ಆರೋಗ್ಯ ಇಲಾಖೆಯಲ್ಲೇ ನಕಲಿ ವೈದ್ಯ ಪತ್ತೆ!


Team Udayavani, Sep 9, 2018, 3:19 PM IST

9-sepctember-20.jpg

ಗದಗ: ಶಿರಹಟ್ಟಿ ತಾಲೂಕಿನಲ್ಲಿ ಖೊಟ್ಟಿ ದಾಖಲಾತಿಗಳನ್ನು ಸಲ್ಲಿಸಿ, ನಕಲಿ ವೈದ್ಯನೊಬ್ಬ ಆರೋಗ್ಯ ಇಲಾಖೆಯಲ್ಲಿ ನೇಮಕಗೊಂಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಅಸಲಿ ವೈದ್ಯನ ಪೋಷಕರು ಬೆಂಗಳೂರಿನ ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ(ಕೆಎಂಸಿ) ದೂರು ನೀಡಿದ್ದಾರೆ.

ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಸರಕಾರಿ ಆಸ್ಪತ್ರೆಯಲ್ಲಿ ಖಾಲಿಯಿದ್ದ ಎಂಬಿಬಿಎಸ್‌ ವೈದ್ಯರ ಹುದ್ದೆ ಭರ್ತಿಗಾಗಿ ಕಳೆದ ಮಾರ್ಚ್‌ನಲ್ಲಿ ನೇರ ಸಂದರ್ಶನ ನಡೆಸಲಾಗಿತ್ತು. ಆಗ ಡಾ| ವಿಕಾಸ್‌ ಪಾಟೀಲ ಎಂಬ ಹೆಸರಿನ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಿದ್ದ ವ್ಯಕ್ತಿ ನೇಮಕಗೊಂಡಿದ್ದಾನೆ. ಬಳಿಕ ಏಪ್ರಿಲ್‌ನಿಂದ ನಾಲ್ಕು ತಿಂಗಳ ಕಾಲ ಬನ್ನಿಕೊಪ್ಪ ಹಾಗೂ ಲಕ್ಷ್ಮೇಶ್ವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯನಾಗಿ ಚಿಕಿತ್ಸೆ ಕರ್ತವ್ಯ ನಿರ್ವಹಿಸಿದ್ದಾನೆ. 

ಅಲ್ಲದೇ, ಯಾರೊಬ್ಬರಿಗೂ ಅನುಮಾನ ಬಾರದಂತೆ ವೈದ್ಯನ ಸೇವೆಯನ್ನೂ ನಿಭಾಯಿಸಿರುವುದು ಸೋಜಿಗದ ಸಂಗತಿ. ಕಳೆದ ನಾಲ್ಕು ತಿಂಗಳು ಸರಕಾರದಿಂದ ಮಾಸಿಕ 46 ಸಾವಿರ ರೂ. ಸಂಬಳ ಪಡೆದಿರುವ ಡಾ|ವಿಕಾಸ್‌ ಪಾಟೀಲ, ಆನಂತರ ಅನಾರೋಗ್ಯದ ನೆಪವೊಡ್ಡಿ ಆ. 8ರಿಂದ ಕರ್ತವ್ಯಕ್ಕೆ ಹಾಜರಾಗಿಲ್ಲ. ಬಳಿಕ ಡಿಎಚ್‌ಒ ಸೇರಿದಂತೆ ಇಲಾಖೆ ಅಧಿಕಾರಿಗಳ ಮೊಬೈಲ್‌ ಕರೆಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಹೇಳಲಾಗಿದೆ.

ಪ್ರಕರಣ ಬಯಲಾಗಿದ್ದು ಹೇಗೆ? ಬೆಳಗಾವಿ ಮೂಲದ ಡಾ| ವಿಕಾಸ ಪಾಟೀಲ ಎಂಬ ವ್ಯಕ್ತಿ ಬೇರೆಡೆ ಮಕ್ಕಳಶಾಸ್ತ್ರದ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುತ್ತಿದ್ದಾನೆ. ಆದರೆ, ಅದೇ ಹೆಸರು ಹಾಗೂ ವಿಳಾಸವನ್ನು ಹೊಂದಿರುವ ಖೊಟ್ಟಿ ದಾಖಲೆಗಳನ್ನು ಸಲ್ಲಿಸಿರುವ ಅನಾಮಧೇಯ ವ್ಯಕ್ತಿಯೊಬ್ಬ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಭರ್ತಿಯಾಗಿದ್ದಾನೆ.

ಈ ಕುರಿತು ಮಾಹಿತಿ ಪಡೆದ ಬೆಳಗಾವಿಯ ಡಾ| ವಿಕಾಸ ಪಾಟೀಲ ಅವರ ತಂದೆ ಅನಿಲ್‌ ಕುಮಾರ್‌ ಪಾಟೀಲ ಅವರು ಸೆ. 5ರಂದು ಗದಗ ಜಿಲ್ಲಾ ಆರೋಗ್ಯಾ ಧಿಕಾರಿ ಕಚೇರಿಗೆ ಭೇಟಿ ನೀಡಿ ಜಿಲ್ಲಾ ವೈದ್ಯಾ ಧಿಕಾರಿಗೆ ವಿಷಯ ತಿಳಿಸಿದಾಗಲೇ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಶುಕ್ರವಾರ(ಸೆ.7) ಬೆಂಗಳೂರಿನ ಕೆಎಂಸಿಗೆ ಅನಿಲ್‌ ಕುಮಾರ್‌ ಪಾಟೀಲ ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ಇಲಾಖೆಗೆ ಸಲ್ಲಿಕೆಯಾಗಿರುವ ದಾಖಲೆಗಳು ನಕಲಿ ಎಂದು ಕಂಡುಬಂದಿವೆ. ಆದರೂ ಕೆಎಂಸಿಯಲ್ಲಿ ದಾಖಲೆಗಳು ಪರಿಶೀಲನೆ ನಡೆದು, ಕೆಎಂಸಿ ನೀಡುವ ಸೂಚನೆ ಮೇರೆಗೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಡಿಎಚ್‌ಒ ಡಾ| ಎನ್‌.ಎಸ್‌. ಹೊನಕೇರಿ ಮಾಹಿತಿ ನೀಡಿದರು. ಅಲ್ಲದೆ ನಕಲಿ ವ್ಯಕ್ತಿ ಎನ್ನಲಾದ ಡಾ| ವಿಕಾಸ್‌ ಪಾಟೀಲ ಕುಂದಗೋಳ ತಾಲೂಕಿನ ಹರ್ಲಾಪುರ ಗ್ರಾಮದ ಯುವತಿಯನ್ನು ಸೆ. 6ರಂದು ಮದುವೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.