ಡಿ. 20ರಿಂದ ಕನ್ನಡ ನುಡಿ ಸಂಭ್ರಮ-28: ಸದಾಶಿವ ಶ್ರೀ


Team Udayavani, Nov 24, 2018, 3:58 PM IST

24-november-17.gif

ಅಕ್ಕಿಆಲೂರು: ಪಟ್ಟಣದ ಶ್ರೀ ದುಂಡಿ ಬಸವೇಶ್ವರ ಜನಪದ ಕಲಾ ಸಂಘದ ಕನ್ನಡ ನುಡಿ ಸಂಭ್ರಮ-28 ರ ಸಾಂಸ್ಕೃತಿಕ ಸಮಾರಂಭವನ್ನು ಡಿ. 20ರಿಂದ ಮೂರು ದಿನ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.

ಪಟ್ಟಣದ ವೀರಭದ್ರೇಶ್ವರ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಆರ್‌ ಐಟಿಐ ಕಾಲೇಜಿನಲ್ಲಿ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದ ಕನ್ನಡ ನುಡಿ ಸಂಭ್ರಮ-28 ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಡಿ. 20, 21 ಮತ್ತು 22 ರಂದು ಕವಿಗೋಷ್ಠಿ, ವಚನ ಸಾಹಿತ್ಯ ಗೋಷ್ಠಿ, ಕೃಷಿಗೋಷ್ಠಿ, ಮಹಿಳಾಗೋಷ್ಠಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಾಡಿನ ಹೆಸರಾಂತ ಜನಪ್ರತಿನಿಧಿಗಳು, ಮಠಾಧೀಶರು, ಚಲನಚಿತ್ರ ನಟ-ನಟಿಯರು, ಸಾಹಿತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿವರ್ಷ ಸಂಘದ ವತಿಯಿಂದ ನಡೆಯುವ ಗುರುವಂದನೆ, ಬಸವ ಚೇತನ ಪುರಸ್ಕಾರ ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಈಗಾಗಲೇ ಸಮಿತಿ ಕೈಗೊಂಡಿದೆ. ವಿವಿಧ ಸಮಿತಿಗಳ ರಚನೆ, ಕಾರ್ಯ ವಿಂಗಡನೆ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆಗಳು ನಡೆಯಲಿದೆ.

ಸಭೆ ಸಾನ್ನಿಧ್ಯ ವಹಿಸಿದ್ದ ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ಆಶೀರ್ವಚನ ನೀಡಿ, ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದ ಕಲಾಸೇವೆ ಸತತ 27 ವರ್ಷಗಳಿಂದ ನಿರಂತರವಾಗಿ ನಡೆದು ಬಂದಿದ್ದು, ಕನ್ನಡ ನಾಡಿನ ಶ್ರೀಮಂತಿಕೆ ರಕ್ಷಿಸುವ ನಿಟ್ಟಿನಲ್ಲಿ ಸಂಘದ ಪ್ರಯತ್ನ ಉತ್ತಮವಾಗಿದೆ. ನಾಡಿಗೆ ಸಾಹಿತ್ಯಿಕ, ಸಾಂಸ್ಕೃತಿಕ, ಆಧ್ಯಾತ್ಮಿಕವಾಗಿ ಸಾಕಷ್ಟು ಕೊಡುಗೆಗಳನ್ನು ನೀಡಿದ ಹಾವೇರಿ ಜಿಲ್ಲೆ ಹೆಮ್ಮೆ ಪಡುವಂತಹ ಸಮಾರಂಭ ಅಕ್ಕಿಆಲೂರಿನಲ್ಲಿ ನಡೆದು ರಾಜ್ಯದ ಗಮನ ಸೆಳೆಯುತ್ತಿದೆ. ಇದು ನಮ್ಮೆಲ್ಲರ ಹೆಮ್ಮೆಯ ವಿಷಯ. ನಾಡು-ನುಡಿಯ ಸೇವೆ ಬಗ್ಗೆ ತಿರಸ್ಕಾರ ಮನೋಭಾವದಿಂದ ವರ್ತಿಸುತ್ತಿರುವ ಯುವಶಕ್ತಿ ಇಂತಹ ಸಮಾರಂಭಗಳಲ್ಲಿ ತೊಡಗಿಸಿಕೊಂಡು ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ  ಕೊಂಡೊಯ್ಯುವ ಜವಾಬ್ದಾರಿ ಪ್ರದರ್ಶಿಸಬೇಕಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಕಾರ್ಯದರ್ಶಿ ಷಣ್ಮುಖಪ್ಪ ಮುಚ್ಚಂಡಿ, ಸಂಘ ಕಳೆದ 2 ದಶಕಗಳಿಂದ ನಾಡು-ನುಡಿ ಸೇವೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡುತ್ತಿದೆ. ಈ ಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಕಲಾವಿದರಿಗೆ ವೇದಿಕೆ ಕಲ್ಪಿಸಿ ಸಾಂಸ್ಕೃತಿಕ, ಸಾಮಾಜಿಕ, ಸಾಹಿತ್ಯಿಕ ವಿಚಾರಗಳನ್ನು ಅನಾವರಣಗೊಳಿಸುತ್ತಿದೆ. ಕನ್ನಡ ನುಡಿ ಸಂಭ್ರಮ-28 ರ ಸಮಾರಂಭದ ಯಶಸ್ಸಿಗೆ ಪಟ್ಟಣದ ಎಲ್ಲ ಶಾಲಾ ಕಾಲೇಜುಗಳು, ಸಂಘ-ಸಂಸ್ಥೆಗಳು ಕೈಜೋಡಿಸುತ್ತಿರುವುದು ನಮ್ಮೆಲ್ಲರ ಆಯೋಜನೆ ಶಕ್ತಿ ಹೆಚ್ಚಿಸಿದೆ. ಕೇವಲ ಹಣವಿದ್ದರೇ ಮಾತ್ರ ಕಾರ್ಯಕ್ರಮ ನಡೆಸಬೇಕೆಂದಿಲ್ಲ; ಬದಲಾಗಿ ಸಾಂಸ್ಕೃತಿಕ ಮನಸ್ಸುಳ್ಳವರಾಗಿದ್ದರೇ ಸಾಕು ಎಂದರು.

ಸ್ಥಳೀಯ ವಿರಕ್ತಮಠದ ಶಿವಬಸವ ಶ್ರೀಗಳು ಸಮ್ಮುಖ ವಹಿಸಿ ಆಶೀರ್ವಚನ ನೀಡಿದರು. ವಿಜಯಪುರದ ಅಭಿನವ ಸಿದ್ಧಾರೂಢ ಶ್ರೀಗಳು, ಕುಮಾರ ದೇವರು ನೇತೃತ್ವ ವಹಿಸಿದ್ದರು. ಜಿಪಂ ಸದಸ್ಯ ಟಾಕನಗೌಡ ಪಾಟೀಲ, ಕಸಾಪಾ ತಾಲೂಕಾಧ್ಯಕ್ಷ ನಾಗರಾಜ ಅಡಿಗ, ಸಂಘದ ಅಧ್ಯಕ್ಷ ಬಸವರಾಜ ಕೋರಿ, ಪ್ರಾಚಾರ್ಯ ಸುಭಾಸ ಮಾಳಗಿ ಮಾತನಾಡಿದರು. ಎಪಿಎಂಸಿ ಉಪಾಧ್ಯಕ್ಷೆ ಸುಜಾತಾ ಪಸಾರದ, ಶಿವಕುಮಾರ ದೇಶಮುಖ, ಕೃಷ್ಣ ಈಳಗೇರ, ಸದಾಶಿವ ಕಂಬಾಳಿ, ವಿಶ್ವನಾಥ ಭಿಕ್ಷಾವರ್ತಿಮಠ, ಎಂ.ಎಚ್‌.ಬ್ಯಾಡಗಿ, ಮುತ್ತಪ್ಪ ಮುಚ್ಚಂಡಿ, ಪ್ರಶಾಂತ ಮಿರ್ಜಿ, ಸಿದ್ಧಲಿಂಗೇಶ ತುಪ್ಪದ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.