ವಾಟ್ಸ್‌ಆ್ಯಪ್‌ಗೆ ಎಚ್ಚರಿಕೆ ಸ್ವಾಗತಾರ್ಹ


Team Udayavani, Aug 23, 2018, 6:00 AM IST

s-12.jpg

ಸಾಮಾಜಿಕ ಮಾಧ್ಯಮಗಳು ಹರಡುವ ಸುಳ್ಳು ಸುದ್ದಿಗಳು ಅನಾಹುತಕಾರಿ ಪರಿಣಾಮಗಳಿಗೆ ಕಾರಣವಾಗುತ್ತಿವೆ. ಅದರಲ್ಲೂ ವಾಟ್ಸ್‌ಆ್ಯಪ್‌ ಸೃಷ್ಟಿಸುತ್ತಿರುವ ಅವಾಂತರಗಳು ನಿಯಂತ್ರಣಕ್ಕೆ ಸಿಗುತ್ತಿಲ್ಲ. ವಾಟ್ಸ್‌ಆ್ಯಪ್‌ನಲ್ಲಿ ಹರಡುವ ಮಕ್ಕಳ ಕಳ್ಳರೆಂಬ ಸುಳ್ಳು ಸುದ್ದಿಗಳನ್ನು ನಂಬಿ ಜನರು ಗುಂಪುಗೂಡಿ ಥಳಿಸಿ ಸಾಯಿಸಿದ ಹಲವು ಪ್ರಕರಣಗಳು ದೇಶದ ಹಲವೆಡೆಗಳಲ್ಲಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಾಟ್ಸ್‌ಆ್ಯಪ್‌ಗೆ ಲಗಾಮು ಹಾಕುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ನಿನ್ನೆ ವಾಟ್ಸ್‌ಆ್ಯಪ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನು ಕರೆಸಿಕೊಂಡು ಸುಳ್ಳು ಸುದ್ದಿಗಳ ಮೂಲವನ್ನು ಪತ್ತೆಹಚ್ಚಲು ತಾಂತ್ರಿಕವಾದ ದಾರಿಯನ್ನು ಹುಡುಕಬೇಕೆಂದು ಕಟ್ಟುನಿಟ್ಟಾಗಿ ಹೇಳಿರುವುದು ಸ್ವಾಗತಾರ್ಹ. ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್‌ ತನ್ನನ್ನು ಭೇಟಿಯಾದ ವಾಟ್ಸ್‌ಆ್ಯಪ್‌ ಸಿಇಒ ಕ್ರಿಸ್‌ ಡೇನಿಯಲ್ಸ್‌ಗೆ ಭಾರತದಲ್ಲಿ ಕಾರ್ಪೋರೇಟ್‌ ಘಟಕ ಸ್ಥಾಪಿಸಿ ಸ್ಥಳೀಯ ಕಚೇರಿ ತೆರೆಯಬೇಕೆಂದು ಹೇಳಿದ್ದಾರೆ ಹಾಗೂ ಜೊತೆಗೆ ಭಾರತೀಯ ಗ್ರಾಹಕರ ಅಹವಾಲುಗಳನ್ನು ಆಲಿಸಲು ಅಧಿಕಾರಿಯನ್ನು ನೇಮಿಸಲೂ ಸೂಚಿಸಿದ್ದಾರೆ. 

ಸುಳ್ಳು ಸುದ್ದಿಗಳು ಹರಡುವುದನ್ನು ನಿಗ್ರಹಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ತಾಕೀತು ಮಾಡಿದ ಬೆನ್ನಿಗೆ ದಿಲ್ಲಿಗೆ ದೌಡಾಯಿಸಿದ ಡೇನಿಯಲ್ಸ್‌ಗೆ ಪ್ರಸಾದ್‌ ನೆಲದ ಕಾನೂನು ಪಾಲಿಸಬೇಕೆಂದು ಸ್ಪಷ್ಟವಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಭಾರತದಲ್ಲಿ ಕಚೇರಿ ಆರಂಭಿಸಿದರೆ ನೆಲದ ಕಾನೂನು ವ್ಯಾಪ್ತಿಗೆ ಈ ಕಚೇರಿಯೂ ಒಳಪಡುವುದರಿಂದ ಕಾನೂನು ಪಾಲನೆ ಸಾಧ್ಯವಾಗುತ್ತದೆ. ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸೇರಿದಂತೆ ಎಲ್ಲ ಜನಪ್ರಿಯ ಸೋಷಿಯಲ್‌ ಮೀಡಿಯಾಗಳ ಕಚೇರಿಗಳಿರುವುದು ವಿದೇಶಗಳಲ್ಲಿ. ಹೀಗಾಗಿ ಅವುಗಳಿಗೆ ಮೂಗುದಾರ ತೊಡಿಸಲು ಸಾಧ್ಯವಾಗುತ್ತಿರಲಿಲ್ಲ. ಸುಳ್ಳು ಸುದ್ದಿ ಸೃಷ್ಟಿಸಿದ್ದು ಯಾರೆಂದು ತಿಳಿಯಬೇಕಿದ್ದರೆ ಈ ಕಚೇರಿಗಳಿಗೆ ಮನವಿ ಮಾಡಬೇಕಿತ್ತು. ವಿದೇಶ ಗಳಲ್ಲಿರುವ ಅಧಿಕಾರಿಗಳು ಇಷ್ಟವಿದ್ದರೆ ಮಾಹಿತಿ ಕೊಡುತ್ತಿದ್ದರು ಇಲ್ಲದಿದ್ದರೆ ನಿರ್ಲಕ್ಷಿಸುತ್ತಿದ್ದರು. ಇಂಥ ಸಂದರ್ಭದಲ್ಲಿ ಈ ಮಾಧ್ಯಮವನ್ನು ಉತ್ತರದಾಯಿ ಮಾಡುವ ಅವಕಾಶ ಸರಕಾರಕ್ಕಿರಲಿಲ್ಲ. ಹೀಗಾಗಿ ಇದು ಒಂದು ಉತ್ತಮ ಕ್ರಮ. ವಾಟ್ಸ್‌ಆ್ಯಪ್‌ ಮಾತ್ರವಲ್ಲದೆ ಫೇಸ್‌ಬುಕ್‌ ಸೇರಿದಂತೆ ಉಳಿದ ಸೋಷಿಯಲ್‌ ಮೀಡಿಯಾಗಳಿಗೂ ಕಚೇರಿಯನ್ನು ಸ್ಥಾಪಿಸಲು ಹೇಳಬೇಕು. 

ಲಿಂಚಿಂಗ್‌ ಪ್ರಕರಣಗಳು ಕಳವಳಕಾರಿಯಾಗಿ ಹೆಚ್ಚಿದ ಬಳಿಕ ವಾಟ್ಸ್‌ಆ್ಯಪ್‌ ಕೇಂದ್ರದ ದೂರಿನ ಮೇರೆಗೆ ಸಂದೇಶದಲ್ಲಿ ಫಾರ್‌ವರ್ಡೆಡ್‌ ಎಂದು ತೋರಿಸುವ ಫೀಚರ್‌ ಸೇರಿಸಿಕೊಂಡಿದೆ ಹಾಗೂ ಸಂದೇಶ ವಿನಿಮಯವನ್ನು ಐದು ಗ್ರೂಪುಗಳಿಗೆ ಸೀಮಿತಗೊಳಿಸಿದೆ. ಆದರೆ ಇದರಿಂದ ಹೆಚ್ಚಿನ ಪ್ರಯೋಜನ ಆಗಿಲ್ಲ. ಈ ನಿಯಮ ಬಂದ ಬಳಿಕವೂ ಗುಂಪು ಥಳಿತ ಪ್ರಕರಣ ಸಂಭವಿಸಿದೆ. 

ಭಾರತ ಮಾತ್ರವಲ್ಲದೆ ಇತರ ದೇಶಗಳಲ್ಲೂ ನಿರ್ದಿಷ್ಟವಾಗಿ ವಾಟ್ಸ್‌ಆ್ಯಪ್‌ ಕುರಿತಾದ ದೂರುಗಳು ಹೆಚ್ಚೇ ಇವೆ. 12 ದೇಶಗಳಲ್ಲಿ ವಾಟ್ಸ್‌ಆ್ಯಪ್‌ಗೆ ಒಂದಲ್ಲ ಒಂದು ಸಂದರ್ಭದಲ್ಲಿ ನಿಷೇಧ ಹೇರಲಾಗಿತ್ತು. ಉಗಾಂಡದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಗೆ ಪ್ರತ್ಯೇಕ ತೆರಿಗೆಯೇ ಇದೆ. ವಾಟ್ಸ್‌ಆ್ಯಪ್‌ ಈ ಪರಿಯಲ್ಲಿ ದುರ್ಬಳಕೆಯಾಗಲು ಅದರ ತಂತ್ರಜ್ಞಾನದಲ್ಲಿರುವ ದೋಷವೂ ಕಾರಣ. ವಾಟ್ಸ್‌ಆ್ಯಪ್‌ನಲ್ಲಿರುವ ಗ್ರೂಪ್‌ಗ್ಳ ಮುಖಾಂತರ ಸುಳ್ಳು ಸುದ್ದಿಗಳು ಕ್ಷಿಪ್ರವಾಗಿ ರವಾನೆ ಯಾಗುತ್ತವೆ. ಇದಕ್ಕೆ ಗ್ರೂಪ್‌ ಅಡ್ಮಿನಿಸ್ಟ್ರೇಟರ್‌ನನ್ನು ಹೊಣೆ ಮಾಡಿದರೂ ಇದು ಪರಿಣಾಮಕಾರಿಯೇನಲ್ಲ. ಏಕೆಂದರೆ ಅಡ್ಮಿನ್‌ಗೂ ಸದಸ್ಯರು ಕಳುಹಿಸುವ ಸಂದೇಶಗಳನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಎಲ್ಲ ಸಂದೇಶಗಳು ಎಂಡ್‌ ಟು ಎಂಡ್‌ ಎನ್‌ಕ್ರಿಪ್ಟ್ ಆಗಿರುತ್ತವೆ. ಅಂದರೆ ಎಲ್ಲ ಡೇಟಾಗಳು ಆಯಾಯ ಮೊಬೈಲ್‌ನಲ್ಲಿ ಸೇವ್‌ ಆಗಿರುತ್ತವೆಯೇ ಹೊರತು ವಾಟ್ಸ್‌ಆ್ಯಪ್‌ ಸರ್ವರ್‌ನಲ್ಲಿ ಅಲ್ಲ. ಈ ವಿಚಾರವನ್ನು ಸ್ವತಹ ವಾಟ್ಸ್‌ಆ್ಯಪ್‌ ಒಪ್ಪಿಕೊಂಡಿದೆ. ಹೀಗಾಗಿ ಸಂದೇಶಗಳ ಮೇಲೆ ಕಂಪೆನಿಗೂ ನಿಯಂತ್ರಣವಿರುವುದಿಲ್ಲ ಹಾಗೂ ಅವುಗಳ ಮೂಲವನ್ನು ಪತ್ತೆಹಚ್ಚಲು ಸಾಧ್ಯವಾಗುವುದಿಲ್ಲ. ಆ್ಯಪ್‌ನಲ್ಲಿ ಯಾವ ಚರ್ಚೆ ಆಗುತ್ತದೆ ಎನ್ನುವುದು ಕಂಪೆನಿಗೂ ಗೊತ್ತಿರುವುದಿಲ್ಲ. ಸಂದೇಶ ರವಾನೆಯಾದ ಕೂಡಲೇ ಸರ್ವರ್‌ನಿಂದ ಡಿಲೀಟ್‌ ಆಗುತ್ತದೆ ಎನ್ನುವ ಸೂಚನೆ ವಾಟ್ಸ್‌ಆ್ಯಪ್‌ ವೆಬ್‌ಸೈಟಿನಲ್ಲೇ ಇದೆ. ಈ ದೃಷ್ಟಿಯಿಂದಲೂ ವಾಟ್ಸ್‌ಆ್ಯಪ್‌ ಸುಳ್ಳು ಸುದ್ದಿಗಳ ಮೂಲ ಪತ್ತೆಹಚ್ಚಲು ತಾಂತ್ರಿಕವಾದ ಪರಿಹಾರ ಕಂಡುಕೊಳ್ಳುವುದು ಅತಿ ಅಗತ್ಯ. 

ಹಾಗೆಂದು ಸೋಷಿಯಲ್‌ ಮೀಡಿಯಾಗಳಿಂದ ಬರೀ ಕೆಡುಕು ಮಾತ್ರ ಆಗುತ್ತದೆ ಎಂದಲ್ಲ. ದುರಂತಗಳ ಸಂದರ್ಭದಲ್ಲಿ ಮೊದಲು ನೆರವಿಗೆ ಬರುವುದೇ ಸೋಷಿಯಲ್‌ ಮೀಡಿಯಾ ಎನ್ನುವುದು ಕೇರಳ ಮತ್ತು ಕೊಡಗಿನ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮತ್ತೂಮ್ಮೆ ಸಾಬೀತಾಗಿದೆ. ಆದರೆ ಜನರು ಅದನ್ನು ಒಳಿತಿಗಿಂತ ಕೆಡುಕಿಗೆ ಹೆಚ್ಚು ಉಪಯೋಗಿಸುತ್ತಿರು ವುದರಿಂದ ವರವಾಗಬೇಕಾದ ಆವಿಷ್ಕಾರ ಶಾಪವಾಗಿ ಪರಿಣಮಿಸುತ್ತಿದೆ. 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.