ಚಾಲೂ ಆಗದ ತ್ರಿಚಕ್ರ ವಾಹನ!


Team Udayavani, Sep 3, 2018, 4:23 PM IST

3-september-20.jpg

ಗದಗ: ಸ್ಥಳೀಯ ಶಾಸಕರಿಗೆ ಸಮಯ ಸಿಗದಿರುವುದು ಹಾಗೂ ಚುನಾವಣಾ ನೀತಿ ಸಂಹಿತೆಯಿಂದ ಮೂರು ತಿಂಗಳು ಕಳೆದರೂ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತಣೆಯಾಗಿಲ್ಲ. ಹೀಗಾಗಿ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ನಿಲ್ಲಿಸಿರುವ 70ಕ್ಕೂ ಹೆಚ್ಚು ವಾಹನಗಳು ಫಲಾನುಭವಿಗಳ ಕೈಸೇರುವ ಮುನ್ನವೇ ತುಕ್ಕು ಹಿಡಿಯುತ್ತಿವೆ!

ಕರ್ನಾಟಕ ಸರಕಾರದ ವಿಕಲಚೇತನ ಹಾಗೂ ಹಿರಿಯ ನಾಗಕರಿಕರ ಸಬಲೀಕರಣ ಇಲಾಖೆಯಿಂದ 2017-18ನೇ ಸಾಲಿಗೆ ಗದಗ ವಿಧಾನಸಭಾ ಕ್ಷೇತ್ರಕ್ಕೆ 78 ಯಂತ್ರಚಾಲಿತ ತ್ರಿಚಕ್ರ ವಾಹನಗಳು ಬಿಡುಗಡೆಯಾಗಿವೆ. ವಾಹನಗಳ ವಿತರಣೆಗೆ ಶಾಸಕರ ದಿನಾಂಕ ನಿಗದಿಯಾಗದೇ ಧೂಳು ತಿನ್ನುತ್ತಿವೆ.

ಗದಗ ಕ್ಷೇತ್ರದಲ್ಲೇ ಬಾಕಿ: ವಿಕಲಚೇತನ ಹಾಗೂ ಹಿರಿಯ ನಾಗಕರಿಕರ ಸಬಲೀಕರಣ ಇಲಾಖೆಯಿಂದ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ವಾರ್ಷಿಕ 18-20 ತ್ರಿಚಕ್ರ ವಾಹನ ಬಿಡುಗಡೆಯಾಗುತ್ತವೆ. ಆದರೆ, 2017-18ನೇ ಸಾಲಿನಲ್ಲಿ ಗದಗಿನ 78 ಸೇರಿದಂತೆ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಿಗೆ ಒಟ್ಟು 138 ತ್ರಿಚಕ್ರ ವಾಹನಗಳು ಮಂಜೂರಾಗಿದ್ದವು. ಮಾರಾಟ ಮಳಿಗೆಯಿಂದ ಕಳೆದ ಜೂನ್‌ ತಿಂಗಳಲ್ಲೇ ಪೂರೈಕೆಯಾಗಿದ್ದು, ಗದಗ ಕ್ಷೇತ್ರದಲ್ಲಿ ಮಾತ್ರ ವಿತರಣೆಯಾಗಿಲ್ಲ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು. 

ಗದುಗಿಗೆ ಹೆಚ್ಚು ವಾಹನ: ಕಳೆದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಥ್‌ ರಾಜ್‌ ಸಚಿವರೂ ಆಗಿದ್ದ ಸ್ಥಳೀಯ ಶಾಸಕ ಎಚ್‌. ಕೆ. ಪಾಟೀಲ, ತಮ್ಮ ಸ್ವಕ್ಷೇತ್ರದ ವಿಕಲಚೇತನರಿಗೆ ಗರಿಷ್ಠ ಸಂಖ್ಯೆಯಲ್ಲಿ ತ್ರಿಚಕ್ರ ವಾಹನ ಒದಗಿಸಲು ಉದ್ದೇಶಿಸಿದ್ದರು. ಅದರಂತೆ ವಿಕಲಚೇತನ ಹಾಗೂ ಹಿರಿಯ ನಾಗಕರಿಕರ ಸಬಲೀಕರಣ ಇಲಾಖೆಯಿಂದ ಗದುಗಿಗೆ ಹೆಚ್ಚುವರಿಯಾಗಿ 60 ಸೇರಿದಂತೆ ಒಟ್ಟು 78 ವಾಹನಗಳನ್ನು ಮಂಜೂರು ಮಾಡಿಸಿದ್ದರು.

ಕಳೆದ ಮಾರ್ಚ್‌ನಲ್ಲೇ ಬಿಡುಗಡೆ ಆಗಬೇಕಿದ್ದ ತ್ರಿಚಕ್ರ ವಾಹನಗಳು ವಿಧಾನಸಭಾ ಚುನಾವಣೆ ಘೋಷಣೆಯಿಂದಾಗಿ ಜೂನ್‌ನಲ್ಲಿ ಬಂದಿವೆ. ಈ ವೇಳೆಗೆ ನೂತನ ಸರಕಾರ ಅಧಿಕಾರಕ್ಕೆ ಬಂದಿದ್ದರೂ ಸಚಿವ ಸಂಪುಟ ರಚನೆ, ಮತ್ತಿತರೆ ಕಾರಣಗಳಿಂದಾಗಿ ತ್ರಿಚಕ್ರ ವಾಹನಗಳ ವಿತರಣೆ ನೆನೆಗುದಿಗೆ ಬಿದ್ದಿತ್ತು. ಆನಂತರ ಆ. 15ರ ಸ್ವಾತಂತ್ರ್ಯೋತ್ಸವ ದಿನದಂದು ವಿತರಣೆಗೆ ಇಲಾಖೆಯಿಂದ ಸಿದ್ಧತೆ ನಡೆದಿತ್ತಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಡ್ಡಿಯಾಗಿ ಮತ್ತಷ್ಟು ವಿಳಂಬವಾಗುತ್ತಿದೆ ಎನ್ನಲಾಗಿದೆ.

ನಿಂತಲ್ಲೇ ತುಕ್ಕು ಹಿಡಿಯುತ್ತಿವೆ
ವಿಕಲಚೇತನರಿಗೆ ಆಸರೆಯಾಗಲಿ ಎಂಬ ಉದ್ದೇಶದಿಂದ ಮಂಜೂರಾಗಿರುವ ತ್ರಿಚಕ್ರ ವಾಹನಗಳು ಫಲಾನುಭವಿಗಳ ಕೈಸೇರುವ ಮುನ್ನವೇ ಕಳೆಗುಂದುತ್ತಿವೆ. ಕಸಾಪ ಭವನದ ಆವರಣದಲ್ಲಿ ನಿಲ್ಲಿಸಿರುವ ವಾಹನಗಳಿಗೆ ನೆರಳಿಲ್ಲದೇ ಬಿಸಿಲಿಗೆ ಬಣ್ಣ ಮಾಸುತ್ತಿದೆ. ಮಳೆಯಿಂದಾಗಿ ವಾಹನಗಳ ಕಬ್ಬಿಣದ ಬಿಡಿ ಭಾಗಗಳು ತುಕ್ಕು ಹಿಡಿಯುತ್ತಿವೆ. ಅಲ್ಲದೇ ಕಿಡಿಕೇಡಿಗಳ ಕೃತ್ಯದಿಂದ ಸಣ್ಣಪುಟ್ಟ ಬಿಡಿಭಾಗಗಳು ಜಖಂಗೊಂಡಿವೆ. ಇನ್ನೂ ಕೆಲ ವಾಹನಗಳ ನಂಬರ್‌ ಪ್ಲೇಟ್‌ಗಳೇ ಕಣ್ಮರೆಯಾಗಿರುವುದು ವಿಪರ್ಯಾಸ.

ತ್ರಿಚಕ್ರ ವಾಹನಗಳಿಗಾಗಿ ಪ್ರತಿನಿತ್ಯ ಫಲಾನುಭವಿಗಳು ಕಚೇರಿಗೆ ಅಲೆಯುತ್ತಾರೆ. ವಾಹನಗಳು ಬಂದಾಗಿನಿಂದ ಶಾಸಕ ಎಚ್‌.ಕೆ. ಪಾಟೀಲ ಅವರ ದಿನಾಂಕ ನಿಗದಿಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದರೆ, ವಿತರಣಾ ಸಮಾರಂಭಕ್ಕೆ ದಿನಾಂಕ ನಿಗದಿಯಾಗುತ್ತಿಲ್ಲ. ಶಾಸಕರು ಒಪ್ಪಿದರೆ ಸೆ. 4 ಅಥವಾ 5ರಂದು ವಿತರಿಸಲು ಚಿಂತನೆ ನಡೆಸಿದ್ದೇವೆ.
ಆಶು ನದಾಫ್‌, 
ವಿಕಲಚೇತನ ಹಾಗೂ ಹಿರಿಯ ನಾಗಕರಿಕರ
ಸಬಲೀಕರಣ ಇಲಾಖೆ ಅಧಿಕಾರಿ

ತ್ರಿಚಕ್ರ ವಾಹನಕ್ಕಾಗಿ ಕಳೆದ ಬಾರಿಯೂ ಅರ್ಜಿ ಹಾಕಿದ್ದೆ, ಬಂದಿರಲಿಲ್ಲ. ಈ ಬಾರಿ ಮಂಜೂರಾಗಿದ್ದರೂ ವಿತರಣೆಯಾಗುತ್ತಿಲ್ಲ. ಬೈಕ್‌ ಕೋಡ್ರಿ ಅಂತಾ ಕೇಳ್ಳೋದ್ಕ ವಾರದಲ್ಲಿ ಎರಡು ದಿನ ವಿಕಲಚೇತನರ ಕಚೇರಿಗೆ ಬರುತ್ತಾ ಇದ್ದೇನೆ. ಅದ್ಯಾವಾಗ ಕೊಡ್ತಾರೋ ಗೊತ್ತಿಲ್ಲ.
ಫಲಾನುಭವಿ

ವೀರೇಂದ್ರ ನಾಗಲದಿನ್ನಿ 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.