ಕಪ್ಪತಗುಡ್ಡಕ್ಕೆ ಮತ್ತೆ ಬೆಂಕಿ
Team Udayavani, Feb 7, 2018, 11:04 AM IST
ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮ ಸಮೀಪದ ಕಪ್ಪತಗುಡ್ಡಕ್ಕೆ ಮಂಗಳವಾರ ಸಂಜೆ ಬೆಂಕಿ ಬಿದ್ದಿದ್ದು, ವಿವಿಧ ರೀತಿಯ ಔಷಧಿ ಸಸ್ಯಗಳು ಹಾಗೂ ಜೀವಜಂತುಗಳು ಬಲಿಯಾಗಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಅಗ್ನಿ ಅವಘಡ ಸಂಭವಿಸಿದೆ.
ಸಂಜೆ 6 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು ಅರ್ಧ ಗಂಟೆ ಹೊತ್ತಿ ಉರಿದಿದೆ. ಈ ವೇಳೆಗೆ ಕೆಲ ಎಕರೆ ಪ್ರದೇಶಗಳಷ್ಟು ಬೆಂಕಿ ಕೆನ್ನಾಲಿಗೆ ವ್ಯಾಪಿಸಿಕೊಂಡಿದ್ದು, ಈ ಭಾಗದಲ್ಲಿನ ಔಷಧಿ ಸಸ್ಯಗಳು ಹಾಗೂ ಜೀವ, ಜಂತುಗಳು ಬೆಂಕಿಗಾಹುತಿಯಾಗಿವೆ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಮುಂಡರಗಿ ಆರ್ಎಫ್ಒ ಮಹಾಂತೇಶ ನ್ಯಾಮತಿ, ಡೋಣಿ ಬಳಿ ಕೇವಲ ಒಂದೆರಡು ಎಕರೆ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಈ ಬಗ್ಗೆ ಮಾಹಿತಿ ಲಭ್ಯವಾದ 10 ನಿಮಿಷದಲ್ಲಿ ಇಲಾಖೆಯ ಸ್ಕ್ವಾಡ್ಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ.
ಈ ಘಟನೆ ಸಂಭವಿಸಿದ ಪ್ರದೇಶದಲ್ಲಿ ದೋಣಿಯಿಂದ ಮತ್ತೂಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಾಡ್ ರೋಡ್ನಲ್ಲಿ ಗ್ರಾಮಸ್ಥರು ಸಿಗರೇಟ್ ಸೇದಿ ಬಿಸಾಡಿದ್ದರಿಂದ ದುರ್ಘಟನೆ ಸಂಭವಿಸಿರುವ ಬಗ್ಗೆ ಸಂಶಯವಿದೆ. ಅರಣ್ಯದಲ್ಲಿ ಬೆಂಕಿ ಹಚ್ಚದಂತೆ ಸುತ್ತಲಿನ ಗ್ರಾಮಸ್ಥರಿಗೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ