ಪ್ರತ್ಯೇಕ ರಾಜ್ಯ ಬೇಡಿಕೆ: ತಾರತಮ್ಯ ನಿವಾರಣೆಯಾಗಲಿ 


Team Udayavani, Jul 28, 2018, 6:00 AM IST

20.jpg

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂಬ ಬೇಡಿಕೆ ಈಗ ಮರಳಿ ಜೀವ ಪಡೆದುಕೊಂಡಿದೆ. ಇದಕ್ಕೆ ಕಾರಣವಾಗಿರುವುದು ರಾಜ್ಯ ಸರಕಾರದ ನಡೆ ಎನ್ನುವುದು ಮಾತ್ರ ದುರದೃಷ್ಟಕರ ವಿಚಾರ. ಸಮ್ಮಿಶ್ರ ಸರಕಾರ ರಚನೆಯಾದ ಬಳಿಕ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬ ಬೇಗುದಿ ಆ ಭಾಗದ ನಾಯಕರಲ್ಲಿ ಮಾತ್ರವಲ್ಲ ಜನರಲ್ಲೂ ಇದೆ. ಸಂಪುಟ ರಚನೆ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಯಿತು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ತರ ಕರ್ನಾಟಕಕ್ಕೆ ದಕ್ಕಿದ್ದು ಬರೀ ಎಂಟು ಸ್ಥಾನಗಳು. ಈ ಭಾಗದಿಂದ ಕಾಂಗ್ರೆಸ್‌ 38 ಸ್ಥಾನಗಳನ್ನು ಗೆದ್ದಿರುವ ಹೊರತಾಗಿಯೂ ಸಂಪುಟದಲ್ಲಿ ಸಮರ್ಪಕವಾದ ಪ್ರಾತಿನಿಧ್ಯ ಸಿಕ್ಕಿಲ್ಲ ಎನ್ನುವ ನೋವು ಸಹಜವಾದದ್ದೇ ಆಗಿತ್ತು. 

ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ನೋವನ್ನು ಜನರು ಕ್ರಮೇಣ ಮರೆಯುತ್ತಿದ್ದರೋ ಏನೋ. ಆದರೆ ಅನಂತರ ಮಂಡಿಸಿದ ಬಜೆಟ್‌ನಲ್ಲಿ ಮತ್ತೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಲಾಯಿತು. ನಿಜವಾಗಿ ನೋಡಿದರೆ ಬಜೆಟ್‌ ಬಳಿಕವೇ ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ರಾಜ್ಯದ ಕೂಗು ತೀವ್ರಗೊಂಡದ್ದು. ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಮಾತ್ರವಲ್ಲ ಕರಾವಳಿಯೂ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಿಗೆ ಅನ್ಯಾಯ ವಾಗಿದೆ ಎಂಬ ಭಾವನೆಯಿದೆ. ಬಜೆಟ್‌ನ ಎಲ್ಲ ಕೊಡುಗೆಗಳು ಜೆಡಿಎಸ್‌ ಪ್ರಬಲವಾಗಿರುವ ಜಿಲ್ಲೆಗಳಿಗೆ ಅಂದರೆ ದಕ್ಷಿಣ ಕರ್ನಾಟಕದ ಭಾಗಗಳಿಗೆ ಸೀಮಿತವಾಗಿದ್ದವು. ಎಲ್ಲಿ ತನ್ನ ಪಕ್ಷ ಗೆದ್ದಿದೆಯೋ ಅಲ್ಲಿಗಷ್ಟೇ ಯೋಜನೆ ಗಳನ್ನು ಘೋಷಿಸುವ ಮೂಲಕ ರಾಜಧರ್ಮಕ್ಕೆ ವಿರುದ್ಧವಾಗಿ ನಡೆದ ಆಪಾದನೆಯನ್ನು ಕುಮಾರಸ್ವಾಮಿ ಹೊತ್ತುಕೊಳ್ಳಬೇಕಾಯಿತು. ಮತ ಹಾಕುವಾಗ ನಿಮಗೆ ಜಾತಿ ಮತ್ತು ಧರ್ಮ ಮುಖ್ಯವಾಗುತ್ತದೆ , ಈಗ ಕೆಲಸ ಮಾಡಲು ನಾನು ಬೇಕೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಉತ್ತರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಉದ್ದೇಶಪೂರ್ವಕ ಎಂಬುದನ್ನು ಧ್ವನಿ ಸುವಂತಿದೆ. ಹೀಗಾಗಿ ಉತ್ತರ ಕರ್ನಾಟಕದವರ ಪ್ರತ್ಯೇಕ ರಾಜ್ಯದ ಬೇಡಿಕೆ ತಣ್ಣಗಾಗುವ ಬದಲು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಗೋಚರಿಸುತ್ತಿದೆ. 

ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕ ಹಿಂದುಳಿದಿರುವುದು ನಿಜ. ಆರು ಮುಖ್ಯಮಂತ್ರಿಗಳನ್ನು ನೀಡಿದ್ದರೂ ಈ ಭಾಗದ ಹಲವಾರು ಸಮಸ್ಯೆಗಳು ಪರಿಹಾರ ಕಂಡಿಲ್ಲ. ದಕ್ಷಿಣ ಕರ್ನಾಟಕ ನೀರಾವರಿಯಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ. ಉತ್ತರ ಕರ್ನಾಟಕದವರು ಈಗಲೂ ಮಳೆಯನ್ನೇ ಅವಲಂಬಿಸಬೇಕಾಗಿದೆ. ಮಹದಾಯಿ ವಿವಾದ ವನ್ನು ಬಗೆಹರಿಸುವ ಇಚ್ಚಾಶಕ್ತಿಯನ್ನು ಆಡಳಿತ ನಡೆಸುವವರು ತೋರಿಸಿಲ್ಲ.ಆರೋಗ್ಯ, ಮೂಲಸೌಕರ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಉತ್ತರ ಕರ್ನಾಟಕ ಹಿಂದುಳಿದಿದೆ. ಪ್ರತಿ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳು ಮುನ್ನೆಲೆಗೆ ಬರುತ್ತವೆಯಾದರೂ ಚುನಾವಣೆ ಮುಗಿದ ಕೂಡಲೇ ರಾಜಕೀಯ ನಾಯಕರು ಅವುಗಳನ್ನು ಮರೆತು ಬಿಡುತ್ತಾರೆ. ಈ ಸಲವಂತೂ ಈ ಭಾಗದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಹೀಗಾಗಿ ಅಭಿವೃದ್ಧಿಯಲ್ಲಿ ತಾರತಮ್ಯವಾಗುವುದು ನಿರೀಕ್ಷಿತ. ಇಂಥ ಬೇಧಭಾವವೇ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಕಾವು ಕೊಡುತ್ತದೆ.  ರಾಜಕೀಯ ಸ್ಥಿತ್ಯಂತರವೂ ಉತ್ತರ ಕರ್ನಾಟಕ ಅಭಿವೃದ್ಧಿ ಯಲ್ಲಿ ಹಿಂದುಳಿಯಲು ಕಾರಣವಾಗಿರಬಹುದು. ರಾಜ್ಯ ರಚನೆಯಾದ ಆರಂಭದ ದಶಕಗಳಲ್ಲಿ ಉತ್ತರ ಕರ್ನಾಟಕ ಕಾಂಗ್ರೆಸ್‌ನ ಭದ್ರ ಕೋಟೆ ಯಾಗಿತ್ತು. 1990ರಲ್ಲಿ ಜನತಾ ದಳದತ್ತ ವಾಲಿತ್ತು. ಈಗ ಇಲ್ಲಿನ ಮತದಾ ರರು ಬಿಜೆಪಿಯತ್ತ ಒಲವು ಬೆಳೆಸಿಕೊಂಡಿದ್ದಾರೆ. 

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆ. 2ರಂದು 13 ಜಿಲ್ಲೆಗಳಲ್ಲಿ ನಡೆಯುವ ಬಂದ್‌ ಯಶಸ್ವಿಯಾಗುತ್ತದೋ ಇಲ್ಲವೋ ಎನ್ನುವುದು ಮುಖ್ಯವಲ್ಲ. ಆದರೆ ಆಡಳಿತ ನಡೆಸುವವರು ತಮಗನುಕೂಲವಾಗಿರುವ ಭಾಗಗಳನ್ನು ಮಾತ್ರ ಮುದ್ದಾಡುವ ಧೋರಣೆ ಮಾತ್ರ ಅಪಾಯಕಾರಿ ಎನ್ನುವುದು ಸದ್ಯದ ಬೆಳವಣಿಗೆಯಿಂದ ಸ್ಪಷ್ಟ ವಾಗುತ್ತದೆ. ಎಷ್ಟೇ ಸ್ಥಾನಗಳು ಬಂದಿರಲಿ, ಯಾರೇ ಮತ ಹಾಕಿರಲಿ, ಆಡಳಿತ ಚುಕ್ಕಾಣಿ ಹಿಡಿದ ಬಳಿಕ ತಾನು ರಾಜ್ಯದ ಮುಖ್ಯಮಂತ್ರಿ ಎಂದು ಆ ಸ್ಥಾನದಲ್ಲಿ ರುವವರು ತಿಳಿದುಕೊಳ್ಳಬೇಕು. ಜನರಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಭಾವನೆ ಬಲಿತುಬಿಟ್ಟರೆ ಅದು ಪಡೆದುಕೊಳ್ಳುವ ತಿರುವುಗಳು ರಾಜ್ಯದ ಹಿತಾಸಕ್ತಿಯನ್ನೇ ಬಲಿತೆಗೆದುಕೊಳ್ಳಬಹುದು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.