ಹರಕೆ ತೀರಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು
Team Udayavani, Aug 29, 2018, 2:01 PM IST
ಗದಗ: ಇಲ್ಲಿನ ಶಹಪುರ ಪೇಟೆಯ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ನೂರಾರು ಭಕ್ತಾದಿಗಳು ವಿವಿಧ ರೀತಿಯಲ್ಲಿ ಹರಕೆ ತೀರಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮಂಗಳವಾರ ನಡೆದ ಕಡುಬಿನ ಕಾಳಗದ ಅಂಗವಾಗಿ ಸುಮಾರು 20 ಅಡಿ ಉದ್ದದಷ್ಟು ಅಗ್ನಿಕುಂಡವನ್ನು ಸಿದ್ಧಗೊಳಿಸಲಾಗಿತ್ತು. ಉದ್ಯೋಗ, ಸಂತಾನ ಹಾಗೂ ಆರೋಗ್ಯ ಸೇರಿದಂತೆ ಇನ್ನಿತರೆ ಇಷ್ಟಾರ್ಥಗಳು ನೆರವೇರಿದ ಹಿನ್ನೆಲೆಯಲ್ಲಿ ನೂರಾರು ಜನರು ಅಗ್ನಿಕುಂಡ ಹಾಯುವ ಮೂಲಕ ದೇವರಿಗೆ ಭಕ್ತಿ ಸಮರ್ಪಿಸಿದರು.
ಈ ವೇಳೆ ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸೇರಿದಂತೆ ಎಲ್ಲ ವಯೋಮಾನದವರು ಅಗ್ನಿ ಕುಂಡದಲ್ಲಿ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. ಕೆಲವರು ಕಂದಮ್ಮಗಳನ್ನು ಎತ್ತಿಕೊಂಡು ಸುಡುವ ಅಗ್ನಿಕುಂಡದಲ್ಲಿ ಸಾಗುವ ಮೂಲಕ ನೋಡುಗರು ಹುಬ್ಬೇರಿಸುವಂತೆ ಮಾಡಿದರು. ಇಷ್ಟಾರ್ಥ ನೆರವೇರಿದ ಸಂಭ್ರಮದಲ್ಲಿದ್ದ ಭಕ್ತರು ಪುರವಂತರ ನೇತೃತ್ವದಲ್ಲಿ ವಿಧಿವಿಧಾನದ ಮೂಲಕ ಹಿತ್ತಾಳೆ, ಕಬ್ಬಿಣದ ಸಲಾಕೆಗಳು, ದಾರ ಹಾಗೂ ಸೂಜಿಯಂತಹ ಶಸ್ತ್ರಗಳನ್ನು ಬಾಯಿ, ನಾಲಿಗೆಗೆ ಚುಚ್ಚಿಸಿಕೊಂಡು, ಭಕ್ತಿ ಪರವಶರಾದರು. ಇನ್ನು, ಈ ಸನ್ನಿವೇಶವನ್ನು ಕಣ್ತುಂಬಿಕೊಳ್ಳಲೆಂದೇ ಅವಳಿ ನಗರದ ವಿವಿಧೆಡೆಯಿಂದ ನೂರಾರು ಜನರು ಆಗಮಿಸಿದ್ದರು. ಈ ವೇಳೆ ಸಕಲ ಮಂಗಳವಾದ್ಯಗಳು ಪುರವಂತರ ಸಮ್ಮಾಳ, ಭಕ್ತ ಸಮೂಹದ ಜಯ ಘೋಷಗಳು ಮುಗಿಲು ಮುಟ್ಟಿತ್ತು. ಜಾತ್ರಮಹೋತ್ಸವದ ಅಂಗವಾಗಿ ದೇವರ ದರ್ಶನ ಪಡೆದ ಭಕ್ತರು, ದೇವರಿಗೆ ಹಣ್ಣು ಕಾಯಿ ಹಾಗೂ ನೈವೇದ್ಯ ಸಮರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ