ದಿಕ್ಸೂಚಿಯಾದ ಸಮ್ಮೇಳನ ನುಡಿಬೇರು ಗಟ್ಟಿಯಾಗಲಿ


Team Udayavani, Jan 7, 2019, 12:30 AM IST

190106kpn94.jpg

ಪ್ರತಿವರ್ಷ ನುಡಿಜಾತ್ರೆ ಘಟಿಸುವುದು ನಾಡಿನ ಅತ್ಯಂತ ಸಹಜ ಕ್ರಿಯೆ. ಅದರಿಂದ ನಾಡಿಗೆ- ನುಡಿಗೆ ದಕ್ಕಿದ್ದೇನು ಎನ್ನುವ ಪ್ರಶ್ನೆಯೊಂದು ಮಾತ್ರ ಆ ಸಮ್ಮೇಳನ ರೂಪುಗೊಳ್ಳುವ ಮೊದಲು ಮತ್ತು ನಂತರವೂ ಕಾಡುವಂಥದ್ದು. ಆದರೆ, ಈ ಬಾರಿಯ 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿಂದಿನ ಎಲ್ಲ ಸಮ್ಮೇಳನಗಳಿಗಿಂತ ಭಿನ್ನ ನಿಲುವನ್ನು ತಳೆಯಿತು. ಭಾಷೆಯ ಬೆಳವಣಿಗೆಗೆ ಹಲವು ಕಿಂಡಿಗಳನ್ನು ತೆರೆದಿಟ್ಟು, ಭವಿಷ್ಯದ ಸಮ್ಮೇಳನಗಳಿಗೆ ದಿಕ್ಸೂಚಿ ತೋರಿರುವುದು ಸ್ತುತ್ಯರ್ಹ.

ಸಮ್ಮೇಳನ ಅಧ್ಯಕ್ಷೀಯ ಭಾಷಣದಲ್ಲಿ ಕನ್ನಡದ ಮೂಲ ಸಮಸ್ಯೆಯನ್ನು ಸೂಕ್ಷ್ಮವಾಗಿ ಶೋಧಿಸಲಾಗಿದೆ. ಅಲ್ಲಿ ಹತ್ತಾರು ಸಮಸ್ಯೆಗಳನ್ನು ಪ್ರಸ್ತಾಪಿಸದೇ, ಗಂಭೀರ ಸ್ವರೂಪದ ಒಂದೇ ಸಮಸ್ಯೆಗೆ ಚಿಕಿತ್ಸೆ ನೀಡುವುದು ಸದ್ಯದ ಮಟ್ಟಿಗೆ ಅನಿವಾರ್ಯ ಎಂಬ ಧ್ವನಿಯನ್ನು ಅದರಲ್ಲಿ ಸುಸ್ಪಷ್ಟ. ಕನ್ನಡ ಶಾಲೆಯ ಮೇಲಿನ ತಿರಸ್ಕಾರ, ಇಂಗ್ಲಿಷ್‌ ಮಾಧ್ಯಮ ಕಡೆಗಿನ ವಲಸೆಗೆ, ಕನ್ನಡ ಪ್ರಾಥಮಿಕ ಶಾಲಾ ಶಿಕ್ಷಣದ ರಾಷ್ಟ್ರೀಕರಣವೇ ಸೂಕ್ತ ಎನ್ನುವ ಚಿಂತನೆಯನ್ನು ದಶಕಗಳ ಹಿಂದೆಯೇ ಮಾಡಿದ್ದಿದ್ದರೆ, ಇಂದು ಇಷ್ಟೊಂದು ಚಿಂತಿಸಬೇಕಾಗಿರಲಿಲ್ಲ.

ಇಲ್ಲಿಯ ತನಕ ನಡೆದ ಎಲ್ಲ ಸಮ್ಮೇಳನಗಳಲ್ಲೂ ಭಾಷೆಯ ಬೆಳವಣಿಗೆ ಕುರಿತು ಉತ್ತಮ ನಿರ್ಣಯ ಕೈಗೊಂಡಿದ್ದು ಹೌದಾದರೂ, ಅದು ಆಡಳಿತ ಯಂತ್ರದ ಕಿವಿಗೆ ಬೀಳಲಿಲ್ಲ ಎನ್ನುವುದೂ ವಿಪರ್ಯಾಸವೇ. ಪ್ರಸ್ತುತ ಸಮ್ಮೇಳನದ ಧ್ವನಿ ಮುಖ್ಯಮಂತ್ರಿ ಅವರ ಕಿವಿಗೂ ಬಿದ್ದಿರುವುದು, ಆ ಕುರಿತು ಚಿಂತಿಸುವುದಾಗಿ ಅವರು ಹೇಳಿರುವುದು, ಕೇವಲ ಭರವಸೆಯಾಗಿ ಉಳಿಯದೇ, ನಾಡಿಗೆ ಬೆಳಕು ತೋರುವ ಕೆಲಸವಾಗಲಿ ಎಂದು ಆಶಿಸೋಣ.

ಈ ನಡುವೆಯೇ ಮಾತೃಭಾಷಾ ರಾಷ್ಟ್ರೀಕರಣ ಕೆಲಸ ಅಷ್ಟೊಂದು ಸಲೀಸೇ? ಎಂಬ ಪ್ರಶ್ನೆಯೂ ಕಾಡುತ್ತದೆ. ಈಗಿನ ಬಹುತೇಕ ಖಾಸಗಿ ವಿದ್ಯಾಸಂಸ್ಥೆಗಳು ರಾಜಕಾರಣಿಗಳ ಅಧಿಪತ್ಯದಲ್ಲೇ ಇರುವುದರಿಂದ, ಸರ್ಕಾರಕ್ಕೆ ಅವರನ್ನೆಲ್ಲ ಓಲೈಸುವುದು ಸವಾಲಿನ ಕೆಲಸವೂ ಆಗಲಿದೆ.

ಇದೆಲ್ಲಕ್ಕಿಂತ ಆಚೆ ಪೋಷಕರ ಮನಃಸ್ಥಿತಿಯನ್ನು ಬದಲಿಸುವ ಕೆಲಸ ಮಹಾನ್‌ ಸವಾಲೇ ಸರಿ. ಎಲ್ಲಿ ಮಾತೃಭಾಷೆಯಲ್ಲಿ ಓದಿದರೆ, ಮಕ್ಕಳು ಹಿಂದೆ ಬೀಳುತ್ತವೋ ಎಂಬ ಭಾವ ಮೇನಿಯಾದಂತೆ ಹಬ್ಬಿರುವುದು ಆತಂಕದ ಸಂಗತಿ. ಕನ್ನಡ ಅನ್ನ ಕೊಡುವ ಭಾಷೆ ಎಂಬುದನ್ನು ಬಿಂಬಿಸುವ ಕೆಲಸಕ್ಕೆ ಅಷ್ಟೇ ಅಗತ್ಯ ತಯಾರಿಗಳನ್ನೂ ಸರ್ಕಾರ ಮಾಡಬೇಕಿದೆ. 

ಸೃಜನಶೀಲತೆ ಎನ್ನುವುದು ಶಿಕ್ಷಣಕ್ಕೂ ದಾಟಬೇಕು ಎನ್ನುವ ಆಶಯ ಸಮ್ಮೇಳನದಿಂದ ಹೊರಬಿದ್ದಿದೆ. ಇದುವರೆಗೆ ಸಾಹಿತ್ಯ ಪರಿಧಿಗಷ್ಟೇ ಆಸ್ತಿಯಂತೆ ಇದ್ದ ಸೃಜನಶೀಲತೆಯನ್ನು ಬರಮಾಡಿಕೊಳ್ಳುವ ಬಗೆಯೆಂತು ಎಂಬುದರ ಹುಡುಕೂಟವೂ ಸಾಹಿತ್ಯ ತಜ್ಞರಿಂದ, ಶೈಕ್ಷಣಿಕ ತಜ್ಞರಿಂದ ಆಗಲೇಬೇಕಿರುವ ಕೆಲಸ.

ಸಮ್ಮೇಳನ ಹೊಮ್ಮಿಸಿದ ಇಷ್ಟೆಲ್ಲ ಆಶಯಗಳನ್ನು ಮಂಕಾಗಿಸುವ ಕೆಲಸವೂ ಆಗಬಾರದು ಎನ್ನುವ ಎಚ್ಚರ ಸರ್ಕಾರಕ್ಕೆ ಬೇಕು. ಭಾಷೆಯ ವಿಚಾರದಲ್ಲಿ ರಾಜಕಾರಣ, ಸ್ವಹಿತಾಸಕ್ತಿಯನ್ನು ದೂರವಿಟ್ಟಾಗ ಮಾತ್ರವೇ ಇಂಥ ಆಶಯಗಳು ಈಡೇರಲು ಸಾಧ್ಯ. ನುಡಿಯ ಬೇರುಗಳನ್ನು ಗಟ್ಟಿಗೊಳಿಸುವ ಕೆಲಸ ಆದಷ್ಟು ಬೇಗ ಸಾಗಲಿ ಎಂದು ಹಾರೈಸೋಣ.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.