ಹಂಪಿ ಉತ್ಸವ: ಆಕ್ರೋಶ ತಣಿಸುವ ಯತ್ನ


Team Udayavani, Dec 4, 2018, 6:00 AM IST

c-18.jpg

ಬರ ಹಿನ್ನೆಲೆಯಲ್ಲಿ ಹಂಪಿ ಉತ್ಸವ ಆಚರಣೆ ರದ್ದುಪಡಿಸುವ ಸರ್ಕಾರದ ತೀರ್ಮಾನವು ಉತ್ತರ ಕರ್ನಾಟಕ ಭಾಗದ, ಅದರಲ್ಲೂ ಬಳ್ಳಾರಿಯ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿ ಕೊನೆಗೆ ಒಂದು ದಿನದ ಮಟ್ಟಿಗಾದರೂ ಆಚರಿಸಲು ಸರ್ಕಾರ ಮುಂದಾಗಿದೆ. ಹಂಪಿ ಉತ್ಸವಕ್ಕಾಗಿ 60 ಲಕ್ಷ ರೂ. ಅನುದಾನದ ಪೈಕಿ 30 ಲಕ್ಷ ರೂ. ಬಿಡುಗಡೆಯಾದ ನಂತರ ಸರ್ಕಾರ ಉತ್ಸವ ರದ್ದು ಮಾಡುವ ತೀರ್ಮಾನ ಕೈಗೊಂಡಿದ್ದು ಸರಿಯಾದ ಕ್ರಮವೂ ಅಲ್ಲ.

ಹಂಪಿ ಉತ್ಸವ ರದ್ದು ಮಾಡುವ ತೀರ್ಮಾನದಿಂದ ಮುಂದೆ ನಡೆಯುವ ಇತರೆ ಉತ್ಸವಗಳ ಮೇಲೂ ಪರಿಣಾಮ ಬೀರಬಹುದು ಎಂಬ ಆತಂಕವೂ ಇದೆ. ಏಕೆಂದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್‌ 8 ರಿಂದ ಮೂರು ದಿನ ಕರಾವಳಿ ಉತ್ಸವ ಆಚರಿಸಲು ನಿರ್ಧರಿಸಲಾಗಿದೆ. ಜನವರಿಯಲ್ಲಿ ಕದಂಬ ಉತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ, ಸಹಜವಾಗಿ ಹಂಪಿ ಉತ್ಸವ ರದ್ದಾದರೆ ಆ ಉತ್ಸವಗಳ ಮೇಲೂ ಕಾರ್ಮೋಡ ಆವರಿಸುತ್ತದೆ.

ರಾಜ್ಯದ 100 ತಾಲೂಕುಗಳಲ್ಲಿ ಬರ ಆವರಿಸಿರುವುದರಿಂದ ಹಂಪಿ ಉತ್ಸವ ರದ್ದುಪಡಿಸಲು ನಿರ್ಧರಿಸಲಾಯಿತು ಎಂದು ಸಮಜಾಯಿಷಿ ನೀಡಿದರೂ ಮೈಸೂರು ದಸರಾ ಆಚರಣೆಗೆ ಇಲ್ಲದ ಬರ, ಹಂಪಿ ಉತ್ಸವಕ್ಕೆ ಏಕೆ ಎಂದು ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಪ್ರಶ್ನಿಸುವಂತಾಯಿತು.

ಮುಂಚಿತವಾಗಿ ಹಣ ಬಿಡುಗಡೆ ಮಾಡಿ ಉತ್ಸವಕ್ಕೆ ದಿನಾಂಕ ನಿಗದಿ ಮಾಡಿದ ಮೇಲೆ ಬರಗಾಲದ ನೆಪ ಹೇಳಿ ಮುಂದೂಡಿರುವುದು ಉತ್ತರ ಕರ್ನಾಟಕ ಭಾಗದ ಕಲಾವಿದರು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಪ್ರತಿ ವರ್ಷ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವ ಪಡೆದಿರುವ ಹದಿನಾರು ಉತ್ಸವಗಳನ್ನು ಆಚರಿಸುತ್ತದೆ. ಅದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿಯೊಂದು ಉತ್ಸವಕ್ಕೂ ಅನುದಾನವನ್ನು ಮೀಸಲಿಟ್ಟಿದ್ದು, ನಿಯಮದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡುತ್ತದೆ. 

ರಾಜ್ಯ ಸರ್ಕಾರವೇ ಮೈಸೂರು ದಸರಾ , ಹಂಪಿ, ಕದಂಬ ಉತ್ಸವಗಳನ್ನು ರಾಜ್ಯ ಉತ್ಸವ ಎಂದು ಪರಿಗಣಿಸಿದೆ.  ರಾಜ್ಯ ಮಟ್ಟದ ಉತ್ಸವಕ್ಕೆ 60 ಲಕ್ಷ ರೂ. ಅನುದಾನ,  ಜಿಲ್ಲಾ ಮಟ್ಟದ ಉತ್ಸವಗಳಿಗೆ 30 ಲಕ್ಷ ರೂ. ಅನುದಾನ ನಿಗದಿಪಡಿಸಿದೆ. ಹಂಪಿ ಉತ್ಸವ ರದ್ದುಪಡಿಸುವುದಾದರೆ ಅನುದಾನ ಬಿಡುಗಡೆಗೆ ಮುಂಚೆ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಕರೆದು ವಾಸ್ತವಾಂಶ ತಿಳಿಸಿ ಅಭಿಪ್ರಾಯ-ಸಲಹೆ ಪಡೆದು ತೀರ್ಮಾನ ಕೈಗೊಳ್ಳಬಹುದಿತ್ತು. ಆಗ ಯಾವುದೇ ಆಕ್ರೋಶ ಅಥವಾ ವಿವಾದಕ್ಕೆ ಅವಕಾಶವೇ ಇರುತ್ತಿರಲಿಲ್ಲ. ಅನಗತ್ಯವಾಗಿ ಹಂಪಿ ಉತ್ಸವ ಸಂಬಂಧ ಸಮ್ಮಿಶ್ರ ಸರ್ಕಾರ ವಿವಾದ ಮೈ ಮೇಲೆ ಎಳೆದುಕೊಳ್ಳುವಂತಾಯಿತು.

ನಾಡಿನ ಕಲೆ ಸಂಸ್ಕೃತಿ ವೈಭವ ಸಾರುವ ವಿದೇಶಗಳಿಂದಲೂ ಪ್ರವಾಸಿಗರನ್ನು ಆಕರ್ಷಿಸುವ ಹಂಪಿ ಉತ್ಸವ 1995ರಿಂದಲೂ ನಡೆಯುತ್ತಿದೆ. ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವ ಹಂಪಿ ಉತ್ಸವ ಖ್ಯಾತಿ ಸಹ ಪಡೆದಿದೆ. ಜತೆಗೆ ನೂರಾರು ಕಲಾವಿದರಿಗೆ ಇದರಿಂದ  ಆರ್ಥಿಕವಾಗಿ ನೆರವೂ ದೊರೆತಂತಾಗುತ್ತದೆ. ಸಾವಿರಾರು ಕೋಟಿ ಮೊತ್ತದ ಯೋಜನೆಗಳಿಗೆ ಅನುಮತಿ ನೀಡುವ ಸರ್ಕಾರಕ್ಕೆ ಹಂಪಿ ಉತ್ಸವಕ್ಕೆ ನೀಡುವ 60 ಲಕ್ಷ ರೂ. ದೊಡ್ಡದಲ್ಲ. ಆದರೆ, ಸ್ಥಳೀಯ ಅಧಿಕಾರಿಗಳು ಬರ ನಿರ್ವಹಣೆಯಲ್ಲಿ ತೊಡಗಿರುವುದರಿಂದ ಉತ್ಸವದ ಬಗ್ಗೆ ಗಮನ ನೀಡಲು ಆಗುವುದಿಲ್ಲ ಎಂಬ ಕಾರಣಕ್ಕೆ ಉತ್ಸವವನ್ನೇ ರದ್ದು ಮಾಡುವುದು ಸರಿಯಲ್ಲ. 

 ಇತ್ತೀಚೆಗೆ ಬಳ್ಳಾರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದಕ್ಕೆ ಕೋಟ್ಯಂತರ ರೂ. ವೆಚ್ಚ ಮಾಡಿ ಕೃತಜ್ಞತಾ ಸಮಾವೇಶ ನಡೆಸಿ ಇದೀಗ 60 ಲಕ್ಷ ರೂ. ವೆಚ್ಚದ ಹಂಪಿ ಉತ್ಸವಕ್ಕೆ ಬರಗಾಲ ನೆಪ ಒಡ್ಡುವುದು  ಎಷ್ಟು ಸರಿ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಆದರೆ, ಹಂಪಿ ಉತ್ಸವ ರದ್ದುಪಡಿರುವ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಉತ್ಸವ ಆಚರಣೆ ಕುರಿತು ಮರು ಪರಿಶೀಲನೆ ನಡೆಸಲಾಗುವುದು. ಒಂದು ದಿನದ ಮಟ್ಟಿಗಾದರೂ ಉತ್ಸವ ಆಚರಣೆಗೆ ಅಧಿಕಾರಿಗಳ ಬಳಿ ಚರ್ಚಿಸಲಾಗುವುದು ಎಂದು ಹೇಳುವ ಮೂಲಕ ಆಕ್ರೋಶ ತಣಿಸುವ ಪ್ರಯತ್ನ ಮಾಡಿದ್ದಾರೆ.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.