ಕೇಂದ್ರದಿಂದ ಜನಪರ ಯೋಜನೆ ಜಾರಿ
Team Udayavani, Oct 22, 2018, 4:39 PM IST
ರೋಣ: ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಎಲ್ಲ ಬಡ, ಹರಿಜನ, ಗಿರಿಜನ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ನೀಡುವ ಮುಖಾಂತರ ಬುಡಕಟ್ಟು ಜನಾಂಗಗಳ ಅಭಿವೃದ್ಧಿಗೆ ಪಕ್ಷ ಬದ್ಧವಾಗಿದೆ ಎಂದು ನರಗುಂದ ಶಾಸಕ ಸಿ.ಸಿ.ಪಾಟೀಲ ಹೇಳಿದರು.
ತಾಲೂಕಿನ ಗಾಡಗೋಳಿ ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಬಡವರಿಗೆ ಕೇಂದ್ರ ಸರ್ಕಾರದ ಉಜ್ವಲ್ ಪ್ಲಸ್ ಯೋಜನೆ ಅಡಿಯಲ್ಲಿ ಗ್ಯಾಸ್ ವಿತರಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರು, ಇಲ್ಲಿ ವಾಸಿಸುವ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಬಡ ಕುಟುಂಬಗಳ ಮಹಿಳೆಯರಿಗೆ ಸಹಾಯ ಮಾಡುವ ಯೋಜನೆ ಜಾರಿಗೆ ತಂದಿದ್ದಿಲ್ಲ. ದೇಶ ಜನರ ಪ್ರೀತಿಗೆ ಪಾತ್ರರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿವರು ಜನಾಭಿಪ್ರಾಯದಂತೆ ಯಾವುದೇ ಗ್ರಾಪಂ ಸದಸ್ಯರಾಗದ ಒಬ್ಬ ಸಂತ, ಪ್ರಾಮಾಣಿಕ ವ್ಯಕ್ತಿಯಾದ ನರೇಂದ್ರ ಮೋದಿಯವರನ್ನು ರಾಜಕೀಯಕ್ಕೆ ತರುವ ಮುಖಾಂತರ ಗುಜರಾತ್ ಮುಖ್ಯಮಂತ್ರಿ ಮಾಡಿದರು.
ಅವರ ದೂರದೃಷ್ಟಿ, ಆಡಳಿತದ ಪಾರದರ್ಶಕತೆ ಸೇರಿದಂತೆ ಅನೇಕ ಜನಪರ ಯೋಜನೆಗಳ ಮುಖಾಂತರ ದೇಶದಲ್ಲಿಯೇ ಮಾದರಿ ರಾಜ್ಯವೆಂಬ ಬಿರುದನ್ನು ಪಡೆಯುವ ಮುಖಾಂತರ 2014ರಲ್ಲಿ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ ಮೋದಿಯವರನ್ನು ದೇಶದ ಜನತೆ ಎತ್ತಿ ಹಿಡಿದರು. ಅಂದಿನಿಂದ ಇಲ್ಲಿಯವರೆಗೆ ದಿನದ 18 ತಾಸುಗಳ ಕಾಲ ದೇಶಕ್ಕಾಗಿ ಕೆಲಸ ಮಾಡುವ ಏಕೈಕ ಪ್ರಧಾನ ಸೇವಕನಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಅಧಿಕಾರಕ್ಕೆ ಬಂದ ನಂತರ ದೇಶದ ಶ್ರೀಮಂತರ ಬಳಿ ಮನವಿ ಮಾಡಿಕೊಂಡ ಗ್ಯಾಸ್ ಸಬ್ಸಿಡಿಯನ್ನು ಬಿಟ್ಟುಕೊಡುವಂತೆ ಬೇಡಿಕೊಂಡರು. ಅವರ ಮಾತಿಗೆ ಒಪ್ಪಿಕೊಂಡ ದೇಶದ ಜನರು ಬಡವರಿಗಾಗಿ ಬಿಟ್ಟುಕೊಟ್ಟರು. ಅದರಲ್ಲಿ ನಾನು ಒಬ್ಬನು ಎಂದು ಹೇಳಿಕೊಳ್ಳಲು ಸಂತೋಷವಾಗುತ್ತದೆ. ಬಡತನ ಕುಟುಂಬ ಮಹಿಳೆಯರು ಹಳ್ಳ ಕೊಳ್ಳದ ಬದಿಯಲ್ಲಿ ಬಿದ್ದಿರುವ ಕಟ್ಟಿಗೆಯನ್ನು ತಂದು ಆಹಾರ ತಯಾರಿಸುವಾಗ ಹೊಗೆಯಿಂದ ಅವರಿಗಾಗುವ ಆರೋಗ್ಯದ ಹಾನಿಯನ್ನು ಅರಿತ ಪ್ರಧಾನಿ ಇಂದು ಎಲ್ಲ ಕುಟುಂಬಗಳಿಗೆ ಗ್ಯಾಸ್ ನೀಡಲು ಮುಂದಾಗಿದ್ದಾರೆ. ಮೊದಲ ಬಾರಿ ಗ್ಯಾಸ್ ಬಳಕೆ ಮಾಡುವ ತಾಯಂದಿರು ಹಾಲನ್ನು ಉಕ್ಕಿಸುವಾಗ ದೇಶದ ಹೆಮ್ಮೆಯ ಮಗನಾದ ನರೇಂದ್ರ ಮೋದಿಯವರಿಗೆ ಆರೋಗ್ಯ ಹಾಗೂ ಕಳ್ಳಕಾಕರಿಂದ ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸುವಂತೆ ಮನವಿ ಮಾಡಿದರು. ಜಿಪಂ ಸದಸ್ಯ ಶಿವುಕುಮಾರ ನೀಲಗುಂದ, ಅಶೋಕ ಹೆಬ್ಬಳ್ಳಿ, ಗಿರೀಶಗೌಡ ಗಾಡಗೋಳಿ, ಸಿದ್ದನಗೌಡ ಪಾಟೀಲ, ವಿಶ್ವನಾಥ ಪಾಟೀಲ ಸೇರಿದಂತೆ ಕಾರ್ಯಕ್ರಮದಲ್ಲಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ