ಭೂಮಿಯಲ್ಲಿ ತೇವಾಂಶ ಕೊರತೆ: ಬಾಡುತ್ತಿದೆ ಹಿಂಗಾರು ಬೆಳೆ


Team Udayavani, Nov 14, 2018, 4:43 PM IST

14-november-18.gif

ನರೇಗಲ್ಲ: ಮುಂಗಾರು ವೈಫಲ್ಯದಿಂದ ಸಂಕಷ್ಟದ ಸ್ಥಿತಿಯಲ್ಲಿರುವ ಹೋಬಳಿ ಅನ್ನದಾತರಿಗೆ ಮತ್ತೊಂ ದು ಸಂಕಷ್ಟ ಎದುರಾಗಿದೆ. ಮಳೆ ಅಭಾವದಿಂದ ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಶೇ. 75ಕ್ಕೂ ಹೆಚ್ಚು ಭೂಮಿಯಲ್ಲಿ ಹಿಂಗಾರು ಬಿತ್ತನೆಯಾಗಿಲ್ಲ. ಭೂಮಿಯಲ್ಲಿ ಅಲ್ಪಸ್ವಲ್ಪ ಬಿತ್ತನೆಯಾಗಿದ್ದರೂ ತೇವಾಂಶದ ಕೊರತೆಯಿಂದ ಬಿತ್ತಿದ ಬೆಳೆಗಳೆಲ್ಲ ನಾಟಿ ಹಂತದಲ್ಲಿಯೇ ಬಿಸಿಲಿನ ಧಗೆಗೆ ಬಾಡಲಾರಂಭಿಸಿವೆ.

ಹಿಂಗಾರು ಹಂಗಾಮಾದರೂ ಒಂದಿಷ್ಟು ಕೈ ಹಿಡಿದೀತು ಎಂಬ ನಿರೀಕ್ಷೆ ರೈತರದಾಗಿತ್ತು. ಹಿಂಗಾರು ಮಳೆಗಳೆಲ್ಲವೂ ಅವಕೃಪೆ ತೋರಿದ ಕಾರಣ ಪ್ರಸಕ್ತ ಕೃಷಿ ಚಟುವಟಿಕೆಗಳು ಸ್ತಬ್ಧಗೊಂಡಿವೆ. ಪ್ರಮುಖ ಮಳೆಗಳಾದ ಹುಬ್ಬೆ, ಉತ್ತರೆ, ಹಸ್ತ, ಚಿತ್ತಿ, ಸ್ವಾತಿ ಮಳೆಗಳು ಸಂಪೂರ್ಣ ಕೈಕೊಟ್ಟಿದ್ದರಿಂದ ಬೀಜ, ಗೊಬ್ಬರಕ್ಕೆ ಖರ್ಚು ಮಾಡಿ ಬಿತ್ತನೆ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದು ಬಹುತೇಕ ರೈತರು ಬಿತ್ತನೆ ಮಾಡುವ ಗೋಜಿಗೆ ಹೋಗಲಿಲ್ಲ. ಮುಂದೆ ಮಳೆಯಾಗಬಹುದು ಎಂಬ ಆಶಾಭಾವನೆಯಿಂದ ಅಲ್ಪಸ್ವಲ್ಪ ರೈತರು ಬಿತ್ತನೆ ಮಾಡಿದರಾದರೂ ಮಳೆಯಾಗದ ಕಾರಣ ಭೂಮಿಯಲ್ಲಿ ತೇವಾಂಶದ ಕೊರತೆಯಾಗಿ ಬಿತ್ತಿದ ಬೆಳೆಗಳೆಲ್ಲ ಬಾಡಲಾರಂಭಿಸಿವೆ.

23,500 ಸಾವಿರ ಹೆಕ್ಟೇರ್‌ ಬಿತ್ತನೆ: ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ 32 ಸಾವಿರ ಹೆಕ್ಟೇರ್‌ ಒಣಬೇಸಾಯದ ಹಿಂಗಾರು ಬಿತ್ತನೆಗೆ ಗುರಿ ಹೊಂದಲಾಗಿತ್ತು. ಆದರೆ, ಇದುವರೆಗೂ ಬಿತ್ತನೆಯಾದ ಕ್ಷೇತ್ರ 23,500 ಸಾವಿರ ಹೆಕ್ಟೇರ್‌ ಎಂದು ಕೃಷಿ ಇಲಾಖೆ ಮೂಲಗಳು ಹೇಳಿವೆ. ವಾಸ್ತವಾಗಿ ಈ ಪ್ರಮಾಣದ ಬಿತ್ತನೆಯಾಗಿಲ್ಲ ಎಂಬುದು ರೈತರ ಅಭಿಪ್ರಾಯವಾಗಿದೆ. ಬಿತ್ತನೆಯಾದ 23,500 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ 5 ಸಾವಿರ ಹೆಕ್ಟೇರ್‌ ಜೋಳ, 18 ಸಾವಿರ ಹೆಕ್ಟೇರ್‌ ಕಡಲೆ, 500 ಹೆಕ್ಟೇರ್‌ ಕ್ಷೇತ್ರದಲ್ಲಿ ಗೋವಿನ ಜೋಳ, ಸೂರ್ಯಕಾಂತಿ, ಕುಸುಬೆ ಸೇರಿದಂತೆ ಇತರೆ ಬೆಳೆ ಬಿತ್ತಲಾಗಿದೆ ಎಂದು ಕೃಷಿ ಅಧಿಕಾರಿ ಸಾವಿತ್ರಿ ಶಿವನಗೌಡ್ರ ತಿಳಿಸಿದ್ದಾರೆ. ಬಿತ್ತಿದ ಬೆಳೆಗಳೆಲ್ಲವೂ ಬಾಡುವ ಹಂತದಲ್ಲಿದ್ದರೂ ಮುಂದೆ ಮಳೆಯಾಗಬಹುದೆಂಬ ಭರವಸೆಯೊಂದಿಗೆ ಕೀಟ ನಿಯಂತ್ರಣಕ್ಕೆ ರೈತರು ಕ್ರಿಮಿನಾಶಕ ಔಷಧ ಸಿಂಪರಣೆ ಮಾಡುವಲ್ಲಿ ನಿರತರಾಗಿದ್ದಾರೆ. ಇದರಿಂದ ರೈತರ ಸಾಲದ ಮೊತ್ತ ಮತ್ತಷ್ಟು ಹೆಚ್ಚುತ್ತಲೇ ಇದೆ.

ಬಿತ್ತನೆಯಾದ ಬೆಳೆ ಉಳಿಯಬೇಕಾದರೆ ಕಾರ್ತಿಕ ಮಳೆ ಉತ್ತಮವಾಗಿ ಸುರಿದರೆ ಮಾತ್ರ ಹಿಂಗಾರು ಹಂಗಾಮು ಅಷ್ಟು ಇಷ್ಟು ಫಸಲು ನೀಡಲಿದೆ. ಇಲ್ಲದಿದ್ದರೆ ಬೆಳೆಗಳು ಹಾನಿಗೀಡಾಗಿ ಜನರಿಗೆ ಕಾಳು, ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿ ಕೃಷಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಗುಳೆ ಹೋಗುವುದು ಅನಿವಾರ್ಯವಾಗಲಿದೆ.

ಬಿತ್ತನೆಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡಿದ ರೈತರ ಮುಖದಲ್ಲಿ ಚಿಂತೆಯ ಕಾರ್ಮೋಡಗಳು ಕವಿಯಲಾರಂಭಿಸಿವೆ. ಬಿತ್ತನೆ ಸಂದರ್ಭದಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ಹಸಿಯಾಗಿದ್ದ ಭೂಮಿಯಲ್ಲಿ ಬೀಜಗಳು ಮೊಳಕೆ ಒಡೆದು ನೆಲ ಬಿಟ್ಟು ಮೇಲೆ ಬಂದಿದ್ದು, ಈ ಸಮಯದಲ್ಲಿ ಮಳೆಯಾಗದಿದ್ದರೆ ಬೆಳೆಗಳು ತೇವಾಂಶ ಕೊರತೆಯಿಂದ ಬಿಸಿಲಿಗೆ ಕಮರಿ ಹೋಗುತ್ತಿರುವುದು ನಡೆದಿದೆ.
ಯಲ್ಲಪ್ಪ ಕುರಿ, ನರೇಗಲ್ಲ ರೈತ

ಒಂದು ವಾರದೊಳಗೆ ಭೂಮಿ ಹಸಿಯಾಗುವಷ್ಟು ಮಳೆ ಬಾರದಿದ್ದರೆ ಬೆಳೆದು ನಿಂತ ಬೆಳೆಗಳು ಕಮರಿಹೋಗಲಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದರೂ ಮಳೆ ಬಾರದಿದ್ದರೆ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿ ಬರಲಿದೆ.
ರಮೇಶ ಹತ್ತಿಕಟ್ಟಗಿ, ರೈತ 

ಸಿಕಂದರ ಎಂ. ಆರಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.