ಶಿಕ್ಷಕರಿಗೆ ಶಿಷ್ಯವೇತನ ಅರ್ಜಿ ಭಾರ!


Team Udayavani, Sep 21, 2018, 3:44 PM IST

21-sepctember-19.jpg

ಗಜೇಂದ್ರಗಡ: ಮಕ್ಕಳ ಬೋಧನೆಗೆ ಹೆಚ್ಚು ಒತ್ತು ನೀಡಬೇಕಾದ ಶಿಕ್ಷಕರಿಗೆ ಈಗ ಮೊತ್ತ ಭಾರ ಎದುರಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರತಿ ವರ್ಷ ಒಂದರ ಮೇಲೊಂದರಂತೆ ಆದೇಶ ಜಾರಿಗೊಳಿಸುತ್ತಲೇ ಇದೆ. ಪಾಠಕ್ಕಿಂತ ಇಲಾಖೆ ಕೆಲಸವೇ ಶಿಕ್ಷಕರನ್ನು ಹೈರಾಣಾಗಿಸುವಂತೆ ಮಾಡಿದೆ. ಇದರಿಂದ ಯಾವಾಗ ಮುಕ್ತಿ ಹೊಂದುತ್ತೆವೆಯೋ ಎನ್ನುವಷ್ಟರಲ್ಲಿಯೇ ಈಗ ಮತ್ತೊಂದು ಕೆಲಸ ಮಾಡುವುದು ಅನಿವಾರ್ಯವಾಗಿದೆ.

ಈ ಹಿಂದೆ 1ರಿಂದ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುವ ಮಕ್ಕಳ ಶಿಷ್ಯ ವೇತನ ಅರ್ಜಿ ಭರ್ತಿ ಮಾಡಿ ದಾಖಲೆ ಸಂಗ್ರಹಿಸಿ ಸಮಾಜ ಕಲ್ಯಾಣ ಇಲಾಖೆಗೆ ಶಿಕ್ಷಕರು ಹಸ್ತಾಂತರಿಸುತ್ತಿದ್ದರು. ಯಾವುದೇ ಗೊಂದಲವಿಲ್ಲದೇ ಈ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ ಈ ಬಾರಿ ಹೊಸ ನಿಯಮ ಜಾರಿಗೊಳಿಸಿದೆ. ವ್ಯಾಸಾಂಗನಿರತ ವಿದ್ಯಾರ್ಥಿಗಳ ಶಿಷ್ಯ ವೇತನ ಅರ್ಜಿಗಳನ್ನು ಆಯಾ ಶಾಲೆ ಶಿಕ್ಷಕರೇ ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕಾಗಿದೆ. ಇದು ಶಿಕ್ಷಕರಿಗೆ ನುಂಗಲಾರದ ತುತ್ತಾಗಿದೆ.

ಕೈ ಕೊಡುತ್ತಿರುವ ಸರ್ವರ್‌: ಯಾವುದೇ ಶಾಲೆ ಮಕ್ಕಳು ಶಿಷ್ಯವೇತನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯೋಪಾದ್ಯಾಯರಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಹೀಗಾಗಿ ಪ್ರತಿ ಶಾಲೆಯಲ್ಲಿನ ಅಂದಾಜು 150ರಿಂದ 200 ವಿದ್ಯಾರ್ಥಿಗಳ ದಾಖಲೆ ಸಂಗ್ರಹಿಸಿ ಸಮಾಜ ಕಲ್ಯಾಣ ಇಲಾಖೆ ಸೆ. 1ರಿಂದ ಆರಂಭಿಸಿರುವ ಎಸ್‌ಎಸ್‌ಪಿ ಕರ್ನಾಟಕ ಎನ್ನುವ ವೆಬ್‌ಸೈಟ್‌ಗೆ ಅಪ್‌ ಲೋಡ್‌ ಮಾಡಬೇಕು. ಆದರೆ ಸರ್ವರ್‌ ಸಮಸ್ಯೆಯಿಂದಾಗಿ ಶಿಕ್ಷಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಶಾಲೆಯಲ್ಲೇ ಜಾಗರಣೆ: ಮಕ್ಕಳಿಗೆ ಪಾಠ ಮಾಡಿ ಶಾಲೆ ಮುಗಿದ ತಕ್ಷಣ ಮನೆಗೆ ಹಿಂತಿರುಗುತ್ತಿದ್ದ ಶಿಕ್ಷಕರಿಗೀಗ, ಮಕ್ಕಳ ಸ್ಕಾಲರ್‌ ಶಿಫ್‌ ಅರ್ಜಿ ಹಾಕಲು ಮಧ್ಯರಾತ್ರಿ ವರೆಗೂ ಶಾಲೆಯಲ್ಲೇ ಉಳಿಯುವಂತಹ ದುಸ್ಥಿತಿ ಬಂದೊದಗಿದೆ.

ಕೇಂದ್ರಗಳು ಫುಲ್‌ರಶ್‌: ಶಿಷ್ಯವೇತನಕ್ಕಾಗಿ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‌ಲೈನ್‌ ನಲ್ಲಿ ಅಪಲೋಡ್‌ ಮಾಡಬೇಕು ಎಂದು ಶಿಕ್ಷಣ ಇಲಾಖೆ ಶಿಕ್ಷಕರಿಗೆ ಆದೇಶಿಸಿದೆ. ಆದರೆ ಕಂಪ್ಯೂಟರ್‌ ಸೌಲಭ್ಯಗಳಿಲ್ಲ. 8ರಿಂದ 10 ಶಾಲೆಗಳನ್ನು ಸೇರಿ 1 ಕಂಪ್ಯೂಟರ್‌ ಇರುವ ಶಾಲೆಯನ್ನು ಕೇಂದ್ರವನ್ನಾಗಿ ಹಂಚಿಕೆ ಮಾಡಿದ್ದಾರೆ. ಈಗಾಗಲೇ ಸರ್ವರ ಸಮಸ್ಯೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಆ ಕೇಂದ್ರದಲ್ಲಿ ದಿನಗಟ್ಟಲೆ ವಿವಿಧ ಶಾಲೆ ಶಿಕ್ಷಕರು ಕಾಯಬೇಕಾದ ಸ್ಥಿತಿ ಎದುರಾಗಿದೆ. ಪಾಠಕ್ಕೆ ಬಿತ್ತು ಬ್ರೇಕ್‌: ಕಳೆದ ಎರಡು ವಾರಗಳಿಂದ ಶಿಷ್ಯವೇತನ ಅರ್ಜಿ ಭರ್ತಿ ಮಾಡುವ ಭರದಲ್ಲಿರುವ ಶಿಕ್ಷಕರಿಗೆ ದಿನಂಪ್ರತಿ ಶಿಷ್ಯವೇತನ ಅರ್ಜಿಗಳ ಸ್ವೀಕಾರದ್ದೆ ಕೆಲಸ ಆಗಿದೆ. ಇದರಿಂದ ಮಕ್ಕಳ ಪಠ್ಯ ಬೋಧನೆಗೆ ಹಿನ್ನಡೆಯಾಗುತ್ತಿದೆ. ಕಳೆದ 10 ದಿನಗಳಲ್ಲಿ ಶಾಲೆ ಬಹುಪಾಲು ಶಿಕ್ಷಕರು ಶಿಷ್ಯ ವೇತನ ಅರ್ಜಿ ಭರ್ತಿ ಮಾಡುವುದರಲ್ಲೇ ತೊಡಗಿರುವುದರಿಂದ  ಠಕ್ಕೆ ಬ್ರೇಕ್‌ ಬಿದ್ದಂತಾಗಿದೆ.

ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಸಂಬಂಧ ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಶೇ. 70ರಷ್ಟು ವಿದ್ಯಾರ್ಥಿಗಳ ಅರ್ಜಿಗಳನ್ನು ಆನಲೈನ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ.
. ಎನ್‌. ನಂಜುಂಡಯ್ಯ,
  ಕ್ಷೇತ್ರ ಶಿಕ್ಷಣಾಧಿಕಾರಿ

ವಿದ್ಯಾರ್ಥಿ ವೇತನಕ್ಕಾಗಿ ಶಿಕ್ಷಕರೇ ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕು ಎಂದು ಸರಕಾರ ಹೊಸ ನಿಯಮ ಜಾರಿಗೆ ತಂದಿದೆ. ಇದು ವಿದ್ಯಾರ್ಥಿಗಳ ಕಲಿಕೆಗೆ ತೀವ್ರತರವಾದ ತೊಂದರೆಯಾಗಿದೆ. ಇದಲ್ಲದೇ ಪೋಷಕರು ಸಮಯಕ್ಕೆ ಸರಿಯಾಗಿ ದಾಖಲೆ ಸಹ ಒದಗಿಸುತ್ತಿಲ್ಲ. ಹೀಗಾಗಿ ಸರಕಾರ ಶಿಷ್ಯವೇತನ ಆನ್‌ಲೈನ್‌ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಖಾಸಗಿ ಸಂಸ್ಥೆಗಳಿಗೆ ಒದಗಿಸಲು ಮುಂದಾಗಬೇಕು.
. ಬಿ.ಎನ್‌. ಕ್ಯಾತನಗೌಡರ,
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷೆ 

„ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.