ನಿಧಿಗಾಗಿ ಭೂಮಿ ಅಗೆದರು
Team Udayavani, Sep 8, 2018, 4:23 PM IST
ಗದಗ: ನಿಧಿ ಆಸೆಯಿಂದ ದುಷ್ಕರ್ಮಿಗಳು ತಾಲೂಕಿನ ಲಕ್ಕುಂಡಿ ಸಮೀಪದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಬಸವಣ್ಣ ಮೂರ್ತಿ ಕೆಳಗೆ ಭೂಮಿಯನ್ನು ಅಗೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕದಾಂಪುರ ರಸ್ತೆಯಲ್ಲಿರುವ ಸೋಮೇಶ್ವರ ದೇವಸ್ಥಾನದ ಈಶ್ವರ ಲಿಂಗದ ಮುಂಭಾಗದಲ್ಲಿ ಪ್ರತಿಷ್ಠಾಪಿತ ಬಸವಣ್ಣನ ಮೂರ್ತಿಯ ಕೆಳಗೆ ಭೂಮಿಯನ್ನು ಅಗೆಯಲಾಗಿದೆ. ಲಕ್ಕುಂಡಿ ಗ್ರಾಮದ ಅರ್ಚಕ ಸಿದ್ದರಾಮಯ್ಯ ಮಾಯಾಕರಮಠ ಅವರು ಪ್ರತಿನಿತ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ, ಲಕ್ಕುಂಡಿ ಗ್ರಾಮದಲ್ಲಿ ಹಾಲಗೊಂಡ ಬಸವೇಶ್ವರ ಜಾತ್ರೆ ನಿಮಿತ್ತ ಒಂದು ದಿನ ದೇವಸ್ಥಾನಕ್ಕೆ ಬಂದಿರಲಿಲ್ಲ. ಈ ಮಧ್ಯೆ ಯಾರೋ ದುಷ್ಕರ್ಮಿಗಳು ದೇವಸ್ಥಾನದಲ್ಲಿರುವ ಬಸವೇಶ್ವರ ಮೂರ್ತಿಯನ್ನು ತೆಗೆದು, ಅದರ ಕೆಳಗೆ ಸುಮಾರು 12 ಅಡಿ ಆಳಕ್ಕೆ ತೋಡಿದ್ದಾರೆ. ಬಳಿಕ ಎಂದಿನಂತೆ ಅರ್ಚಕರು ಗುರುವಾರ ದೇವಸ್ಥಾನಕ್ಕೆ ಭೇಟಿ ನಿಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.
ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುವ ಸೋಮೇಶ್ವರ ದೇವಸ್ಥಾನದ ಒಳಗೆ ಸುಂದರ ಕೆತ್ತನೆಯಿಂದ ಕೂಡಿದೆ. ಆದರೆ, ಘಟನೆ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು