ಐಸಿಸ್‌ ಜಾಲ ವಿಸ್ತರಣೆ ಬಗ್ಗೆ ಆಘಾತಕಾರಿ ವಿವರ ಎನ್‌ಐಎ ಭರ್ಜರಿ ಬೇಟೆ


Team Udayavani, Dec 27, 2018, 6:00 AM IST

nia.jpg

ಸಿರಿಯಾ ಮತ್ತು ಇರಾಕ್‌ನಲ್ಲಿ ಸಕ್ರಿಯವಾಗಿರುವ ರಕ್ತಪಿಪಾಸು ಉಗ್ರ ಸಂಘಟನೆ ಐಸಿಸ್‌ ಭಾರತದಲ್ಲಿ ನೆಲೆಯೂರುತ್ತಿದೆ ಎನ್ನುವುದಕ್ಕೆ ಪುಷ್ಟಿಯೇ ಬುಧವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಎಐ) ಉತ್ತರ ಪ್ರದೇಶ ಮತ್ತು ರಾಷ್ಟ್ರೀಯ ರಾಜಧಾನಿ ವ್ಯಾಪ್ತಿಯಲ್ಲಿ ನಡೆಸಿದ ಕಾರ್ಯಾಚರಣೆ ಸಾಕ್ಷಿ. 

ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಿಂದ ಉಗ್ರ ಸಂಘಟನೆಯಿಂದ ಪ್ರಭಾವಿತರಾದ ಉನ್ನತ ವಿದ್ಯಾಭ್ಯಾಸ ಪಡೆದವರು ಸಿರಿಯಾಗೆ ಕೆಲ ವರ್ಷಗಳಿಂದ ತೆರಳಿದ್ದರು. ಜತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯ ವಿರುದ್ಧ ನಡೆದ ಪ್ರತಿಭಟನೆಗಳ ವೇಳೆ ಐಸಿಸ್‌ನ ಧ್ವಜ ಹಿಡಿದದ್ದು ಕಂಡು ಬಂದಿತ್ತು. ಆದರೆ ಎನ್‌ಐಎ ದಾಳಿಯಲ್ಲಿ ಕಂಡು ಬಂದಿರುವ ವಿಚಾರಗಳು ಆಘಾತಕಾರಿಯಾಗಿದೆ. ಐಸಿಸ್‌ ಸಂಘಟನೆಯಿಂದ ಸ್ವಯಂಪ್ರೇರಿತವಾಗಿ ರೂಪಿಸಿಕೊಂಡ ಹರ್ಕತ್‌ ಉಲ್‌ ಹರಬ್‌- ಇ-ಇಸ್ಲಾಂ ಎಂಬ ಸಂಘಟನೆಗೆ ಸೇರಿದವರು ಮಾಡ ಹೊರಟಿದ್ದ ಕುಕೃತ್ಯಗಳು ದಂಗು ಬಡಿಸುವಂತಿದೆ. 

ಆರಂಭಿಕ ತನಿಖೆ ಪ್ರಕಾರ ಸದ್ಯ ಬಂಧಿಸಲಾಗಿರುವ 10 ಮಂದಿ ಸ್ವಯಂ ಪ್ರೇರಿತವಾಗಿ ಉಗ್ರತ್ವಕ್ಕೆ ಶರಣಾದವರು. ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್‌ ಮುಜಾಹಿದೀನ್‌, ಲಷ್ಕರ್‌-ಎ-ತೊಯ್ಯಬಾ ಮತ್ತು ಇತರ ಉಗ್ರ ಸಂಘಟನೆಗಳು  ಮತ್ತು ಇಂಡಿಯನ್‌ ಮುಜಾಹಿದ್ದೀನ್‌ ಸಂಸ್ಥಾಪಕರಾಗಿರುವ ರಿಯಾಜ್‌ ಭಟ್ಕಳ್‌ ಮತ್ತು ಯಾಸಿನ್‌ ಭಟ್ಕಳ್‌ ಯುವಕರ ಮನಃ ಪರಿವರ್ತನೆ ಮಾಡಿ, ಭಯೋತ್ಪಾದನಾ ಕೃತ್ಯಗಳನ್ನು ನಡೆಸಲು ಪ್ರೇರೇಪಿಸುತ್ತಿದ್ದರು. ಆದರೆ ಹಾಲಿ ದಾಳಿಯಲ್ಲಿ ಕಂಡು ಬಂದ ಮಾಹಿತಿಯೇ ಅಚ್ಚರಿ ಮತ್ತು ಆಘಾತಕಾರಿ. ಸ್ವಯಂ ಪ್ರೇರಿತವಾಗಿ ಬಂಧಿತರು ಹೊಸ ಸಂಘಟನೆ ರೂಪಿಸಿಕೊಂಡಿದ್ದರು. ಅವರಿಗೆ ಪ್ರೇರಣೆ ನೀಡಿದ ವ್ಯಕ್ತಿಗಳಾರೂ ಇಲ್ಲ ಎನ್ನುವುದು ಗಮನಾರ್ಹ. ಈ ರೀತಿ ಸ್ವಯಂ ಪ್ರೇರಿತ ಸು#ರಣದಿಂದ ಉಗ್ರತ್ವದೆಡೆಗೆ ಆಕರ್ಷಣೆಯನ್ನು ನಿಯಂತ್ರಿಸುವುದು ಸವಾಲಿನ ಕೆಲಸವೇ ಆಗಿದೆ. 

ಹೈದರಾಬಾದ್‌ನಲ್ಲಿ ಇತ್ತೀಚೆಗೆ ಬೇಧಿಸಲಾಗಿದ್ದ ಐಸಿಸ್‌ಗೆ ಸಂಪರ್ಕ ಹೊಂದಿರುವ ಜಾಲದಲ್ಲಿ ಈ ಮಾದರಿಯ ಸಂಚು ಇರಲಿಲ್ಲ.  ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಹತ್ಯಾ ದಾಳಿ ನಡೆಸುವ ಉಗ್ರರು ಆತ್ಮಹತ್ಯಾ ದಾಳಿಗೆ ಬಳಸುವ ವಸ್ತುಗಳನ್ನು ಕಟ್ಟಿಕೊಂಡು ಬಂದು ಸ್ಫೋಟಿಸುತ್ತಿದ್ದರು. ಆದರೆ ಬಂಧಿತರು ದೇಶದಲ್ಲಿಯೇ ಆತ್ಮಹತ್ಯಾ ಬೆಲ್ಟ್  (ಸುಯಿಸೈಡ್‌ ವೆಸ್ಟ್‌) ಸಿದ್ಧಪಡಿಸಿಕೊಳ್ಳುತ್ತಿದ್ದರು. ಮುಂದಿನ 26ರಂದು ಅವರು ಭಾರಿ ಪ್ರಮಾಣದ ಆತ್ಮಹತ್ಯಾ ದಾಳಿ ನಡೆಸಲು ಯೋಜನೆ ಹಾಕಿದ್ದರೆಂಬ ಮಾಹಿತಿಯೂ ಆಘಾತಕಾರಿಯೇ. 

ಅವರ ಕೈಯಿಂದ ವಶಪಡಿಸಿಕೊಳ್ಳಲಾದ 100ಕ್ಕೂ ಹೆಚ್ಚು ಮೊಬೈಲ್‌, 135ಕ್ಕೂ ಹೆಚ್ಚು ಸಜೀವ ಸಿಮ್‌, ರಿವಾಲ್ವರ್‌ ಮತ್ತು ಇತರ ವಸ್ತುಗಳು ಅವರು ರೂಪಿಸಿದ್ದ ಸಂಚಿನ ಕರಾಳತೆಯನ್ನು ವಿಸ್ತರಿಸುತ್ತಿವೆ. ಈ ಕಾರ್ಯಾಚರಣೆ ಒಂದು ಭರ್ಜರಿ ಬೇಟೆಯೇ ಆಗಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ದೆಹಲಿ, ಉತ್ತರ ಪ್ರದೇಶ ಮತ್ತು ಕೇಂದ್ರ ಸರ್ಕಾರಗಳು ಗಂಭೀರವಾಗಿಯೇ ಪರಿಗಣಿಸಬೇಕು. ಹಿಂದಿನ ಸಂದರ್ಭಗಳಲ್ಲಿ ಎನ್‌ಐಎ ದಾಳಿ ನಡೆಸಿದ್ದ ವೇಳೆ ಮುಗ್ಧರನ್ನು ವಶಕ್ಕೆ ಪಡೆಯಲಾಗಿತ್ತೆಂಬ ವಾದ ಕೇಳಿ ಬಂದಿತ್ತು. ಪಕ್ಷಗಳೂ ಕೂಡ ತನಿಖಾ ಸಂಸ್ಥೆಗಳ ಜತೆಗೆ ಸಹಕರಿಸಬೇಕಾಗಿದೆ. ಎನ್‌ಐಎ ದಾಳಿ ಭಾರತದಲ್ಲಿ ಐಎಸ್‌ಎಸ್‌ ಸಂಘಟನೆ ಕಬಂಧ ಬಾಹು ವಿಸ್ತರಿಸುತ್ತಿದೆ ಎನ್ನುವುದಕ್ಕೆ  ಹಗಲಿನಷ್ಟೇ ನಿಚ್ಚಳ ಪುರಾವೆ ಒದಗಿಸಿದೆ. ಹೀಗಾಗಿ, ಅದನ್ನು ಮೂಲೋತ್ಪಾಟನೆ ಮಾಡಲು ಎಲ್ಲರ ಸಹಕಾರವೂ ಅಗತ್ಯ.
 

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.