ಈರುಳ್ಳಿಗೆ ಪ್ರೋತ್ಸಾಹಧನ ಘೋಷಣೆ
Team Udayavani, Dec 7, 2018, 4:00 PM IST
ಮುಂಡರಗಿ: ಈರುಳ್ಳಿ ಬೆಳೆದ ರೈತರಿಗೆ ಸರ್ಕಾರವು 200 ರೂ. ಪ್ರೋತ್ಸಾಹ ಧನ ನೀಡುವ ಯೋಜನೆ ಜಾರಿಗೆ ತಂದಿದೆ. ರೈತರು ಡಿ. 17ರೊಳಗೆ ಬೆಳೆದ ಈರುಳ್ಳಿಯನ್ನು ಮಾರಾಟ ಮಾಡಬೇಕು ಎಂದು ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ತಿಳಿಸಿದರು.
ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಗುರುವಾರ ತರಕಾರಿ ವ್ಯಾಪಾರಸ್ಥರು, ಎಪಿಎಂಸಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಈರುಳ್ಳಿ ಬೆಲೆಗೆ ಏಳುನೂರು ರೂಪಾಯಿಗಳ ಬೆಂಬಲ ಬೆಲೆ ನಿಗದಿಗೊಳಿಸಿದೆ. ರೈತರಿಗೆ ವ್ಯತ್ಯಾಸದ ದರವನ್ನು ಮಾತ್ರ ನೀಡಲಾಗುವುದು. ಒಬ್ಬ ರೈತನು ಗರಿಷ್ಠ ಎಪ್ಪತೈದು ಕ್ವಿಂಟಲ್ ಈರುಳ್ಳಿಯನ್ನು ಮಾತ್ರ ಮಾರಾಟ ಮಾಡಲು ಅವಕಾಶವಿದೆ. ರೈತರು ಅಗತ್ಯ ದಾಖಲೆ ನೀಡಿ ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ವ್ಯಾಪಾರಸ್ಥರು ಈರುಳ್ಳಿ ಖರೀದಿಸಿದರೆ ಸಂಗ್ರಹಕ್ಕಾಗಿ ಉಗ್ರಾಣವನ್ನು ಉಚಿತವಾಗಿ ನೀಡಲಾಗುವುದು ಎಂದು ಶಿವಕುಮಾರಗೌಡ ಪಾಟೀಲ ಭರವಸೆ ನೀಡಿದರು.
ತರಕಾರಿ ವ್ಯಾಪಾರಸ್ಥರ ಸಂಘದ ಉಪಾಧ್ಯಕ್ಷ ವಿಜಯಕುಮಾರ ಅಕ್ಕಿ ಮಾತನಾಡಿ, ಪ್ರತಿದಿನ ತರಕಾರಿ ಮಾರುಕಟ್ಟೆಯಲ್ಲಿ ಐದುನೂರು ಕ್ವಿಂಟಲ್ ಈರುಳ್ಳಿಯನ್ನು ಖರೀದಿಸಲಾಗುತ್ತದೆ. ಆ ಮೂಲಕ ರೈತರಿಗೆ ಅನುಕೂಲವಾಗಲಿದೆ ಎಂದರು. ಈರುಳ್ಳಿ ಬೆಳೆದ ರೈತ ಹೊಸಮನಿ ಮಾತನಾಡಿ, ನ. 28ಕ್ಕಿಂತ ಪೂರ್ವದಲ್ಲಿ ರೈತರು ಮಾರಾಟ ಮಾಡಿರುವ ಈರುಳ್ಳಿಗೂ ಎರಡು ನೂರು ರೂಪಾಯಿಗಳ ಪ್ರೋತ್ಸಾಹ ಧನ ನೀಡಬೇಕು ಎಂದು ಮನವಿ ಮಾಡಿಕೊಂಡರು. ಎಪಿಎಂಸಿ ಉಪಾಧ್ಯಕ್ಷ ವಿರೂಪಾಕ್ಷಗೌಡ್ರ ಮರಿಗೌಡ್ರ, ಕಾರ್ಯದರ್ಶಿ ಎನ್.ಎಚ್. ಈಶ್ವರಾಚಾರಿ, ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಈರಣ್ಣ ಬೇವಿನಮರದ, ತರಕಾರಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಫರೀದ್ ಲೈನದ, ಕೊಟ್ರೇಶ ಅಂಗಡಿ ಮತ್ತಿತರರು ಇದ್ದರು.
ರಾಜ್ಯದಲ್ಲಿ ಸುಮಾರು 1.53ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು 29 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಬೆಳೆಯಲಾಗಿದೆ. ಅದಕ್ಕೆ ಪ್ರೋತ್ಸಾಹ ಧನ ನೀಡಲು ಸರ್ಕಾರ 50-75ಕೋಟಿ ಬಳಸಲು ನಿರ್ಧರಿಸಿದೆ.
.ಸುರೇಶ ಕುಂಬಾರ,
ತೋಟಗಾರಿಕೆ ಸಹಾಯಕ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…