ಸಂಸ್ಕಾರದಿಂದ ವ್ಯಕ್ತಿಗತ ಪರಿವರ್ತನೆ
Team Udayavani, Oct 25, 2018, 4:17 PM IST
ಮುಂಡರಗಿ: ವ್ಯಕ್ತಿಯು ಉತ್ತಮವಾದ ಸಂಸ್ಕಾರ ಹೊಂದುವುದರಿಂದ ವ್ಯಕ್ತಿಗತವಾಗಿ ಪರಿವರ್ತನೆಗೊಳ್ಳುತ್ತಾನೆ. ಸಮಾಜದಲ್ಲೂ ಬದಲಾವಣೆಯನ್ನು ತರಬಹುದಾಗಿದೆ ಎಂದು ಜಗದ್ಗುರು ನಾಡೋಜ ಡಾ| ಅನ್ನದಾನೀಶ್ವರ ಮಹಾಶಿವಯೋಗಿಗಳು ಹೇಳಿದರು. ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ವಿಜಯದಶಮಿ ಅಂಗವಾಗಿ ನಡೆದ ಸ್ವಯಂ ಸೇವಕರ ಪಥಸಂಚಲನದ ನಂತರ ಅನ್ನದಾನೀಶ್ವರ ಮಠದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಅವರು ಮಾತನಾಡಿದರು.
ಗುರಿ ತಲುಪಲು ಉತ್ತಮವಾದ ಗುರುವಿನ ಮಾರ್ಗದರ್ಶನವಿರಬೇಕು. ವ್ಯಕ್ತಿಗತ ಗುರಿ ಸಾಧನೆಯಿಂದ ಸಮಾಜ ಮತ್ತು ದೇಶದ ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಹೇಳಿದರು. ಪ್ರಾಂತ ಸಹ ಸೇವಾ ಪ್ರಮುಖ ದುರ್ಗಣ್ಣ ಮಾತನಾಡಿದರು. ಯಲ್ಲಪ್ಪ ಅಕ್ಕಸಾಲಿ, ಪ್ರವೀಣ ಅಕ್ಕಸಾಲಿ, ಶಿವು ನವಲಗುಂದ, ಕೃಷ್ಣ ಗಾರವಾಡ, ಮಲ್ಲೇಶ ಬಾರಕೇರ, ದೇವಪ್ಪ ಇಟಗಿ, ನಾಗರಾಜ ಮುರುಡಿ, ಟಿ.ಬಿ. ಡಂಡಿನ್, ಶಿವು ನಾಡಗೌಡ, ಮುದುಕನಗೌಡ ಮರಡ್ಡಿ, ಮಂಜುನಾಥ ಮುಧೋಳ, ಪವನರಡ್ಡಿ ಇದ್ದರು. ಪವನ ಮೇಟಿ ಸ್ವಾಗತಿಸಿದರು. ಮಂಜುನಾಥ ಇಟಗಿ ನಿರೂಪಿಸಿದರು. ನಾಗರಾಜ ಪತ್ತಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ