ಸ್ಥಗಿತಗೊಂಡ ಆಡಳಿತ


Team Udayavani, Feb 14, 2019, 12:30 AM IST

f-9.jpg

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನಿಜಕ್ಕೂ ಪ್ರಜಾಪ್ರಭುತ್ವವನ್ನು ಅಣಕಿಸುವಂತಿವೆ. ಕಳೆದ ಒಂದೂವರೆ ತಿಂಗಳಿನಿಂದ ಆಪರೇಷನ್‌ ಕಮಲದ ಹೆಸರಿನಲ್ಲಿ ನಡೆಯುತ್ತಿರುವ “ಹೈಡ್ರಾಮ’ ಒಂದು ಕಡೆ, ಸರ್ಕಾರದ ಸಂಖ್ಯಾಬಲ ಕುಸಿಯದಂತೆ ನೋಡಿಕೊಳ್ಳುವ “ಕಸರತ್ತು’ ಮತ್ತೂಂದು ಕಡೆ ಇದರ ನಡುವೆ ರಾಜ್ಯದಲ್ಲಿ ಆಡಳಿತವಂತೂ ಸ್ಥಗಿತಗೊಂಡಿರುವುದು ಸತ್ಯದ ಸಂಗತಿ.

ಜಂಟಿ ಅಧಿವೇಶನ ಫೆ.6 ರಂದು ಪ್ರಾರಂಭವಾಗಿ ಫೆ.8 ರಂದು ಬಜೆಟ್‌ ಮಂಡನೆಯಾದರೂ ಇದುವರೆಗೂ ವಿಧಾನಸಭೆಯಲ್ಲಿ  ಆರು ದಿನ ಕಲಾಪವೇ ನಡೆದಿಲ್ಲ. ರಾಜ್ಯಪಾಲರ ಭಾಷಣದ ಸಂದರ್ಭದಲ್ಲಿ ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಬಿಜೆಪಿ ಪ್ರತಿಭಟನೆ ಮಾಡಿತ್ತು. ಇನ್ನು ಬಜೆಟ್‌ ಸಂದರ್ಭದಲ್ಲಿ ಬಜೆಟ್‌ ಪ್ರತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಗದ್ದಲ ಉಂಟಾಗಿತ್ತು. ಇದರ ನಡುವೆ ಆಪರೇಷನ್‌ ಕಮಲ ಕಾರ್ಯಾಚರಣೆಯ ಸಂಬಂಧದಲ್ಲಿ ಯಡಿಯೂರಪ್ಪ ಆಡಿದ ಮಾತುಗಳೂ ಹೊರಬಿದ್ದು ಗದ್ದಲ ಜೋರಾಯಿತು. ಎರಡು ಮೂರು ದಿನ ಇದೇ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ನಡುವೆ ಹಗ್ಗ ಜಗ್ಗಾಟ ನಡೆದು ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದರೆ ಪ್ರತಿಪಕ್ಷ ಬಿಜೆಪಿ ನ್ಯಾಯಾಂಗ ಅಥವಾ ಸದನ ಸಮಿತಿ ರಚಿಸಿ ಎಂದು ಪಟ್ಟು ಹಿಡಿದು ಕಲಾಪ ನಡೆಯಲಿಕ್ಕೂ ಬಿಡಲಿಲ್ಲ. ಒಟ್ಟಾರೆ ಆರು ದಿನ ಕಲಾಪ ನಡೆಯದಂತಹ ಸ್ಥಿತಿ ನಿರ್ಮಾಣವಾಗಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಈಗ ಹಾಸನ ಶಾಸಕ ಪ್ರೀತಂಗೌಡ ಆಡಿಯೋವೊಂದರಲ್ಲಿ ದೇವೇಗೌಡರು, ಕುಮಾರಸ್ವಾಮಿಯವರ ಬಗ್ಗೆ ಆಡಿದ ಮಾತುಗಳು ಜೆಡಿಎಸ್‌ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಹಾಸನದಲ್ಲಿ ಪ್ರೀತಂಗೌಡ ಮನೆಯ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದೆ. 

ಇದರಿಂದಾಗಿ ಇಡೀ ಪ್ರಕರಣ ಮತ್ತೂಂದು ತಿರುವು ಪಡೆದಿದೆ. ಪ್ರತಿಪಕ್ಷ ನಾಯಕ ಯಡಿಯೂರಪ್ಪ ಅವರು ಶಾಸಕರ ಜತೆಗೂಡಿ ಹಾಸನಕ್ಕೆ ಖಂಡಿಸಲು ಹೋಗಿದ್ದಾರೆ. ಪ್ರೀತಂಗೌಡ ಅವರ ಮನೆಯ ಮೇಲೆ ನಡೆದಿರುವ ದಾಳಿಯು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನೆಗಳು ಉದ್ಭವಿಸುವಂತೆ ಮಾಡಿವೆ. ರಾಜಕೀಯ ವಲಯದಲ್ಲಿನ ತಿಕ್ಕಾಟಗಳು ಸಾರ್ವಜನಿಕವಾಗಿಯೂ ಪ್ರತಿಬಿಂಬಿಸಲು ಆರಂಭವಾಗಿದೆಯೇ ಎಂಬ ಆತಂಕ ಕಾಡುವಂತಾಗಿದೆ. ಅತ್ತ ಕಾಂಗ್ರೆಸ್‌ನ ನಾಲ್ವರು ಶಾಸಕರು ಅಧಿವೇಶನ ಆರಂಭವಾದಾಗಿನಿಂದ ಸದನಕ್ಕೆ ಬಾರದೆ ಮುಂಬೈನ ಹೋಟೆಲ್‌ನಲ್ಲಿದ್ದದ್ದು ಮತ್ತಷ್ಟು ಶಾಸಕರು ಅವರ ಜತೆಗೂಡಲಿದ್ದಾರೆ ಎಂಬ ಮಾತುಗಳಿಂದ ಸರ್ಕಾರಕ್ಕೂ ಆತಂಕ ಎದುರಾಗಿತ್ತು. ಆದರೆ, ರಮೇಶ್‌ ಜಾರಕಿಹೊಳಿ, ನಾಗೇಂದ್ರ, ಮಹೇಶ್‌ ಕುಮಟಳ್ಳಿ, ಉಮೇಶ್‌ ಜಾಧವ್‌ ಬುಧವಾರ ವಿಧಾನಸಭೆಯಲ್ಲಿ ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ. ಜತೆಗೆ ಜೆಡಿಎಸ್‌ನ ನಾರಾಯಣಗೌಡ ಸಹ ಪ್ರತ್ಯಕ್ಷವಾಗಿ ನಾನು ಆರೋಗ್ಯ ಸಮಸ್ಯೆ ಇದ್ದ ಕಾರಣ ತಪಾಸಣೆಗೆ ಹೋಗಿದ್ದೆ ಎಂದು ಸಮಜಾಯಿಷಿ ನೀಡಿದ್ದಾರೆ. ಇವೆಲ್ಲರೂ ಎಲ್ಲಿದ್ದರು, ಈಗೇಕೆ ಬಂದರು ಎಂಬುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಒಟ್ಟಲ್ಲಿ ರಾಜ್ಯದ ಆಡಳಿತ ಯಂತ್ರ ಈ ಎಲ್ಲಾ ಅಡೆತಡೆಗಳಿಂದ ಚಲನೆ ಕಳೆದುಕೊಂಡಿದ್ದು, ಅದು ಯಾವಾಗ ಚಲಿಸುತ್ತದೋ ಎಂಬ ಚಿಂತೆ 

ನಾಗರಿ ಕರನ್ನು ಕಾಡಲಾರಂಭಿಸಿದೆ. ಆದರೆ ನಡೆ-ನುಡಿಗಳಲ್ಲಿ ಹಾದಿತಪ್ಪಿರುವ ಜನನಾಯಕರಿಗೆ ಸಾರ್ವಜನಿಕರ ಈ ಪ್ರಶ್ನೆಗಳು ಕಿವಿಗೆ ಬೀಳದಿರುವುದು ಸದ್ಯದ ದುರಂತ. 
 

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.