ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಎಲ್ಲೆಡೆ ಸಿಗಲಿದೆ ಗೌರವ
Team Udayavani, Sep 30, 2018, 3:53 PM IST
ಮುಂಡರಗಿ: ಶಾಲೆಯಲ್ಲಿ ಮಕ್ಕಳಿಗೆ ಪ್ರಾಮಾಣಿಕತೆಯಿಂದ ಪಾಠ ಕಲಿಸುವ ಶಿಕ್ಷಕರಿಗೆ ಗೌರವ ಇದ್ದೇ ಇರುತ್ತದೆ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು. ಪಟ್ಟಣದ ಜ| ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಿಪಂ, ತಾಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಪುರಸಭೆ, ಶಿಕ್ಷಕರ ದಿನೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರು, ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಶಕ್ತಿಯು ಆಶಾಕಿರಣವಾಗಿ ಹೊಮ್ಮಲು, ದೇಶ ಕಟ್ಟಲು ಶಾಲಾ ಕೊಠಡಿಯಲ್ಲಿ ಗುರುವಾದವರು ಮಾರ್ಗದರ್ಶನ ಮಾಡಬೇಕು. ಶಿಕ್ಷಕರು ಶಾಲೆಗಳ ಬಗ್ಗೆ ಗಮನ ಕೊಟ್ಟರೆ ಸರಕಾರದ ಯೋಜನೆಗಳು ಸಫಲವಾಗಲು ಸಾಧ್ಯವಾಗಲಿದೆ. ಶಿಕ್ಷಕರು ಹೊಲ, ರಿಯಲ್ ಎಸ್ಟೇಟ್ ಮಾಡುವುದನ್ನು ಬಿಟ್ಟು ಪ್ರಾಮಾಣಿಕತೆಯಿಂದ ಕಲಿಸಬೇಕು. ಶಿಕ್ಷಕರು ನಿಷ್ಠೆಯಿಂದ ಸಮಾಜ ಮೆಚ್ಚುವಂತೆ ನಡೆದುಕೊಂಡು ಕೆಲಸ ಮಾಡಬೇಕು ಎಂದು ಕಳಕಪ್ಪ ಬಂಡಿ ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಮಣ್ಣ ಲಮಾಣಿ ಮಾತನಾಡಿ, ಜಿಲ್ಲೆಯಲ್ಲಿ ಮುಂಡರಗಿ ತಾಲೂಕಿನ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೊದಲ ಸ್ಥಾನದಲ್ಲಿ ಫಲಿತಾಂಶ ಪಡೆದಿದ್ದಾರೆ. ಈ ಸಾಧನೆ ಮಾಡುವಲ್ಲಿ ಎಲ್ಲ ಶಿಕ್ಷಕರ ಪಾತ್ರವು ಇದೆ. ಮುಂದಿನ ಶೈಕ್ಷಣಿಕ ವರ್ಷದಲ್ಲೂ ಉತ್ತಮ ಫಲಿತಾಂಶವನ್ನು ತರುವಲ್ಲಿ ಈಗಿನಿಂದಲೇ ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಹೇಳಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಜ| ನಾಡೋಜ ಡಾ| ಅನ್ನದಾನೀಶ್ವರ ಶಿವಯೋಗಿಗಳು ಆಶೀರ್ವಚನ ನೀಡಿ, ಶಿಕ್ಷಣದ ಮೂಲಕ ವ್ಯಕ್ತಿತ್ವ ರೂಪಗೊಳ್ಳಲಿದೆ. ವಿದ್ಯಾರ್ಥಿಗಳಲ್ಲಿ ದುಡಿದು ಉಣ್ಣುವ ಪ್ರವೃತ್ತಿಯ ಅರಿವು ಮೂಡಿಸಲು ಪ್ರಯತ್ನಿಸಬೇಕು. ದುಡಿಯದೇ ಇರುವ ಹಣವನ್ನು ಮುಟ್ಟದೇ, ದುಡಿದ ಹಣದಿಂದ ಮಾತ್ರ ಬದುಕು ಸಾಗಿಸಬೇಕು. ವಿದ್ಯಾರ್ಥಿಗಳು ವ್ಯಸನ ಮುಕ್ತರಾಗಿ ಆತ್ಮಸ್ಥೈರ್ಯ, ಸ್ವಾಭಿಮಾನದಿಂದ ಜೀವನ ರೂಪಿಸಿಕೊಳ್ಳಬೇಕು ಎಂದರು.
ಜಿಪಂ ಸದಸ್ಯೆ ಶೋಭಾ ಮೇಟಿ ಮಾತನಾಡಿದರು. ತಹಶೀಲ್ದಾರ್ ಭ್ರಮರಾಂಭ ಗುಬ್ಬಿಶೆಟ್ಟಿ, ತಾಪಂ ಅಧ್ಯಕ್ಷೆ ರೇಣುಕಾ ಕೋರ್ಲಹಳ್ಳಿ, ಜಿಪಂ ಸದಸ್ಯರಾದ ಶಕುಂತಲಾ ಚೌಹಾಣ, ಈರಣ್ಣ ನಾಡಗೌಡ, ಕರಬಸಪ್ಪ ಹಂಚಿನಾಳ, ಎ.ಕೆ. ಬೆಲ್ಲದ, ಹೇಮಗೀರೀಶ ಹಾವಿನಾಳ, ರಜನೀಕಾಂತ ದೇಸಾಯಿ, ಮುದ್ಲಿಂಗಪ್ಪ ಕೋರ್ಲಹಳ್ಳಿ, ಬಸವರಾಜ ನರೇಗಲ್ಲ, ರುದ್ರಪ್ಪ ಬಡಿಗೇರ, ಎಸ್.ವಿ. ಪಾಟೀಲ, ದೇವಪ್ಪ ಕಂಬಳಿ, ಸೀತಾರಾಮರಾಜು, ಬಸವಂತಪ್ಪ ಮುದ್ದಿ, ನಾಗರಾಜ ಕಾಟ್ರಳ್ಳಿ, ಪ್ರಕಾಶ ಸಂಕಣ್ಣವರ್, ಎಸ್.ಎಸ್. ಕಲ್ಮನಿ ಮತ್ತಿತರರು ಇದ್ದರು. ಇಂಗ್ಲಿಷ್ ಪ್ರಾಯೋಗಿಕ ಕಲಿಕಾ ಪಠ್ಯವನ್ನು ಬಿಡುಗಡೆಗೊಳಿಸಲಾಯಿತು. ಉತ್ತಮ ಶಿಕ್ಷಕರು, ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ