ದೆಹಲಿ ತಲುಪಿದ ರೈತ: ಎಲ್ಲರಿಗೂ ಇದೆ ಜವಾಬ್ದಾರಿ


Team Udayavani, Dec 1, 2018, 6:00 AM IST

3.jpg

ದೇಶಾದ್ಯಂತ ರೈತರು ಆಕ್ರೋಶಗೊಂಡಿದ್ದಾರೆ. ತಮ್ಮ ಕಷ್ಟಗಳಿಗೆ ಸ್ಪಂದಿಸುವಂತೆ ಕೋರಿ ಈಗ ಅನೇಕ ರಾಜ್ಯಗಳ ರೈತರು ದೆಹಲಿಯ ಬಾಗಿಲು ತಟ್ಟಿದ್ದಾರೆ. ಕಳೆದ ಒಂದೆರಡು ವರ್ಷಗಳಿಂದ ದೇಶದ ಒಂದಲ್ಲಾ ಒಂದು ಭಾಗದಿಂದ ರೈತರ ಆಂದೋಲನದ ಸುದ್ದಿಗಳೂ ಹೊರಬರುತ್ತಲೇ ಇರುತ್ತವೆ. ರಾಜ್ಯದಲ್ಲಂತೂ ಕೆಲ ದಿನಗಳಿಂದ ಕಬ್ಬಿಗೆ ಬೆಂಬಲ ಬೆಲೆ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ರೈತರ ಹೋರಾಟ ನಡೆದಿದೆ. ರಾಜ್ಯವಾಳುವವರು ರೈತ ಮಹಿಳೆಯೊಬ್ಬಳನ್ನು ಅವಮಾನಿಸಿದ ವಿವಾದವೂ ಈ ಸಮಯದಲ್ಲಿ ಭುಗಿಲೆದ್ದಿತು. ಆರೋಪ-ಪ್ರತ್ಯಾರೋಪಗಳು, ಚರ್ಚೆಗಳು ನಡೆದವು. ಆದರೆ ಪರಿಹಾರ ಸಿಗುವ ಲಕ್ಷಣಗಳಿಲ್ಲ. ಅತ್ತ, ರಾಷ್ಟ್ರ ರಾಜಧಾನಿ ದೆಹಲಿಯ ವಿಷಯಕ್ಕೇ ಬರುವುದಾದರೆ ಕೆಲವೇ ತಿಂಗಳಲ್ಲಿ ಅಲ್ಲಿ ಈಗ ಮೂರನೇ ಬಾರಿ ರೈತರಿಂದ ಪ್ರತಿಭಟನೆಗಳು ನಡೆದಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಖೀಲ ಭಾರತೀಯ ಕಿಸಾನ ಸಭೆಯ ಆಹ್ವಾನದ ಮೇರೆಗೆ ರೈತರೆಲ್ಲ ಒಂದಾಗಿದ್ದರು, ತದನಂತರ ಅಕ್ಟೋಬರ್‌ನಲ್ಲಿ ಭಾರತೀಯ ರೈತ ಒಕ್ಕೂಟ ಪ್ರತಿಭಟನಾ ರ್ಯಾಲಿ ನಡೆಸಿತ್ತು. ಇನ್ನು ಕೆಲವೇ ದಿನಗಳ ಹಿಂದೆ ಮಹಾರಾಷ್ಟ್ರದ ರೈತರು ನಾಸಿಕ್‌ನಿಂದ ಮುಂಬೈವರೆಗೆ ಪಾದಯಾತ್ರೆ ನಡೆಸಿದ್ದರು. 

ದೆಹಲಿಯಲ್ಲಿ ರೈತರು ಪ್ರತಿಭಟಿಸಿದ ವೇಳೆಯಲ್ಲೇ, ಅತ್ತ ಪಶ್ಚಿಮ ಬಂಗಾಳದ ಸಿಂಗೂರ್‌ನಲ್ಲೂ ಒಂದು ರ್ಯಾಲಿ ನಡೆದಿದೆ. ಅಲ್ಲಿ ಒಂದಾಗಿರುವ ರೈತರು ಕೋಲ್ಕತ್ತಾದವರೆಗೂ ಪಾದಯಾತ್ರೆ ನಡೆಸಲಿದ್ದಾರೆ. ಈಗ ಯಾವ ಐದು ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆಗಳು ಸಾಗಿವೆಯೋ ಅಲ್ಲೂ ಕೂಡ ಪ್ರತಿಯೊಂದು ರಾಜಕೀಯ ಪಕ್ಷವೂ ರೈತರ ಗಾಯಕ್ಕೆ ಮುಲಾಮು ಹಚ್ಚುವ ಪ್ರಯತ್ನ ನಡೆಸಿವೆ(ಅಥವಾ ಹಚ್ಚಿದಂತೆ ನಟಿಸುತ್ತಿವೆ). ಅಂದರೆ, ಇಡೀ ದೇಶಾದ್ಯಂತ ಈಗ ರೈತರ ಅಸಮಾಧಾನ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದರರ್ಥವಿಷ್ಟೆ, ಕೃಷಿ ಸಂಕಟವೆನ್ನುವುದು ಯಾವುದೋ ಒಂದು ಪಕ್ಷ ಆಡಳಿತದಲ್ಲಿರುವ ರಾಜ್ಯದಲ್ಲೋ ಅಥವಾ ಭೂಭಾಗದಲ್ಲೋ ಎದುರಾಗಿಲ್ಲ, ಬದಲಾಗಿ ದೇಶಾದ್ಯಂತ ರೈತರು ನಿರಾಶರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ನಡೆದಿರುವ ರೈತರ ಆತ್ಮಹತ್ಯೆ ಪ್ರಮಾಣವನ್ನು ಗಮನಿಸಿದಾಗ, ಪ್ರತಿಯೊಂದು ಪಕ್ಷ/ಸರ್ಕಾರವೂ ರೈತರ ಸಮಸ್ಯೆಗಳನ್ನು ಪರಿಹರಿಸಲು ವಿಫ‌ಲವಾಗಿದೆ ಎನ್ನುವುದು ಸ್ಪಷ್ಟ. 

ಹೀಗಾಗಿ, ಪರಿಣಾಮಕಾರಿ ಫ‌ಲಿತಾಂಶ ನೀಡದೇ ಬರೀ ನೈತಿಕ ಹಿರಿಮೆಯನ್ನು ಪ್ರದರ್ಶಿಸುವ, ಸಂವೇದನೆಯ ಮಾತನಾಡುವ ರಾಜಕಾರಣಿಗಳೆಲ್ಲ ನಕಲಿ ಎಂದೆನಿಸುತ್ತಾರೆ. ದೆಹಲಿ ಪ್ರತಿಭಟನೆಯಲ್ಲಿ ರಾಹುಲ್‌ ಗಾಂಧಿ, ಅರವಿಂದ್‌ ಕೇಜ್ರಿವಾಲ್‌ ಮತ್ತು ಫಾರೂಕ್‌ ಅಬ್ದುಲ್ಲಾರಂಥ ನಾಯಕರು ಈ ವಿಷಯದಲ್ಲಿ ಸ್ಪಷ್ಟವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವುದು ಗೋಚರಿಸುತ್ತಿದೆ.  ದೇಶದ ರೈತರ ಸಮಸ್ಯೆಗಳಿಗೆಲ್ಲ ಕೇಂದ್ರ ಸರ್ಕಾರ ಮತ್ತದರ ನೀತಿಗಳೇ ಕಾರಣ ಎಂಬರ್ಥದಲ್ಲಿ ಈ ರಾಜಕಾರಣಿಗಳು ಮಾತನಾಡುತ್ತಿರುವುದು ತೀರಾ ಬಾಲಿಶವಾಗಿದೆ. ಅಲ್ಲದೇ, ಈ ಪ್ರತಿಭಟನೆಯಲ್ಲಿ “ನಮಗೆ ಅಯೋಧ್ಯೆಯಲ್ಲಿ ರಾಮಮಂದಿರ ಬೇಡ, ಸಾಲ ಮನ್ನಾ ಮಾಡಿ’ ಎಂಬ ಘೋಷಣೆಯಲ್ಲೂ ಕೂಡ ಅನವಶ್ಯಕ ರಾಜಕೀಯ ಬೆರಕೆಯಾಗಿದೆ. ಪ್ರತಿಪಕ್ಷಗಳ ನಾಯಕರು ರೈತರ ಸಮಸ್ಯೆಗಳಿಗೆಲ್ಲ ಕೇಂದ್ರ ಸರ್ಕಾರವೇ ಕಾರಣ ಎಂಬಂತೆ ಮಾತನಾಡುತ್ತಿರುವುದನ್ನು ಗಮನಿಸಿದಾಗ, ಅದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸವಷ್ಟೇ ಹೊರತು ಬೇರೇನೂ ಅಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. 

ಅನ್ನದಾತ ಯಾವ ಊರಿನವನಾದರೇನು, ರಾಜ್ಯದವನಾದರೇನು? ಆತ ಇಂದು ಒಂದೂರಲ್ಲಿ ಬೆಳೆಸುವ ಬೆಳೆ ಇನ್ಯಾವುದೋ ರಾಜ್ಯದಲ್ಲಿ ಯಾರಧ್ದೋ ಹೊಟ್ಟೆ ತುಂಬಿಸುತ್ತಿರುತ್ತದೆ. ಹೀಗಾಗಿ ಆತನ ಸಮಸ್ಯೆಗಳನ್ನು ಒಂದು ರಾಜಕೀಯ ಪಕ್ಷದ ವೈಫ‌ಲ್ಯಕ್ಕೆ ಸೀಮಿತಗೊಳಿಸದೇ, ಇದು ಎಲ್ಲಾ ಪಕ್ಷಗಳ ವೈಫ‌ಲ್ಯ ಎಂಬುದನ್ನು ಮನಗಾಣಬೇಕು. ರೈತರ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮುಖಂಡರು, ಆರ್ಥಿಕ ತಜ್ಞರು, ಕೃಷಿ ತಜ್ಞರು ಒಟ್ಟಾಗಿ ಕುಳಿತು ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ರೈತರು ಆಗ್ರಹಿಸುವಂತೆ, ವಿಶೇಷ ಅಧಿವೇಶನ ಕರೆಯುವುದರಲ್ಲೂ ತಪ್ಪಿಲ್ಲ. 

ಆದಾಗ್ಯೂ ರೈತರ ಬೇಡಿಕೆಗಳಿಗೆಲ್ಲ ಒಪ್ಪಿಕೊಂಡಾಕ್ಷಣ ಕೃಷಿ ಮತ್ತು ಗ್ರಾಮೀಣ ಸಮಸ್ಯೆಗಳೆಲ್ಲ ಬಗೆಹರಿಯುತ್ತವೆ ಎನ್ನುವುದಕ್ಕೆ ಖಾತ್ರಿಯೇನೂ ಇಲ್ಲ. ಈಗಿನ ಬೇಡಿಕೆಗಳನ್ನು ಈಡೇರಿಸಿದರೆ ರೈತರಿಕೆ ತಾತ್ಕಾಲಿಕ ಸಮಾಧಾನವೇನೋ ಸಿಗುತ್ತದೆ. ಆದರೆ ಕೃಷಿ ಸಂಕಷ್ಟಗಳನ್ನು ಬೇರು ಸಮೇತ ಸರಿಪಡಿಸುವುದು ಇಂದಿನ ಬಹುದೊಡ್ಡ ಸವಾಲಾಗಿದೆ. ಪ್ರಪಂಚದ ಅರ್ಥವ್ಯವಸ್ಥೆ ಬದಲಾಗುತ್ತಿದೆ. ಇದರ ನಡುವೆ ಕೃಷಿ ಕ್ಷೇತ್ರವನ್ನೂ ಈ ಬದಲಾವಣೆಗೆ ತಕ್ಕಂತೆ ಸಜ್ಜುಗೊಳಿಸುವುದು ಕಠಿಣ ಕೆಲಸ. ಈಗಲೇ ಈ ಬಗ್ಗೆ ಯೋಚಿಸದಿದ್ದರೆ, ಪರಿಸ್ಥಿತಿ ಕೈಮೀರಲಿರುವುದು ನಿಶ್ಚಿತ. 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.