ರೈತರೇ ಕಾಲುವೆ ಗೇಟ್‌ ತೆರೆದು ನೀರು ಬಿಟ್ರಾ


Team Udayavani, Sep 12, 2018, 4:07 PM IST

12-sepctember-20.jpg

ಮುಂಡರಗಿ: ತುಂಗಭದ್ರಾ ಜಲಾಶಯ ಭರ್ತಿಯಾಗಿ ಹರಿಯುತ್ತಿದ್ದರೂ ಶಿಂಗಟಾಲೂರ ಏತ ನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ತೇವಾಂಶ ಕೊರತೆಯಿಂದಾಗಿ ಬೆಳೆಗಳು ಒಣಗುತ್ತಿವೆ ಎಂದು ಅಧಿಕಾರಿಗಳ ವಿರುದ್ಧ ಡಂಬಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಡಂಬಳ ಗ್ರಾಮಸ್ಥರು ಡೋಣಿ ಗ್ರಾಮದಿಂದ ಗದಗ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಶಿಂಗಟಾಲೂರ ಏತ ನೀರಾವರಿ ಯೋಜನೆಯ 3ನೇ ಕಾಲುವೆ ಮೂಲಕ ಡಂಬಳದ ವಿಕ್ಟೋರಿಯಾ ಮಹಾರಾಣಿ ಕೆರೆಗೆ ಸಮರ್ಪಕವಾಗಿ ನೀರು ಸರಬರಾಜು ಆಗುತ್ತಿಲ್ಲ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಬೀರಪ್ಪ ಬಂಡಿ, ಯುವ ಮುಖಂಡ ಗೋಣಿಬಸಪ್ಪ ಕೊರ್ಲಹಳ್ಳಿ ನೇತೃತ್ವದಲ್ಲಿ ಹಲವು ರೈತರು ಮಂಗಳವಾರ ಕಾಲುವೆಗೆ ತೆರಳಿ ಗೇಟನ್ನು ತಿರುಗಿಸಿ ಡಂಬಳ ಕೆರೆಗೆ ನೀರನ್ನು ಬಿಟ್ಟರು.

ಬೆಳೆಗಳು ತೇವಾಂಶ ಕೊರತೆಯಿಂದ ಒಣಗುತ್ತಿವೆ. ಹದಿನೈದು ದಿನಗಳಿಂದ ಅಧಿಕಾರಿಗಳಿಗೆ ಡಂಬಳ ಕೆರೆಗೆ ನೀರು ಭರ್ತಿ ಮಾಡಿ ಎಂದು ದೂರವಾಣಿ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ. ಗದಗ ನಗರಕ್ಕೆ ಮಾತ್ರ ನೀರು ಪೂರೈಕೆಯಾದರೆ ನಾವು ಬದುಕುವುದು ಹೇಗೆ. ಕೆರೆ ಖಾಲಿಯಾಗುತ್ತಿದೆ. ತುಂಗಭದ್ರಾ ಜಲಾಶಯದಲ್ಲಿ ನೀರು ಇದ್ದರೂ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಅಧಿಕಾರಿಗಳು ನಿರ್ಲಕ್ಷ್ಯತನದಿಂದ ಬೆಳೆಗಳು ಒಣಗುತ್ತಿವೆ. ಮೂರು ಸಾವಿರ ಏಕರೆ ನೀರಾವರಿ ಪ್ರದೇಶಕ್ಕೆ ಅನುಕೂಲವಾಗುವ ಬೃಹತ್‌ ಕೆರೆ ಇದ್ದು, ಇದನ್ನು ನಂಬಿ ರೈತರು ಸಾವಿರಾರೂ ರೂಪಾಯಿಗಳ ಮಾಡಿ ಸಾಲ ಬಿತ್ತನೆ ಮಾಡಿದ್ದಾರೆ. ಒಂದು ವೇಳೆ ನಮ್ಮೂರ ಕೆರೆಗೆ ನೀರು ಸಮರ್ಪಕವಾಗಿ ಸಂಗ್ರಹವಾಗದೆ ಹೋದರೆ ಎಲ್ಲ ರೈತರು ಸೇರಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಯುವ ಮುಖಂಡ ಗೋಣಿಬಸಪ್ಪ ಕೋರ್ಲಹಳ್ಳಿ, ಜಿಪಂ ಮಾಜಿ ಉಪಾಧ್ಯಕ್ಷ ಬೀರಪ್ಪ ಬಂಡಿ ಕರೆ ನೀಡಿದರು. ನಂತರ ಉಪಹಶೀಲ್ದಾರ್‌ ಡಿ.ಟಿ. ವಾಲ್ಮೀಕಿ ಅವರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಪಂ ಅಧ್ಯಕ್ಷ ಬಸವರಾಜ ಎಂ. ಗಂಗಾವತಿ, ಹಿರಿಯರಾದ ಜಿ.ವಿ. ಹಿರೇಮಠ, ವೈ.ಎಚ್‌. ತಳವಾರ, ರೈತ ಮುಖಂಡರಾದ ವೀರೂಪಾಕ್ಷಪ್ಪ ಯಲಿಗಾರ, ಶೇಖಪ್ಪ ಗೋಡಿ, ಶೇಖಪ್ಪ ಕೊಂತಿಕೊಲ್ಲ, ಮಲ್ಲಪ್ಪ ಕರಡ್ಡಿ, ರೇವಣಸಿದ್ದಪ್ಪ ಕರಿಗಾರ, ರುದ್ರಪ್ಪ ಕೊರ್ಲಗಟ್ಟಿ, ಕುಮಾರಡ್ಡಿ ಪ್ಯಾಟಿ, ರವಿ ತಾರಿಕೊಪ್ಪ ಸೇರಿದಂತೆ ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.