ಚಾಲೂ ಆಗದ ತ್ರಿಚಕ್ರ ವಾಹನ!


Team Udayavani, Sep 3, 2018, 4:23 PM IST

3-september-20.jpg

ಗದಗ: ಸ್ಥಳೀಯ ಶಾಸಕರಿಗೆ ಸಮಯ ಸಿಗದಿರುವುದು ಹಾಗೂ ಚುನಾವಣಾ ನೀತಿ ಸಂಹಿತೆಯಿಂದ ಮೂರು ತಿಂಗಳು ಕಳೆದರೂ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತಣೆಯಾಗಿಲ್ಲ. ಹೀಗಾಗಿ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ನಿಲ್ಲಿಸಿರುವ 70ಕ್ಕೂ ಹೆಚ್ಚು ವಾಹನಗಳು ಫಲಾನುಭವಿಗಳ ಕೈಸೇರುವ ಮುನ್ನವೇ ತುಕ್ಕು ಹಿಡಿಯುತ್ತಿವೆ!

ಕರ್ನಾಟಕ ಸರಕಾರದ ವಿಕಲಚೇತನ ಹಾಗೂ ಹಿರಿಯ ನಾಗಕರಿಕರ ಸಬಲೀಕರಣ ಇಲಾಖೆಯಿಂದ 2017-18ನೇ ಸಾಲಿಗೆ ಗದಗ ವಿಧಾನಸಭಾ ಕ್ಷೇತ್ರಕ್ಕೆ 78 ಯಂತ್ರಚಾಲಿತ ತ್ರಿಚಕ್ರ ವಾಹನಗಳು ಬಿಡುಗಡೆಯಾಗಿವೆ. ವಾಹನಗಳ ವಿತರಣೆಗೆ ಶಾಸಕರ ದಿನಾಂಕ ನಿಗದಿಯಾಗದೇ ಧೂಳು ತಿನ್ನುತ್ತಿವೆ.

ಗದಗ ಕ್ಷೇತ್ರದಲ್ಲೇ ಬಾಕಿ: ವಿಕಲಚೇತನ ಹಾಗೂ ಹಿರಿಯ ನಾಗಕರಿಕರ ಸಬಲೀಕರಣ ಇಲಾಖೆಯಿಂದ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ವಾರ್ಷಿಕ 18-20 ತ್ರಿಚಕ್ರ ವಾಹನ ಬಿಡುಗಡೆಯಾಗುತ್ತವೆ. ಆದರೆ, 2017-18ನೇ ಸಾಲಿನಲ್ಲಿ ಗದಗಿನ 78 ಸೇರಿದಂತೆ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಿಗೆ ಒಟ್ಟು 138 ತ್ರಿಚಕ್ರ ವಾಹನಗಳು ಮಂಜೂರಾಗಿದ್ದವು. ಮಾರಾಟ ಮಳಿಗೆಯಿಂದ ಕಳೆದ ಜೂನ್‌ ತಿಂಗಳಲ್ಲೇ ಪೂರೈಕೆಯಾಗಿದ್ದು, ಗದಗ ಕ್ಷೇತ್ರದಲ್ಲಿ ಮಾತ್ರ ವಿತರಣೆಯಾಗಿಲ್ಲ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು. 

ಗದುಗಿಗೆ ಹೆಚ್ಚು ವಾಹನ: ಕಳೆದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಥ್‌ ರಾಜ್‌ ಸಚಿವರೂ ಆಗಿದ್ದ ಸ್ಥಳೀಯ ಶಾಸಕ ಎಚ್‌. ಕೆ. ಪಾಟೀಲ, ತಮ್ಮ ಸ್ವಕ್ಷೇತ್ರದ ವಿಕಲಚೇತನರಿಗೆ ಗರಿಷ್ಠ ಸಂಖ್ಯೆಯಲ್ಲಿ ತ್ರಿಚಕ್ರ ವಾಹನ ಒದಗಿಸಲು ಉದ್ದೇಶಿಸಿದ್ದರು. ಅದರಂತೆ ವಿಕಲಚೇತನ ಹಾಗೂ ಹಿರಿಯ ನಾಗಕರಿಕರ ಸಬಲೀಕರಣ ಇಲಾಖೆಯಿಂದ ಗದುಗಿಗೆ ಹೆಚ್ಚುವರಿಯಾಗಿ 60 ಸೇರಿದಂತೆ ಒಟ್ಟು 78 ವಾಹನಗಳನ್ನು ಮಂಜೂರು ಮಾಡಿಸಿದ್ದರು.

ಕಳೆದ ಮಾರ್ಚ್‌ನಲ್ಲೇ ಬಿಡುಗಡೆ ಆಗಬೇಕಿದ್ದ ತ್ರಿಚಕ್ರ ವಾಹನಗಳು ವಿಧಾನಸಭಾ ಚುನಾವಣೆ ಘೋಷಣೆಯಿಂದಾಗಿ ಜೂನ್‌ನಲ್ಲಿ ಬಂದಿವೆ. ಈ ವೇಳೆಗೆ ನೂತನ ಸರಕಾರ ಅಧಿಕಾರಕ್ಕೆ ಬಂದಿದ್ದರೂ ಸಚಿವ ಸಂಪುಟ ರಚನೆ, ಮತ್ತಿತರೆ ಕಾರಣಗಳಿಂದಾಗಿ ತ್ರಿಚಕ್ರ ವಾಹನಗಳ ವಿತರಣೆ ನೆನೆಗುದಿಗೆ ಬಿದ್ದಿತ್ತು. ಆನಂತರ ಆ. 15ರ ಸ್ವಾತಂತ್ರ್ಯೋತ್ಸವ ದಿನದಂದು ವಿತರಣೆಗೆ ಇಲಾಖೆಯಿಂದ ಸಿದ್ಧತೆ ನಡೆದಿತ್ತಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಡ್ಡಿಯಾಗಿ ಮತ್ತಷ್ಟು ವಿಳಂಬವಾಗುತ್ತಿದೆ ಎನ್ನಲಾಗಿದೆ.

ನಿಂತಲ್ಲೇ ತುಕ್ಕು ಹಿಡಿಯುತ್ತಿವೆ
ವಿಕಲಚೇತನರಿಗೆ ಆಸರೆಯಾಗಲಿ ಎಂಬ ಉದ್ದೇಶದಿಂದ ಮಂಜೂರಾಗಿರುವ ತ್ರಿಚಕ್ರ ವಾಹನಗಳು ಫಲಾನುಭವಿಗಳ ಕೈಸೇರುವ ಮುನ್ನವೇ ಕಳೆಗುಂದುತ್ತಿವೆ. ಕಸಾಪ ಭವನದ ಆವರಣದಲ್ಲಿ ನಿಲ್ಲಿಸಿರುವ ವಾಹನಗಳಿಗೆ ನೆರಳಿಲ್ಲದೇ ಬಿಸಿಲಿಗೆ ಬಣ್ಣ ಮಾಸುತ್ತಿದೆ. ಮಳೆಯಿಂದಾಗಿ ವಾಹನಗಳ ಕಬ್ಬಿಣದ ಬಿಡಿ ಭಾಗಗಳು ತುಕ್ಕು ಹಿಡಿಯುತ್ತಿವೆ. ಅಲ್ಲದೇ ಕಿಡಿಕೇಡಿಗಳ ಕೃತ್ಯದಿಂದ ಸಣ್ಣಪುಟ್ಟ ಬಿಡಿಭಾಗಗಳು ಜಖಂಗೊಂಡಿವೆ. ಇನ್ನೂ ಕೆಲ ವಾಹನಗಳ ನಂಬರ್‌ ಪ್ಲೇಟ್‌ಗಳೇ ಕಣ್ಮರೆಯಾಗಿರುವುದು ವಿಪರ್ಯಾಸ.

ತ್ರಿಚಕ್ರ ವಾಹನಗಳಿಗಾಗಿ ಪ್ರತಿನಿತ್ಯ ಫಲಾನುಭವಿಗಳು ಕಚೇರಿಗೆ ಅಲೆಯುತ್ತಾರೆ. ವಾಹನಗಳು ಬಂದಾಗಿನಿಂದ ಶಾಸಕ ಎಚ್‌.ಕೆ. ಪಾಟೀಲ ಅವರ ದಿನಾಂಕ ನಿಗದಿಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದರೆ, ವಿತರಣಾ ಸಮಾರಂಭಕ್ಕೆ ದಿನಾಂಕ ನಿಗದಿಯಾಗುತ್ತಿಲ್ಲ. ಶಾಸಕರು ಒಪ್ಪಿದರೆ ಸೆ. 4 ಅಥವಾ 5ರಂದು ವಿತರಿಸಲು ಚಿಂತನೆ ನಡೆಸಿದ್ದೇವೆ.
ಆಶು ನದಾಫ್‌, 
ವಿಕಲಚೇತನ ಹಾಗೂ ಹಿರಿಯ ನಾಗಕರಿಕರ
ಸಬಲೀಕರಣ ಇಲಾಖೆ ಅಧಿಕಾರಿ

ತ್ರಿಚಕ್ರ ವಾಹನಕ್ಕಾಗಿ ಕಳೆದ ಬಾರಿಯೂ ಅರ್ಜಿ ಹಾಕಿದ್ದೆ, ಬಂದಿರಲಿಲ್ಲ. ಈ ಬಾರಿ ಮಂಜೂರಾಗಿದ್ದರೂ ವಿತರಣೆಯಾಗುತ್ತಿಲ್ಲ. ಬೈಕ್‌ ಕೋಡ್ರಿ ಅಂತಾ ಕೇಳ್ಳೋದ್ಕ ವಾರದಲ್ಲಿ ಎರಡು ದಿನ ವಿಕಲಚೇತನರ ಕಚೇರಿಗೆ ಬರುತ್ತಾ ಇದ್ದೇನೆ. ಅದ್ಯಾವಾಗ ಕೊಡ್ತಾರೋ ಗೊತ್ತಿಲ್ಲ.
ಫಲಾನುಭವಿ

ವೀರೇಂದ್ರ ನಾಗಲದಿನ್ನಿ 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.