ಮರಗಳ ಮಾರಣ ಹೋಮ


Team Udayavani, Jan 4, 2019, 10:56 AM IST

4-january-17.jpg

ಗಜೇಂದ್ರಗಡ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮರಗಳ್ಳರು ಹಾಡಹಗಲೇ ಬಹು ಮೌಲ್ಯದ ಮರಗಳನ್ನು ರಾಜಾರೋಷವಾಗಿ ಕಡಿಯುತ್ತಿದ್ದರೂ ಕ್ರಮಕ್ಕೆ ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳ ಮೌನ ಪರಿಸರ ಪ್ರೇಮಿಗಳನ್ನು ಕೆರಳಿಸುವಂತೆ ಮಾಡಿದೆ.

ಗೋಗೇರಿ, ಮಾಟರಂಗಿ, ದಿಂಡೂರ, ಲಕ್ಕಲಕಟ್ಟಿ, ನಾಗೇಂದ್ರಗಡ, ನೆಲ್ಲೂರ, ಕುಂಟೋಜಿ, ವದೇಗೋಳ ಗ್ರಾಮಗಳ ಬಳಿಯ ಬಹು ಅಮೂಲ್ಯ ಅರಣ್ಯ ಸಂಪತ್ತು ಮತ್ತು ರಸ್ತೆ ಬದಿ ಗಿಡಮರಗಳನ್ನು ದುಷ್ಕರ್ಮಿಗಳು ಕೊಳ್ಳೆ ಹೊಡೆಯುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ನಮಗೇನು ಗೊತ್ತಿಲ್ಲ ಎಂಬಂತೆ ವರ್ತಿಸುತ್ತಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ.

ರಸ್ತೆ ಬದಿಯ ಸರ್ಕಾರಿ ಸ್ವಾಮ್ಯದ ಗಿಡ ಮರಗಳನ್ನು ದುಷ್ಕರ್ಮಿಗಳು ಹಾಡಹಗಲೇ ಕಡಿದು ಲೂಟಿ ಮಾಡುತ್ತಿರುವುದನ್ನು ವಿರೋಧಿಸಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವಾರು ವರ್ಷಗಳ ಹಿಂದೆ ಅರಣ್ಯ ಇಲಾಖೆ ವತಿಯಿಂದ ನೆಟ್ಟಿರುವ ಈ ಮರಗಳು ದಾರಿ ಹೂಕರಿಗೆ ಮತ್ತು ದಣಿದ ಕೃಷಿಕರಿಗೆ ನೆರಳು ನೀಡುತ್ತಿದ್ದವು. ಆದರೀಗ ಅವುಗಳನ್ನು ದುಷ್ಕರ್ಮಿಗಳು ಕಾನೂನು ಬಾಹಿರವಾಗಿ ನಿತ್ಯ ಮರಗಳ ಮಾರಣ ಹೋಮ ನಡೆಸಿದ್ದಾರೆ. ದುಷ್ಕೃತ್ಯ ಹೀಗೆ ಬಿಟ್ಟರೆ ಕೆಲ ದಿನದಲ್ಲಿ ಎಲ್ಲ ಹಸಿರು ಸಂಪತ್ತು ನಾಶವಾಗುವುದರಲ್ಲಿ ಸಂದೇಹವೇ ಇಲ್ಲ.

ಸಸ್ಯ ಸಂಪತ್ತನ್ನು ಹಲವಾರು ವರ್ಷಗಳಿಂದ ದುಷ್ಕರ್ಮಿಗಳು ಕೊಳ್ಳೆ ಹೊಡೆಯುತ್ತಿರುವುದು ಇನ್ನೂ ಬೆಳಕಿಗೆ ಬಂದಿಲ್ಲ. ಆಯುರ್ವೇದಿಕ ಔಷಧಿ ಗುಣ ಸಸ್ಯಗಳು ಹೊಂದುವುದರ ಜತೆ ಸುತ್ತಲಿನ ಹಳ್ಳಿಗಳ ಜಾನುವಾರುಗಳಿಗೆ ಸಂಜೀವಿನಿಯಾಗಿವೆ. ಆದರೆ ಇವುಗಳ ರಕ್ಷಣೆ ಹೊಣೆ ಹೂತ್ತ ಸರ್ಕಾರ, ಬೇಜವಾಬ್ದಾರಿ ತೋರಿದ್ದರಿಂದ ಪರಿಸರ ಸಂಪತ್ತು ನಾಶವಾಗಿ ಬೋಳಾಕಾರ ಹಂತ ತಲುಪಿದೆ.

ಕಾಡು ಬೆಳೆಸಿ ನಾಡು ಉಳಿಸಿ ಎಂದು ಅರಣ್ಯ ಇಲಾಖೆ ಘಂಟಾಘೋಷಣೆ ಕೇವಲ ದಾಖಲೆಯಲ್ಲಿ ಉಳಿದಿದೆ. ಅನುಷ್ಠಾನದಲ್ಲಿ ಜಾರಿಯಾಗಿಲ್ಲ ಎಂಬುದಕ್ಕೆ ಸಾಕ್ಷಿಗಳು ಸಾಕಷ್ಟು ಸಿಗುತ್ತವೆ. ಅವಸಾನದ ಅಂಚಿಗೆ ತಲುಪಿರುವ ಅರಣ್ಯ ಸಂಪತ್ತು ಉಳಿಸಿ ಬೆಳೆಸದಿದ್ದರೆ ಜನ ಹೋರಾಟಕ್ಕೆ ಮುಂದಾಗಲಿದ್ದಾರೆ ಎನ್ನುವುದು ಪರಿಸರ ವಾದಿಗಳ ಎಚ್ಚರಿಕೆಯಾಗಿದೆ.

ಮನುಷ್ಯನ ಸ್ವಾರ್ಥಕ್ಕೆ ಪ್ರಕೃತಿ ನಿರ್ಮಿತ ಅರಣ್ಯ ಸಂಪತ್ತು ನಸಿಸುತ್ತಿದೆ. ತಾಲೂಕಿನಲ್ಲಿ ಅರಣ್ಯ ಇಲಾಖೆ ಇದೇಯೋ, ಇಲ್ಲವೋ ಎನ್ನುವ ಹಲವಾರು ಪ್ರಶ್ನೆಗಳು ಕಾಡುತ್ತಿವೆ. ನಿತ್ಯ ನಡೆಯುತ್ತಿರುವ ಗಿಡ ಮರಗಳ ಮಾರಣ ಹೋಮ ತಡೆಯುವರು ಯಾರು?
ಮಹಾಂತೇಶ್ವರ ಹೊಸಮನಿ, ಪರಿಸರ ಪ್ರೇಮಿ

ಪ್ರಕೃತಿ ನಿರ್ಮಿತ ಮತ್ತು ಅರಣ್ಯ ಇಲಾಖೆ ಸುಪರ್ದಿಯಲ್ಲಿನ ಗಿಡ ಮರಗಳನ್ನು ಕಡಿಯುವ ಮುನ್ನ ಅರಣ್ಯ ಇಲಾಖೆ ಪರವಾನಗಿ ಅಗತ್ಯ. ಕೆಲವರು ಅಕ್ರಮವಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ಇಲಾಖೆ ಗಮನಕ್ಕೆ ಬಂದಿದೆ. ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಜೊತೆಗೆ ಮರಗಳ ರಕ್ಷಣೆಗೆ ಇಲಾಖೆ ಜೊತೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ.
∙ಕಿರಣ ಅಂಗಡಿ,
ಪ್ರಾದೇಶಿಕ ವಲಯ ಅರಣ್ಯಾಧಿಕಾರಿ

ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.