ಸಂಬಂಧ ಬಲವರ್ಧನೆಗೆ ಸಹಕಾರಿ: ಹಸೀನಾ ಗೆಲುವು


Team Udayavani, Jan 3, 2019, 12:30 AM IST

x-42.jpg

ಅವಾಮಿ ಲೀಗ್‌ ಜಾತ್ಯಾತೀತವಾದದ ದೃಷ್ಟಿಕೋನವನ್ನು ಹೊಂದಿರುವುದು ನೆರೆ ರಾಷ್ಟ್ರಗಳಿಗೆ ಮುಖ್ಯವಾಗಿ ಭಾರತಕ್ಕೆ ಅನುಕೂಲಕರವಾಗಿದೆ.

ಬಾಂಗ್ಲಾದೇಶದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಶೇಖ್‌ ಹಸೀನಾ ನೇತೃತ್ವದ ಅವಾಮಿ ಲೀಗ್‌ ಅಭೂತಪೂರ್ವ ಬಹುಮತ ಗಳಿಸಿ ಸತತ ಮೂರನೇ ಬಾರಿ ಅಧಿಕಾರಕ್ಕೇರಿದೆ. 300 ಸ್ಥಾನಗಳ ಪೈಕಿ 288 ಸ್ಥಾನಗಳನ್ನು ಅವಾಮಿ ಲೀಗ್‌ ಬಾಚಿಕೊಂಡಿರುವುದು ಭಾರೀ ದೊಡ್ಡ ಗೆಲುವೇ ಆಗಿದ್ದರೂ ಈ ಗೆಲುವು ಹಲವು ಅನುಮಾನಗಳಿಗೂ ಆಂತಕಕ್ಕೂ ಕಾರಣವಾಗಿರುವುದು ನಿಜ. ಜತಿಯಾ ಓಕಿಯಾ ಫ್ರಂಟ್‌ನಡಿಯಲ್ಲಿ ಒಗ್ಗೂಡಿದ ವಿಪಕ್ಷಗಳಿಗೆ ದಕ್ಕಿದ್ದು ಬರೀ 7 ಸ್ಥಾನಗಳು ಮಾತ್ರ. ಅರ್ಥಾತ್‌ ಈಗ ಬಾಂಗ್ಲಾದೇಶದಲ್ಲಿ ವಿಪಕ್ಷವೇ ಇಲ್ಲದಂತಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇಷ್ಟೊಂದು ಭಾರೀ ಬಹುಮತವೂ ಅಪಾಯಕಾರಿ ಎನ್ನುವ ಕಾರಣಕ್ಕೆ ಅವಾಮಿ ಲೀಗ್‌ನ ಭರ್ಜರಿ ವಿಜಯ ಆತಂಕ ಹುಟ್ಟಿಸಿರುವುದು. ಚುನಾವಣೆಯಲ್ಲಿ ವ್ಯಾಪಕವಾಗಿ ಅಕ್ರಮ ಮತ್ತು ಮತಗಟ್ಟೆ ವಶೀಕರಣ ನಡೆದಿದೆ ಎನ್ನುವುದು ವಿಪಕ್ಷಗಳ ಆರೋಪವಾಗಿದೆ ಯಾದರೂ ಅಲ್ಲಿ ಶೇಖ್‌ ಹಸೀನಾ ಪ್ರಭಾವಲಯವನ್ನು ಸರಿಗಟ್ಟುವ ಸಮರ್ಥ ನಾಯಕರೇ ಇರಲಿಲ್ಲ ಎನ್ನುವುದು ಕೂಡಾ ನಿಜ. 

ಮುಖ್ಯ ವಿಪಕ್ಷವಾಗಿದ್ದ ಬಾಂಗ್ಲಾ ದೇಶ್‌ ನ್ಯಾಶನಲಿಸ್ಟ್‌ ಪಾರ್ಟಿ ಅಕ್ಷರಶಃ ನೆಲಕಚ್ಚಿದೆ. ಅದರ ನಾಯಕಿ ಖಲೀದಾ ಜಿಯಾ ಭ್ರಷ್ಟಾಚಾರದ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವುದಲ್ಲದೆ ಅವರ ಆರೋಗ್ಯವೂ ಹದಗೆಟ್ಟಿದೆ. ಅವರ ಮಗ ತಾರಿಖ್‌ ದೇಶಭ್ರಷ್ಟರಾಗಿ ಲಂಡನ್‌ನಲ್ಲಿ ಆಶ್ರಯಪಡೆದಿದ್ದಾರೆ. ಹೀಗಾಗಿ ಅವರ ಪಕ್ಷ ಬಾಂಗ್ಲಾದೇಶದ ಸಂವಿಧಾನ ರಚಿಸಿದ ಕಮಲ್‌ ಹೊಸೈನ್‌ ನೇತೃತ್ವದಲ್ಲಿ ರಚನೆಯಾದ ಜತಿಯಾ ಓಕಿಯಾ ಫ್ರಂಟ್‌ ಜತೆ ಸೇರಿಕೊಳ್ಳಬೇಕಾಯಿತು. 2014ರಲ್ಲಿ ಖಲೀದಾ ಜಿಯಾ ಪಕ್ಷ ಚುನಾವಣೆಯನ್ನೇ ಬಹಿಷ್ಕರಿಸಿತ್ತು. 

ಶೇಖ್‌ ಹಸೀನಾ ಅವರ ಎರಡು ಅವಧಿಯ ಆಳ್ವಿಕೆಯಲ್ಲಿ ಬಾಂಗ್ಲಾದೇಶ ಅಭಿವೃದ್ಧಿಯ ಶಕೆಗೆ ಮುಖಮಾಡಿದೆ ಎನ್ನುವುದರಲ್ಲಿ ಸಂಶಯವಿಲ್ಲ. ದೇಶದ ಆರ್ಥಿಕತೆ ಸರಾಸರಿ ಶೇ. 6ರ ದರದಲ್ಲಿ ಅಭಿವೃದ್ಧಿ ಕಂಡಿದೆ. ದೇಶಾದ್ಯಂತ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಅದು ಅಲ್ಲಿನ ಜನಜೀವನದಲ್ಲಿ ಪ್ರತಿಬಿಂಬಿಸುತ್ತಿದೆ. 2017ರಲ್ಲಿ ಬಾಂಗ್ಲಾದೇಶದ ತಲಾ ಆದಾಯ ಪಾಕಿಸ್ತಾನದ ತಲಾ ಆದಾಯವನ್ನು ಹಿಂದಿಕ್ಕಿದೆ. 2024ಕ್ಕಾಗುವಾಗ ಬಾಂಗ್ಲಾದೇಶ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸಾಲಿಗೆ ಸೇರಲಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದು, ಇದು ಸಾಧ್ಯವಾದರೆ ಅದರ ಕೀರ್ತಿ ಶೇಖ್‌ ಹಸೀನಾಗೆ ಸಲ್ಲಬೇಕು. 

ಇಷ್ಟು ಮಾತ್ರವಲ್ಲದೆ ಅವಾಮಿ ಲೀಗ್‌ ಜಾತ್ಯಾತೀತವಾದದ ದೃಷ್ಟಿಕೋನವನ್ನು ಹೊಂದಿರುವುದು ನೆರೆ ರಾಷ್ಟ್ರಗಳಿಗೆ ಮುಖ್ಯವಾಗಿ ಭಾರತಕ್ಕೆ ಅನುಕೂಲಕರವಾಗಿದೆ. ಪ್ರಜಾತಂತ್ರದ ಮೂಲಭೂತ ಆಶಯಗಳನ್ನು ಎತ್ತಿಹಿಡಿಯುವಂಥ ಸಂವಿಧಾನ ತಿದ್ದುಪಡಿಯಾದದ್ದು ಅವಾಮಿ ಲೀಗ್‌ ಆಡಳಿತ ಕಾಲದಲ್ಲಿ ಎನ್ನುವುದು ಉಲ್ಲೇಖನೀಯ ಅಂಶ. 1971ರ ಯುದ್ಧ ಕೈದಿಗಳ ವಿಚಾರಣೆ ನಡೆದಿದ್ದು ಕೂಡಾ ಅವಾಮಿ ಲೀಗ್‌ ಆಡಳಿತ ಕಾಲದಲ್ಲಿ. ಅಲ್ಲದೆ ಹಸೀನಾ ಸರಕಾರ ಮೂಲಭೂತವಾದಿಗಳು ಮತ್ತು ಸ್ಥಳೀಯ ಭಯೋತ್ಪಾದಕರ ವಿರುದ್ಧ ಕಠಿಣ ನಿಲುವು ಹೊಂದಿದೆ. ಹೀಗಾಗಿಯೇ ಬಾಂಗ್ಲಾ ಕಡೆಯಿಂದ ಭಾರತಕ್ಕೆ ಈಗ ಉಗ್ರರ ಉಪಟಳ ಹೆಚ್ಚು ಇಲ್ಲ. 

ಹಸೀನಾ ಆಳ್ವಿಕೆ ಕಾಲದಲ್ಲಿ ಭಾರತ ಮತ್ತು ಬಾಂಗ್ಲಾ ನಡುವಿನ ಸಂಬಂಧ ಹೊಸ ಆಯಾಮ ಪಡೆದುಕೊಂಡಿದೆ. ವಿದ್ಯುತ್‌, ಶಿಕ್ಷಣ, ಮೂಲಸೌಲಭ್ಯ, ರೈಲ್ವೆ, ಜಲಮಾರ್ಗ ಮತ್ತಿತರ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸಿದೆ. ಭಾರತದ “ನೆರೆಹೊರೆಯವರಿಗೆ ಆದ್ಯತೆ’ ನೀತಿಗೆ ಪೂರಕವಾಗಿ ಸ್ಪಂದಿಸಿದ ದೇಶಗಳಲ್ಲಿ ಬಾಂಗ್ಲಾವೂ ಒಂದು. ಈ ದೃಷ್ಟಿಯಿಂದ ಹೇಳುವುದಾದರೆ ಅವಾಮಿ ಲೀಗ್‌ ಗೆಲುವಿನಿಂದ ಭಾರತಕ್ಕೆ ಒಳಿತೇ ಆಗಿದೆ. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಸುಧಾರಿಸಲು ಇನ್ನಷ್ಟು ಅವಕಾಶಗಳು ದೊರೆತಂತಾಗಿದೆ. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.