4-5 ತಿಂಗಳಿಂದ ಗ್ಯಾರೇಜ್‌ನಲ್ಲೇ  ನಿಂತಿದೆ ಶ್ರದ್ಧಾಂಜಲಿ  ವಾಹನ!


Team Udayavani, Nov 19, 2018, 4:22 PM IST

19-november-19.gif

ಗದಗ: ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಜಿಮ್ಸ್‌ ಆಡಳಿತ ಮಂಡಳಿ ಸಮನ್ವಯತೆ ಹಾಗೂ ಅನುದಾನ ಕೊರತೆಯಿಂದಾಗಿ ಜಿಲ್ಲೆಯ ಏಕೈಕ ಶ್ರದ್ಧಾಂಜಲಿ ವಾಹನಕ್ಕೆ ಚಿಕಿತ್ಸೆ ಸಿಗದೇ ಗ್ಯಾರೇಜ್‌ನಲ್ಲೇ ಸಾಯುತ್ತಿದೆ!

ಹೌದು. ಒಂದೆರಡು ವರ್ಷಗಳ ಹಿಂದೆ ಒಡಿಸ್ಸಾದಲ್ಲಿ ವ್ಯಕ್ತಿಯೊಬ್ಬ ಹಣವಿಲ್ಲದೆ ಪತ್ನಿಯ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದರೆ, ತುಮಕೂರಿನಲ್ಲಿ ಮೊಪೆಡ್‌(ದ್ವೀಚಕ್ರ ವಾಹನ)ನಲ್ಲಿ ಮಗಳ ಮೃತ ದೇಹವನ್ನು ಸಾಗಿಸಿದ ಹೃದಯ ವಿದ್ರಾವಕ ಘಟನೆಗಳು ಆಳುವ ಸರಕಾರಗಳ ಕಣ್ಣು ತೆರೆಸಿದ್ದವು. ಅದರ ಫಲವಾಗಿಯೇ ಈ ಹಿಂದಿನ ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಶ್ರದ್ಧಾಂಜಲಿ ವಾಹನಕ್ಕೆ ಚಾಲನೆ ನೀಡಿತ್ತು. ಮೊದಲ ಹಂತದಲ್ಲಿ ರಾಜ್ಯದ 30 ಜಿಲ್ಲಾ ಕೇಂದ್ರಗಳಿಗೆ ತಲಾ ಒಂದು ವಾಹನವನ್ನು ಒದಗಿಸಿತ್ತು.

ಏನಿದು ‘ಶ್ರದ್ಧಾಂಜಲಿ’ ಸೇವೆ?: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಡುವ ಬಡರೋಗಿಗಳ ಕಳೆಬರವನ್ನು ಮನೆಗೆ ಸಾಗಿಸುವುದು. ಇಲ್ಲವೇ ಮನೆಯಲ್ಲೇ ಮೃತಪಟ್ಟ ಸಂದರ್ಭಗಳಲ್ಲಿ ಅಂತ್ಯಕ್ರಿಯೆಗಾಗಿ ಚಿತಾಗಾರ ಅಥವಾ ರುದ್ರಭೂಮಿಗೆ ಉಚಿತವಾಗಿ ಸಾಗಿಸುವುದು ‘ಶ್ರದ್ಧಾಂಜಲಿ’ ವಾಹನಗಳ ಸೇವೆಯ ಮುಖ್ಯ ಉದ್ದೇಶ. ಅದಕ್ಕಾಗಿ ಹಿಂದಿನ ಸರಕಾರ 108 ಆರೋಗ್ಯ ಕವಚ ಯೋಜನೆಯ ಹಳೇ ಅಂಬುಲೆನ್ಸ್‌ಗಳನ್ನೇ ‘ಶ್ರದ್ಧಾಂಜಲಿ’ ವಾಹನಗಳನ್ನಾಗಿ ಪರಿವರ್ತಿಸಲಾಗಿತ್ತು.

ವಾಹನಗಳಿಗೆ ಇಂಧನ, ನಿರ್ವಹಣೆ ಮತ್ತು ಹೊರಗುತ್ತಿಗೆಯಲ್ಲಿ ನಿಯೋಜಿಸಿರುವ ಚಾಲಕನಿಗೆ ಸರಕಾರಿಂದ ಪ್ರತ್ಯೇಕ ಅನುದಾನ ನೀಡಲಾಗಿತ್ತು. ಆನಂತರ ಅಧಿಕಾರಕ್ಕೆ ಬಂದ ಜೆಡಿಎಸ್‌- ಕಾಂಗ್ರೆಸ್‌ ಸರಕಾರ ಶ್ರದ್ಧಾಂಜಲಿ ವಾಹನಗಳ ನಿರ್ವಹಣೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ. ಪರಿಣಾಮ ಜಿಲ್ಲೆಯ ಶ್ರದ್ಧಾಂಜಲಿ ವಾಹನ ನಾಲ್ಕೈದು  ತಿಂಗಳಿಂದ ಗ್ಯಾರೇಜ್‌ನಲ್ಲಿ ರಿಪೇರಿಗಾಗಿ ಕಾದು ನಿಂತಿದೆ.

ಪರಿಣಾಮ ಸಾರ್ವಜನಕರು ತಮ್ಮ ಸಂಬಂಧಿಕರ ಶವಗಳನ್ನು ಸಾಗಿಸಲು ಖಾಸಗಿ ವಾಹನಗಳ ಮೊರೆ ಹೋಗುವಂತಾಗಿದೆ. ಆದರೆ, ಕೆಲ ವಾಹನದಾರರು ಶವ ಸಾಗಿಸಬೇಕೆಂದರೆ, ಮೂಗು ಮುರಿದರೆ, ಇನ್ನೂ ಕೆಲವರು ಸಿಕ್ಕಿದ್ದೇ ಅವಕಾಶವೆಂದು ಬೇಕಾಬಿಟ್ಟಿ ಸುಲಿಗೆ ಮಾಡುತ್ತಿದ್ದಾರೆ. 40-50 ಕಿ.ಮೀ ದೂರಕ್ಕೂ ಐದಾರು ಸಾವಿರ ರೂ. ಕೇಳುತ್ತಾರೆ ಎಂದು ಹೇಳಲಾಗಿದೆ.

ಅಧಿಕಾರಿಗಳಿಗೇ ಮಾಹಿತಿಯಿಲ್ಲ?: ಈ ಕುರಿತು ಮಾಹಿಗಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಎಂ.ಎಸ್‌. ಹೊನಕೇರಿ ಅವರನ್ನು ಸಂಪರ್ಕಿಸಿದರೆ, ಇದು ನಮಗೆ ಸಂಬಂಧಿವಿಲ್ಲ. ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸೆರನ್ನೇ ಕೇಳಬೇಕು ಎಂದು ಜಾರಿಕೊಳ್ಳುತ್ತಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಿ.ಎಸ್‌.ಪಲ್ಲೇದ, ಜಿಲ್ಲಾಸ್ಪತ್ರೆ ಆವರಣದಲ್ಲಿ ‘ಶ್ರದ್ಧಾಂಜಲಿ’ ವಾಹನ ನಿಲುಗಡೆ, ಅಗತ್ಯವಿದ್ದವರೆ ಸೇವೆ ಒದಗಿಸುವಂತೆ ವೈದ್ಯರಿಂದ ಪ್ರಮಾಣ ಪತ್ರ ಕೊಡಿಸುವುದಷ್ಟೇ ನಮ್ಮ ಕೆಲಸ. ವಾಹನ ನಿರ್ವಹಣೆ, ಇಂಧನ ಎಲ್ಲವೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಈ ವರೆಗೆ ಡಿಎಚ್‌ಒ ಕಚೇರಿಯಿಂದಲೇ ನಿರ್ವಹಣೆಯಾಗಿದೆ. ಇತ್ತೀಚೆಗಷ್ಟೇ ಶ್ರದ್ಧಾಂಜಲಿ ವಾಹನದ ಚಾಲಕನನ್ನೂ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿಯೋಜಿಸಿದ್ದಾರೆ ಎಂದು ತಿಳಿಸಿದರು.

ಸರಕಾರದಲ್ಲಿ ಅನುದಾನ ಕೊರತೆಯೋ, ಅಧಿಕಾರಿಗಳ ನಡುವಿನ ಸಂಪರ್ಕದ ಸಮಸ್ಯೆಯೋ ಗೊತ್ತಿಲ್ಲವಾದರೂ ಬಡವರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ‘ಶ್ರದ್ಧಾಂಜಲಿ’ ಸೇವೆ ಜಿಲ್ಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಹಂತಕ್ಕೆ ತಲುಪಿರುವುದು ಸುಳ್ಳಲ್ಲ.

ಆಸ್ಪತ್ರೆಗಳಿಂದ ಮನೆಗಳಿಗೆ ಶವ ಸಾಗಿಸಲು ಖಾಸಗಿ ವಾಹನದಾರರು ಮುಂದೆ ಬರುವುದಿಲ್ಲ. ಬಂದವರೂ ಮನಸ್ಸಿಗೆ ಬಂದಷ್ಟು ಹಣ ಕೇಳುತ್ತಾರೆ. ಹೀಗಾಗಿ ‘ಶ್ರದ್ಧಾಂಜಲಿ’ ವಾಹನದಿಂದ ಬಡವರಿಗೆ ಸಾಕಷ್ಟು ಅನುಕೂಲವಾಗಿದೆ. ಹೀಗಾಗಿ ಆದಷ್ಟು ಬೇಗ ದುರಸ್ತಿಗೊಳಿಸುವುದರೊಂದಿಗೆ ಹೆಚ್ಚುವರಿಯಾಗಿ ನಾಲ್ಕೈದು ವಾಹನಗಳನ್ನು ಒದಗಿಸಿದರೆ ಒಳ್ಳೆಯದು.
. ಮುತ್ತಣ್ಣ ಭರಡಿ, ಸಾಮಾಜಿಕ ಕಾರ್ಯಕರ್ತ

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.