ಉಪಯೋಗಕ್ಕೆ ಬಾರದ ಯೋಜನೆ 


Team Udayavani, Nov 30, 2018, 4:29 PM IST

30-november-17.gif

ನರಗುಂದ: ಮಳೆರಾಯನ ಅವಕೃಪೆಯಿಂದ ಅದೆಷ್ಟೋ ಕನಸುಗಳನ್ನು ಹೊತ್ತು ಕಾಯ್ದು ಕುಳಿತಿದ್ದ ಬೆಣ್ಣೆಹಳ್ಳ ವ್ಯಾಪ್ತಿಯ ರೈತರೀಗ ಶಾಪಗ್ರಸ್ತರಾಗಿದ್ದಾರೆ. ಈ ಭಾಗದ ರೈತರ ಬೆಳೆಗಳಿಗೆ ತಂಪೆರೆಯಬೇಕಾದ ಕುರ್ಲಗೇರಿ ಏತ ನೀರಾವರಿ ಯೋಜನೆ ರೈತರ ಪಾಲಿಗೆ ಮರೀಚಿಕೆಯಾಗಿದೆ.

ತಾಲೂಕಿನ ಕುರ್ಲಗೇರಿ ಗ್ರಾಮಕ್ಕೆ ಹೊಂದಿಕೊಂಡು ಬೆಣ್ಣೆಹಳ್ಳದಲ್ಲಿ ವ್ಯರ್ಥವಾಗಿ ಹರಿಯುವ ನೀರನ್ನೇ ಸದ್ಬಳಕೆ ಮಾಡಿಕೊಳ್ಳಲು ಈ ಯೋಜನೆ ಜಾರಿ ಮಾಡಲಾಗಿದೆ. ಈ ಏತ ನೀರಾವರಿ ಯೋಜನೆಯು ಕುರ್ಲಗೇರಿ, ಕಸಬಾ, ಸುರಕೋಡ ಗ್ರಾಮಗಳ ಜೊತೆಗೆ ನರಗುಂದ ಭಾಗದ ರೈತರ ಜಮೀನು ಸೇರಿ 1,500 ಎಕರೆಗೂ ಹೆಚ್ಚು ಪ್ರದೇಶಕ್ಕೆ ನೀರುಣಿಸುತ್ತದೆ. ಆದರೆ ಪ್ರತಿವರ್ಷ ಬೆಣ್ಣೆಹಳ್ಳದಲ್ಲಿ ನೀರು ಹರಿಯುತ್ತಿರುವಾಗೆಲ್ಲ ಪೈಪ್‌ಲೈನ್‌ ದುರಸ್ತಿಯೇ ಯೋಜನೆ ಸಾಧನೆಯಾಗುತ್ತಿದೆ.

2011ರಲ್ಲಿ ಕಾರ್ಯಾರಂಭ ಮಾಡಿದ ಏತ ನೀರಾವರಿ ಯೋಜನೆ ಪ್ರಾರಂಭದಲ್ಲಿ ಎರಡ್ಮೂರು ವರ್ಷ ಅಷ್ಟಿಷ್ಟು ನೀರು ಒದಗಿಸಿದ್ದು ಬಿಟ್ಟರೆ ಏಳು ವರ್ಷಗಳಲ್ಲಿ ಈ ಯೋಜನೆ ರೈತರಿಗೆ ತಲುಪಿದ್ದೇ ವಿರಳ. ಸದಾ ಪೈಪ್‌ಲೈನ್‌ ಸೋರಿಕೆಯಿಂದ ಅರ್ಧ ಕಿಮೀ ಕೂಡ ನೀರು ಸಾಗಿಸದ ಯೋಜನೆ ಅವ್ಯವಸ್ಥೆ ನಮ್ಮ ಬದುಕು ಕಿತ್ತುಕೊಳ್ಳುತ್ತಿದೆ ಎಂಬ ನೋವು, ಹತಾಶೆ ಯೋಜನೆ ವ್ಯಾಪ್ತಿಯ ರೈತರದ್ದಾಗಿದೆ. ಅವ್ಯವಸ್ಥಿತ ಪೈಪ್‌ಲೈನ್‌: ರೈತರ ಜಮೀನಿಗೆ ಬೆಣ್ಣೆಹಳ್ಳದಿಂದ ನೀರೊದಗಿಸುವ 6.4 ಕಿಮೀವರೆಗೆ ಯೋಜನೆ ಪೈಪ್‌ಲೈನ್‌ ಅವ್ಯವಸ್ಥೆ ರೈತರನ್ನು ಸಂಕಷ್ಟದ ಕೂಪಕ್ಕೆ ತಳ್ಳಿದೆ. ಹೆಸರಿಗೆ ಸಿಮೆಂಟ್‌ ಪೈಪ್‌ ಅಳವಡಿಸಿದ್ದರೂ ನೀರು ಹರಿಸಿದರೆ ಸಾಕು ಎಲ್ಲೆಂದರಲ್ಲಿ ಒಡೆದು ನೀರು ಸೋರಿಸುವ ಪೈಪ್‌ಲೈನ್‌ ಗುಣಮಟ್ಟವಿಲ್ಲದ ಕಾಮಗಾರಿಯೇ ಕಾರಣವಾಗಿದೆ ಎಂಬ ಆರೋಪ ಈ ಭಾಗದ ರೈತರಲ್ಲಿ ಜೀವಂತವಾಗಿದೆ.

ನೀರಿನ ರಭಸಕ್ಕೆ ಪೈಪ್‌ಲೈನ್‌ ಜಾಯಿಂಟ್‌ ಗಳಲ್ಲಿ ಒಡೆದು ಸೋರಿಕೆ ಆಗುವುದು ಸಹಜ. ಆದರೆ ಕುರ್ಲಗೇರಿ ಏತ ನೀರಾವರಿ ಯೋಜನೆ ಪೈಪ್‌ಗ್ಳ ಮಧ್ಯೆಯೇ ಒಡೆದು ಸೋರಿಕೆ ಆಗುತ್ತಿವೆ. ಹೀಗಾದರೆ ಯೋಜನೆಯಿಂದ ನಾವು ನೀರು ಪಡೆಯುವುದು ಯಾವಾಗ ಎಂಬ ಪ್ರಶ್ನೆ ರೈತರದ್ದಾಗಿದೆ.

ಏತ ನೀರಾವರಿ ಯೋಜನೆ ನಿರ್ವಹಣೆ ಮಾಡುತ್ತಿರುವ ಹಾವೇರಿ ಮೂಲದ ಎಸ್‌ ಪಿಎಂಎಲ್‌ ಏಜೆನ್ಸಿಯಿಂದ ಸಮರ್ಪಕವಾಗಿ ನಿರ್ವಹಣೆ ಆಗುತ್ತಿಲ್ಲ. ಬೆಣ್ಣೆಹಳ್ಳದ ನೀರು ಬಂದ್‌ ಆದಮೇಲೆ ಯೋಜನೆಯಿಂದ ನಮಗೇನು ಲಾಭ ಎಂಬುದು ರೈತರ ಪ್ರಶ್ನೆ. ಆದರೆ ಏತ ನೀರಾವರಿ ಯೋಜನೆ ಪ್ರತಿಬಾರಿ ಚಾಲು ಮಾಡಿದಾಗಲೆಲ್ಲ ನಾಲ್ಕಾರು ಕಡೆಗೆ ಸೋರಿಕೆ ಆಗುವ ಈ ಯೋಜನೆ ನೀರು ರೈತರ ಪಾಲಿಗೆ ಮರೀಚಿಕೆಯಾಗಿ ಉಳಿದಿರುವುದು ವಿಪರ್ಯಾಸ.

ರೈತರ ಸಂಕಷ್ಟ ಕೇಳುವರಿಲ್ಲ
ಬೆಣ್ಣೆಹಳ್ಳಕ್ಕೆ ಕಳೆದ 15 ದಿನಗಳಿಂದ ನೀರು ಹರಿದು ಬರುತ್ತಿದೆ. ಇನ್ನು ಹತ್ತಾರು ದಿನಗಳು ಮಾತ್ರ ಹಳ್ಳದಲ್ಲಿ ನೀರು ಬರಲು ಸಾಧ್ಯ. ಒಂದು ಬಾರಿಯೂ ಹಳ್ಳದ ನೀರನ್ನು ಬಳಸಿಕೊಳ್ಳುವ ಅವಕಾಶ ನಮಗೆ ಸಿಗಲಿಲ್ಲ. ಇಷ್ಟಾದರೂ ಯೋಜನೆ ಕೈಗೆತ್ತಿಕೊಂಡ ಗುತ್ತಿಗೆದಾರ ಏಜೆನ್ಸಿ ಮೇಲೆ ಕ್ರಮ ಕೈಗೊಳ್ಳುವಲ್ಲಿ ನೀರಾವರಿ ಅಧಿಕಾರಿಗಳು ಕೂಡ ಮೀನಮೇಷ ಎಣಿಸುತ್ತಿದ್ದಾರೆ. ನಮ್ಮ ಬದುಕಿನ ಸಂಕಷ್ಟ ಕೇಳುವವರಿಲ್ಲದಂತಾಗಿದೆ ಎಂಬುದು ರೈತರ ಆರೋಪವಾಗಿದೆ.

ಸಿದ್ಧಲಿಂಗಯ್ಯ ಮಣ್ಣೂರಮಠ 

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ

ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.