ಭೇಟಿ ರದ್ದು, ನಿರ್ಧಾರ ಸರಿ: ಪಾಕ್‌ಗೆ ಪಾಠ ಕಲಿಸಿ


Team Udayavani, Sep 22, 2018, 6:00 AM IST

c-3.jpg

ದ್ವಿಪಕ್ಷೀಯ ಮಾತುಕತೆ ಪುನಾರಂಭಿಸಬೇಕು ಎಂಬ ಪ್ರಧಾನ ಅಂಶದ ಜತೆಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಪತ್ರಕ್ಕೆ ಒಪ್ಪಿಗೆ ಸೂಚಿಸಿ ದಿನ ಕಳೆದಿಲ್ಲ. ಆಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಪೊಲೀಸರನ್ನು ಉಗ್ರರು ಅಪಹರಿಸಿ ಹತ್ಯೆ ಮಾಡಿದ್ದಾರೆ. ಈ ಘಟನೆಯ ನಂತರ ಭಾರತವು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌-ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಷಿ ನಡುವೆ ನಿಗದಿಯಾಗಿದ್ದ ಭೇಟಿಯನ್ನು ರದ್ದುಪಡಿಸಿದೆ. 

ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ನಮ್ಮ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ ಎಂಬ ಅಂಶ ಬಹಿರಂಗವಾಗಿ ಮೆಚ್ಚುಗೆ ಗಳಿಸಿದ್ದ ವೇಳೆಯಲ್ಲೇ ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿಯಲ್ಲಿ ಬಿಎಸ್‌ಎಫ್ ಯೋಧರೊಬ್ಬರನ್ನು ಪಾಕ್‌ ಸೇನೆ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿತು! ಈಗ ಪಾಕ್‌ ಬೆಂಬಲಿತ ಉಗ್ರರು ಕಾಶ್ಮೀರಿ ಪೊಲೀಸರನ್ನು ಅಪಹರಿಸಿ ಹತ್ಯೆಗೈದಿದ್ದಾರೆ. ಪಾಕಿಸ್ತಾನಕ್ಕೆ ಹಿಂಸೆಯೇ 
ಆದ್ಯತೆ ಎಂದಾದರೆ ಜಮ್ಮು ಮತ್ತು ಕಾಶ್ಮೀರ ವಿಚಾರ, ಉಗ್ರವಾದ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಕುಳಿತು ಮಾತಾಡೋಣ ಎಂಬ ಸಿಹಿ ಲೇಪನದ ಪತ್ರವನ್ನು ಬರೆಯ ಬೇಕಾದ ಅಗತ್ಯವೇನಿತ್ತು ಎಂಬ ಪ್ರಶ್ನೆ ಮೂಡುತ್ತದೆ. 

ಇಂಥ ಬೆಳವಣಿಗೆ ಹೊಸತೇನೂ ಅಲ್ಲ. ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿ ಯಾಗಿದ್ದ ವೇಳೆ ಲಾಹೋರ್‌ಗೆ ಐತಿಹಾಸಿಕ ಬಸ್‌ ಯಾತ್ರೆ ನಡೆಸಿ ನವದಹೆಲಿಗೆ ಹಿಂತಿರುಗಿದ ಕೆಲವೇ ದಿನಗಳಲ್ಲಿ ಪಾಕಿಸ್ತಾನ ಸೇನೆ ಕಾರ್ಗಿಲ್‌ ದಾಳಿ ನಡೆಸಿತ್ತು. ಮಿತ್ರತ್ವದ ಕೈಚಾಚುತ್ತಾ ಬೆನ್ನಿಗೆ 
ಇರಿಯುವ ಇರಾದೆಯುಳ್ಳ ರಾಷ್ಟ್ರವನ್ನು ನಂಬುವುದಾದರೂ ಹೇಗೆ? ರಾಜತಾಂತ್ರಿಕವಾಗಿ ಒಂದು ರಾಷ್ಟ್ರದ ಮುಖ್ಯಸ್ಥರು ಮತ್ತೂಂದು ರಾಷ್ಟ್ರದ ಮುಖ್ಯಸ್ಥರಿಗೆ  “ಬನ್ನಿ, ಬಿಕ್ಕಟ್ಟು ಪರಿಹರಿಸಲು ಸಮಾಲೋಚನೆ ನಡೆಸೋಣ’ ಎಂದು ಪತ್ರ ಬರೆದು ಆಹ್ವಾನಿಸಿದಾಗ, ಪೂರಕ ಸ್ಪಂದನೆ ನೀಡದೇ ಇದ್ದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಂದನೆಗೆ ಗುರಿಯಾಗ ಬೇಕಾಗುತ್ತದೆ. ಇಂಥ ದೂರದೃಷ್ಟಿಯನ್ನಿರಿಸಿಕೊಂಡೇ ವಿದೇಶಾಂಗ ಇಲಾಖೆ  “ಪಾಕಿಸ್ತಾನದ ಕೋರಿಕೆ ಮೇರೆಗೆ ನ್ಯೂಯಾರ್ಕ್‌ನಲ್ಲಿ ಕೇಂದ್ರ ವಿದೇಶಾಂಗ ಸಚಿವರು, ಅಲ್ಲಿನ ಸಚಿವರನ್ನು ಭೇಟಿಯಾಗುತ್ತಿದ್ದಾರೆ. ಇದು ದ್ವಿಪಕ್ಷೀಯ ಮಾತುಕತೆಗೆ ವೇದಿಕೆ ಅಲ್ಲ’ ಎಂದು ಸ್ಪಷ್ಟವಾಗಿ ಹೇಳಿತ್ತು. ಆದರೆ ಈಗ ಈ ಭೇಟಿಯನ್ನು ರದ್ದುಗೊಳಿಸಿ ಭಾರತ ಸರಿಯಾದ ಹೆಜ್ಜೆಯಿಟ್ಟಿದೆ.

ಇನ್ನು ಮೂವರು ಪೊಲೀಸರ ಹತ್ಯೆ ಸಹಜವಾಗಿಯೇ ಕಣಿವೆ ರಾಜ್ಯದ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಯಲ್ಲಿ ಸಂಚಲನ ಸೃಷ್ಟಿಸಿದೆ. ಹಲವು ಮಾಧ್ಯಮ ವರದಿಗಳ ಪ್ರಕಾರ ಕೆಲವರು ಹುದ್ದೆ ತ್ಯಾಗ ಮಾಡುವ ಘೋಷಣೆ ಮಾಡಿದ್ದಾರೆ. ಇದು ಹೌದೋ ಅಲ್ಲವೋ ಬೇರೆ ವಿಚಾರ. ಜನರ ರಕ್ಷಣೆ ಮಾಡುವ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗದಂತೆ ಮಾಡುವುದು ಜಮ್ಮು ಮತ್ತು ಕಾಶ್ಮೀರ ಮತ್ತು ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಬೇಕು. 

ಜಮ್ಮು ಕಾಶ್ಮೀರದ ಯುವಕರು ಜೀವನಾಧಾರಕ್ಕಾಗಿ ಸರ್ಕಾರಿ ಸೇವೆಗಳಿಗೆ ಸೇರುವುದು ಉಗ್ರರಿಗೆ ಹಿಡಿಸುತ್ತಿಲ್ಲ. ಅವರಿಗೆ ನೆಮ್ಮದಿಯಿಂದಿರುವ ಯುವಕರು ಬೇಕಿಲ್ಲ. ದಶಕಗಳ ಹಿಂದೆ ಪಂಜಾಬ್‌ನಲ್ಲಿ ಭಯೋತ್ಪಾದನೆ ಪರಾಕಾಷ್ಠತೆ ತಲುಪಿದ್ದ ವೇಳೆ ಸಿಖ್‌ ಭಯೋತ್ಪಾದಕರು ಪೊಲೀಸರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದರು. ನಮ್ಮನ್ನು ರಕ್ಷಿಸುವ ಪೊಲೀಸರ ಮೇಲೆಯೇ ಉಗ್ರರು ದಾಳಿ ನಡೆಸುತ್ತಿದ್ದಾರೆ ಎಂದು ಜನರು ಸ್ವಯಂ ಪ್ರೇರಿತರಾಗಿ ಅರಿತುಕೊಂಡು ರಕ್ತ ಪಿಪಾಸುಗಳ ಷಡ್ಯಂತ್ರವನ್ನು ಹಿಮ್ಮೆಟ್ಟಿಸಿದ್ದರು. ಅದೇ ಮಾದರಿಯ ನಿಲುವನ್ನು ಕಾಶ್ಮೀರದ ಜನರೂ ತೆಗೆದುಕೊಳ್ಳಬೇಕಾಗಿದೆ. ಭಾರತ ಕೂಡ ಭಯೋತ್ಪಾದನೆ ನಿಲ್ಲುವವರೆಗೂ ಶಾಂತಿ ಮಾತುಕತೆ ಸಾಧ್ಯವಿಲ್ಲ ಎನ್ನುವುದನ್ನು ಪಾಕಿಸ್ತಾನಕ್ಕೆ ಇನ್ನೊಮ್ಮೆ ಬಲವಾಗಿಯೇ ಹೇಳಬೇಕಾಗಿದೆ.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.