ನಾಳೆಯಿಂದ ಗದಗ ಉತ್ಸವ ಕೈಗಾರಿಕಾ ವಸ್ತು ಪ್ರದರ್ಶನ


Team Udayavani, Sep 19, 2018, 4:04 PM IST

19-sepctember-18.jpg

ಗದಗ: ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಪಂ ಹಾಗೂ ನಬಾರ್ಡ್‌ ಆಶ್ರಯದಲ್ಲಿ ಸೆ.20ರಿಂದ 24 ರವರೆಗೆ ಐದು ದಿನಗಳ ಕಾಲ ನಗರದಲ್ಲಿ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ‘ಗದಗ ಉತ್ಸವ-2018’ ಆಯೋಜಿಸಲಾಗಿದೆ ಎಂದು ಕೈಗಾರಿಕಾ ವಸ್ತು ಪ್ರದರ್ಶನ ಸಮಿತಿ ಚೇರಮನ್‌ ಆನಂದ ಎಲ್‌. ಪೊತ್ನೀಸ್‌ ಹಾಗೂ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಬಾಬಣ್ಣ ಶಾಬಾದಿಮಠ ತಿಳಿಸಿದರು.

ನಗರದಲ್ಲಿ ಮಂಗಳವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಐದು ದಿನಗಳ ಕಾಲ ಕೈಗಾರಿಕಾ ವಸ್ತು ಪ್ರದರ್ಶನದ ‘ಗದಗ ಉತ್ಸವ’ ಆಯೋಜಿಸಲಾಗಿದೆ. ಸೆ.20ರಂದು ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಮಹೇಶ ಉದ್ಘಾಟಿಸುವರು. ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಬಾಬಣ್ಣ ಶಾಬಾದಿಮಠ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಶಾಸಕರು, ಸಂಸದರು, ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.

100 ಮಳಿಗೆ ನಿರ್ಮಾಣ: ಗುಡಿ ಹಾಗೂ ಮಧ್ಯಮ ಕೈಗಾರಿಕೆ ಉತ್ಪನ್ನಗಳಿಗೆ ವೇದಿಕೆ ಕಲ್ಪಿಸುವುದು ಹಾಗೂ ಉತ್ಪನ್ನಗಳನ್ನು ಜನರಿಗೆ ಪರಿಚಯಿಸುವುದು ‘ಗದಗ ಉತ್ಸವ’ದ ಮೂಲ ಉದ್ದೇಶವಾಗಿದೆ. ಈ ಉತ್ಸವದಲ್ಲ 100 ಮಳಿಗೆ ನಿರ್ಮಿಸಲಾಗಿದ್ದು, ಶೇ.50ರಷ್ಟು ಮಳಿಗೆಗಳನ್ನು ಗುಡಿ ಕೈಗಾರಿಕೆ, ಜಿಲ್ಲಾ ಕೈಗಾರಿಕಾ ಕೇಂದ್ರ, ನಬಾರ್ಡ್‌ ಹಾಗೂ ಜಿಪಂ ಮಳಿಗೆಗಳಿಗೆ ಉಚಿತವಾಗಿ ನೀಡಲಾಗುವುದು. ಇನ್ನುಳಿದವುಗಳನ್ನು ಇತರೆ ಕೈಗಾರಿಕೆ ಉತ್ಪನ್ನಗಳಿಗೆ ಬಾಡಿಗೆ ದರದಲ್ಲಿ ನೀಡಲಾಗುವುದು.

ಉತ್ಸವದಲ್ಲಿ ರಾಮನಗರ, ಮೈಸೂರು, ಚೆನ್ನಪಟ್ಟಣ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳ ಉತ್ಪನ್ನಗಳು ಪ್ರದರ್ಶನ ಹಾಗೂ ಮಾರಾಟಕ್ಕೆ ಸಿಗಲಿದ್ದು, ಸುಮಾರು 25 ಸಾವಿರ ಜನ ಬರುವ ನಿರೀಕ್ಷೆ ಇದೆ. ಇದರೊಂದಿಗೆ ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿದಿನ ಆಹ್ವಾನಿತ ಕಲಾವಿದರ ಜೊತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಶ್ರೇಷ್ಠ ಉದ್ಯಮಿ, ವರ್ತಕ ಪ್ರಶಸ್ತಿ: ಸೆ.23ರಂದು ಸಂಜೆ 5:30ಕ್ಕೆ ನಡೆಯುವ ಸಮಾರಂಭದಲ್ಲಿ ಸೂಡಿ-ಗದಗ ಜುಕ್ತಿಹಿರೇಮಠದ ಡಾ| ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸ್ಥಳೀಯ ಉದ್ಯಮಿ ವಿಜಯಕುಮಾರ ಫ. ಗಡ್ಡಿ ಅವರಿಗೆ ಶ್ರೇಷ್ಠ ಉದ್ಯಮಿ, ಸಿದ್ದರಾಮಪ್ಪ ಉಮಚಗಿ (ಗದಗ), ಬಸಪ್ಪ ಶಂಕ್ರಪ್ಪ ಪಲ್ಲೇದ (ಗಜೇಂದ್ರಗಡ), ಮಂಜುನಾಥ ವೆಂಕಟೇಶ ಆನೆಗುಂದಿ (ನರಗುಂದ), ಅಂದಪ್ಪ ಬಸವಣ್ಣೆಪ್ಪ ಗೋಡಿ (ಮುಂಡರಗಿ) ಹಾಗೂ ಸುಲೇಮಾನಸಾಬ ನವಾಸಾಬ ಕಣಕೆ (ಲಕ್ಷ್ಮೇಶ್ವರ) ಅವರಿಗೆ ಶ್ರೇಷ್ಠ ವರ್ತಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸೆ.24ರಂದು 5:30ಕ್ಕೆ ಶ್ರೇಷ್ಠ ಮಳಿಗೆ ಪ್ರಶಸ್ತಿ ವಿತರಣೆ ಹಾಗೂ ಸಮಾರೋಪ ನಡೆಯಲಿದೆ. ಚೇಂಬರ್‌ ಅಧ್ಯಕ್ಷ ಬಾಬಣ್ಣ ಶಾಬಾದಿಮಠ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಮಂಜುನಾಥ ಚವ್ಹಾಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಸಂತೋಷಬಾಬು, ಡಿಐಸಿ ಜಂಟಿ ನಿರ್ದೇಶಕ ಟಿ. ದಿನೇಶ, ಖಾಗ್ರಾ ಉಪನಿರ್ದೇಶಕ ಆರ್‌.ಜಿ. ಕುಲಕರ್ಣಿ, ನಬಾರ್ಡ್‌ನ ರಾಮನ್‌ ಜಗದೀಶನ್‌ ಉಪಸ್ಥಿತರಿರುವರು ಎಂದರು.

ಈ ಉತ್ಸವಕ್ಕೆ 15 ಲಕ್ಷ ರೂ. ವೆಚ್ಚವಾಗಲಿದ್ದು, ಜಿಲ್ಲಾ ಕೈಗಾರಿಕಾ ಕೇಂದ್ರ 5 ಲಕ್ಷ ರೂ., ಜಿಪಂ 2.5 ಲಕ್ಷ ರೂ. ಹಾಗೂ ನಬಾರ್ಡ್‌ 50 ಸಾವಿರ ರೂ. ಅನುದಾನ ದೊರೆಯಲಿದೆ. ಇನ್ನುಳಿದಂತೆ ಇತರೆ ಮಳಿಗೆಗಳ ಬಾಡಿಗೆಯಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು. ಶರಣಪ್ಪ ಕುರಡಗಿ, ಶಕ ಟಿ. ದಿನೇಶ, ಎಂ.ಬಿ. ಸುರಕೋಡ, ವೀರಣ್ಣ ಬೇವಿನಮರದ, ಆರ್‌.ಬಿ. ದಾನಪ್ಪಗೌಡ್ರ, ಜಯದೇವ ಮೆಣಸಗಿ, ಟಿ.ಎಸ್‌. ಪಾಟೀಲ, ಮಧುಸೂಧನ ಪುಣೇಕರ, ಶರಣಬಸಪ್ಪ ಗುಡಿಮನಿ, ಬಸಣ್ಣ ಮಲ್ಲಾಡದ ಸುದ್ದಿಗೋಷ್ಠಿಯಲ್ಲಿದ್ದರು.

ಸ್ಮರಣ ಸಂಚಿಕೆ
ಕೈಗಾರಿಕಾ ವಸ್ತು ಪ್ರದರ್ಶನದ ‘ಗದಗ ಉತ್ಸವ-2018’ ಅಂಗವಾಗಿ ಈ ಬಾರಿಯೂ ಸ್ಮರಣ ಸಂಚಿಕೆ ಮತ್ತು ಜಿಲ್ಲೆಯ ಉದ್ದಿಮೆದಾರರ ಮಾಹಿತಿಯುಳ್ಳ ಇಂಡಸ್ಟ್ರಿಯಲ್‌ ಡೈರಿ ಬಿಡುಗಡೆ ಮಾಡಲಾಗುವುದು. ಈ ಮೂಲಕ ಜಿಲ್ಲೆಯ ಮಾಹಿತಿ ಹಂಚಿಕೆಗೆ ಇದು ಪೂರಕವಾಗಲಿದೆ.
. ಬಾಬಣ್ಣ ಶಾಬಾದಿಮಠ,
ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.