ನಿಧಿಗಾಗಿ ಭೂಮಿ ಅಗೆದರು
Team Udayavani, Sep 8, 2018, 4:23 PM IST
ಗದಗ: ನಿಧಿ ಆಸೆಯಿಂದ ದುಷ್ಕರ್ಮಿಗಳು ತಾಲೂಕಿನ ಲಕ್ಕುಂಡಿ ಸಮೀಪದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಬಸವಣ್ಣ ಮೂರ್ತಿ ಕೆಳಗೆ ಭೂಮಿಯನ್ನು ಅಗೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕದಾಂಪುರ ರಸ್ತೆಯಲ್ಲಿರುವ ಸೋಮೇಶ್ವರ ದೇವಸ್ಥಾನದ ಈಶ್ವರ ಲಿಂಗದ ಮುಂಭಾಗದಲ್ಲಿ ಪ್ರತಿಷ್ಠಾಪಿತ ಬಸವಣ್ಣನ ಮೂರ್ತಿಯ ಕೆಳಗೆ ಭೂಮಿಯನ್ನು ಅಗೆಯಲಾಗಿದೆ. ಲಕ್ಕುಂಡಿ ಗ್ರಾಮದ ಅರ್ಚಕ ಸಿದ್ದರಾಮಯ್ಯ ಮಾಯಾಕರಮಠ ಅವರು ಪ್ರತಿನಿತ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ, ಲಕ್ಕುಂಡಿ ಗ್ರಾಮದಲ್ಲಿ ಹಾಲಗೊಂಡ ಬಸವೇಶ್ವರ ಜಾತ್ರೆ ನಿಮಿತ್ತ ಒಂದು ದಿನ ದೇವಸ್ಥಾನಕ್ಕೆ ಬಂದಿರಲಿಲ್ಲ. ಈ ಮಧ್ಯೆ ಯಾರೋ ದುಷ್ಕರ್ಮಿಗಳು ದೇವಸ್ಥಾನದಲ್ಲಿರುವ ಬಸವೇಶ್ವರ ಮೂರ್ತಿಯನ್ನು ತೆಗೆದು, ಅದರ ಕೆಳಗೆ ಸುಮಾರು 12 ಅಡಿ ಆಳಕ್ಕೆ ತೋಡಿದ್ದಾರೆ. ಬಳಿಕ ಎಂದಿನಂತೆ ಅರ್ಚಕರು ಗುರುವಾರ ದೇವಸ್ಥಾನಕ್ಕೆ ಭೇಟಿ ನಿಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.
ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುವ ಸೋಮೇಶ್ವರ ದೇವಸ್ಥಾನದ ಒಳಗೆ ಸುಂದರ ಕೆತ್ತನೆಯಿಂದ ಕೂಡಿದೆ. ಆದರೆ, ಘಟನೆ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ