ಎಚ್‌1ಎನ್‌1 ಆತಂಕ ಬೇಡ: ಲಭ್ಯವಿದೆ ಪರಿಣಾಮಕಾರಿ ಔಷಧಿ


Team Udayavani, Nov 24, 2018, 4:21 PM IST

24-november-18.gif

ಗದಗ: ಜಿಲ್ಲೆಯಲ್ಲಿ ದೃಢಪಟ್ಟಿದ್ದ 23 ಎಚ್‌1ಎನ್‌1 ಸೋಂಕಿತರಲ್ಲಿ 22 ಜನರನ್ನು ಗುಣಪಡಿಸಲಾಗಿದೆ. ಎಚ್‌1ಎನ್‌1ಗೆ ಪರಿಣಾಮಕಾರಿ ಔಷಧಿಗಳು ಲಭ್ಯವಿದ್ದು, ಜನರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಸ್‌.ಎಂ. ಹೊನಕೇರಿ ಹೇಳಿದರು.

ಜಿಲ್ಲಾಡಳಿತ ಭವನದ ತಮ್ಮ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸೆಪ್ಟೆಂಬರ್‌ನಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 83 ಜನರಲ್ಲಿ ಎಚ್‌1ಎನ್‌1 ರೋಗ ಲಕ್ಷಣಗಳು ಕಂಡುಬಂದಿತ್ತು. ಅವರ ಗಂಟಲಿನ ದ್ರಾವಣ ಲೇಪನವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಪೈಕಿ 23 ರೋಗಿಗಳಲ್ಲಿ ಎಚ್‌1ಎನ್‌1 ರೋಗ ದೃಢಪಟ್ಟಿತ್ತು. ಅದರಲ್ಲಿ ನ್ಯೂಮೋನಿಯಾದಿಂದ ಬಳಲುತ್ತಿದ್ದ ಐದು ವರ್ಷದ ಮಗುವೊಂದು ನಂತರ ಎಚ್‌1ಎನ್‌1 ಕಾರಣದಿಂದ ಸಾವನ್ನಪ್ಪಿದೆ. ಇನ್ನುಳಿದಂತೆ ಎಲ್ಲ 22 ಜನರಿಗೆ ಟೆಮ್ಮಿಂಗ್‌ ಫ್ಲ್ಯೂ  ಎಂಬ ಮಾತ್ರೆಗಳ ಮೂಲಕ ಗುಣಪಡಿಸಲಾಗಿದೆ ಎಂದು ತಿಳಿಸಿದರು.

ಈ ರೋಗದಲ್ಲಿ ಮೂರು ಹಂತಗಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ ಸಾಮಾನ್ಯ ಜ್ವರ ಹಾಗೂ ಗಂಟಲು ನೋವು, 2ನೇ ಹಂತದಲ್ಲಿ ಜ್ವರದ ತಾಪ ಹೆಚ್ಚಿದ್ದು ಗಂಟಲು ಬೇನೆ ಹೆಚ್ಚಾಗುತ್ತದೆ. 3ನೇ ಹಂತದಲ್ಲಿ ಇದು ಇನ್ನೂ ಹೆಚ್ಚಾಗಿ ಮೈ ನೀಲಿ ಆಗುವ ಲಕ್ಷಣಗಳು ಕಂಡುಬರುತ್ತವೆ. ಈ ವೇಳೆ ಕೆಮ್ಮಿದಾಗ, ಸೀನಿದಾಗ, ವೈಯಕ್ತಿಕ ಸ್ವತ್ಛತೆ ಇಲ್ಲದೇ ಮೂಗು ಬಾಯಿ ಮುಚ್ಚಿದಾಗ ರೋಗದ ವೈರಸ್‌ ಗಳು ಪ್ರಸಾರವಾಗುತ್ತವೆ. ಈ ರೋಗದ ತಡೆಗೆ ಮುಂಜಾಗ್ರತಾ ಕ್ರಮವಾಗಿ ಕೆಮ್ಮು ಸೀನು ಇದ್ದಾಗ ಕೈವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಕೈ ಬಾಯಿಗಳನ್ನು ನಿಯಮಿತವಾಗಿ ಸ್ವಚ್ಛ ಮಾಡಿಕೊಳ್ಳಬೇಕು.

ಸೋಂಕಿರುವ ವ್ಯಕ್ತಿಗಳ ಹತ್ತಿರ ಹೋಗಬಾರದು. ಅನಿವಾರ್ಯವಾಗಿದ್ದಲ್ಲಿ ಮೂಗು ಬಾಯಿಗೆ ಮಾಸ್ಕ್ ಧರಿಸಬೇಕು. ಮಕ್ಕಳಲ್ಲಿ ತೀವ್ರ ಉಸಿರಾಟ, ನೀಲಿ ಮೈ, ದ್ರವ ಪದಾರ್ಥ ಸೇವನೆಗೆ ತೊಂದರೆ, ತೀವ್ರ ಜ್ವರ- ಕೆಮ್ಮು, ಮೈಮೇಲೆ ಬೊಬ್ಬೆಗಳು ಹಾಗೂ ದೊಡ್ಡವರಲ್ಲಿ ಉಸಿರಾಟದಲ್ಲಿ ತೊಂದರೆ, ಎದೆ ಹಾಗೂ ಹೊಟ್ಟೆ ನೋವು, ತಲೆ ಸುತ್ತುವಿಕೆ, ವಾಂತಿ, ಕೆಲಸದಲ್ಲಿ ಗೊಂದಲ ಇತ್ಯಾದಿಗಳು ಸೋಂಕಿತರ ಅಪಾಯದ ಚಿಹ್ನೆಗಳಾಗಿವೆ. ಇಂತಹ ಲಕ್ಷಣಗಳು ಕಂಡುಬರುತ್ತಿದ್ದಂತೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಡಾ| ಸತೀಶ ಬಸರಿಗಿಡದ ಮಾತನಾಡಿ, ಗ್ರಾಮ ಹಾಗೂ ನಗರಗಳಲ್ಲಿ ಆರೋಗ್ಯ ಕಾರ್ಯಕರ್ತರ, ಆಶಾ ಹಾಗೂ ವೈದ್ಯಾ ಧಿಕಾರಿಗಳು ಈ ರೋಗದ ಕುರಿತು ಮುಂಜಾಗ್ರತಾ ಕ್ರಮಗಳನ್ನು ತಿಳಿಸುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಎಚ್‌1ಎನ್‌1 ರೋಗಿಗಳನ್ನು ಉಪಚರಿಸಲೆಂದೇ ಪ್ರತೀ ತಾಲೂಕು ಆಸ್ಪತ್ರೆಯಲ್ಲಿ ಮೂರು ಬೆಡ್‌ಗಳ ಪ್ರತ್ಯೇಕ ವಾರ್ಡ್‌ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್‌ ಸ್ಥಾಪಿಸಲಾಗಿದ್ದು, ವೆಂಟಿಲೇಟರ್‌ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡಬೇಕಿಲ್ಲ.
ಡಾ| ಎಸ್‌.ಎಂ. ಹೊನಕೇರಿ, ಡಿಎಚ್‌ಒ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.