ಕಡಲೆ-ಜೋಳಕ್ಕೆ  ರೋಗಬಾಧೆ 


Team Udayavani, Dec 13, 2018, 3:56 PM IST

13-december-19.gif

ಗಜೇಂದ್ರಗಡ: ಹಿಂಗಾರು ಹಂಗಾಮಿನ ಕಡಲೆ ಮತ್ತು ಜೋಳ ಬೆಳೆಗಳು ಫಸಲು ಹಂತಕ್ಕೆ ಬಂದಿರುವ ಸಮಯದಲ್ಲಿ ಕಾಯಿಕ ಕೊರಕ ರೋಗ ಕಾಣಿಸಿಕೊಂಡಿದ್ದು, ಕೈಗೆ ಬಂದು ತುತ್ತು ಬಾಯಿಗೆ ಬಾರದಂತ ಪರಿಸ್ಥಿತಿ ಗಜೇಂದ್ರಗಡ ತಾಲೂಕಿನ ರೈತರದ್ದಾಗಿದೆ. ಮಳೆ ಹಾಗೂ ತೇವಾಂಶ ಕೊರತೆಯಿಂದ ಬೆಳೆಗಳಿಗೆ ಕಾಯಿಕ ರೋಗ ಕಾಣಿಸಿಕೊಂಡಿದೆ. ಬೆಳೆಗಳನ್ನು ರಕ್ಷಿಸಿಕೊಳ್ಳಲು ಅನಿವಾರ್ಯವಾಗಿ ಕ್ರಿಮಿನಾಶಕ ಸಿಂಪಡಣೆಯಲ್ಲಿ ತೊಡಗಿರುವ ದೃಶ್ಯ ಸಾಮಾನ್ಯವಾಗಿದೆ.

ಮುಂಗಾರು ಹಂಗಾಮು ಬೆಳೆ ಕೈಕೊಟ್ಟಿತ್ತು. ಹಿಂಗಾರು ಹಂಗಾಮಿನ ಮಳೆ ಆಶ್ರಿತ ಎರಿ(ಕಪ್ಪು) ಭೂಮಿಯಲ್ಲಿ ರೈತರಯ ಅಣ್ಣಿಗೇರಿ ತಳಿಯ ಕಡಲೆ ಮತ್ತು ಜೋಳ ಬೀಜಗಳನ್ನು ಬಿತ್ತನೆ ಮಾಡಿದ್ದರು. ಅಲ್ಪಸಲ್ಪ ಹಿಂಗಾರು ಮಳೆಯಾಗಿತ್ತು. ಇದಲ್ಲದೆ ಇರುವ ಚಳಿಗಾಲದ ಹಿಬ್ಬನಿಯ ತೇವಾಂಶದಿಂದ ಬೆಳೆಗಳು ಹಸಿರಾಗಿದ್ದು, ಉತ್ತಮ ಇಳುವರಿ ನಿರೀಕ್ಷಿಸಲಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಕಾಯಿಕೊರಕ ರೋಗದಿಂದ ಇಳುವರಿ ಕ್ಷೀಣಬಹುದಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಬೆಳೆಯಲ್ಪಡುವ ಜೋಳ ಈ ಬಾರಿ 1,69,00 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕಡಲೆ 63,615 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಬೆಳೆಗಳಿಗೆ ಕಾಯಿಕೊರಕ ರೋಗ ಕಾಣಿಸಿಕೊಂಡಿದ್ದು, ಕೃಷಿ ತಜ್ಞರ ಸಲಹೆ ಮೇರೆಗೆ ಔಷಧಗಳನ್ನು ಸಿಂಪಡಿಸಿ ರೋಗಬಾಧೆ ಹತೋಟಿಗೆ ತರಲು ಯತ್ನಿಸಲಾಗುತ್ತಿದೆ ಎಂದು ರೈತರು ತಿಳಿಸುತ್ತಾರೆ. 

ದೇಶ-ವಿದೇಶದಲ್ಲೂ ಬೇಡಿಕೆ 
ಸೂಡಿ, ಕಳಕಾಪುರ, ದಿಂಡೂರ, ಕೊಡಗಾನೂರ, ರಾಜೂರ, ನೆಲ್ಲೂರ, ನಿಡಗುಂದಿ, ಹಾಳಕೇರಿ, ಜಕ್ಕಲಿ, ನೇರೆಗಲ್‌, ರೋಣ, ಇಟಗಿ, ಪ್ಯಾಟಿ, ಬೇವಿನಕಟ್ಟಿ, ಇನ್ನಿತರ ಗ್ರಾಮಗಳಲ್ಲಿ ಬೆಳೆಯುವ ಅಣ್ಣಿಗೇರಿ ತಳಿಯ ಕಡಲೆ ಕಾಳುಗಳಿಗೆ ದೇಶ, ವಿದೇಶಗಳಲ್ಲೂ ಭಾರಿ ಬೇಡಿಕೆ ಇದೆ. ಗದುಗಿನ ಕೃಷಿ ಮಾರುಕಟ್ಟೆಯಿಂದ ಕಡಲೆ ಹೊರ ದೇಶಗಳಿಗೂ ರವಾನೆಯಾಗುತ್ತದೆ. 

ಹಿಂಗಾರಿ ಜೋಳ, ಕಡಲೆ ಬೆಳಿ ಬೆಳದ ನಿಂತಾವ್ರಿ. ಆದ್ರ ಬೆಳೆಗೆ ಕೀಟಬಾಧೆ ಕಾಟ ಶುರುವಾಗೈತ್ರಿ. ಭೂ ತಾಯಿ ತನ್ನ ಮಕ್ಕಳನ್ನ ಎಂದೆಂದಿಗೂ ಕೈಬಿಡುವದಿಲ್ಲಾ. ನಮ್ಮ ಬದುಕು ಹಸನಾಗಿಸುತ್ತಾಳೆ ಅನ್ನುವ ಖಾತ್ರಿ ಐತ್ರಿ.
 ಕಳಕಪ್ಪ ಕುಂಬಾರ, ಜೋಳ, ಕಡಲೆ ಬೆಳೆದ ರೈತ

ಪ್ರಸಕ್ತ ಬಾರಿ ತಾಲೂಕಿನಲ್ಲಿ ಜೋಳ ಮತ್ತು ಕಡಲೆ ಸೇರಿ ಒಟ್ಟು 80,515 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಬೆಳೆಗಳಿಗೆ ಕೀಟಭಾದೆ ತಗುಲುವುದು ಸಾಮಾನ್ಯ. ರೈತರು ಇಮಾಮೆಟಿನ್‌ ಬೆಂಜಿವೆಟ್‌ ಮತ್ತು ಕ್ಲೋರೊಪರಿಪಾಸ್‌ ರಾಸಾಯನಿಕ ಸಿಂಪಡಿಸಲು ಮುಂದಾಗಬೇಕು. ರೈತ ಸಂಪರ್ಕ ಕೇಂದ್ರದಲ್ಲಿ ಕ್ರಿಮಿನಾಶಕ ದಾಸ್ತಾನು ಸಂಗ್ರಹಿಸಿ ರೈತರಿಗೆ ವಿತರಿಸಲಾಗುತ್ತಿದೆ.
ಸಿದ್ದೇಶ ಕೋಡಳ್ಳಿ, ಸಹಾಯಕ ಕೃಷಿ ನಿರ್ದೆಶಕ.

„ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.