತೆ ವೇದ್ಯವಾಗುತ್ತಿದೆ. ತಾವು ಮಂಡಿಸಿದ ಬಜೆಟ್‌ನ ಯೋಜನೆಗಳನ್ನು ಹೊಸ ಬಜೆಟ್‌ನಲ್ಲಿ ಮುಖ್ಯಮಂತ್ರಿ ರದ್ದು ಮಾಡಬಹುದು ಅಥವಾ ಮಾರ್ಪಾಡು ಮಾಡಬಹುದು ಎಂಬುದು ಸಿದ್ದರಾಮಯ್ಯನವರ ಆತಂಕ. ತಮ್ಮ ನಿಲುವನ್ನು ವ್ಯಕ್ತಪಡಿಸಲು ಸಮನ್ವಯ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ಅವರು ಬಳಸಿಕೊಂಡಿದ್ದಾರೆ. ತಾವು ಮುಖ್ಯಮಂತ್ರಿಯಾಗಿ, ಹಣಕಾಸು ಖಾತೆಯನ್ನೂ ಇಟ್ಟುಕೊಂಡ ಮೇಲೆ ಬಜೆಟ್‌ ಮಂಡಿಸದೇ ಹೋದರೆ ರಾಜಕೀಯವಾಗಿ ಹೆಗ್ಗಳಿಕೆ ಗಳಿಸಲು ಹೇಗೆ ಸಾಧ್ಯ? ತಮ್ಮ ಚಿಂತನೆಯ ಯೋಜನೆಗಳ ಪ್ರಕಟಣೆಗೆ ಬಜೆಟ್‌ ಬೇಕು ಎಂಬುದು ಕುಮಾರಸ್ವಾಮಿಯವರ ವಾದ. 

ಹಳೆ ಸರ್ಕಾರ ಬಜೆಟ್‌ ಮಂಡಿಸಿ ಒಂದೆರಡು ತಿಂಗಳಲ್ಲೇ ಚುನಾವಣೆ ನಡೆದು, ಹೊಸ ಸರ್ಕಾರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮತ್ತೆ ಬಜೆಟ್‌ ಮಂಡಿಸುವುದು ಸಾಮಾನ್ಯ ಸಂಪ್ರದಾಯ. ಚುನಾವಣೆ ಹೊತ್ತಲ್ಲಿ ಎರಡು, ಮೂರು ತಿಂಗಳ ಅವಧಿಗೆ ಲೇಖಾನುದಾನ ಅಥವಾ ಮಿನಿ ಬಜೆಟ್‌ ಮಂಡಿಸಲಾಗುತ್ತದೆ. ಬಳಿಕ ಹೊಸ ಸರ್ಕಾರ ಉಳಿದ ಒಂಭತ್ತು, ಹತ್ತು ತಿಂಗಳಿಗೆ ಪೂರ್ಣ ಬಜೆಟ್‌ ಮಂಡಿಸುತ್ತದೆ. ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಬಜೆಟ್‌ ಮಂಡಿಸಿ ಚುನಾವಣೆ ಎದುರಿಸಿದ್ದರು. ಬಳಿಕ ಅಸ್ತಿತ್ವಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಹೊಸದಾಗಿ ಬಜೆಟ್‌ ಮಂಡಿಸಿತ್ತು. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ ಮಂಡಿಸುತ್ತೇನೆ ಎಂಬುದರಲ್ಲಿ ವಿಶೇಷವೇನಿಲ್ಲ, ಸಹಜವೇ. ಇದು ತಪ್ಪೂ ಅಲ್ಲ. ಅವರು ಬಜೆಟ್‌ ಮಂಡಿಸಲಿ. ಮುಖ್ಯಮಂತ್ರಿಗೆ ಇಷ್ಟಾದರೂ ಹೆಗ್ಗಳಿಕೆ ಇಲ್ಲದಿದ್ದರೆ, ಈ ರಾಜಕೀಯ ವ್ಯವಸ್ಥೆಯಲ್ಲಿ ಏನೂ ಅಲ್ಲ ಎನಿಸಿಕೊಳ್ಳುತ್ತಾರೆ. ಎಷ್ಟೇ ಸಾರಿ ಬಜೆಟ್‌ ಮಂಡಿಸಿದರೂ, ಇಲಾಖಾವಾರು ಹಂಚಿಕೆ ಗಳನ್ನು ಉಲ್ಟಾ ಮಾಡಲಾಗದು. ಶೂನ್ಯಗೊಳಿಸಲೂ ಸಾಧ್ಯವಿಲ್ಲ.  ಈ ವಿಷಯವನ್ನೇ ಮಾಜಿ ಮುಖ್ಯಮಂತ್ರಿ ಪ್ರತಿಷ್ಠೆಯಾಗಿ ತೆಗೆದುಕೊಳ್ಳುವುದು ಸರಿಯಲ್ಲ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ, ಕಳೆದ ಬಾರಿ ಆಡಳಿತದಲ್ಲಿದ್ದ ಪಕ್ಷ ಮಿತ್ರಪಕ್ಷವಾಗಿ ಸರ್ಕಾರದಲ್ಲಿ ಕೈಜೋಡಿಸಿದೆ. ಇದು ಸಮ್ಮಿಶ್ರ ಸರ್ಕಾರವಾಗಿರುವುದರಿಂದ ಪರಸ್ಪರ ಹೊಂದಾಣಿಕೆ ಅತ್ಯಗತ್ಯ. ಹಾಗಾಗಿ ಕಾಂಗ್ರೆಸ್‌ ಸರ್ಕಾರ ಹಿಂದೆ ಘೋಷಣೆ ಮಾಡಿದ್ದನ್ನು ಮುಂದು ವರಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಳ್ಳುವುದು ಸೂಕ್ತ. ಇಲ್ಲದಿದ್ದರೆ, ಮತ್ತೆ ಸಂಘರ್ಷಕ್ಕೆ ದಾರಿಯಾದೀತು. ನಿತ್ಯವೂ ಗುದ್ದಾಟದ್ದೇ ಸುದ್ದಿಯಾದರೆ ಅದು ಸರ್ಕಾರಕ್ಕೆ ಭೂಷಣವಲ್ಲ. ಆಡಳಿತರೂಢ ನಾಯಕರು ಇದಕ್ಕೆ ಆಸ್ಪದ ಮಾಡಿಕೊಡುವುದೂ ಸರಿಯಲ್ಲ. ಜನರು ನಿರೀಕ್ಷೆ ಮಾಡುವುದು ಕಲಹವಿಲ್ಲದೆ ಸುಗಮವಾಗಿ ನಡೆಯುವ ಸರ್ಕಾರವನ್ನು ಎಂಬುದನ್ನು ಮರೆಯಬಾರದು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.