ಕಪ್ಪತಗುಡ್ಡಕ್ಕೆ ಮತ್ತೆ ಬೆಂಕಿ
Team Udayavani, Feb 7, 2018, 11:04 AM IST
ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮ ಸಮೀಪದ ಕಪ್ಪತಗುಡ್ಡಕ್ಕೆ ಮಂಗಳವಾರ ಸಂಜೆ ಬೆಂಕಿ ಬಿದ್ದಿದ್ದು, ವಿವಿಧ ರೀತಿಯ ಔಷಧಿ ಸಸ್ಯಗಳು ಹಾಗೂ ಜೀವಜಂತುಗಳು ಬಲಿಯಾಗಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಅಗ್ನಿ ಅವಘಡ ಸಂಭವಿಸಿದೆ.
ಸಂಜೆ 6 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು ಅರ್ಧ ಗಂಟೆ ಹೊತ್ತಿ ಉರಿದಿದೆ. ಈ ವೇಳೆಗೆ ಕೆಲ ಎಕರೆ ಪ್ರದೇಶಗಳಷ್ಟು ಬೆಂಕಿ ಕೆನ್ನಾಲಿಗೆ ವ್ಯಾಪಿಸಿಕೊಂಡಿದ್ದು, ಈ ಭಾಗದಲ್ಲಿನ ಔಷಧಿ ಸಸ್ಯಗಳು ಹಾಗೂ ಜೀವ, ಜಂತುಗಳು ಬೆಂಕಿಗಾಹುತಿಯಾಗಿವೆ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಮುಂಡರಗಿ ಆರ್ಎಫ್ಒ ಮಹಾಂತೇಶ ನ್ಯಾಮತಿ, ಡೋಣಿ ಬಳಿ ಕೇವಲ ಒಂದೆರಡು ಎಕರೆ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಈ ಬಗ್ಗೆ ಮಾಹಿತಿ ಲಭ್ಯವಾದ 10 ನಿಮಿಷದಲ್ಲಿ ಇಲಾಖೆಯ ಸ್ಕ್ವಾಡ್ಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ.
ಈ ಘಟನೆ ಸಂಭವಿಸಿದ ಪ್ರದೇಶದಲ್ಲಿ ದೋಣಿಯಿಂದ ಮತ್ತೂಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಾಡ್ ರೋಡ್ನಲ್ಲಿ ಗ್ರಾಮಸ್ಥರು ಸಿಗರೇಟ್ ಸೇದಿ ಬಿಸಾಡಿದ್ದರಿಂದ ದುರ್ಘಟನೆ ಸಂಭವಿಸಿರುವ ಬಗ್ಗೆ ಸಂಶಯವಿದೆ. ಅರಣ್ಯದಲ್ಲಿ ಬೆಂಕಿ ಹಚ್ಚದಂತೆ ಸುತ್ತಲಿನ ಗ್ರಾಮಸ್ಥರಿಗೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ