ವಿದೇಶಗಳಲ್ಲಿ ಖಲಿಸ್ಥಾನ ಪರ ಶಕ್ತಿಗಳು: ಪ್ರಶ್ನಿಸಲೇಬೇಕಿದೆ ಭಾರತ


Team Udayavani, Aug 22, 2018, 6:00 AM IST

12.jpg

ಪ್ರತ್ಯೇಕ ಖಲಿಸ್ಥಾನ. 70-80ರ ದಶಕದಲ್ಲಿ ಅತಿಹೆಚ್ಚು ಚರ್ಚೆಯಲ್ಲಿದ್ದು, 90ರ ದಶಕದಿಂದ ಅಜಮಾಸು ಮಾಯವಾಗಿದ್ದ ಪದವಿದು. ಆದರೆ ಕಳೆದ ಎರಡು ಮೂರು ವರ್ಷಗಳಿಂದ ಮತ್ತೆ ನಿಧಾನಕ್ಕೆ ಸದ್ದು ಮಾಡಲಾರಂಭಿಸಿದೆ. ಪಂಜಾಬಿನಲ್ಲಿ ಪ್ರತ್ಯೇಕ ಖಲಿಸ್ಥಾನದ ಪರವಿರುವವರು ಇದ್ದಾರಾದರೂ ಪೊಲೀಸರಿಗೆ, ಆಡಳಿತಕ್ಕೆ ಹೆದರಿ ಅವರು ತೆಪ್ಪಗಿದ್ದಾರೆ. ಪ್ರತ್ಯೇಕ ಖಲಿಸ್ಥಾನದ ಪರ ಇರುವ ಗುಂಪುಗಳನ್ನು ನಿರಂತರವಾಗಿ ಹತ್ತಿಕ್ಕುತ್ತಿದೆ ಪಂಜಾಬ್‌ ಸರ್ಕಾರ. ಆದರೆ ಈಗ ಸದ್ದು ಬರುತ್ತಿರುವುದು ಭಾರತದಿಂದಲ್ಲ ಬದಲಾಗಿ ವಿದೇಶಗಳಿಂದ. ಕೆಲವು ದಿನಗಳ ಹಿಂದೆ ಬ್ರಿಟನ್‌ನ ರಾಜಧಾನಿ ಲಂಡನ್‌ನಲ್ಲಿ ಖಲಿಸ್ಥಾನ ಸಮರ್ಥಕ ಸಂಘಟನೆ “ಸಿಖ್‌ ಫಾರ್‌ ಜಸ್ಟಿಸ್‌’ ದೊಡ್ಡದಾಗಿಯೇ ರ್ಯಾಲಿ ನಡೆಸಿದೆ. ಈ ರ್ಯಾಲಿಯಲ್ಲಿ ತಥಾಕಥಿತ ಖಲಿಸ್ಥಾನ ಬೆಂಬಲಿಗ‌ ನಾಯಕರು “ಪ್ರತ್ಯೇಕ ರಾಷ್ಟ್ರದ’ ಹೋರಾಟ ಇನ್ನೂ ಮುಗಿದಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ಭಾರತಕ್ಕೆ ಕಳುಹಿಸಿದ್ದಾರೆ. ಇಷ್ಟೇ ಅಲ್ಲ, ಸಿಖ್‌ ಫಾರ್‌ ಜಸ್ಟಿಸ್‌ ಸಂಘಟನೆಯು 2020ರಲ್ಲಿ ಪ್ರತ್ಯೇಕ ರಾಷ್ಟ್ರಕ್ಕಾಗಿ ಜನಮತ ಸಂಗ್ರಹಿಸುವುದಾಗಿಯೂ ಘೋಷಿಸಿದೆ. ಆದಾಗ್ಯೂ ಇಷ್ಟು ಚಿಕ್ಕ ಪ್ರಮಾಣದ ಜನರಿಂದ ಭಾರತವನ್ನು ಅಸ್ಥಿರಗೊಳಿಸುವುದಕ್ಕೆ ಸಾಧ್ಯವಿಲ್ಲವಾದರೂ, ಭುಗಿಲೇಳುತ್ತಿರುವ ಪ್ರಶ್ನೆಯೆಂದರೆ 90ರ ದಶಕದಿಂದ ತಣ್ಣಗಾಗಿದ್ದ ಖಲಿಸ್ಥಾನದ ಕೂಗ ಅದೇಕೆ ಈಗ ಮತ್ತೆ ಮೇಲೇಳುತ್ತಿದೆ? ಇದರ ಹಿಂದಿರುವವರು ಯಾರು ಎನ್ನುವುದು.   
ಈ ವರ್ಷಾರಂಭದಲ್ಲಿ ಪಂಜಾಬ್‌ನಲ್ಲೂ ಕೆಲವು ಖಲಿಸ್ಥಾನ ಪರ ಗುಂಪುಗಳನ್ನು ಪೊಲೀಸರು ಬಂಧಿಸಿದ್ದರು. ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಪ್ರಕಾರ ಇದೆಲ್ಲದರ ಹಿಂದೆ ಪಾಕಿಸ್ಥಾನದ ಐಎಸ್‌ಐ ಬೆಂಬಲಿತ “ವಿದೇಶಿ ಶಕ್ತಿಗಳಿವೆ’. ಪಾಕಿಸ್ಥಾನ ಈ ಆರೋಪವನ್ನು ಅಲ್ಲಗಳೆಯುತ್ತದಾದರೂ ಅದನ್ನು ನಂಬುವುದಕ್ಕೆ ಸಾಧ್ಯವಿಲ್ಲ.  ಕೆನಡಾ, ಇಟಲಿ ಮತ್ತು ಯುಕೆಯಲ್ಲಿ ಖಲಿಸ್ಥಾನ ಬೆಂಬಲಿಗರ ಸಂಖ್ಯೆಯೂ ಹೆಚ್ಚುತ್ತಿದೆ. ಅದರಲ್ಲೂ ಕೆನಡಾ ಮತ್ತು ಯುಕೆಯಲ್ಲೇ ಇವರು ಹೆಚ್ಚು ಸುದ್ದಿ ಮಾಡುತ್ತಿದ್ದಾರೆ. ಕಳೆದ ವರ್ಷ ಕೆನಡಾ ಪ್ರಧಾನಿ ಜಸ್ಟಿನ್‌ ತ್ರುದೌ ಕೂಡ ಭಾರತದಿಂದ ಟೀಕೆಗೊಳಗಾಗಿದ್ದರು. ಜಸ್ಟಿನ್‌ ಈ ಆರೋಪವನ್ನು ನಿರಾಕರಿಸುತ್ತಾರಾದರೂ ಅವರಿಗೆ ಮತ್ತು ಖಲಿಸ್ಥಾನ ಸಮರ್ಥಕ ಜಸ್ಪಾಲ್‌ ಅಟ್ವಾಲ್‌ಗೆ ನಿಕಟ ಸಂಪರ್ಕವಿರುವುದು ಬಹಿರಂಗವಾಗಿದೆ. ಇಂಟರ್‌ನ್ಯಾಷನಲ್‌ ಸಿಖ್‌ ಯೂತ್‌ ಫೆಡರೇಷನ್‌ ಎಂಬ ತೀವ್ರವಾದಿ ಸಂಘಟನೆಯ(ಈಗ ನಿಷೇಧಗೊಂಡಿದೆ) ಪ್ರಮುಖ ಚಹರೆಯಾಗಿದ್ದ ಅಟ್ವಾಲ್‌ 1986ರಲ್ಲಿ ಪಂಜಾಬ್‌ನ ಸಚಿವರೊಬ್ಬರನ್ನು ಹತ್ಯೆಮಾಡಲು ಪ್ರಯತ್ನಿಸಿದ ವ್ಯಕ್ತಿ! ಈತನನ್ನು ಕೆನಡಾ ಬಹಳ ವರ್ಷಗಳಿಂದ ಅಕ್ಕರೆಯಿಂದ ಪೋಷಿಸುತ್ತಾ ಬಂದಿರುವುದೇಕೆ?

ಈಗ ಬ್ರಿಟನ್‌ನ ವಿಷಯಕ್ಕೆ ಬರುವುದಾದರೆ ಪ್ರತ್ಯೇಕ ಖಲಿಸ್ಥಾನಕ್ಕಾಗಿ ರಸ್ತೆಗಿಳಿದವರು ಪೂರ್ತಿ ತಯಾರಿಯೊಂದಿಗೇ ಬಂದಿದ್ದರು ಎನ್ನುವುದು ಅಚ್ಚರಿಹುಟ್ಟಿಸುತ್ತಿರುವ ಸಂಗತಿ. ತಮ್ಮದು ಮಾನವಹಕ್ಕು ಸಂಘಟನೆ ಎಂದು ಹೇಳಿಕೊಳ್ಳುವ ಸಿಖ್‌ ಫಾರ್‌ ಜಸ್ಟಿಸ್‌ ತಂಡಕ್ಕೆ ಬ್ರಿಟನ್‌ನ ಎಡಪಂಥೀಯ “ಗ್ರೀನ್‌ ಪಾರ್ಟಿ’ ಭಾರೀ ಬೆಂಬಲ ಕೊಡುತ್ತಿದೆ. ಗ್ರೀನ್‌ ಪಾರ್ಟಿಯ ನಾಯಕಿ ಕ್ಯಾರೊಲಿನ್‌ ಲೂಕಾಸ್‌ ಈ ವಿಷಯವನ್ನು “ಹೌಸ್‌ ಆಫ್ ಕಾಮನ್ಸ್‌’ನಲ್ಲೇ ಸಾರಿದ್ದರು. ತಾನು ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತದ ಪರ ಇರುವುದಾಗಿ ಹೇಳುತ್ತಿರುವ ಬ್ರಿಟನ್‌ ಈಗ ಭಾರತ ವಿರೋಧಿ ಶಕ್ತಿಗಳಿಗೆ ನೀರೆರೆಯುತ್ತಿರುವುದು ದುರಂತ. ಈ ವಿಷಯದಲ್ಲಿ ಭಾರತ ಸರ್ಕಾರ ಬ್ರಿಟನ್‌ ಅನ್ನು ಪ್ರಶ್ನಿಸಲೇಬೇಕಿದೆ. 

ಭಾರತ ಸುಮಾರು 20 ವರ್ಷಗಳವರೆಗೆ ಖಲಿಸ್ಥಾನ ಪರ ಉಗ್ರರಿಂದಾಗಿ  ಭಾರೀ ಬೆಲೆ ತೆತ್ತಿದೆ. ಸಾವಿರಾರು ಅಮಾಯಕ ಜನರು ಉಗ್ರರಿಂದ ಹಿಂಸೆ ಅನುಭವಿಸಿದ್ದಾರೆ, ಪ್ರಾಣ ಕಳೆದುಕೊಂಡಿದ್ದಾರೆ. ಇದೆಲ್ಲ ತಿಳಿದಿದ್ದರೂ ಬ್ರಿಟನ್‌, ಕೆನಡಾ, ಇಟಲಿ ಮತ್ತು ಕೆಲವು ಐರೋಪ್ಯ ರಾಷ್ಟ್ರಗಳು ಅದೇಕೆ ಇಂಥ ಖಲಿಸ್ಥಾನ ಪರ ಸಂಘಟನೆಗಳಿಗೆ ಬೆಳೆಯಲು ಅವಕಾಶ ಕೊಡುತ್ತಿವೆ/ಬೆಳೆಸುತ್ತಿವೆ? ಭಾರತದ ಸಾರ್ವಭೌಮತೆಗೆ ಅಪಾಯ ಒಡ್ಡುವ ಇಂಥ ಸಂಘಟನೆಗಳನ್ನು ಹತ್ತಿಕ್ಕಲೇಬೇಕಿದೆ. ಕೂಡಲೇ ಕೇಂದ್ರ ಸರ್ಕಾರ ಈ ಎಲ್ಲಾ ರಾಷ್ಟ್ರಗಳಿಗೂ ಎಚ್ಚರಿಕೆಯ ಸಂದೇಶ ಕಳುಹಿಸಬೇಕು, ಅವುಗಳ ಉದ್ದೇಶವನ್ನು ಜಾಗತಿಕ ವೇದಿಕೆಗಳಲ್ಲಿ ಪ್ರಶ್ನಿಸಲೇಬೇಕು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.