ಉಕ್ರೇನ್‌ ಮೇಲೆ ಸುಳ್ಳು ಸುದ್ದಿಗಳ ದಾಳಿ!


Team Udayavani, Mar 10, 2022, 7:15 AM IST

ಉಕ್ರೇನ್‌ ಮೇಲೆ ಸುಳ್ಳು ಸುದ್ದಿಗಳ ದಾಳಿ!

ಉಕ್ರೇನ್‌ನಲ್ಲಿ ನಡೆಯುತ್ತಿರುವ ರಷ್ಯಾ ದಾಳಿಯಿಂದ ಕಂಗಾಲಾಗಿರುವ ಜನರಲ್ಲಿ ಧೈರ್ಯ ತುಂಬುವಂತೆ ಮಾಡಲು ಅಲ್ಲಿನ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಹಲವಾರು ಜನರು ವಿವಿಧ ಬಗೆಯ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಆದರೆ, ಅವರು ಹಾಕುವ ಪೋಸ್ಟ್‌ಗಳಲ್ಲಿ ಕೆಲವು ಸುಳ್ಳಾಗಿರುತ್ತವೆ ಅಥವಾ ಸತ್ಯಕ್ಕೆ ದೂರವಾಗಿರುವಂಥವಾಗಿರುತ್ತವೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ, ಅಧ್ಯಕ್ಷ ಝೆಲೆನ್ಸ್ಕಿ ಅವರು, ಉಕ್ರೇನ್‌ ಸೇನಾ ಸಮವಸ್ತ್ರ ಧರಿಸಿಕೊಂಡು, ಯುದ್ಧ ಸಾಮಗ್ರಿಗಳಿರುವ ಬ್ಯಾಗನ್ನು ಕಟ್ಟಿಕೊಂಡು ಯುದ್ಧ ವಿಮಾನವೊಂದರ ಬಳಿ ತೆರಳುತ್ತಿರುವ ಫೋಟೋವೊಂದು ಉಕ್ರೇನ್‌ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಬಟ್ಟೆ ವೈರಲ್‌ ಆಗಿತ್ತು. ಅಧ್ಯಕ್ಷರೇ ಯುದ್ಧಭೂಮಿಗೆ ಇಳಿದಿದ್ದಾರೆ ಎಂಬಂಥ ಸಂದೇಶಗಳು ಹರಡಿ ಅವು ಹಲವಾರು ಜನರನ್ನು ಯುದ್ಧಕ್ಕೆ ತಾವು ಇಳಿಯುವಂತೆ ಪ್ರೇರೇಪಿಸಿತ್ತು.

ಆದರೆ, ಆ ಫೋಟೋ ತುಂಬಾ ಹಳೆಯದ್ದು ಎಂದು ಹೇಳಲಾಗಿದೆ. ಕಳೆದ ವರ್ಷ ಏ.9ರಂದು ಅವರು ಉಕ್ರೇನ್‌ನ ಪ್ರಾಂತ್ಯದಲ್ಲಿರುವ ಉಕ್ರೇನ್‌ನ ಸೇನಾ ಶಿಬಿರಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ತಗೆದ ಪೋಟೋವದು ಎಂದು ಹೇಳಲಾಗಿದೆ.

ಉಪಾಧ್ಯಕ್ಷರ ಪತ್ನಿಯ ಫೋಟೋ ಕೂಡ ವೈರಲ್‌
ಯುದ್ಧ ನಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ಯುದ್ಧಕ್ಕೆ ಸಿದ್ಧವಾಗುತ್ತಿರುವ ಫೋಟೋವೊಂದು ವೈರಲ್‌ ಆಗಿ, ಆ ಮೂಲಕ ಉಕ್ರೇನ್‌ನ ಮಹಿಳೆಯರಲ್ಲಿ ಆತ್ಮಸ್ಥೈರ್ಯ ತುಂಬುವಂಥ ಕೆಲಸ ಮಾಡಲಾಗಿತ್ತು. ಫೋಟೋದಲ್ಲಿ ಯುದ್ಧಕ್ಕೆ ಸನ್ನದ್ಧವಾಗುತ್ತಿದ್ದ ಮಹಿಳೆಯನ್ನು ಉಕ್ರೇನ್‌ನ ಉಪಾಧ್ಯರ ಪತ್ನಿ ಎಂದು ಬಿಂಬಿಸಲಾಗಿತ್ತು. ಆದರೆ, ಅಸಲಿಗೆ ಉಕ್ರೇನ್‌ನಲ್ಲಿ ಉಪಾಧ್ಯಕ್ಷರೇ ಇಲ್ಲ! ಹಾಗಾಗಿ, ಆ ಸುದ್ದಿಯೂ ಈಗ ಫೇಕ್‌ ಎಂದು ಸಾಬೀತಾಗಿದೆ.

ಸುಂದರಿಯನ್ನೂ ಬಿಡದ ಫೇಕ್‌ನ್ಯೂಸ್
ಮಾಜಿ ಮಿಸ್‌ ಉಕ್ರೇನ್‌ ಆದ ಅನಾಸ್ತೇಸಿಯಾ ಲೆನ್ನಾ ಅವರು ಬಂದೂಕನ್ನು ಹಿಡಿದಿರುವ ಫೋಟೋವೊಂದು ವೈರಲ್‌ ಆಗಿತ್ತು. ಸುಂದರಿಯು ಉಕ್ರೇನ್‌ ಸೇನೆಯನ್ನು ಸೇರಿದ್ದಾರೆಂದು ಹೇಳಲಾಗಿತ್ತು. ಇದನ್ನು ಖುದ್ದಾಗಿ ಅನಾಸ್ತೇನಿಯಾ ಅವರೇ ನಿರಾಕರಿಸಿದ್ದಾರೆ.

“ನಾನೊಬ್ಬ ಸಾಮಾನ್ಯ ಮಹಿಳೆ. ದೇಶದ ಇತರರಂತೆ ನಾನು ಜೀವಿಸುತ್ತಿದ್ದೇನೆ. ನಾನು ಸೇನೆಗೆ ಸೇರಿಲ್ಲ. ಯುದ್ಧದಲ್ಲಿ ಭಾಗಿಯಾಗಿಲ್ಲ. ಫೋಟೋದಲ್ಲಿ ನೀವು ನೋಡಿರುವುದು ನಾನು ಏರ್‌ಸಾಫ್ಟ್ ತಂಡದಲ್ಲಿದ್ದಾಗ ಹಿಡಿದಿದ್ದ ಬಂದೂಕು” ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.