ತ್ವರಿತಗೊಳ್ಳಲಿ ಪರಿಹಾರ ಕಾರ್ಯ


Team Udayavani, Aug 28, 2018, 6:00 AM IST

18.jpg

ಕೆಲವು ದಿನಗಳ ಹಿಂದೆ ಕೊಡಗು ಮತ್ತು ಕೇರಳ ಮಳೆ, ನೆರೆಯ ಹೊಡೆತಕ್ಕೆ ಸಿಕ್ಕು ತತ್ತರಿಸಿ ಹೋಗಿತ್ತು. ಈಗ ಎರಡೂ ಕಡೆ ಬದುಕನ್ನು ಮತ್ತೆ ಕಟ್ಟುವ ಪ್ರಕ್ರಿಯೆ ಆರಂಭವಾಗಿದೆ. ನಿಧಾನವಾಗಿಯಾದರೂ ಜನಜೀವನ ಸಹಜ ಸ್ಥಿತಿಗೆ ಬರುತ್ತಿರುವುದು ಸಮಾಧಾನದ ಸಂಗತಿ. ಆದರೆ, ಈ ಸಂದರ್ಭದಲ್ಲಿ ಆಡಳಿತಗಾರರ ಹೊಣೆ ಹೆಚ್ಚಿನದು. ಸಂತ್ರಸ್ತ ಪ್ರದೇಶವನ್ನು ಪುನಾ ಕಟ್ಟುವ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ, ಸರಕಾರ, ಸಮುದಾಯದ ಪಾತ್ರ ಪ್ರಮುಖವಾದುದು. ಸಂತ್ರಸ್ತರಿಗೆ ಆರಂಭದಲ್ಲಿ ಎದುರಾಗುವುದೇ ವಸತಿ ಮತ್ತು ಸಂಪಾದನೆಯ ಸಮಸ್ಯೆ. ಸದ್ಯಕ್ಕೇನೋ ಪರಿಹಾರ ಸಾಮಗ್ರಿಗಳು ಸಾಕಷ್ಟು ಹರಿದು ಬರುತ್ತಿವೆ. ಅವುಗಳ ವಿತರಣೆಯೂ ಸಮರ್ಪಕವಾಗಿ ನಡೆಯುತ್ತಿದೆ. ಆದರೆ ಇದು ಎಷ್ಟೆಂದರೂ ಸೀಮಿತ ಅವಧಿಗೆ ಮಾತ್ರ. 

ದೀರ್ಘ‌ಕಾಲೀನವಾಗಿ ಜನರ ಬದುಕನ್ನು ಹಳಿಗೆ ತರಬೇಕಾದ ಮಹತ್ವದ ಹೊಣೆಯಿರುವುದು ಆಡಳಿತದ ಕೈಯಲ್ಲಿ. ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ, ಅಂಗಡಿಮುಂಗಟ್ಟು, ಫ್ಯಾಕ್ಟರಿ ಮುಂತಾದ ಜೀವನೋಪಾಯಗಳನ್ನು ಕಳೆದುಕೊಂಡವರಿಗೆ ಪರ್ಯಾಯ ಸಂಪಾದನೆಯ ವ್ಯವಸ್ಥೆ ಹೀಗೆ ಆಗಬೇಕಾದ ಕಾರ್ಯಗಳ ಪಟ್ಟಿ ದೊಡ್ಡದಿದೆ. ಜತೆಗೆ ಮೂಲ ಸೌಕರ್ಯ ವ್ಯವಸ್ಥೆಯನ್ನೂ ಕ್ಷಿಪ್ರವಾಗಿ ಒದಗಿಸಬೇಕು. ಮುಖ್ಯವಾಗಿ ರಸ್ತೆ , ಕುಡಿಯುವ ನೀರು ಇವೆಲ್ಲ ತುರ್ತಾಗಿ ಆಗಲೇ ಬೇಕಾದ ಕೆಲಸಗಳು. ಎಲ್ಲವೂ ಒಂದೇ ಹಂತದಲ್ಲಿ ಸಾಧ್ಯವಿಲ್ಲವೆನ್ನುವುದಾದರೂ ಆದ್ಯತೆವಾರು ಸೌಲಭ್ಯಗಳನ್ನು ನಿಗದಿತ ಕಾಲ ಮಿತಿಯೊಳಗೆ ಒದಗಿಸಬೇಕು. ಇದು ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ಆದ್ಯ ಕರ್ತವ್ಯವೂ ಹೌದು.ಈ ನಿಟ್ಟಿನಲ್ಲಿ ಕೇರಳ ಸರಕಾರ ಸಮರೋಪಾದಿಯಲ್ಲಿ ಕಾರ್ಯ ನಿರತವಾಗಿದೆ. 

ಆದರೆ ಕರ್ನಾಟಕ ಸರಕಾರದ ಕಾರ್ಯಶೈಲಿಯನ್ನು ನೋಡುವಾಗ ಆ ಧಾವಂತ ಅಷ್ಟೇನೂ ಕಾಣಿಸುತ್ತಿಲ್ಲ. ಅತ್ತ ಕೊಡಗಿನ ಜನಜೀವನ ಜರ್ಜರಿತ ವಾಗಿದ್ದರೂ ಇತ್ತ ಸಮ್ಮಿಶ್ರ ಸರಕಾರ ರಾಜಕೀಯ ಜಟಾಪಟಿಯಲ್ಲಿ ನಿರತವಾಗಿದೆ. ಮಿತ್ರಪಕ್ಷಗಳ ನಾಯಕರು ದಿನಕ್ಕೊಬ್ಬರಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಅದನ್ನು ಬಗೆಹರಿಸಿಕೊಳ್ಳುವುದರಲ್ಲೇ ಮುಳುಗಿದ್ದಂತೆ ತೋರುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಹಲವು ಸಚಿವರೂ ಸಮಯದ ಗಂಭೀರತೆಯನ್ನು ಮರೆತು ರಾಜಕೀಯ ಹೇಳಿಕೆಗಳಲ್ಲಿ ಮುಳುಗಿದ್ದಾರೆ. ಜಿಲ್ಲೆಯಲ್ಲಿನ ವ್ಯವಸ್ಥೆಯ ಮರುಸ್ಥಾಪನೆ ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ಕಂದಾಯ ಸಚಿವರ ಹೊಣೆಗಾರಿಕೆಯಲ್ಲ. ಇಡೀ ಸರಕಾರದ ಹೊಣೆಗಾರಿಕೆ ಎಂಬುದನ್ನು ಎಲ್ಲರೂ ಅರಿಯಬೇಕು.

ಇದರೊಂದಿಗೆ ಸರಕಾರ ಪರಿಹಾರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ನಾನಾ ರೀತಿಯ ಯೋಜನೆಗಳನ್ನು ಘೋಷಿಸುತ್ತಿದೆ. ಇದೇನೂ ಹೊಸದಲ್ಲ. ಆದರೆ ಸಮರ್ಪಕ ಅನುಷ್ಠಾನಕ್ಕೆ ಕ್ರಿಯಾ ಯೋಜನೆ ರೂಪಿಸಿ ಜಾರಿಗೊಳಿಸಬೇಕು. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪರಿಹಾರ ಕೇಂದ್ರಗಳಿಗೆ ಭೇಟಿ ಕೊಟ್ಟು ಸಂತ್ರಸ್ತರ ಅಹವಾಲು ಆಲಿಸಿದ್ದು ಮೆಚ್ಚುಗೆ ಅರ್ಹವಾದ ಕ್ರಮ. ಅದು ಆ ಹೊತ್ತಿಗೆ ಸಂತ್ರಸ್ತರಲ್ಲಿ ಧೈರ್ಯ ತುಂಬುವ ಮಾನವೀಯ ಕ್ರಮ. ಆ ಕ್ಷಣದ ನಿರ್ವಹಣೆ ಸೂಕ್ತ. ಅನಂತರದ ಪರಿಸ್ಥಿತಿಗೆ ಸ್ಪಂದಿಸಬೇಕಾದ ರೀತಿಯೇ ಬೇರೆ. 

ಕನಿಷ್ಠ ಕೇಂದ್ರ ಸರಕಾರಕ್ಕೆ ಅನಾಹುತದ ಭೀಕರತೆಯನ್ನು ಮನವರಿಕೆ ಮಾಡಿಕೊಟ್ಟು ಸಾಧ್ಯವಾದಷ್ಟು ಹೆಚ್ಚು ನೆರವು ಪಡೆದುಕೊಳ್ಳುವ ಪ್ರಯತ್ನವನ್ನು ಸರಕಾರ ಮಾಡಿಲ್ಲ. ಮುಖ್ಯಮಂತ್ರಿಯವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಪ್ರಧಾನಿಯನ್ನು ಭೇಟಿಯಾಗಿ ಪರಿಸ್ಥಿತಿಯನ್ನು ವಿವರಿಸಿ ನೆರವಿಗಾಗಿ ಮನವಿ ಮಾಡಬೇಕಿತ್ತು. ಇದರಲ್ಲಿ ವಿಪಕ್ಷದ್ದೂ ಪಾಲಿದೆ. ಜವಾಬ್ದಾರಿಯುತ ವಿಪಕ್ಷವಾಗಿ ಈ ಹಂತದಲ್ಲಿ ಸರಕಾರಕ್ಕೆ ಬೆಂಬಲವಾಗಿ ನಿಂತು ಪ್ರಧಾನಿಗೆ ಮನವರಿಕೆ ಮಾಡಿಕೊಟ್ಟು ನೆರವು ಪಡೆಯಲು ಯತ್ನಿಸಬಹುದಿತ್ತು. ಪರಿಹಾರಕ್ಕಾಗಿ ಆಗ್ರಹಿಸುವುದು ನಮ್ಮ ಹಕ್ಕೂ ಸಹ. ಈಗಲೂ ಕಾಲ ಮಿಂಚಿಲ್ಲ. . ಅಷ್ಟೇ ಸಾಲದು, ಅಗತ್ಯವಿದ್ದಲ್ಲಿ ಸಂಸದರನ್ನೂ ಕೂಡಿಕೊಂಡು ಆ ನಿಟ್ಟಿನಲ್ಲಿ ಪ್ರಯತ್ನಿಸುವುದು ಸೂಕ್ತ. 

ಪರಿಹಾರ ಕೇಂದ್ರಗಳ ಬದುಕಿನ ಬಳಿಕ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಹೊರಡುವವರಿಗೆ ಬರೀ ಮಾತಿನಿಂದ ಧೈರ್ಯ ತುಂಬಿದರೆ ಸಾಲದು, ಯೋಜನೆಗಳ ಲೆಕ್ಕ ಕೊಟ್ಟರೆ ಸಾಲದು. ಪ್ರಾಮಾಣಿಕ ಅನುಷ್ಠಾನದ ಮೂಲಕ ಬೆಂಬಲವಾಗಿ ನಿಲ್ಲಬೇಕು. ಪ್ರವಾಹ, ಮುಳುಗಡೆ ಮತ್ತಿತರ ದುರಂತಗಳ ಸಂತ್ರಸ್ತರಿಗೆ ರೂಪಿಸುವ ಯೋಜನೆಗಳ ಅನುಷ್ಠಾನ ಕುಂಟುತ್ತಾ ಸಾಗುವುದು ಸಾಮಾನ್ಯ ವಿಚಾರ. ಅಣೆಕಟ್ಟೆ ಮತ್ತಿತರ ಯೋಜನೆಗಳಿಂದ ನಿರ್ವಸಿತರಾದವರಿಗೆ ಪುನರ್‌ವಸತಿ ಕಲ್ಪಿಸುವ ಯೋಜನೆ ವರ್ಷಾನುಗಟ್ಟಲೆ ನನೆಗುದಿಗೆ ಬಿದ್ದಿರುವ ಸಾಕಷ್ಟು ಉದಾಹರಣೆಗಳಿವೆ. ನರ್ಮದಾ ಯೋಜನೆ, ಆಲಮಟ್ಟಿ ಯೋಜನೆಯಂಥ ಬೃಹತ್‌ ಯೋಜನೆಗಳ ಸಂತ್ರಸ್ತರಿಗೆ ಇನ್ನೂ ಸೂಕ್ತವಾದ ನೆಲೆ ಕಲ್ಪಿಸಲಾಗಿಲ್ಲ. ಕೊಡಗು ಕೂಡಾ ಈ ಸಾಲಿಗೆ ಸೇರಬಾರದು ಎನ್ನುವ ಎಚ್ಚರ ಆಡಳಿತ ನಡೆಸುವವರಲ್ಲಿ ಇರಬೇಕು. ಒಂದು ಮಳೆಗಾಲ ಮುಗಿದ ಬಳಿಕ ಇನ್ನೊಂದು ಮಳೆಗಾಲ ಶುರು ವಾಗುವುದರ ಮಧ್ಯೆ ಸರಕಾರಕ್ಕೆ ಸಿಗುವುದು ಬರೀ ಎಂಟು ತಿಂಗಳ ಸಮಯ. ಅಷ್ಟೂ ಸಮಯವನ್ನು ಸದುಪಯೋಗ ಪಡಿಸಿಕೊಂಡು ಸರಕಾರ ಸಮರೋಪಾದಿಯಲ್ಲಿ ಮರು ಕಟ್ಟುವ ಪ್ರಕ್ರಿಯೆ ನಡೆಸಬೇಕು. ಜತೆಗೆ ಭವಿಷ್ಯದಲ್ಲಿ ಈ ಮಾದರಿಯ ದುರಂತಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.