ಈ ಸಲವೂ ಬರ ಚಿಂತನೆ ಅಗತ್ಯ 


Team Udayavani, Dec 28, 2018, 9:43 AM IST

drouht.jpg

ರಾಜ್ಯಕ್ಕೆ ಈ ಸಲವೂ ಬರದ ಬೇಗೆ ತಟ್ಟಿದೆ. 156 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಅಂದರೆ ರಾಜ್ಯದ ಶೇ. 88 ಭಾಷ ಬರಕ್ಕೆ ತುತ್ತಾಗಿದೆ ಎಂದಾಯಿತು. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳನ್ನು ಮಾತ್ರ ಬರಪೀಡಿತ ಪ್ರದೇಶಗಳ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ರಾಜ್ಯಕ್ಕೆ ಈ ಸಲ ಮುಂಗಾರು ಮತ್ತು ಹಿಂಗಾರು ಎರಡೂ ಮಳೆ ಹಂಗಾಮು ಕೈಕೊಟ್ಟಿದೆ. ಮುಂಗಾರು ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ಅರಂಭದಲ್ಲೇ 100 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿತ್ತು. ಇದೀಗ ಹಿಂಗಾರು ಮಳೆಯೂ ಬಾರದ ಕಾರಣ ಇನ್ನೂ 56 ತಾಲುಕುಗಳನ್ನು ಬರದ ವ್ಯಾಪ್ತಿಗೆ ಘೋಷಿಸಲಾಗಿತ್ತು. 

ನಾಲ್ಕು ಜಿಲ್ಲೆಗಳನ್ನು ಬರದ ವ್ಯಾಪ್ತಿಯಿಂದ ಹೊರಗಿಟ್ಟಿದ್ದರೂ ಇಲ್ಲಿ ಸಮೃದ್ಧ ಪರಿಸ್ಥಿತಿ ಇದೆ ಎಂದು ಆಡಳಿತದಲ್ಲಿರುವವರು ಭಾವಿಸಬೇಕಾಗಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್‌ ತಿಂಗಳಲ್ಲಿ ಮಾತ್ರ ಧಾರಾಳ ಮಲೆ ಸುರಿದಿದೆ. ಬೇಸಿಗೆ ಕಾಲಿಡುವ ಮೊದಲೇ ನದಿ, ಕೆರೆಗಳು ಒಣಗಿ ಈ ಸಲ ಏಪ್ರಿಲ್‌-ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ತತ್ವಾರವಾದೀತು ಎಂಬ ಆತಂಕ ಆವರಿಸಿದೆ. ಕರಾವಳಿ ಭಾಗಕ್ಕೂ ಹಿಂಗಾರು ಕೈಕೊಟ್ಟಿದೆ. ಪರಿಸ್ಥಿತಿ ಇಷ್ಟು ಕಳವಳಕಾರಿ ಹಂತದಲ್ಲಿದ್ದರೂ ಕಿಂಡಿ ಅಣೆಕಟ್ಟೆಗಳಿಗೆ ಹಲಗೆ ಅಳವಡಿಸುವಂಥ ಚಿಕ್ಕಪುಟ್ಟ ಕೆಲಗಳೂ ಆಗದೆ ಜನರು ಕಂಗಾಲಾಗಿದ್ದಾರೆ. ಕ್ರಮೇಣ ಈ ಭಾಗವೂ ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. 

ರಾಜ್ಯಕ್ಕೆ ಬರವೇನೂ ಹೊಸತಲ್ಲ. ಜತೆಗೆ ಬರ ಪರಿಹಾರ ಎಂಬ ವಿಫ‌ಲ ಪ್ರಹಸನವನ್ನೂ ಜನತೆ ಸಾಕಷ್ಟು ನೋಡಿದ್ದಾರೆ. ಅಧಿಕಾರಿಗಳು, ಸಚಿವರ ಮತ್ತು ಕೇಂದ್ರದ ತಂಡ ಹೋಗಿ ಪರಿಶೀಲನೆ ನಡೆಸುವುದು, ಇವರು ನೀಡುವ ವರದಿಯನ್ನಾಧರಿಸಿ ಪರಿಹಾರ ಕ್ರಮಗಳಿಗೆ ಅನುದಾನ ಬಿಡುಗಡೆ ಯಾಗುವುದು, ಇದು ಸಂತ್ರಸ್ತರ ಕೈ ಸೇರುವಾಗ ಯಾವುದೋ ಕಾಲ ವಾಗುವುದು. ಕೆಲವಾರು ವರ್ಷಗಳಿಂದ ರಾಜ್ಯ ಪದೇ ಪದೇ ಬರಕ್ಕೆ ತುತ್ತಾಗುತ್ತಿದೆ. ಅದರಲ್ಲೂ ಕಳೆದ ಮೂರು ವರ್ಷಗಳಿಂದೀಚೆಗೆ ಬರ ಬಿಡದೆ ಕಾಡಿದೆ. ಇಂಥ ಪರಿಸ್ಥಿತಿಯಲ್ಲಿ ಯಾವುದೇ ಆಡಳಿತ ವ್ಯವಸ್ಥೆಯಾದರೂ ತಕ್ಷಣದ ಪರಿಹಾರದ ಜತೆಗೆ ಶಾಶ್ವತ ಪರಿಹಾರದ ಕ್ರಮಗಳನ್ನೂ ಕೈಗೊಳ್ಳಬೇಕಿತ್ತು.  ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ಜಾನುವಾರು ಗಳಿಗೆ ಮೇವು ಒದಗಿಸುವುದು, ಜನರು ಗುಳೇ ಹೋಗುವುದನ್ನು ತಡೆಯಲು ಉದ್ಯೋಗ ಖಾತರಿಯಡಿಯಲ್ಲಿ ಉದ್ಯೋಗ ಒದಗಿಸುವುದೆಲ್ಲ ತತ್‌ಕ್ಷಣಕ್ಕೆ ಆಗಬೇಕಾದ ಕೆಲಸಗಳೇ. ಹಾಗೆಂದು ಪ್ರತಿ ವರ್ಷವೂ ಇದನ್ನೇ ಮಾಡುತ್ತಿದ್ದರೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು ಯಾವಾಗ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ರೈತರನ್ನು ಪರಂಪರಾಗತ ಮಳೆ ಆಧಾರಿತ ಕೃಷಿ ಪದ್ಧತಿಯಿಂದ ನವೀನ ಪದ್ಧತಿಗಳತ್ತ ತಿರುಗಿಸುವ ಯೋಜನೆಗಳನ್ನು ಜಾರಿಗೆ ತರುವ ಗಂಭೀರ ಪ್ರಯತ್ನವನ್ನು ಯಾವ ಸರಕಾರವೂ ಮಾಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಸ್ರೇಲ್‌ ಮಾದರಿಯ ಕೃಷಿ ಪದ್ಧತಿಯ ಕುರಿತು ಪ್ರಸ್ತಾಪ ಮಾಡುತ್ತಿದ್ದರೂ ಅನುಷ್ಠಾನದತ್ತ ಮುತುವರ್ಜಿ ತೋರಿಸುತ್ತಿಲ್ಲ. 

ಕೃಷಿ ಪದ್ಧತಿಯನ್ನು ಬದಲಾಯಿಸಬೇಕು ಎಂಬ ಸಂಕಲ್ಪ ಅವರಿಗಿರಬಹುದು. ಆದರೆ ಅಧಿಕಾರಕ್ಕೇರಿ ಆರು ತಿಂಗಳು ಕಳೆದಿದ್ದರೂ ಇನ್ನೂ ಸಮ್ಮಿಶ್ರ ಸರಕಾರದೊಳಗಿನ ಗೊಂದಲಗಳೇ ಮುಗಿದಿಲ್ಲ. ಮಂತ್ರಿ ಮಂಡಲ ವಿಸ್ತರಣೆ, ಅತೃಪ್ತರ ಮುನಿಸು ಶಮನ, ಖಾತೆ ಹಂಚಿಕೆಯಂತಹ ಸಮಸ್ಯೆಗಳ ಬಲೆಯಲ್ಲಿ ಸಿಲುಕಿ ತೊಳಲಾಡುತ್ತಿರುವ ಈ ಸಮ್ಮಿಶ್ರ ಸರಕಾರದಿಂದ ಬರ ಸಂತ್ರಸ್ತರ ಕಲ್ಯಾಣವಾದೀತೆ ಎಂಬ ಅನುಮಾನ ಜನತೆಯಲ್ಲಿದೆ. 

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.