ರೈಲು ನಿಲ್ದಾಣಗಳಲ್ಲಿ ತಪಾಸಣೆ: ಸಮರ್ಪಕ ಅನುಷ್ಠಾನವಾಗಲಿ


Team Udayavani, Jan 8, 2019, 12:30 AM IST

18.jpg

ದೇಶದ ಆಯ್ದ 202 ರೈಲು ನಿಲ್ದಾಣಗಳಿಗೆ ವಿಮಾನ ನಿಲ್ದಾಣಗಳ ಮಾದರಿಯ ಭದ್ರತೆಯನ್ನು ಒದಗಿಸುವ ಕಾರ್ಯಕ್ಕೆ ಸರಕಾರ ಮುಂದಾಗಿದೆ. ಇದರಲ್ಲಿ ನಮ್ಮ ರಾಜ್ಯದ ಹುಬ್ಬಳ್ಳಿ ನಿಲ್ದಾಣವೂ ಇದೆ. ಪ್ರಯಾಣಿಕರ ಸುರಕ್ಷೆಯ ದೃಷ್ಟಿಯಲ್ಲಿ ಇದೊಂದು ಮಹತ್ತರವಾದ ನಿರ್ಧಾರವೆಂದು ಹೇಳಬಹುದು. ನಮ್ಮ ದೇಶದ ರೈಲುಗಳು ಮತ್ತು ರೈಲ್ವೇ ನಿಲ್ದಾಣಗಳ ವಾಸ್ತವ ಸ್ಥಿತಿಗತಿಯನ್ನು ಗಮನಿಸಿದರೆ ಹೀಗೊಂದು ಸಮಗ್ರವಾದ ಭದ್ರತಾ ವ್ಯವಸ್ಥೆ ಬಹಳ ಹಿಂದೆಯೇ ಬರಬೇಕಿತ್ತು. ತಡವಾಗಿಯಾದರೂ ಈ ನಿಟ್ಟಿನಲ್ಲಿ 

ರೈಲ್ವೇ ಇಲಾಖೆ ಮುಂದಡಿ ಇಟ್ಟಿರುವುದು ಸ್ವಾಗತಾರ್ಹ. ಹಾಗೆಂದು ರೈಲು ನಿಲ್ದಾಣಗಳಲ್ಲಿ ವಿಮಾನ ನಿಲ್ದಾಣಗಳ ಮಾದರಿಯಲ್ಲಿ ಪ್ರಯಾಣಿಕರನ್ನು ಭದ್ರತಾ ತಪಾಸಣೆಗೆ ಗುರಿಪಡಿಸುವುದು ಹೇಳಿಕೊಂಡಷ್ಟು ಸುಲಭದ ಕಾರ್ಯವಂತೂ ಅಲ್ಲ. ಇಲ್ಲಿರುವ ಅಗಾಧ ಪ್ರಯಾಣಿಕರ ಸಂಖ್ಯೆ ಮತ್ತು ಅವ್ಯವಸ್ಥೆಯನ್ನೇ ವ್ಯವಸ್ಥೆಯೆಂದು ಒಪ್ಪಿಕೊಂಡಿರುವ ಪರಿಸ್ಥಿತಿಯಲ್ಲಿ ಭದ್ರತಾ ತಪಾಸಣೆ ಕಾರ್ಯಸಾಧುವೆ ಎನ್ನುವ ಪ್ರಶ್ನೆ ಉದ್ಭವಿಸುವುದಂತೂ ನಿಜ. 

ವಿಮಾನ ನಿಲ್ದಾಣ ಮಾದರಿಯ ತಪಾಸಣೆ ಎಂದಾದರೆ ಪ್ರಯಾಣಿಕರು ರೈಲು ಹೊರಡುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿಯೇ ನಿಲ್ದಾಣಕ್ಕೆ ಬರಬೇಕಾಗುತ್ತದೆ. ವಿಮಾನ ನಿಲ್ದಾಣದಲ್ಲಿ ತಾಸಿಗೂ ಮೊದಲೇ ಪ್ರಯಾಣಿಕರು ಬರಲೇಬೇಕೆಂಬ ನಿಯಮವಿದೆ ಮತ್ತು ಪ್ರಯಾಣಿಕರು ಇದನ್ನು ಪಾಲಿಸುತ್ತಾರೆ ಕೂಡಾ. ರೈಲ್ವೇ 20 ನಿಮಿಷ ಮೊದಲು ಪ್ರಯಾಣಿಕರು ಬಂದರೆ ಸಾಕು ಎನ್ನುತ್ತಿದೆಯಾದರೂ ಇಷ್ಟು ಕಡಿಮೆ ಅವಧಿಯಲ್ಲಿ ನೂರಾರು ಪ್ರಯಾಣಿಕರನ್ನು ತಪಾಸಣೆಗೆ ಗುರಿಪಡಿಸುವುದು ಸವಾಲಿನ ಕೆಲಸವೇ ಸರಿ. ರೈಲು ಪ್ರಯಾಣಿಕರು ಮತ್ತು ವಿಮಾನ ಪ್ರಯಾಣಿಕರ ವರ್ತನೆಯಲ್ಲಿ ಸಾಕಷ್ಟು ವ್ಯತ್ಯಾಸವಿರುತ್ತದೆ ಎಂಬ ಮೂಲ ಅಂಶವನ್ನು 
ಈ ಸಂದರ್ಭದಲ್ಲಿ ಇಲಾಖೆ ಅರ್ಥಮಾಡಿಕೊಳ್ಳಬೇಕು. ವಿಮಾನಕ್ಕೆ ನೂರೋ ಇನ್ನೂರೋ ಪ್ರಯಾಣಿಕರು ಸರತಿ ಸಾಲಿನಲ್ಲಿ ತಪಾಸಣೆಗಾಗಿ ಕಾಯುತ್ತಾರೆ. ಆದರೆ ರೈಲುಗಳಲ್ಲಿ ಹಾಗಲ್ಲ. ಒಂದೊಂದು ರೈಲಿನಲ್ಲೂ 800-1000 ಮಂದಿ ಪ್ರಯಾಣಿಸುತ್ತಾರೆ. ದೊಡ್ಡ ನಿಲ್ದಾಣಗಳಲ್ಲಿ ಇಂಥ ರೈಲುಗಳು ಪ್ರತಿ ನಿಮಿಷಕ್ಕೊಂದರಂತೆ ಹೋಗುತ್ತಿರುತ್ತವೆ. ಹೀಗೆ ಸಾವಿರಾರು ಪ್ರಯಾಣಿಕರಿಗೆ ಯಾವುದೇ ಅಡಚಣೆ ಮತ್ತು ಇರಿಸುಮುರಿಸಾಗದಂತೆ ತಪಾಸಣೆ ಮಾಡಲು ಸಾಧ್ಯವಾದರೆ ಇದು ಉತ್ತಮ ಕ್ರಮವಾಗುವುದರಲ್ಲಿ ಅನುಮಾನವಿಲ್ಲ. 

ರೈಲು ಪ್ರಯಾಣಿಕರನ್ನೂ ಭದ್ರತಾ ತಪಾಸಣೆಗೆ ಗುರಿಪಡಿಸಬೇಕೆಂಬ ಬೇಡಿಕೆ 2006ರಲ್ಲಿ ಮುಂಬಯಿಯ ಲೋಕಲ್‌ ರೈಲುಗಳಲ್ಲಿ ಸರಣಿ ಬಾಂಬ್‌ ಸ್ಫೋಟ ಸಂಭವಿಸಿದಾಗಲೇ ಕೇಳಿ ಬಂದಿತ್ತು. ಈ ಘಟನೆಯನ್ನನುಸರಿಸಿ ಮುಂಬಯಿ ಲೋಕಲ್‌ ರೈಲು ನಿಲ್ದಾಣಗಳ ಪ್ರವೇಶ ದ್ವಾರಗಳಲ್ಲಿ ಮೆಟಲ್‌ ಡಿಟೆಕ್ಟರ್‌, ಬ್ಯಾಗ್‌ ತಪಾಸಣೆ ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ನಿಮಿಷಕ್ಕೆ 5000 ಪ್ರಯಾಣಿಕರು ಪ್ರಯಾಣಿಸುವ ನಿಲ್ದಾಣಗಳಲ್ಲಿ ಈ ತಪಾಸಣೆ ಎಷ್ಟು ಪ್ರಯಾಸಕರ ಎನ್ನುವುದು ಕೆಲವೇ ದಿನಗಳಲ್ಲಿ ಅರಿವಾಗಿತ್ತು. ಈಗಲೂ ಕೆಲವು ನಿಲ್ದಾಣಗಳಲ್ಲಿ ತಪಾಸಣೆ ಇದೆಯಾದರೂ ಅದು ಬರೀ ನಾಮಕಾವಸ್ತೆ ಮಾತ್ರ. 

ಬೆಂಗಳೂರು, ಮುಂಬಯಿ, ದಿಲ್ಲಿ, ಕೋಲ್ಕತ್ತದಂಥ ಮಹಾ ನಗರಗಳಲ್ಲಿ ರೈಲು ಪ್ರಯಾಣಿಕರನ್ನು ಭದ್ರತಾ ತಪಾಸಣೆಗೆ ಒಳಪಡಿಸುವುದು ಎಣಿಸಿದಷ್ಟು ಸುಲಭದ ಕಾರ್ಯವಂತೂ ಅಲ್ಲ. ಇಲ್ಲಿ ಪ್ರಯಾಣಿಕರ ಸ್ವಭಾವವನ್ನೂ ಪರಿಗಣಿಸಬೇಕಾಗುತ್ತದೆ. ಸಾಮಾನ್ಯ ಸಂದರ್ಭದಲಿಲೆ ಸೀಟಿಗಾಗಿ ನುಗ್ಗಿ ಹೋರಾಡುವ, ತುಸು ತಡವಾದರೂ ರೊಚ್ಚಿಗೆದ್ದು ದಾಂಧಲೆ ಎಸಗುವ ಸ್ವಭಾವದ ಯಾಣಿಕರು ತಪಾಸಣೆ ಹೆಸರಲ್ಲಿ ತೊಂದರೆಯಾದರೆ ಸಹಿಸಿಕೊಂಡಾರೆ? ಅವರನ್ನು ಸಂಭಾಳಿಸುವುದು ಕೂಡಾ ಹರಸಾಹಸದ ಕೆಲಸವಾದೀತು. 

ರೈಲು ನಿಲ್ದಾಣ ಮತ್ತು ರೈಲುಗಳು ಯಾವಾಗಲೂ ಉಗ್ರರ ಸುಲಭದ ಗುರಿಗಳಾಗಿರುತ್ತವೆ. ಇವರಲ್ಲದೆ ಇತರೆಲ್ಲ ರೀತಿಯ ಪಾತಕಿಗಳಿಗೂ ರೈಲು ಮತ್ತು ರೈಲು ನಿಲ್ದಾಣ ಆಶ್ರಯತಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೇಳುವುದಾದರೆ ಬರೀ ರೈಲು ನಿಲ್ದಾಣ ಮಾತ್ರವಲ್ಲದೆ ರೈಲುಗಳಲ್ಲೂ ಬಿಗು ತಪಾಸಣೆಯ ಅಗತ್ಯವಿದೆ. 

ಬಿಹಾರ, ಉತ್ತರ ಪ್ರದೇಶದಂಥ ರಾಜ್ಯಗಳಲ್ಲಿ ರೈಲುಗಳು ಸರಕು ಸಾಗಿಸುವ ಲಾರಿಗಳಿಗಿಂತಲೂ ಕಡೆಯಾಗಿರುತ್ತವೆ. ಕುರಿ ಕೋಳಿಗಳಿಂದ ಹಿಡಿದು ಎಲ್ಲ ರೀತಿಯ ಪ್ರಾಣಿ-ವಸ್ತುಗಳನ್ನು ರೈಲುಗಳಲ್ಲಿ ಸಾಗಿಸುತ್ತಾರೆ. ಪ್ರಯಾಣಿಕರ ಸುರಕ್ಷತೆ ಎನ್ನುವುದು ಇಲ್ಲಿ ಕಾಲಕಸಕ್ಕೆ ಸಮಾನ. ಇವುಗಳನ್ನೆಲ್ಲ ನಿಯಂತ್ರಿಸಬೇಕಾದರೆ ಕಟ್ಟುನಿಟ್ಟಿನ ತಪಾಸಣೆಯ ಅಗತ್ಯವಿದೆ. ಭದ್ರತಾ ತಪಾಸಣೆ ಮೂಲಕವಾದರೂ ಭಾರತೀಯ ರೈಲ್ವೇಗೆ ಅಂಟಿರುವ ಅತ್ಯಂತ ಅಸುರಕ್ಷಿತ ಸಾರಿಗೆ ಮಾಧ್ಯಮ ಎಂಬ ಕಳಂಕ ನಿವಾರಣೆಯಾದರೆ ಒಳ್ಳೆಯದೇ. ಇದರ ಯಶಸ್ಸು ಯಾವ ರೀತಿ ಅನುಷ್ಠಾನವಾಗುತ್ತದೆ ಎಂಬುದನ್ನು ಅವಲಂಬಿಸಿದೆ. ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡು, ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಇದೊಂದು ಉತ್ತಮ ಉಪಕ್ರಮವಾಗುವುದರಲ್ಲಿ ಸಂಶಯವಿಲ್ಲ. 

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.