ಅಪಾಯದಂಚಿನಲ್ಲಿ ಸ್ವಾಗತ ಕಮಾನು


Team Udayavani, Dec 5, 2018, 3:59 PM IST

5-december-18.gif

ನರಗುಂದ: ಪಟ್ಟಣಕ್ಕೆ ಬರುವ ಸಾರ್ವಜನಿಕರು, ಪ್ರವಾಸಿಗರನ್ನು ಸ್ವಾಗತಿಸಲು ಪಟ್ಟಣ ಪ್ರವೇಶ ದ್ವಾರದಲ್ಲಿ ಸ್ವಾಗತ ಕಮಾನು ಹಾಕುವುದು ವಾಡಿಕೆ. ಆದರೆ ಇಲ್ಲಿ ನಿರ್ಮಿಸಿರುವ ಕಮಾನು ಸ್ವಾಗತ ಬದಲು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪುರಸಭೆ ನಿರ್ಮಿಸಿದ ಕಮಾನು ಯಾವುದೇ ಕ್ಷಣದಲ್ಲಿ ಬೀಳುವ ಹಂತದಲ್ಲಿದೆ. ಆದರೂ ಇದರ ತೆರವು ಕಾರ್ಯ ಮಾತ್ರ ನಡೆದಿಲ್ಲ.

ಪಟ್ಟಣದ ಸವದತ್ತಿ ರಾಜ್ಯ ಹೆದ್ದಾರಿಯಿಂದ ದಂಡಾಪುರ ಬಡಾವಣೆ ಪಡುವಗೊಂಡ ಕೆರೆ ಹತ್ತಿರ ಸಂಗೊಳ್ಳಿ ರಾಯಣ್ಣ ವೃತ್ತ ಎದುರಿಗೆ ಅಸ್ತಿ ಪಂಜರದಂತೆ ಸ್ವಾಗತ ಕಮಾನು ಗೋಚರಿಸುತ್ತಿವೆ. ಅವೈಜ್ಞಾನಿಕವಾಗಿ ನಿರ್ಮಿಸಿದ್ದೇ ಅಪಾಯಕ್ಕೆ ಕಾರಣವಾಗಿದೆ. ಕಮಾನಿನ ಮೇಲಿನ ಕಬ್ಬಿಣದ ಗಲ್ಡರ್‌ ತುಕ್ಕು ಹಿಡಿಯುತ್ತಿರುವುದು ಅಪಾಯಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ಮೂರು ಸಿಮೆಂಟ್‌ ಕಂಬಗಳ ಮೇಲೆ ಅರ್ಧ ಚಂದ್ರಾಕಾರದಲ್ಲಿ ಜೋಡಿಸಲಾದ ಕಬ್ಬಿಣದ ಗಲ್ಡರ್‌ನ ನಟ್‌ಗಳು ಯಾವಾಗಲೋ ಬಿಚ್ಚಿದ್ದು, ಯಾವುದೇ ಸಂದರ್ಭದಲ್ಲಿ ಕಬ್ಬಿಣದ ಗಲ್ಡರ್‌ ಹಾರಿ ಬೀಳುತ್ತದೋ ಎಂಬ ಭಯ ಇಲ್ಲಿನ ನಿವಾಸಿಗಳಲ್ಲಿ ತಲೆದೋರಿದೆ.

ಶ್ರೀಗಳ ನಾಮಾಂಕಿತ: ಸಣ್ಣ ದ್ವಾರಕ್ಕೆ ಪಡುವಗೊಂಡ ಕೆರೆಗೆ ಸ್ವಾಗತ ಮತ್ತು ಮುಖ್ಯ ರಸ್ತೆಗಿರುವ ಕಮಾನಿಗೆ ಪುರಸಭೆ ಸ್ವಾಗತ ಎಂದು ಬರೆಯಲಾಗಿತ್ತು. ಕಾಲಕ್ರಮೇಣ ನಾಮಧೇಯ ಅಳಿಸಿ ಹೋಗಿವೆ. ಈ ಕಮಾನಿಗೆ ಪಟ್ಟಣದ ಪುಣ್ಯಾರಣ್ಯ ಪತ್ರಿವನಮಠದ ಕತೃ ಲಿಂ| ಅಜ್ಜಪ್ಪಜ್ಜೇಂದ್ರ ಸ್ವಾಮಿಗಳು ಮತ್ತು ಎರಡನೇ ಪೀಠಾಧಿ ಪತಿ ಲಿಂ| ಶಿವಯ್ಯ ಜ್ಜೇಂದ್ರ ಸ್ವಾಮಿಗಳ ಹೆಸರು ಹಾಕಲಾಗಿದ್ದು ಸ್ಮರಿಸಬಹುದು. ಒಟ್ಟಾರೆ ದಂಡಾಪುರ ಬಡಾವಣೆಯಲ್ಲಿರುವ ಪಟ್ಟಣ ಪ್ರವೇಶದ ಸ್ವಾಗತ ಕಮಾನು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಗಮನ ಹರಿಸದ ಪುರಸಭೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಸ್ವಾಗತ ಕಮಾನು ಅಪಾಯತಂದೊಡ್ಡುವ ಮುನ್ನ ಸರಿಪಡಿಸಬೇಕು ಎಂಬುದು ಸ್ಥಳೀಯರ ಕೋರಿಕೆಯಾಗಿದೆ.

 15 ವರ್ಷಗಳ ಹಿಂದೆ ನಿರ್ಮಾಣ
ಸುಮಾರು 15 ವರ್ಷಗಳ ಹಿಂದೆ ಈ ಸ್ವಾಗತ ಕಮಾನು ಪುರಸಭೆ ನಿರ್ಮಿಸಿದೆ. ಪಕ್ಕದಲ್ಲೇ ಐತಿಹಾಸಿಕ ಪಡುವಗೊಂಡ ಕೆರೆಯಿರುವ ಕಾರಣ ನಿವಾಸಿಗಳ ಕೋರಿಕೆಯಂತೆ ಎರಡು ಭಾಗವಾಗಿ ಒಂದು ಮುಖ್ಯರಸ್ತೆ, ಅದಕ್ಕೆ ಜೋಡಿಸಿ ಮತ್ತೊಂದು  ಕೆರೆಗೆ ಸ್ವಾಗತ ಕಮಾನು ಹಾಕಲಾಗಿದೆ. ರಸ್ತೆಗಿರುವ ಕಮಾನು 22 ಅಡಿ ಮತ್ತು ಕೆರೆಗಿರುವ ಕಮಾನು 15 ಅಡಿ ಅಗಲವಿದೆ. ಎರಡೂ ಕಮಾನು ಅತಿಹೆಚ್ಚು 25 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ. ಮೂರು ಸಿಮೆಂಟ್‌ ಕಂಬಗಳ ಮೇಲೆ ಹಾಕಿದ ಗಲ್ಡರ್‌ ಕಂಬಗಳಿಗೆ ಸರಿಯಾದ ಜೋಡಣೆಯಾಗಿಲ್ಲ ಮತ್ತು ಅದಕ್ಕೆ ಹಾಕಿದ ನಟ್‌ ಬೋಲ್ಟ್‌ಗಳು ಕಳಚಿರುವುದೇ ಕಮಾನು ಅಪಾಯಕಾರಿಯಾಗಿ ಪರಿವರ್ತನೆಗೊಂಡಿದೆ. ಯಾವ ಕ್ಷಣದಲ್ಲಾದರೂ ಮೇಲಿರುವ ಗಲ್ಡರ್‌ ಕಿತ್ತು ಬೀಳಬಹುದು ಎಂಬುದು ಆತಂಕ ಸಾರ್ವಜನಿಕರಲ್ಲಿದೆ.

ಗಲ್ಡರ್‌ ಕೆಳಗಿಳಿಸಿ ಮರು ನಿರ್ಮಾಣ 
ಬಹಳ ಎತ್ತರವಿದ್ದರಿಂದ ಕ್ರೇನ್‌ ಮೂಲಕ ಗಲ್ಡರ್‌ಗಳನ್ನು ಕೆಳಗಿಳಿಸಬೇಕಿದೆ. ಶೀಘ್ರದಲ್ಲಿ ಗಲ್ಡರ್‌ಗಳನ್ನು ಕೆಳಗಿಳಿಸಿ ಕಮಾನು ಮರು ನಿರ್ಮಾಣ ಮಾಡುವ ಚಿಂತನೆ ನಡೆಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ಆತಂಕ ಎದುರಾಗದಂತೆ ನಿರ್ಮಿಸಲಾಗುವುದು.
. ಬಿ.ಎ. ನದಾಫ್‌, ಪುರಸಭೆ ಕಿರಿಯ ಅಭಿಯಂತರ 

ಸಿದ್ಧಲಿಂಗಯ್ಯ ಮಣ್ಣೂರಮಠ 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.