ಮಾನವ ಹಕ್ಕು ರಕ್ಷಿಸುವುದ್ಯಾರು?ಆತ್ಮಾವಲೋಕನ ಮಾಡಿಕೊಳ್ಳಲಿ…


Team Udayavani, Jun 22, 2018, 12:35 PM IST

un-flag-flying.jpg

ವಿಶ್ವಸಂಸ್ಥೆ ಮಾನವ ಹಕ್ಕು  ಮಂಡಳಿ (ಯುಎನ್‌ಎಚ್‌ಆರ್‌ಸಿ) ಯಿಂದ ಹೊರ ಬರಲು ಅಮೆರಿಕ ನಿರ್ಧರಿಸಿದೆ. ಅಮೆರಿಕದ ಈ ನಿರ್ಧಾರ ನೋಡಿ ಜಗತ್ತಿನ ಅನೇಕ ರಾಷ್ಟ್ರಗಳು ಅಚ್ಚರಿ-ಬೇಸರ ವ್ಯಕ್ತಪಡಿಸುತ್ತಿವೆ. ಇದರಿಂದಾಗಿ ಜಾಗತಿಕ ಮಾನವಹಕ್ಕುಗಳ ಉಲ್ಲಂಘನೆಗಳು ಹೆಚ್ಚಾಗಬಹುದು
ಎನ್ನುವ ಆತಂಕ ಅನೇಕ ರಾಷ್ಟ್ರಗಳನ್ನು ಮತ್ತು ಮಾನವ ಹಕ್ಕು ಸಂಘಟನೆಗಳನ್ನು ಕಾಡುತ್ತಿದೆ. ಆದರೆ ಅಮೆರಿಕ ಹೇಳುತ್ತಿರುವುದೇ ಬೇರೆ. ಯುಎನ್‌ಎಚ್‌ಆರ್‌ಸಿಯಲ್ಲಿರುವ ಸದಸ್ಯ ರಾಷ್ಟ್ರಗಳೆಲ್ಲ ಇಸ್ರೇಲ್‌ ಬಗ್ಗೆ ಪೂರ್ವಗ್ರಹ ಪೀಡಿತವಾಗಿವೆ ಮತ್ತು ಈ ಆಯೋಗದಲ್ಲಿ ಮಾನವ ಹಕ್ಕು
ಉಲ್ಲಂಘನೆ ಮಾಡುತ್ತಿರುವ ಅನೇಕ ರಾಷ್ಟ್ರಗಳಿವೆ ಎನ್ನುವುದು ಅಮೆರಿಕದ ಅಸಮಾಧಾನಕ್ಕೆ ಕಾರಣವಂತೆ.

“ಮಾನವಹಕ್ಕು ಉಲ್ಲಂಘನೆಯ ಮಾತನಾಡುವ ಅಮೆರಿಕ ತನ್ನ ಸ್ವಹಿತಾಸಕ್ತಿಗಾಗಿ ಅನ್ಯದೇಶಗಳಲ್ಲಿ ಮಾಡುತ್ತಿರುವುದೇನು? ತನ್ನ ಅಥವಾ ತನ್ನ ಮಿತ್ರ ರಾಷ್ಟ್ರದ(ಇಸ್ರೇಲ್‌) ವಿಷಯ ಬಂದಾಗ ಅದಕ್ಕೆ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿಯಲ್ಲಿ “ಪೂರ್ವಗ್ರಹ’  ಕಾಣಿಸುತ್ತದೆಯಷ್ಟೆ’ ಎನ್ನುವುದು ಅಸಮಾಧಾನ ವ್ಯಕ್ತಪಡಿಸುತ್ತಿರುವವರ ವಾದ. ಈ ವಾದವನ್ನೂ ತಳ್ಳಿ ಹಾಕುವಂತಿಲ್ಲ. ಇತ್ತೀಚೆಗಷ್ಟೇ ಟ್ರಂಪ್‌ ಅವರು ಮಾನವ
ಹಕ್ಕು ಉಲ್ಲಂಘನೆಗೆ ಖ್ಯಾತರಾದ ಕಿಮ್‌ ಜಾಂಗ್‌ ಉನ್‌ರ ಕೈ ಕುಲುಕಿ ಬಂದದ್ದು ನೆನಪಿಸಿಕೊಂಡಾಗ, ಅಮೆರಿಕದ ಇಬ್ಬಗೆ ಗುಣ ಗೋಚರ ವಾಗುತ್ತದೆ.

ಮಾನವ ಹಕ್ಕು ಉಲ್ಲಂಘನೆ ಮಹಾಪರಾಧವೇ, ಯಾರು ಮಾಡಿದರೂ ಅದನ್ನು ಖಂಡಿಸಲೇಬೇಕು. ಆದರೆ ವಿಶ್ವ ಸಂಸ್ಥೆ ಮಾನವ ಹಕ್ಕು ಮಂಡಳಿಯಲ್ಲಿ ಕೆಲ ವರ್ಷಗಳಿಂದ ಬಹುತೇಕ ಇಸ್ರೇಲ್‌ ಅನ್ನೇ ಗುರಿಯಾಗಿಸುತ್ತಾ ಬರುತ್ತಿರುವುದು ಸ್ಪಷ್ಟ. ಸೌದಿ ಅರೇಬಿಯಾ, ಚೀನಾ, ರಷ್ಯಾ, ಅಲ್ಜೀರಿಯಾ, ವಿಯೆಟ್ನಾಂ, ಇಂಡೋನೇಷ್ಯಾ, ಕ್ಯೂಬಾ, ವೆನಿಜುವೆಲಾದಂಥ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಮಾನವಹಕ್ಕು ಉಲ್ಲಂಘನೆಯ
ಬಗ್ಗೆ ಹೆಚ್ಚು ಚರ್ಚೆಗಳಾಗಿಯೇ ಇಲ್ಲ. ಇದನ್ನೇ ಅಮೆರಿಕ ಮೊದಲಿನಿಂದಲೂ ಪ್ರಶ್ನಿಸುತ್ತಾ ಬಂದಿತ್ತು.

ಇದರ ಹೊರತಾಗಿಯೂ ಮಾನವಹಕ್ಕು ಆಯೋಗದ ವಿರುದ್ಧದ ಅಮೆರಿಕದ ಅಸಮಾಧಾನಕ್ಕೆ ದೊಡ್ಡ ಇತಿಹಾಸವೇ ಇದೆ. 2006ರಲ್ಲಿ ಯುಎನ್‌ಎಚ್‌ಆರ್‌ಸಿ ಅಸ್ತಿತ್ವಕ್ಕೆ ಬಂದಾಗ ಅಮೆರಿಕದ ಅಂದಿನ ಅಧ್ಯಕ್ಷ ಜಾರ್ಜ್‌ ಬುಷ್‌ ತಮ್ಮ ದೇಶವನ್ನು ಇದರ ಭಾಗವಾಗಿಸಲು ನಿರಾಕರಿಸಿ 
ದ್ದರು. ಏಕೆಂದರೆ ಅದಕ್ಕೂ ಮುನ್ನ ವಿಶ್ವಸಂಸ್ಥೆಯಲ್ಲಿ ಇದೇ ರೀತಿಯ ಒಂದು ಸಂಸ್ಥೆಯಿತ್ತು. ಆ ಸಂಸ್ಥೆಯಲ್ಲೂ ಮಾನವ ಹಕ್ಕು ಉಲ್ಲಂಘನೆಯಲ್ಲಿ ಮುಂಚೂಣಿಯಲ್ಲಿರುವ ರಾಷ್ಟ್ರಗಳಿದ್ದವು, ಯುಎನ್‌ಎಚ್‌ಆರ್‌ಸಿ ಅದರ ಮುಂದುವರಿದ ಭಾಗವಷ್ಟೇ ಎಂದಿತ್ತು ಅಮೆರಿಕ. 2009ರಲ್ಲಿ ಒಬಾಮಾ ಆಡಳಿತಾವಧಿಯಲ್ಲಿ ಅಮೆರಿಕ ಯುಎನ್‌ಎಚ್‌ ಆರ್‌ಸಿ ಸದಸ್ಯತ್ವ ಪಡೆಯಿತು. ಒಬಾಮಾರ ಈ ನಿರ್ಧಾರವನ್ನು ಆಗ ವಿಶ್ವಸಂಸ್ಥೆಯಲ್ಲಿ ಅಮೆರಿಕದ ಪ್ರತಿನಿಧಿಯಾಗಿದ್ದ ಜಾನ್‌ ಬೋಲ್ಟನ್‌ ವಿರೋಧಿಸಿದ್ದರು. “”ಅಮೆರಿಕ ಮುಳುಗುತ್ತಿರುವ ಹಡಗಿನಲ್ಲಿ ಹತ್ತಿ ಕುಳಿತಂತಿದೆ” ಎಂದು ಕುಟುಕಿದ್ದರು. ಈಗ ಅದೇ ಜಾನ್‌ ಬೋಲ್ಟನ್‌ ಟ್ರಂಪ್‌ರ ರಾಷ್ಟ್ರೀಯ ಭದ್ರತಾ ಸಲಹೆಗಾರ ಎನ್ನುವುದು ಗಮನಿಸಬೇಕಾದ ಸಂಗತಿ. ಅಮೆರಿಕದ ಈಗಿನ ನಿರ್ಧಾರದ ಹಿಂದೆ ಬೋಲ್ಟನ್‌ ಪಾತ್ರ ಪ್ರಮುಖ ಎನ್ನಲಾಗುತ್ತಿದೆ.

ಇದೇನೇ ಇದ್ದರೂ ಜಾಗತಿಕ ಶಾಂತಿಗಾಗಿ, ಮಾನವೀಯ ಮೌಲ್ಯ ಗಳನ್ನು ಎತ್ತಿಹಿಡಿಯುವುದಕ್ಕಾಗಿ ಸ್ಥಾಪಿತವಾದ ಇಂಥ ಸಂಸ್ಥೆಗಳು ತಮ್ಮ ಉದ್ದೇಶ ಸಾಧನೆಯಲ್ಲಿ ಯಶಸ್ವಿಯಾಗುತ್ತಿಲ್ಲ ಎನ್ನುವುದೇ ಬೇಸರದ ಸಂಗತಿ. ಇದಕ್ಕೆ ಕಾರಣವೇನೆಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಅಮೆರಿಕದ ನಿರ್ಧಾರದಿಂದ ಜಾಗತಿಕ ಶಾಂತಿಯ ಮೇಲೆ ಋಣಾತ್ಮಕ ಪರಿಣಾಮ ಉಂಟಾಗಲಿದೆ ಎನ್ನುವ ಮಾತಿನಲ್ಲಿ ಎಷ್ಟು ಸತ್ಯವಿದೆಯೋ, ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿ(ಯುಎನ್‌ಎಚ್‌ಆರ್‌ಸಿ)ಯು ಪೂರ್ವ ಗ್ರಹದಿಂದ ಕಾರ್ಯ ನಿರ್ವಹಿಸುತ್ತಿದೆ, ಅದರಲ್ಲಿರುವ ಅನೇಕ
ರಾಷ್ಟ್ರಗಳು ನಿರ್ವಿಘ್ನವಾಗಿ ಮಾನವ ಹಕ್ಕು ಉಲ್ಲಂ ಸುತ್ತಿವೆ, ಕೇವಲ ಇಸ್ರೇಲ್‌ ಅನ್ನೇ ಗುರಿ ಮಾಡುತ್ತಿವೆ ಎನ್ನುವ ಅಮೆರಿಕದ ಆರೋಪದಲ್ಲೂ ಸತ್ಯಾಂಶವಿದೆ. ವಿಶ್ವಸಂಸ್ಥೆ ಈಗಲಾದರೂ ಯುಎನ್‌ಎಚ್‌ಆರ್‌ಸಿಯ ಸದಸ್ಯ ರಾಷ್ಟ್ರಗಳ ನಿಜ ಸ್ವರೂಪವನ್ನು ಕಣ್ಣುತೆರೆದು ನೋಡುವಂತಾಗಲಿ: ಮೊದಲು ಈ ಜಾಗತಿಕ ವೇದಿಕೆ ಸ್ವತ್ಛವಾಗಬೇಕು, ಆಗ ಮಾತ್ರ ಜಗತ್ತು ಸ್ವತ್ಛವಾಗಬಲ್ಲದು, ಶಾಂತವಾಗಬಲ್ಲದು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.