ಭರವಸೆ ಈಡೇರಿಸಿದೆ ರಾಜ್ಯ ಸರ್ಕಾರ: ಬಿ.ಸಿ. ಪಾಟೀಲ


Team Udayavani, Dec 6, 2017, 2:13 PM IST

06-29.jpg

ಹಿರೇಕೆರೂರ: ಆಧುನಿಕ ಬಸವಣ್ಣನಾಗಿ ಸಿಎಂ ಸಿದ್ದರಾಮಯ್ಯನವರು ಸಾಮಾಜಿಕ ಕ್ರಾಂತಿ ಮಾಡಿದ್ದಾರೆ. ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಲಿದೆ ಎಂದು ಮಾಜಿ ಶಾಸಕ ಬಿ.ಸಿ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಕಾಂಗ್ರೆಸ್‌ ಸಮಿತಿಯಿಂದ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾದ ಮೇಲೆ
ತಾಲೂಕಿನ ಜನತೆಯ ಪ್ರೀತಿಗಾಗಿ ನಾಲ್ಕು ಬಾರಿ ಪಟ್ಟಣಕ್ಕೆ ಆಗಮಿಸಿದ್ದಾರೆ. ತಾಲೂಕಿನ ಅಭಿವೃದ್ಧಿ ಜೊತೆಗೆ ರೈತರ ನೆರವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ದುರ್ಗಾದೇವಿ ಕೆರೆಗೆ, ಮದಗದ ಮಾಸೂರು ಕೆರೆ ತುಂಬಿಸುವುದು ಹಾಗೂ ಅಸುಂಡಿ ಏತ ನೀರಾವರಿ, ಮಡೂರು ಏತ ನೀರಾವರಿ, ಗುಡ್ಡದಮಾದಾಪುರ ಯೋಜನೆ ಮಂಜೂರು ಸೇರಿದಂತೆ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು 325 ಕೋಟಿ ರೂ.ಗಿಂತ ಹೆಚ್ಚು ಅನುದಾನ ನೀಡಿದ್ದಾರೆ. ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ರಟ್ಟಿàಹಳ್ಳಿ ತಾಲೂಕು ರಚನೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿಯವರ ಕೆಲಸಕ್ಕೆ ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ ಪರ ಯೋಜನೆಗಳನ್ನು ಸಹಿಸಲಾರದೆ ಬಿಜೆಪಿಯವರು ಹತಾಶರಾಗಿ ಕಾಂಗ್ರೆಸ್‌ ನಾಯಕರ ಬಗ್ಗೆ ಟೀಕೆಗಳನ್ನು ಮಾಡುತ್ತಾ ಸಾಗುತ್ತಿದ್ದಾರೆ ಎಂದು ದೂರಿದರು. ಬಿಜೆಪಿ ನಾಯಕರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಸಂಸ್ಕೃತಿಯನ್ನು ಮರೆತು ಮಾತನಾಡುತ್ತಿದ್ದಾರೆ ಎಂದು ದೂರಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಿರೇಕೆರೂರ ತಾಲೂಕಿನಿಂದ ಸ್ಪರ್ಧೆ ಮಾಡುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಬಿ.ಸಿ. ಪಾಟೀಲ ಮನವಿ ಮಾಡಿದರು. ಈ ಭಾಗದಲ್ಲಿ ಮೆಕ್ಕೆಜೋಳವನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ
ಬೆಂಬಲ ಬೆಲೆಯನ್ನು ನಿಗದಿ ಪಡಿಸಬೇಕು ಎಂದು ಸಿಎಂಗೆ ಮನವಿ ಮಾಡಿದರು. 

ಕೆಪಿಸಿಸಿ ಕಾರ್ಯಾಧ್ಯಕ್ಷ ಮಾಜಿ ಸಚಿವ ಎಸ್‌.ಆರ್‌. ಪಾಟೀಲ ಮಾತನಾಡಿ, ದೇಶದ ಭದ್ರತೆ ಐಕ್ಯತೆ ಅಖಂಡತೆ ಸಾರ್ವಭೌಮತ್ವಕ್ಕೆ ಕಾಂಗ್ರೆಸ್‌ ಕೊಡುಗೆ ಅಪಾರ. ಸ್ವತಂತ್ರ ಹೋರಾಟದಲ್ಲಿ ಕಾಂಗ್ರೆಸ್‌ ಪಾಲ್ಗೊಂಡು ಸ್ವತಂತ್ರ ಪಡೆಯುವಲ್ಲಿ ಪಾತ್ರವಹಿಸಿದೆ. ಆದರೆ ದೇಶಕ್ಕೆ ಬಿಜೆಪಿಯವರ ಕೊಡುಗೆ ಏನೂ ಇಲ್ಲ ಎಂದರು. ಮಾಜಿ ಶಾಸಕ ಬಿ.ಎಚ್‌. ಬನ್ನಿಕೋಡ ಮಾತನಾಡಿ, ಜನರ ಭಾವನೆಗಳಿಗೆ ಸ್ಪಂದಿಸದೆ ಮಾತಿನಲ್ಲೇ ಮಂಟಪ ಕಟ್ಟಿ ಆಳ್ವಿಕೆ ನಡೆಸುವುದು ಬಿಜೆಪಿಯದ್ದಾಗಿದೆ. ಸಿಎಂ ಸಿದ್ದರಾಮಯ್ಯನವರ ಕಾರ್ಯಗಳು ಐತಿಹಾಸಿಕವಾಗಿವೆ ಎಂದು ಬಣ್ಣಿಸಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಳ್ಳಿ ಗದೆ ನೀಡುವ ಮೂಲಕ ಅಭಿನಂದಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ, ಕೆಪಿಸಿಸಿ ಉಪಾಧ್ಯಕ್ಷ ಬೋಸರಾಜ, ಜಯಸಿಂಹ ಆಸ್ಕೊಡ, ಸುನೀಲ ಹಮ್ಮಣ್ಣನವರ, ಶಾಸಕರಾದ ಮನೋಹರ ತಹಶೀಲ್ದಾರ, ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಸದಸ್ಯರಾದ ಎಸ್‌.ಕೆ. ಕರಿಯಣ್ಣವರ, ಪ್ರಕಾಶ ಬನ್ನಿಕೋಡ, ಮಹದೇವಕ್ಕ ಗೋಪಕ್ಕಳ್ಳಿ, ರಾಘವೇಂದ್ರ ತಹಶೀಲ್ದಾರ, ಪ್ರಕಾಶ ಕೋಳಿವಾಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಆರ್‌.ಎನ್‌. ಗಂಗೋಳ, ಕರೇಗೌಡ ಸಣ್ಣಕ್ಕಿ, ಜಿ. ಶಿವನಗೌಡ್ರ, ಡಿ.ಸಿ. ಪಾಟೀಲ, ವನಜಾ ಪಾಟೀಲ, ಸೃಷ್ಟಿ ಪಾಟೀಲ, ಹನುಮಂತಪ್ಪ ಹಡಗದ, ಜಿ.ಪಿ. ಪ್ರಕಾಶ, ಆರ್‌.ವಿ. ಹಳ್ಳಪ್ಪಗೌಡ್ರ, ಸತೀಶ ತಂಬಾಕದ, ಸತೀಶ ಹಳ್ಳಪ್ಪಗೌಡ್ರ, ಶಂಭು ಹಂಸಭಾವಿ, ಬಸವರಾಜ ಕಾಲ್ವಿಹಳ್ಳಿ,
ರಮೇಶ ಹಡಗದ ಇತರರಿದ್ದರು. 

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.