ಕೇರಳ ಜಲ ಪ್ರಳಯ ದೀರ್ಘಾವಧಿ ಯೋಜನೆ ಬೇಕು


Team Udayavani, Aug 13, 2018, 11:27 AM IST

kerala.png

ದೇವರ ನಾಡಾದ ಕೇರಳಕ್ಕೆ ಈ ಸಲ ವರುಣ ದೇವ ಮುನಿದಿರುವಂತೆ ಕಾಣಿಸುತ್ತಿದೆ. ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಕೇರಳದಲ್ಲಿ ಪ್ರಳಯ ಸದೃಶ ಪರಿಸ್ಥಿತಿ ತಲೆದೋರಿದೆ. ಈಗಾಗಲೇ 35ಕ್ಕೂ ಹೆಚ್ಚು ಮಂದಿ ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 60,000 ಮಂದಿಯನ್ನು ಮನೆಯಿಂದ ತೆರವುಗೊಳಿಸಿ ಪರಿಹಾರ ಶಿಬಿರಗಳಿಗೆ ಸಾಗಿಸಲಾಗಿದೆ. ಈ ಮಾದರಿಯ 500ಕ್ಕೂ ಹೆಚ್ಚು ಶಿಬಿರಗಳನ್ನು ಸರಕಾರ ಪ್ರಾರಂಭಿಸಿದೆ. ಮಳೆಯಿಂದಾಗಿ ಆಗಿರುವ ಕೃಷಿ ಮತ್ತು ಸೊತ್ತು ಹಾನಿ ಅಪಾರ. 100ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಕುಸಿದಿದ್ದರೆ 1500ದಷ್ಟು ಮನೆಗಳು ಹಾನಿಗೀಡಾಗಿವೆ.ಕೃಷಿ ಸಂಪೂರ್ಣ ಹಾನಿಗೀಡಾಗಿದ್ದು ಇದರ ಅಂದಾಜು ಇನ್ನೂ ಸಿಕ್ಕಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ ಈ ಮಳೆಗಾಲದ ಹೊಡೆತದಿಂದ ಚೇತರಿಸಿಕೊಳ್ಳಲು ರಾಜ್ಯಕ್ಕೆ ಬಹುಕಾಲ ಬೇಕಾಗಬಹುದು. 

ರಾಜ್ಯದ ಎಲ್ಲ 24 ಅಣೆಕಟ್ಟೆಗಳು ತುಂಬಿವೆ. ಅದರಲ್ಲೂ ಇಡುಕ್ಕಿ ಅಣೆಕಟ್ಟು ಸ್ಥಿತಿ ಚಿಂತಾಜಕನವಾಗಿದೆ. 26 ವರ್ಷಗಳ ಬಳಿಕ ರಾಜ್ಯದಲ್ಲಿ ಎಲ್ಲ ಅಣೆಕಟ್ಟೆಗಳ ಶಟರ್‌ಗಳನ್ನು ಏಕಕಾಲದಲ್ಲಿ ತೆರೆದು ನೀರು ಹೊರ ಬಿಟ್ಟದ್ದು ಇದೇ ಮೊದಲು. ಈ ಸಲದ ಮಳೆ 1924ರ ಮಹಾ ಪ್ರಳಯವನ್ನು ನೆನಪಿಸುವಂತಿದೆ ಎಂದು ಇಲ್ಲಿನ ಹಳಬರು ನೆನಪಿಸುತ್ತಿರುವುದು ಪರಿಸ್ಥಿತಿ ಎಷ್ಟು ಕಳವಳಕಾರಿಯಾಗಿದೆ ಎನ್ನುವುದನ್ನು ತಿಳಿಸುತ್ತದೆ. ಕಳೆದ ವರ್ಷ ಇದೇ ಸಮಯದಲ್ಲಿ ಕೇರಳ ಮಳೆ ಕೊರತೆಯಿಂದ ಚಿಂತೆಗೀಡಾಗಿತ್ತು. ಆಗಸ್ಟ್‌ನಲ್ಲೇ ರಾಜ್ಯ ಸರಕಾರ ಶೇ. 29 ಮಳೆ ಕೊರತೆಯಾಗಿರುವುದರಿಂದ ನೀರು ಮತ್ತು ವಿದ್ಯುತ್‌ನ್ನು ಮಿತವ್ಯಯಕ್ಕೆ ಯೋಜನೆಗಳನ್ನು ರೂಪಿಸಲು ತೊಡಗಿತ್ತು. ಈ ಸಲ ಪರಿಸ್ಥಿತಿ ತದ್ವಿರುದ್ಧವಾಗಿದೆ. 

ಹೀಗೆ ಹವಾಮಾನ ಪ್ರತಿಕೂಲಕರವಾಗಿ ವರ್ತಿಸಲು ಏನು ಕಾರಣ ಎನ್ನುವುದು ಚಿದಂಬರ ರಹಸ್ಯವಾಗಿ ಉಳಿದಿಲ್ಲ. ಹವಾಮಾನ ಬದಲಾವಣೆಯಿಂದ ಪ್ರಕೃತಿ ಮುನಿಯಬಹುದು ಎಂಬ ಎಚ್ಚರಿಕೆ ಮಾತು ಕೇಳಿ ಬಂದು ಬಹಳ ವರ್ಷಗಳಾದರೂ ಇದನ್ನು ನಿರ್ಲಕ್ಷಿಸಿದ್ದೆ ಈ ಮಾದರಿಯ ಸ್ಥಿತಿಯುಂಟಾಗಲು ಕಾರಣ. 

ರಾಜ್ಯ ಸರಕಾರ ಶಕ್ತಿಮೀರಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಕೇಂದ್ರವೂ ಸಾಕಷ್ಟು ನೆರವು ನೀಡುತ್ತಿದೆ. ಗೃಹ ಸಚಿವ ರಾಜನಾಥ ಸಿಂಗ್‌ ರಾಜ್ಯಕ್ಕೆ ಭೇಟಿ ನೀಡಿ ಅವಲೋಕನ ನಡೆಸಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಉದ್ಗರಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ರಾಜ್ಯ ಇದೇ ಮಾದರಿಯಲ್ಲಿ ಮಳೆಯಿಂದ ನಲುಗಿತ್ತು. ಈ ಸಂದರ್ಭದಲ್ಲಿ ಪರಿಹಾರ ಕೇಂದ್ರದಲ್ಲಿರುವವರು ಮನೆಗಳಿಗೆ ವಾಪಸಾಗಿ ಸಾಮಾನು ಸರಂಜಾ ಮುಗಳನ್ನು ಹೊಂದಿಸಿಕೊಳ್ಳುತ್ತಿರುವಾಗಲೇ ಮತ್ತೂಮ್ಮೆ ಅತಿವೃಷ್ಟಿಯಾ ಗಿದ್ದು, ಜನರ ಬದುಕು ಅತಂತ್ರಗೊಂಡಿದೆ.

ಸದ್ಯಕ್ಕೇನೊ ಸರಕಾರ ಪರಿಹಾರ ಕೇಂದ್ರಗಳಲ್ಲಿ ಊಟ, ವಸತಿ ಏರ್ಪಾಡು ಮಾಡಿಕೊಡಬಹುದು. ಆಗಿರುವ ಹಾನಿಗಳಿಗೆ ಒಂದಷ್ಟು ಪರಿಹಾರವನ್ನೂ ನೀಡಬಹುದು. ಇದಿಷ್ಟ ರಿಂದಲೇ ಬದುಕು ಹಸನಾದೀತೆ? ಅನೇಕ ಕುಟುಂಬಗಳು ಜೀವಮಾನದ ಗಳಿಕೆ, ಕಷ್ಟಪಟ್ಟು ಕಟ್ಟಿಸಿದ ಮನೆ ಹೀಗೆ ಎಲ್ಲವನ್ನೂ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದೆ. ಇಂಥವರ ಬದುಕು ಮತ್ತೂಮ್ಮೆ ನೇರ್ಪುಗೊಳ್ಳಲು ಎಷ್ಟು ಸಮಯ ಹಿಡಿಯಬಹುದು ಎಂದು ಹೇಳುವುದು ಕಷ್ಟ. 

ಇದು ಕೇರಳದ ದುರಂತ ಮಾತ್ರವಲ್ಲ, ಇಡೀ ದೇಶ ಇಂದು ಈ ಮಾದರಿಯ ಹವಾಮಾನ ವೈಪರೀತ್ಯಕ್ಕೆ ತೆರೆದುಕೊಂಡಿದೆ. ಅಕಾಲಿಕ ಮಳೆ, ಅತಿಯಾದ ಸೆಖೆ ಇವೆಲ್ಲ ನಾವೇ ತಂದುಕೊಂಡಿರುವ ದುರಂತಗಳು.

ಅತಿಕ್ರಮಣ, ಅರಣ್ಯ ನಾಶ ಇವೇ ಮುಂತಾದ ಕೃತ್ಯಗಳಿಂದ ಸತತವಾಗಿ ಪ್ರಕೃತಿಯನ್ನು ಶೋಷಿಸಿದ ಪರಿಣಾಮವಿದು. ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ ಎಂದು ತಜ್ಞರು ಪದೇ ಪದೇ ಎಚ್ಚರಿಸುತ್ತಿದ್ದರೂ ಅದನ್ನು ತಡೆಯುವ ನಿಟ್ಟಿನಲ್ಲಿ ನಾವು ನಡೆಸಿದ ಪ್ರಯತ್ನ ಅತ್ಯಲ್ಪ. ಮಳೆಗಾಲದಲ್ಲಿ ಮಾತ್ರವಲ್ಲದೆ ಬೇಸಿಗೆಯಲ್ಲೂ ಈ ಸಲ ಕಡಲ್ಕೊರೆತ ವಾಗಿರುವುದನ್ನು ಕಂಡಿದ್ದೇವೆ. ತಾಪಮಾನ ಏರಿಕೆಯಿಂದಾಗಿ ಸಮುದ್ರದಲ್ಲಾಗಿರುವ ವ್ಯತ್ಯಯವೇ ಇದಕ್ಕೆ ಕಾರಣ. ಆದರೂ ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ಶೋಷಣೆ ನಿಂತಿಲ್ಲ. ಉತ್ತರ ಭಾರತದಲ್ಲಿ ಬೀಸಿದ ಧೂಳು ಬಿರುಗಾಳಿ, ಮೇ ತಿಂಗಳಲ್ಲೇ ಆದ ಅತಿವೃಷ್ಟಿ ಇವೆಲ್ಲ ಹವಾಮಾನ ಬದಲಾವಣೆಯಿಂದ ಪ್ರಕೃತಿ ಚಕ್ರ ಬದಲಾಗಿರುವ ಪರಿಣಾಮವೇ. 

ವಿಕೋಪ ನಿರ್ವಹಣಾ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸುವುದು, ಕಟ್ಟಡಗಳು, ಅಣೆಕಟ್ಟೆಗಳು, ಸೇತುವೆಗಳು ಮತ್ತಿತರ ನಿರ್ಮಾಣಗಳನ್ನು ಸುಸ್ಥಿಯಲ್ಲಿಡುವುದು ಮಾಡಲೇ ಬೇಕಾದ ಕೆಲಸ. ಇದರ ಜತೆಗೆ ತಾಪಮಾನ ಏರಿಕೆ ಮತ್ತು ಇದರಿಂದಾಗುವ ಹವಾಮಾನ ಬದಲಾವಣೆ ಯನ್ನು ತಡೆಯಲು ದೀರ್ಘಾಕಾಲಿಕ ಯೋಜನೆಗಳನ್ನು ರೂಪಿಸಿಕೊಂಡು ಅನುಷ್ಠಾನಿಸುವುದಕ್ಕೆ ಆದ್ಯತೆ ನೀಡಬೇಕು. ಎಲ್ಲ ಸರಕಾರಗಳ ಬಜೆಟ್‌ನಲ್ಲಿ ಇಂಥ ಕಾರ್ಯಕ್ರಮಗಳಿಗೂ ಅನುದಾನ ಮೀಸಲಿಡಬೇಕು. 

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.