ಧರಣಿ ಕೈಬಿಡುವಂತೆ ಕೈಮುಗಿದ ಡಿಸಿ
Team Udayavani, Oct 17, 2018, 4:25 PM IST
ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 12 ಜನ ಮಹಿಳೆ ಮತ್ತು ಒಂಬತ್ತು ಜನ ಪುರುಷ ಕಾರ್ಮಿಕರು ತಮ್ಮನ್ನು ಟೆಂಡರ್ ಅವಧಿ ಮುಗಿದ ಕಾರಣದಿಂದ ಕೆಲಸ ಬಿಡಿಸಿದ್ದನ್ನು ಮತ್ತು ನೇರ ನೇಮಕಾತಿಯಲ್ಲಿ ಕೈಬಿಟ್ಟಿದ್ದನ್ನು ವಿರೋಧಿಸಿ ಪುರಸಭೆ ಎದುರು ಅ. 11ರಿಂದ ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಂಗಳವಾರ ಸಂಜೆ 7ಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿದರು. ಈ ವೇಳೆ ಧರಣಿ ಕೈಬಿಡುವಂತೆ ಕೈಮುಗಿದು ಬೇಡಿಕೊಂಡರು.
ಕಳೆದ ಆರು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರು ಜಿಲ್ಲಾಧಿಕಾರಿಗಳು ಬರುತ್ತಿದ್ದಂತೆಯೇ ಎಲ್ಲರೂ ಅವರ ಕಾಲಿಗೆ ಬಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನಿಮ್ಮ ಸಮಸ್ಯೆ ಬಗ್ಗೆ ಗೊತ್ತಿದ್ದು, ಇದು ಸಾರ್ವತ್ರಿಕ ಸಮಸ್ಯೆಯಾಗಿದೆ. ಇತ್ತೀಚಿನ ನೇಮಕಾತಿಯಲ್ಲಿ ತಮ್ಮನ್ನು ಕೈ ಬಿಟ್ಟಿರುವ ಬಗ್ಗೆ ನೀವು ಮಾಡುತ್ತಿರುವ ಪ್ರತಿಭಟನೆಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕಿದೆ. ತಾವು ಕಾರ್ಯ ನಿರ್ವಹಿಸಿದ ಕಾಲಾವಧಿಯಲ್ಲಿ ತಮ್ಮನ್ನು ಟೆಂಡರ್ ಮೂಲಕ ನೇಮಕ ಮಾಡಿಕೊಂಡವರು, ವೇತನ ಪಾವತಿಸಿದ ಇನ್ನೂ ಅನೇಕ ದಾಖಲೆಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಿ. ತಮ್ಮೆಲ್ಲ ಬೇಡಿಕೆಗಳ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು. ದಯವಿಟ್ಟು ಪ್ರತಿಭಟನೆ ಕೈಬಿಡಿ ಎಂದು ಕೈಮುಗಿದು ನಡೆದರು.
ಉಪವಿಭಾಗಾಧಿಕಾರಿ ಪಿ. ಮಂಜುನಾಥ, ಜಿಲ್ಲಾ ನಗರ ಯೋಜನಾಧಿಕಾರಿ ಪಿ.ರುದ್ರೇಶ, ತಹಶೀಲ್ದಾರ್ ಕೆ.ಬಿ. ಕೋರಿಶೆಟ್ಟರ, ಮುಖಂಡರಾದ ಸುರೇಶ ನಂದೆಣ್ಣವರ, ಶರಣು ಗೋಡಿ, ನಾಗೇಶ ಅಮರಾಪುರ, ನೀಲಪ್ಪ ಪಡಗೇರಿ ಸೇರಿದಂತೆ ಅನೇಕರು ಇದ್ದರು. ಮಹಿಳಾ ಕಾರ್ಮಿಕರಾದ ಗಿರಿಜವ್ವ ನಂದೆಣ್ಣವರ, ಸಾವಕ್ಕ ಗಡದವರ, ಹನಮವ್ವ ಗಡದವರ, ಗಂಗವ್ವ ಅಯ್ಯಣ್ಣವರ, ಯಲ್ಲವ್ವ ಗಡದವರ, ಹನಮವ್ವ ನಂದೆಣ್ಣವರ, ಮಲ್ಲವ್ವ ಗಡದವರ, ಹನಮವ್ವ ಇನ್ನಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ