ತೈಲ ಬಿಕ್ಕಟ್ಟು: ನಿವಾರೋಣಾಪಾಯ ಮುಖ್ಯ


Team Udayavani, Nov 17, 2018, 8:23 AM IST

21.jpg

ತೈಲ ಬೆಲೆ ನಮ್ಮ ಆರ್ಥಿಕತೆಯ ಮೇಲೆ ಬೀರುತ್ತಿರುವ ಪ್ರತ್ಯಕ್ಷ ಮತ್ತು ಪರೋಕ್ಷ ಪರಿಣಾಮ ಅಗಾಧವಾದದ್ದು. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಾಗುವ ಚಿಕ್ಕದೊಂದು ಬದಲಾವಣೆಯೂ ನಮ್ಮಲ್ಲಿ ದೊಡ್ಡ ಕಂಪನಕ್ಕೆ ಕಾರಣವಾಗುತ್ತದೆ. ಅಕ್ಟೋಬರ್‌ ತಿಂಗಳಲ್ಲಿ ತೈಲ ಬೆಲೆ ಗಗನಕ್ಕೇರಿದಾಗ ಉಂಟಾದ ಪರಿಸ್ಥಿತಿ ಇದಕ್ಕೆ ಸ್ಪಷ್ಟ ಉದಾಹರಣೆ. ತೈಲ ಬೆಲೆ ಆರ್ಥಿಕ ವಿಷಯವಾದರೂ ಅದೀಗ ರಾಜಕೀಯ ಆಯಾಮ ಹೊಂದಿರುವುದರಿಂದ ದೇಶದ ಭವಿಷ್ಯವನ್ನೇ ಬದಲಾಯಿಸುವ ತಾಕತ್ತು ಅದಕ್ಕಿದೆ ಎನ್ನುವುದು ಉತ್ಪ್ರೇಕ್ಷೆಯ ಮಾತಲ್ಲ. 

ಅಕ್ಟೋಬರ್‌ನಲ್ಲಿ ಪೆಟ್ರೋಲು ಬೆಲೆ ಲೀಟರಿಗೆ 80 ರೂ. ದಾಟಿದಾಗ ಎನ್‌ಡಿಎ ಸರಕಾರ ತೀವ್ರ ಟೀಕೆ ಎದುರಿಸಬೇಕಾಗಿ ಬಂತು. ಇದು ಆರ್ಥಿಕ ಸ್ಥಿತಿಗತಿಯ ಕುರಿತಾದ ಕಳವಳದ ಟೀಕೆ ಎನ್ನುವುದಕ್ಕಿಂತಲೂ ರಾಜಕೀಯ ಲಾಭ ಉದ್ದೇಶಿತ ಟೀಕೆ ಎಂಬ ಅಭಿಪ್ರಾಯ ವ್ಯಕ್ತವಾದರೂ ಸರಕಾರ ಒಂದಷ್ಟು ಸಮಯ ಆತಂಕದ ಪರಿಸ್ಥಿತಿ ಎದುರಿಸಿದ್ದು ನಿಜ. ಹೀಗೆ ತೈಲ ಬೆಲೆ ರಾಜಕೀಯಕ್ಕೆ ನೇರವಾಗಿ ತಳಕು ಹಾಕಿಕೊಂಡಿರುವುದರಿಂದ ಅದರ ಲ್ಲಾಗುವ ಏರುಪೇರು ಶೇ. 80ರಷ್ಟು ತೈಲ ಆಮದುಗೊಳಿಸುವ ನಮಗೆ ಹೆಚ್ಚು ಮುಖ್ಯ. ಈ ಹಿನ್ನೆಲೆಯಲ್ಲಿ ಇದೀಗ ಸೌದಿ ಅರೇಬಿಯಾ ತೈಲ ಉತ್ಪಾದನೆ ಕಡಿತಗೊಳಿಸಲು ನಿರ್ಧರಿಸಿರುವುದು ಮತ್ತೆ ಸಣ್ಣದೊಂದು ಆತಂಕಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಗೆ ತಕ್ಕಂತೆ ನಮ್ಮಲ್ಲೂ ಬೆಲೆ ಏರಿಕೆ-ಇಳಿಕೆಯಾಗುವುದು ನಡೆದುಕೊಂಡು ಬಂದಿದೆ. ಹಾಗೆಂದು ಕಚ್ಚಾತೈಲ ಬೆಲೆ ತೀರಾ ಇಳಿದಾಗಲೂ ಇಂಧನ ಬೆಲೆಯನ್ನು ಆ ಮಟ್ಟಕ್ಕೆ ಇಳಿಸದೆ ಕೇಂದ್ರ ಸರಕಾರ ರಕ್ಷಣಾತ್ಮಕ ಆಟ ಆಡಿದ್ದನ್ನೂ ನಾವು ನೋಡಿದ್ದೇವೆ. ಇದು ಬೇರೆ ಸಂಗತಿ. 

ಇರಾನ್‌ನಿಂದ ತೈಲ ಆಮದಿನ ಮೇಲೆ ಅಮೆರಿಕ ನಿಷೇಧ ಹೇರಲು ಮುಂದಾದಾಗ ತೈಲ ಬೆಲೆ ಇನ್ನಷ್ಟು ಹೆಚ್ಚಾಗುವ ಭೀತಿ ತಲೆದೋರಿತ್ತು. ಆದರೆ ಈ ನಿಷೇಧದಿಂದ ಭಾರತಕ್ಕೆ ಅಮೆರಿಕ ವಿನಾಯಿತಿ ನೀಡಿದ ಕಾರಣ ಭೀತಿ ದೂರವಾಗಿದೆ. ಈ ಕಾರಣಕ್ಕೆ ತೈಲ ಬೆಲೆಯಲ್ಲಿ ಮತ್ತಷ್ಟು ಏರಿಕೆ ಕಂಡಿಲ್ಲ. ಇದು ತುಸು ಸಮಾಧಾನಕರ ಸಂಗತಿ. ಆದರೆ ಇದೀಗ ಪೂರೈಕೆ ಹೆಚ್ಚಾಗಿ ಬೆಲೆ ಇಳಿಯುತ್ತಿದೆ ಎಂಬ ಕಾರಣವೊಡ್ಡಿ ಸೌದಿ ನೇತೃತ್ವದ ತೈಲ ಉತ್ಪಾದಕ ರಾಷ್ಟ್ರಗಳು ಉತ್ಪಾದನೆಯನ್ನೇ ಕಡಿತಗೊಳಿಸಲು ಮುಂದಾಗಿವೆ. 

ಸೌದಿ ಅರೇಬಿಯ ಮುಂದಿನ ತಿಂಗಳಿನಿಂದಲೇ ನಿತ್ಯ 5 ಲಕ್ಷ ಬ್ಯಾರಲ್‌ ಕಚ್ಚಾತೈಲ ಉತ್ಪಾದನೆ ಕಡಿತಗೊಳಿಸಲಿದೆ. ಮುಂದಿನ ವರ್ಷದಿಂದ ಉತ್ಪಾದನೆ ಕಡಿತ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಉಳಿದ ತೈಲ ಉತ್ಪಾದಕ ದೇಶಗಳೂ ಈ ಹಾದಿಯನ್ನು ಅನುಸರಿಸಲಿವೆ. ಆಗ ಮಾರುಕಟ್ಟೆಯಲ್ಲಿ ಕೊರತೆ ಉಂಟಾಗಿ ಕಚ್ಚಾತೈಲ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗೆ ಕೃತಕ ಅಭಾವ ಸೃಷ್ಟಿಸಿ ತನ್ನ ಬೆಲೆ ಕುಸಿಯದಂತೆ ತಡೆಯುವ, ಆ ಮೂಲಕ ತಮ್ಮ ಹಿತ ಕಾಯ್ದುಕೊಳ್ಳಲು ತೈಲ ಉತ್ಪಾದಕ ದೇಶಗಳು ಅನುಸರಿಸಿದರೆ ಆಮದು ಮಾಡಿಕೊಳ್ಳುವ ದೇಶಗಳ ಆರ್ಥಿಕತೆಯ ಮೇಲೆ ಹೊರೆ ಬೀಳಲಿದೆ. ಉತ್ಪಾದಕ ರಾಷ್ಟ್ರಗಳಿಗೆ ಬೇಕಾಗಿರುವುದೂ ಇದೇ. ತೈಲ ಆಮದಿನಲ್ಲಿ ನಮಗೆ ಜಗತ್ತಿನಲ್ಲಿ ನಾಲ್ಕನೇ ಸ್ಥಾನವಿದೆ. ಜಗತ್ತಿನ ಒಟ್ಟಾರೆ ಆಮದಿನಲ್ಲಿ ನಮ್ಮ ಪಾಲು ಶೇ. 6.9. ಹಾಗಾಗಿ ಆಮದು ಅನಿವಾರ್ಯ. ಆದ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಏರುಪೇರು ಎದುರಿಸಲು ತಕ್ಕಷ್ಟು ಸಿದ್ಧತೆ ಮಾಡಿಕೊಳ್ಳುವುದಷ್ಟೇ ನಮ್ಮ ಮುಂದಿರುವ ದಾರಿ.

ಮೊದಲಿನಿಂದಲೂ ಈ ನಿಟ್ಟಿನಲ್ಲಿ ನಮ್ಮ ನೀತಿ ನಿರೂಪಕರು ಮತ್ತು ಆಡಳಿತ ನಡೆಸುವವರು ಗಮನಹರಿಸಿದ್ದು ಬಹಳ ಕಡಿಮೆ. ದೇಶದಲ್ಲಿ ಲಭ್ಯವಿರುವ ತೈಲ ನಿಕ್ಷೇಪಗಳನ್ನು ಪತ್ತೆ ಹಚ್ಚುವ ಕೆಲಸವೂ ನಡೆಸುತ್ತಿಲ್ಲ. ಆಮದು ನೀತಿಯೂ ಸಮರ್ಪಕವಾಗಿಲ್ಲ. ದೇಶದ ಅಪಾರವಾದ ಇಂಧನ ಬೇಡಿಕೆಯನ್ನು ಈಡೇರಿಸಲು ಅತ್ಯಂತ ಸ್ಪಷ್ಟ ಮತ್ತು ಸಮಗ್ರವಾದ ನೀತಿಯೊಂದರ ಅಗತ್ಯ ನಮಗಿದೆ. ಈ ನೀತಿ ಬಿಕ್ಕಟ್ಟಿನ ಸಂದರ್ಭಗಳಲ್ಲೂ ತೈಲ ಪೂರೈಕೆ ಸರಾಗವಾಗಿರುವಂತೆ ನೋಡಿಕೊಳ್ಳಬೇಕು. ಈ ದಿಸೆಯಲ್ಲಿ ಆಗಬೇಕಾದ ಬದಲಾವಣೆಗಳತ್ತ ಗಮನ ಹರಿಸಲು ಈಗ ಸಕಾಲ. ಬೆಂಕಿ ಹತ್ತಿಕೊಂಡ ಬಳಿಕ ಬಾವಿ ತೋಡುವ ಧೋರಣೆ ಬಿಟ್ಟು ಈಗಲೇ ಸೂಕ್ತ ಉಪಕ್ರಮಗಳತ್ತ ಕಾರ್ಯೋನ್ಮುಖವಾಗುವುದು ಆದ್ಯತೆಯ ಕರ್ತವ್ಯ.

ಟಾಪ್ ನ್ಯೂಸ್

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.