ತೈಲ ಬೆಲೆ ಕಡಿತ ಸ್ವಾಗತಾರ್ಹ


Team Udayavani, Oct 5, 2018, 7:17 AM IST

s-28.jpg

ತೈಲ ಬೆಲೆ ವಿವಿಧ ಬಾಹ್ಯ ಅಂಶಗಳನ್ನು ಹೊಂದಿಕೊಂಡಿರುವುದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತವಾಗಿಯೇ ಇರುತ್ತದೆ. ಹೀಗಾಗಿ ಬೆಲೆ ಸ್ಥಿರಗೊಳಿಸಲು ಕೇಂದ್ರ ಮತ್ತು ರಾಜ್ಯಗಳು ತೈಲದ ಮೇಲಿನ ತೆರಿಗೆ ಸ್ವರೂಪವನ್ನೇ ಬದಲಾಯಿಸುವ ಕುರಿತು ಚಿಂತಿಸುವ ಅಗತ್ಯವಿದೆ. 

ಕೇಂದ್ರ ಸರಕಾರ ಕಡೆಗೂ ಪೆಟ್ರೋಲು ಮತ್ತು ಡೀಸಿಲ್‌ ಬೆಲೆಯಲ್ಲಿ ತುಸು ಕಡಿತ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ಕಳೆದ ಸುಮಾರು ಒಂದು ತಿಂಗಳಿಂದ ತೈಲ ಬೆಲೆ ಗಗನಮುಖೀಯಾದ ಪರಿಣಾಮವಾಗಿ ಜನರಿಗೆ ತೀವ್ರ ಸಂಕಷ್ಟ ಎದುರಾಗಿತ್ತು. ಮುಂಬಯಿಯಂಥ ನಗರಗಳಲ್ಲಿ ಪೆಟ್ರೋಲು ಬೆಲೆ ಲೀಟರಿಗೆ 90 ರೂ. ದಾಟಿತ್ತು. ತೈಲ ಬೆಲೆಯೇರಿಕೆ ವಿರುದ್ಧ ಜನರ ಆಕ್ರೋಶ ಸ್ಫೋಟಗೊಳ್ಳುವ ಹಂತಕ್ಕೆ ತಲುಪಿತ್ತು. ಈ ಸಂದರ್ಭದಲ್ಲಿ ಬೆಲೆ ಇಳಿಸಿ ಜನರಿಗೆ ಒಂದಿಷ್ಟಾದರೂ ನಿರಾಳತೆಯನ್ನು ಕೊಡುವುದು ಸರಕಾರದ ಪಾಲಿಗೆ ಅನಿವಾರ್ಯವೂ ಆಗಿತ್ತು. 2014 ನವೆ‌ಂಬರ್‌ನಿಂದ 2016 ಜನವರಿ ತನಕ ಕೇಂದ್ರ ಒಂಬತ್ತು ಸಲ ಡೀಸೆಲ್‌ ಮತ್ತು ಪೆಟ್ರೋಲು ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. 2017ರ ಅಕ್ಟೋಬರ್‌ನಲ್ಲಿ ಒಂದು ಸಲ ಮಾತ್ರ ಅಬಕಾರಿ ಸುಂಕ ಕಡಿತಗೊಳಿಸಲಾಗಿತ್ತು. ಇದು ಎರಡನೇ ಸಲ ಕಡಿತವಾಗುತ್ತಿರುವುದು. 

ತೈಲ ಬೆಲೆ ಕಡಿತದಿಂದ ಸರಕಾರದ ಬೊಕ್ಕಸಕ್ಕೆ ಸುಮಾರು 10,500 ಕೋ. ರೂ. ಹೆಚ್ಚುವರಿ ಹೊರೆ ಬೀಳಲಿರುವುದು ನಿಜ. ಇದರಿಂದ ವಿತ್ತೀಯ ಕೊರತೆಯ ಮೇಲೆ ಪರಿಣಾಮವಾಗುತ್ತದೆ. ಕಲ್ಯಾಣ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡುವುದು ತುಸು ಕಷ್ಟವಾಗಬಹುದು. ಚಾಲ್ತಿ ಖಾತೆ ಕೊರತೆಯೂ ಹೆಚ್ಚಾಗಬಹುದು. ಆದರೆ ಇದೆಲ್ಲ ಜನಸಾಮಾನ್ಯರಿಗೆ ಅರ್ಥವಾಗುವ ವಿಚಾರಗಳಲ್ಲ. ಅವರಿಗೆ ತಕ್ಷಣಕ್ಕೆ ತಮ್ಮ ಮೇಲೆ ಬೀಳುತ್ತಿರುವ ಹೊರೆಯಷ್ಟೇ ಮುಖ್ಯ. ಈ ಹೊರೆಯನ್ನು ಕಡಿಮೆ ಮಾಡದಿದ್ದರೆ ಅವರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ. ಕಳೆದೊಂದು ವರ್ಷದಲ್ಲಿ ತೈಲ ಬೆಲೆಯಲ್ಲಿ ಸುಮಾರು 15 ರೂ.ನಷ್ಟು ಏರಿಕೆಯಾಗಿದ್ದು, ಅದಕ್ಕೆ ಹೋಲಿಸಿದರೆ ಇಂದು ಕಡಿಮೆಯಾಗಿರುವುದು ಮಹಾ ಏನೂ ಅಲ್ಲ. ಆದರೂ ಚಿಕ್ಕದಾದರೂ ಒಂದು ನಿರಾಳತೆ ಸಿಕ್ಕಿತಲ್ಲ ಎನ್ನುವುದು ಮುಖ್ಯವಾಗುತ್ತದೆ. 

ಡಾಲರ್‌ ಎದುರು ರೂಪಾಯಿ ಮೌಲ್ಯ ಸತತವಾಗಿ ಕುಸಿಯುತ್ತಿರುವುದು ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವುದು ತೈಲ ಬೆಲೆ ಹೆಚ್ಚಾಗಲು ಕಾರಣ. ಇವೆರಡರ ನಿಯಂತ್ರಣ ಸರಕಾರದ ಕೈಯಲ್ಲಿ ಇಲ್ಲ. ಆದರೆ ತೈಲದ ಮೇಲೆ ವಿಧಿಸಲಾಗುತ್ತಿರುವ ತೆರಿಗೆಯನ್ನು ಕಡಿತ ಮಾಡಿ ಬೆಲೆಯನ್ನು ನಿಯಂತ್ರಣ ದಲ್ಲಿಟ್ಟುಕೊಳ್ಳಲು ಸಾಧ್ಯವಿತ್ತು. ಆದರೆ ತೈಲ ಬೆಲೆ ಕಡಿತಗೊಳಿಸಿದರೆ ದೊಡ್ಡ ಪ್ರಮಾಣದ ವರಮಾನ ಖೋತಾ ಆಗುವ ಭೀತಿಯಲ್ಲಿ ಇಷ್ಟರ ತನಕ ಸರಕಾರ ಕಾದು ನೋಡುವ ತಂತ್ರವನ್ನು ಅನುಸರಿಸಿತ್ತು. 

ತೈಲ ಬೆಲೆ ಏರಿಕೆಯಿಂದ ಬಹುತೇಕ ಎಲ್ಲ ಆರ್ಥಿಕ ಚಟುವಟಿಕೆಗಳ ಮೇಲೆ ಒತ್ತಡ ಬೀಳುತ್ತದೆ. ರೈತರಿಂದ ಹಿಡಿದು, ವ್ಯಾಪಾರಿಗಳು ಮತ್ತು ಕೂಲಿ ಕಾರ್ಮಿಕರ ತನಕ ಪ್ರತಿಯೊಬ್ಬರು ಬೆಲೆ ಏರಿಕೆಯ ಬಿಸಿ ಅನುಭವಿಸಬೇಕಾಗುತ್ತದೆ. ಬೆಲೆ ಏರಿಕೆಯಾದರೆ ಹಣದುಬ್ಬರವೂ ಏರಿಕೆಯಾಗುತ್ತದೆ. ಇದು ಏರಿಕೆಯಾದರೆ ಜಿಡಿಪಿ ಅಭಿವೃದ್ಧಿ ಕುಂಠಿತವಾಗುತ್ತದೆ. ಈ ಅಪಾಯವನ್ನು ಮನಗಂಡೇ ಸರಕಾರ ಈಗ ಅಬಕಾರಿ ಸುಂಕ ಕಡಿತ ಮಾಡುವ ಕ್ರಮ ಕೈಗೊಂಡಿದೆ. 

ವಿತ್ತ ಸಚಿವ ಅರುಣ್‌ ಜೇಟ್ಲಿ ಅಬಕಾರಿ ಸುಂಕ ಇಳಿಸಿದ ಘೋಷಣೆಯನ್ನು ಮಾಡುತ್ತಾ ರಾಜ್ಯಗಳೂ ಪೆಟ್ರೋಲು ಮತ್ತು ಡೀಸಿಲ್‌ ಮೇಲಿನ ಸ್ಥಳೀಯ ತೆರಿಗೆಗಳನ್ನು ಕಡಿತಗೊಳಿಸಬೇಕೆಂದು ಹೇಳಿದ್ದಾರೆ. ಇದರ ಬೆನ್ನಿಗೆ ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಗುಜರಾತ್‌ ಸರಕಾರಗಳು ವ್ಯಾಟ್‌ ಇಳಿಕೆ ಮಾಡಿವೆ. ರಾಜಸ್ಥಾನ, ಕರ್ನಾಟಕ ಮತ್ತು ಆಂಧ್ರ ಪ್ರದೇಶ ಈ ಮೊದಲೇ ವ್ಯಾಟ್‌ ಇಳಿಕೆ ಮಾಡಿವೆ. ತೈಲ ಬೆಲೆ ಏರಿಕೆಯಿಂದ ಹೆಚ್ಚು ಲಾಭವಾಗುತ್ತಿರುವುದು ರಾಜ್ಯಗಳಿಗೆ. ವ್ಯಾಟ್‌ ಅನ್ನು ತೈಲದ ಹಾಲಿ ಬೆಲೆಯ ಮೇಲೆ ಲೆಕ್ಕ ಹಾಕಲಾಗುತ್ತದೆ. ಹೀಗಾಗಿ ಬೆಲೆ ಹೆಚ್ಚಾದಂತೆ ರಾಜ್ಯ ಸರಕಾರಗಳಿಗೆ ಹೆಚ್ಚು ವರಮಾನ ಬರುತ್ತದೆ. 

ಅಬಕಾರಿ ಸುಂಕ ಮತ್ತು ವ್ಯಾಟ್‌ ಇಳಿಕೆ ತೈಲ ಬೆಲೆ ಕಡಿಮೆ ಮಾಡುವ ತಾತ್ಕಾಲಿಕ ಕ್ರಮವಷ್ಟೆ. ತೈಲ ಬೆಲೆ ವಿವಿಧ ಬಾಹ್ಯ ಅಂಶಗಳನ್ನು ಹೊಂದಿಕೊಂಡಿರುವುದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತವಾಗಿಯೇ ಇರುತ್ತದೆ. ಹೀಗಾಗಿ ಬೆಲೆ ಸ್ಥಿರಗೊಳಿಸಲು ಕೇಂದ್ರ ಮತ್ತು ರಾಜ್ಯಗಳು ತೈಲದ ಮೇಲಿನ ತೆರಿಗೆ ಸ್ವರೂಪವನ್ನೇ ಬದಲಾಯಿಸುವ ಕುರಿತು ಗಂಭೀರವಾಗಿ ಚಿಂತಿಸುವ ಅಗತ್ಯವಿದೆ. ತೈಲವನ್ನು ಜಿಎಸ್‌ಟಿ ವ್ಯಾಪ್ತಿಗೂ ತರುವುದರಿಂದ ಇದು ಸಾಧ್ಯವಾಗಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ರಾಜ್ಯಗಳ ಮನವೊಲಿಸುವ ಕೆಲಸವನ್ನು ಮಾಡಬೇಕು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.