ಪಾಕ್‌ ಜತೆ ಸ್ನೇಹ: ಎಚ್ಚರಿಕೆಯ ನಡೆ ಅಗತ್ಯ


Team Udayavani, Aug 21, 2018, 6:00 AM IST

15.jpg

ಇಮ್ರಾನ್‌ ಖಾನ್‌ ಜುಟ್ಟು ಸೇನೆಯ ಕೈಯಲ್ಲಿದೆ ಎನ್ನುವುದು ಜಾಹೀರಾಗಿದೆ. ಅಂತೆಯೇ ಉಗ್ರರತ್ತ ಇಮ್ರಾನ್‌ ಮೃದುಧೋರಣೆ ಹೊಂದಿದ್ದಾರೆ. 

ಕ್ರಿಕೆಟಿಗ ಇಮ್ರಾನ್‌ ಖಾನ್‌ ನೇತೃತ್ವದ ಹೊಸ ಸರಕಾರದಡಿ ಭಾರತ- ಪಾಕಿಸ್ಥಾನ ಸಂಬಂಧ ಸುಧಾರಣೆಯಾದೀತು ಎಂಬ ನಿರೀಕ್ಷೆಯಿದೆ. ಆರಂಭಿಕ ಹಂತದಲ್ಲಿ ಉಭಯ ದೇಶಗಳ ನಡುವಿನ ಶುಭಾಶಯಗಳ ವಿನಿಮಯ ಈ ನಿಟ್ಟಿನಲ್ಲಿ ಒಂದು ಸಕಾರಾತ್ಮಕ ಹೆಜ್ಜೆಯಂತೆ ಕಾಣಿಸುತ್ತಿದೆ. ಇಮ್ರಾನ್‌ ಖಾನ್‌ ನೇತ್ವತ್ವದ ತೆಹ್ರಿಕ್‌-ಇ-ಇನ್ಸಾಫ್ ಪಕ್ಷ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗಳಿಸಿದ ಬೆನ್ನಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿಯಲ್ಲಿ ಇಮ್ರಾನ್‌ ಖಾನ್‌ಗೆ ಶುಭಾಶಯ ಹೇಳಿದ್ದರು. ಇದೀಗ ಇಮ್ರಾನ್‌ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಣೆಯಾಗಬೇಕೆಂಬ ಆಶಯ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಪಾಕಿಸ್ಥಾನದಿಂದಲೂ ಸಕರಾತ್ಮಕವಾದ ಪ್ರತಿಸ್ಪಂದನ ವ್ಯಕ್ತವಾಣಗಿದೆ. ನೂತನ ವಿದೇಶಾಂಗ ಸಚಿವ ಶಾ ಮಹಮೂದ್‌ ಖುರೇಶಿ ನಿರಂತರವಾದ ತಡೆರಹಿತ ಸಂವಾದವೇ ಉಭಯ ದೇಶಗಳ ನಡುವಿನ ಸಂಬಂಧ ಸುಧಾರಣೆಗಿರುವ ಏಕೈಕ ಮಾರ್ಗ ಎಂದು ಪ್ರತಿಪಾದಿಸಿದ್ದಾರೆ. ನೆರೆಹೊರೆ ದೇಶಗಳ ನಡುವೆ ಈ ರೀತಿ ರಾಜತಾಂತ್ರಿಕ ವಿನಿಮಯ ಸಹಜವಾಗಿದ್ದರೂ ಭಾರತ ಮತ್ತು ಪಾಕಿಸ್ಥಾನದ ಸಂದರ್ಭದಲ್ಲಿ ಅದಕ್ಕೆ ಬೇರೆಯದ್ದೇ ಆದ ಮಹತ್ವವಿದೆ. 

ಚುನಾವಣಾ ಪ್ರಚಾರ ಸಂದರ್ಭದಲ್ಲೂ ಭಾರತ ಜತೆಗೆ ಸಂಬಂಧ ಸುಧಾರಣೆಗೆ ಪಾಕಿಸ್ಥಾನ ತಯಾರಿದೆ. ಕಗ್ಗಂಟಾಗಿರುವ ಕಾಶ್ಮೀರ ಸಮಸ್ಯೆಯೂ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಎರಡೂ ದೇಶಗಳ ನಾಯಕರು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಇಮ್ರಾನ್‌ ಖಾನ್‌ ಹೇಳಿದ್ದರು. ಈ ಎಲ್ಲ ಬೆಳವಣಿಗೆ ಗಳ ಹಿನ್ನೆಲೆಯಲ್ಲಿ ಮತ್ತೂಮ್ಮೆ ಉಭಯ ದೇಶಗಳ ಮಧ್ಯೆ ಮಾತುಕತೆ ಪ್ರಾರಂಭ ವಾಗಲೂಬಹುದು. ಆದರೆ ಪಾಕಿಸ್ಥಾನ ದಲ್ಲಿ ಇದಕ್ಕೆ ಪೂರಕವಾದ ವಾತಾವರಣ ಇದೆಯೇ ಎನ್ನುವುದು ಪ್ರಶ್ನೆ. ಸದ್ಯದ ಪರಿಸ್ಥಿತಿಯಲ್ಲಿ ಅಂಥ ವಾತಾವರಣ ಕಾಣಿಸದು. ಇಮ್ರಾನ್‌ ಖಾನ್‌ ಜುಟ್ಟು ಸೇನೆಯ ಕೈಯಲ್ಲಿದೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿದೆ. ಅಂತೆಯೇ ಉಗ್ರರತ್ತ ಇಮ್ರಾನ್‌ ಮೃದುಧೋರಣೆ ಹೊಂದಿದ್ದಾರೆ. ಈ ಪರಿಸ್ಥಿತಿಯಲ್ಲಿ ರಚನಾತ್ಮಕವಾದ ಮಾತುಕತೆ ನಡೆಯಲು ಸಾಧ್ಯವೆ? ನಡೆದರೂ ಅದು ಫ‌ಲಪ್ರದವಾಗಲು ಪಾಕಿಸ್ಥಾನದ ಪಟ್ಟಭದ್ರ ಹಿತಾಸಕ್ತಿಗಳು ಅವಕಾಶ ಕೊಡುತ್ತವೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಹೀಗಾಗಿ ಈ ಹಂತದಲ್ಲಿ ಪಾಕಿಸ್ಥಾನದ ಬಗ್ಗೆ ಯಾವುದೇ ಭ್ರಮೆಗಳನ್ನು ಇಟ್ಟುಕೊಳ್ಳುವುದು ಸರಿಯಲ್ಲ. ನಯವಾಗಿ ಬೆನ್ನಿಗಿರಿಯುವ ಗುಣ ಆ ದೇಶಕ್ಕೆ ಜನ್ಮಜಾತವಾಗಿಯೇ ಬಂದಿದೆ. ಎಪ್ಪತ್ತು ವರ್ಷಗಳಲ್ಲಿ ಪಾಕಿಸ್ಥಾನದ ಈ ಬುದ್ಧಿಯನ್ನು ಸಾಕಷ್ಟು ಸಲ ನೋಡಿದ್ದೇವೆ. ಮಾತುಕತೆ ಪ್ರಾರಂಭಿಸ ಬೇಕಿದ್ದರೆ ಗಡಿಯಾಚೆಗಿನ ಭಯೋತ್ಪಾದನೆ ನಿಲ್ಲಬೇಕು ಎನ್ನುವ ಶರತ್ತನ್ನು ಭಾರತ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಇಮ್ರಾನ್‌ ಖಾನ್‌ ತನ್ನ ನಿಲುವು ಏನೆಂಬುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಗಡಿಯಲ್ಲಿ ಭಯೋತ್ಪಾದಕರ ನುಸುಳುವಿಕೆ ಒಂದಿನಿತೂ ಕಡಿಮೆಯಾಗಿಲ್ಲ. ಕಾಶ್ಮೀರದಲ್ಲಿ ನಿತ್ಯ ಗುಂಡಿನ ಚಕಮಕಿ ನಡೆಯುತ್ತಿದೆ. ಅದೇ ರೀತಿ ಕದನ ವಿರಾಮ ಉಲ್ಲಂಘನೆಯೂ ನಡೆಯುತ್ತಿದೆ. ಹೊಸ ಸರಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ವಿದೇಶಾಂಗ ಇಲಾಖೆ ಭಾರತದ ಡೆಪ್ಯುಟಿ ಹೈಕಮಿಶನರ್‌ ಅವರನ್ನು ಕರೆಸಿರುವುದು ಪಾಕಿಸ್ಥಾನದ ಧೋರಣೆಯಲ್ಲಿ ಯಾವುದೇ ಬದಲಾವಣೆ ಯಾಗಿಲ್ಲ ಎನ್ನುವುದನ್ನು ತಿಳಿಸುತ್ತಿದೆ. ಪಾಕಿಸ್ಥಾನದ ಈ ಮನೋಧರ್ಮ ಬದಲಾಗದೆ ಶಾಂತಿ ಮಾತುಕತೆ ನಿಷ್ಪ್ರಯೋಜಕ. 

ಇಮ್ರಾನ್‌ ಖಾನ್‌ ಕಾಶ್ಮೀರ ವಿವಾದಕ್ಕೆ ಭಾರೀ ಮಹತ್ವ ನೀಡುತ್ತಿರುವುದರ ಹಿಂದೆ ಯಾವ ಯೋಚನೆಯಿದೆ ಎನ್ನುವುದು ನಿಗೂಢವಾಗಿದೆ. ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ಮಾಡಿದ ಭಾಷಣದಲ್ಲೂ ಅವರು ಮೊದಲು ಕಾಶ್ಮೀರದ ಬಗ್ಗೆ ಮಾತುಕತೆ ನಡೆಸಬೇಕೆಂದು ಪ್ರತಿಪಾದಿಸಿದ್ದರು. ಕಾಶ್ಮೀರಕ್ಕೆ ಸಂಬಂಧಿಸಿದಂತೆ ಭಾರತ ಪಾಕಿಸ್ಥಾನವನ್ನು ದೂರಬಾರದು, ಅಂತೆಯೇ ಬಲೂಚಿಸ್ಥಾನಕ್ಕೆ ಸಂಬಂಧಿಸಿ ಪಾಕಿಸ್ಥಾನ ಭಾರತವನ್ನು ದೂಷಿಸಬಾರದು ಎನ್ನುವ ಮೂಲಕ ಈ ಎರಡು ಸಮಸ್ಯೆ ಗಳನ್ನು ಒಂದೇ ತಕ್ಕಡಿಯಲ್ಲಿಡುವ ಪ್ರಯತ್ನ ಮಾಡಿದ್ದಾರೆ. ಆದರೆ ಪಾಕಿಸ್ಥಾನದಂತೆ ಭಾರತ ಬಲೂಚಿಸ್ಥಾನದಲ್ಲಿ ನಿತ್ಯ ರಕ್ತದ ಕಾಲುವೆ ಹರಿಯಲು ಉಗ್ರರನ್ನು ಛೂ ಬಿಡುತ್ತಿಲ್ಲ. ಅದಾಗ್ಯೂ ಇಮ್ರಾನ್‌ ಈ ಎರಡು ಸಮಸ್ಯೆಗಳಿಗೆ ಒಂದೇ ಪರಿಹಾರ ಎಂಬ ಧಾಟಿಯಲ್ಲಿ ಮಾತನಾಡುತ್ತಿರುವುದು ಅಪಾಯಕಾರಿ. ಈ ಎಲ್ಲ ಅಂಶಗಳನ್ನು ಗಮನಿಸುವಾಗ ಇಮ್ರಾನ್‌ ಮೂಲಕ ಪಾಕ್‌ ಸೇನೆ ಬೇರೆಯದ್ದೇ ಆಟ ಆಡುವ ಸಿದ್ಧತೆಯಲ್ಲಿರುವಂತೆ ಕಾಣಿಸುತ್ತಿದೆ. ಹೀಗಾಗಿ ಪಾಕಿಸ್ಥಾನದ ಜತೆಗೆ ವ್ಯವಹರಿಸುವ ಪ್ರತಿ ನಡೆಯನ್ನು ಅತ್ಯಂತ ಎಚ್ಚರಿಕೆಯಿಂದ ಇಡಬೇಕು ಎಂಬುದು ಸ್ಪಷ್ಟ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.