ಮೀಸಲಾತಿ ಹೋರಾಟ ಹಿಂಸಾಚಾರ: ಎಚ್ಚರಿಕೆ ಅಗತ್ಯ


Team Udayavani, Jul 26, 2018, 6:00 AM IST

11.jpg

ಮಹಾರಾಷ್ಟ್ರದಲ್ಲಿ ಮರಾಠರ ಮೀಸಲಾತಿ ಹೋರಾಟ ಮತ್ತೂಮ್ಮೆ ಕುದಿಯತೊಡಗಿದೆ. ಪ್ರತಿಭಟನೆಕಾರರು ಪೊಲೀಸರೊಂದಿಗೆ ನೇರ ಹೋರಾಟಕ್ಕಿಳಿದಿದ್ದು, ವ್ಯಾಪಕವಾಗಿ ಹಿಂಸಾಚಾರ ನಡೆಯುತ್ತಿದೆ. ಓರ್ವ ವ್ಯಕ್ತಿ ಈಗಾಗಲೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಹಲವು ಮಂದಿ ಈ ಪ್ರಯತ್ನ ಮಾಡಿದ್ದಾರೆ. ಬುಧವಾರದ ಮುಂಬಯಿ ಬಂದ್‌ ಕೂಡಾ ತೀರಾ ಹಿಂಸಾಚಾರಕ್ಕೆ ತಿರುಗಿದ ಬಳಿಕ ಕರೆ ಕೊಟ್ಟವರೇ ಅರ್ಧದಲ್ಲಿ ಬಂದ್‌ ಹಿಂದೆಗೆದುಕೊಂಡರು. ಇದು ಮರಾಠ ಸಮುದಾಯದವರು ಮೀಸಲಾತಿಗಾಗಿ ನಡೆಸುತ್ತಿರುವ 2ನೇ ಸುತ್ತಿನ ತೀವ್ರತರದ ಹೋರಾಟ.   

 ಮೊದಲ ಹೋರಾಟ ಬಹುತೇಕ ಶಾಂತಿಯುತವಾಗಿತ್ತು. ಜನರು ಸ್ವಪ್ರೇರಣೆಯಿಂದ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು. ಘೋಷಣೆ, ಧಿಕ್ಕಾರಗಳಿಲ್ಲದೆ ಮೌನವಾಗಿ ನಡೆಯುತ್ತಿದ್ದ ಪ್ರತಿಭಟನೆ ಈ ಕಾರಣಕ್ಕೂ ಗಮನಸೆಳೆದಿತ್ತು. ಆದರೆ ಈಗಿನ ಹೋರಾಟದಲ್ಲಿ ಪ್ರತಿಭಟನೆಕಾರರು ಆರಂಭದಿಂದಲೇ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಬದಲಾದ ಹೋರಾಟದ ಶೈಲಿಯ ಹಿಂದಿನ ಕಾರಣವೇನು  ಎನ್ನುವುದು ಸದ್ಯಕ್ಕಂತೂ ನಿಗೂಢ. ಆದರೆ ಮೀಸಲಾತಿ ಹೋರಾಟ ಹಿಂಸಾರೂಪ ಪಡೆದುಕೊಳ್ಳಲು ಕಾರಣ ಏನು ಎನ್ನುವುದನ್ನು ಪತ್ತೆಹಚ್ಚಬೇಕು. ಪ್ರಜಾತಂತ್ರದಲ್ಲಿ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಹೋರಾಟವೂ ಒಂದು ಸಾಧನ. ಆದರೆ ಈ ಹೋರಾಟದಿಂದ ಶಾಂತಿಭಂಗವಾಗಬಾರದು. 

ಸರಕಾರಿ ನೌಕರಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 16 ಮೀಸಲಾತಿ ನೀಡುವ ಆಶ್ವಾಸನೆಯನ್ನು ಸರಕಾರ ನೀಡಿದ್ದರೂ ಮರಾಠರು ತೃಪ್ತರಾಗಿಲ್ಲ. ಮೀಸಲಾತಿಗೆ ಶೇ. 50ರ ಮಿತಿಯಿರುವುದರಿಂದ ಈ ಕೊಡುಗೆಯನ್ನು ನ್ಯಾಯಾಲಯ ರದ್ದುಪಡಿಸಬಹುದೆಂದು ಭಾವಿಸಿರುವ ಮರಾಠರು ಈಗ ತಮ್ಮನ್ನು ಒಬಿಸಿ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. 

ಮಹಾರಾಷ್ಟ್ರದಲ್ಲಿ ಮರಾಠರಂತೆ ಗುಜರಾತಿನಲ್ಲಿ ಪಾಟಿದಾರರು, ಇನ್ನೂ ಕೆಲವು ರಾಜ್ಯಗಳಲ್ಲಿ ಜಾಟ್‌ ಸಮುದಾಯದವರು ಮೀಸಲಾತಿಗಾಗಿ ಹೋರಾಡುತ್ತಿದ್ದಾರೆ. ಚುನಾವಣೆ ಸನ್ನಿಹಿತವಾಗುವಾಗಲೆಲ್ಲ ಈ ಹೋರಾಟ ತೀವ್ರಗೊಳ್ಳುತ್ತದೆ. ಸಾಮಾಜಿಕ ಮತ್ತು ಆರ್ಥಿಕ ನೆಲೆಯಲ್ಲಿ ಪ್ರಬಲರಾಗಿರುವವರಿಗೆ ಮೀಸಲಾತಿಯ ಅಗತ್ಯವಿಲ್ಲ ಎಂಬುದಾಗಿ ನ್ಯಾಯಾಲಯಗಳು ಹೇಳಿರುವ ಹೊರತಾಗಿಯೂ ಇಂತಹ ಹೋರಾಟಗಳು ನಿಂತಿಲ್ಲ. ಹಿಂದಿನ ಯುಪಿಎ ಸರಕಾರ ಒಂಭತ್ತು ರಾಜ್ಯಗಳಲ್ಲಿ ಜಾಟ್‌ ಸಮುದಾಯದವರಿಗೆ ನೀಡಿದ ಮೀಸಲಾತಿ ಸೌಲಭ್ಯವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಆಧುನಿಕ ಜಗತ್ತಿನಲ್ಲಿ ಕೃಷಿ ಅನಾಕರ್ಷಕವಾಗಿದ್ದು, ಕೃಷಿ ತಂದುಕೊಡುವ ಅದಾಯಕ್ಕಿಂತ ಸರಕಾರ ನೌಕರಿ ಕೊಡುವ ಸೌಲಭ್ಯಗಳೇ ಆಕರ್ಷಣೀವಾಗಿ ಕಾಣಿಸುತ್ತಿದೆ. ಹೀಗಾಗಿ ಪ್ರಬಲ ಸಮುದಾಯದ ಯುವ ಜನರು ಮೀಸಲಾತಿ ಹೋರಾಟ ಕ್ಕೆ ಇಳಿದಿದ್ದಾರೆ ಎಂಬ ವಾದ ಚರ್ಚಾರ್ಹ. ಮೀಸಲಾತಿ ಹೋರಾಟ ಉದ್ಯೋಗ ಹಾಗೂ ಇನ್ನಿತರ ಸರಕಾರಿ ಸೌಲಭ್ಯಗಳಿಗೆ ಸೀಮಿತವಾಗಿ ಉಳಿದಿಲ್ಲ ಎನ್ನುವುದು ಈಗ ಢಾಳಾಗಿ ಗೋಚರಿಸುತ್ತಿದೆ. ಹಿಂದೆ ಹಿಂದುಳಿದವರನ್ನು ಅಭಿವೃದ್ಧಿಪಡಿಸುವ ಸಾಧನವಾಗಿದ್ದ ಮೀಸಲಾತಿ ಈಗ ರಾಜಕೀಯ ಅಸ್ತ್ರವಾಗಿ ಬದಲಾಗಿದೆ. ಸದ್ಯಕ್ಕೆ ನಡೆಯುತ್ತಿರುವ ಹಿಂಸಾತ್ಮಕ ಹೋರಾಟಗಳು ಇದನ್ನು ಪುಷ್ಟೀಕರಿಸುತ್ತಿವೆ. ಯಾವಾಗಲೂ ಸಮುದಾಯ ನಿರ್ದೇಶಿತ ಹೋರಾಟಗಳು ಹಿಂಸೆಯಿಂದ ಕೂಡಿರುವುದಿಲ್ಲ. ಆದರೆ ರಾಜಕೀಯ ಲಾಭದ ಉದ್ದೇಶ ಹೊಂದಿರುವ ಹೋರಾಟಗಳು ನೈಜ ಹೋರಾಟಗಾರರ ದಿಕ್ಕುತಪ್ಪಿಸಬಹುದು.ಅವಾಸ್ತವ  ಮೀಸಲಾತಿಯ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ ಉಳಿದೆಡೆಗಳಲ್ಲೂ ಇಂಥ ಹೋರಾಟಗಳು ತಲೆಯೆತ್ತಬಹುದು. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿರುವುದರಿಂದ ರಾಜಕೀಯ ಸ್ವರೂಪವನ್ನೂ ಪಡೆದುಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ಹಿಂಸಾಚಾರ ನಡೆಯದಂತೆ ಎಚ್ಚರವಹಿಸಬೇಕಾದದ್ದು ಹೋರಾಟಗಾರರ ಮತ್ತು ಸರಕಾರದ ಕರ್ತವ್ಯ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.