ಗದಗ : ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50 ಮಕ್ಕಳು ಅಸ್ವಸ್ಥ
Team Udayavani, Jul 15, 2017, 2:44 PM IST
ಗದಗ: ತಾಲೂಕಿನ ಅಂತೂರು ಬೆಂತೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಆತಂಕಕಾರಿ ಘಟನೆ ಶನಿವಾರ ನಡೆದಿದೆ. ಉಪ್ಪಿಟ್ಟು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದು ಕೆಲವರಿಗೆ ವಾಂತಿಯಾಗಿದ್ದು, ಕೆಲವರಿಗೆ ತಲೆ ಸುತ್ತು ಬಂದಿದೆ ಎಂದು ಹೇಳಲಾಗಿದೆ.
108 ಅಂಬುಲೆನ್ಸ್ಗೆ ಕರೆ ಮಾಡಲಾಯಿತಾದರೂ ಸಕಾಲಕ್ಕೆ ಬರಲಿಲ್ಲ.ಮಕ್ಕಳಿಗೆ ಸರ್ಕಾರಿ ಶಾಲೆಯ ಆವರಣದಲ್ಲೇ ಚಿಕಿತ್ಸೆ ನೀಡಲಾಗಿದೆ. 2 ಗಂಟೆಯ ಬಳಿಕ 10 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ವಿಷಯ ತಿಳಿದು ಕಂಗಾಲಾದ ನೂರಾರು ಪೋಷಕರು ಶಾಲೆಯ ಆವರಣದಲ್ಲಿ ಜಮಾಯಿಸಿ ತಮ್ಮ ತಮ್ಮ ಮಕ್ಕಳ ಕ್ಷೇಮ ನೋಡಿಕೊಂಡರು. ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ