30 ವಿಶೇಷ ಜಿಲ್ಲೆಗಳ ಪಟ್ಟಿಯಲ್ಲಿ ಗದಗ


Team Udayavani, Jan 6, 2019, 9:51 AM IST

6-january-17.jpg

ಗದಗ: ‘ವಿಶ್ವ ಶೌಚಾಲಯ ದಿನಾಚರಣೆ-2018’ರ ಭಾಗವಾಗಿ ‘ಸ್ವಚ್ಛ ಭಾರತ ಮಿಷನ್‌’ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಟಾಪ್‌-12 ಜಲ್ಲೆಗಳ ಹೊರತಾಗಿ ಮೂವತ್ತು ವಿಶೇಷ ಜಿಲ್ಲೆಗಳ ಪಟ್ಟಿಗೆ ಗದಗ ಜಿಲ್ಲೆ ಆಯ್ಕೆಯಾಗಿದೆ. ಉತ್ತರ ಕರ್ನಾಟಕದ ಮೊದಲ ಬಯಲು ಶೌಚ ಮುಕ್ತ ಜಿಲ್ಲೆಯೆಂಬ ಹೆಗ್ಗಳಿಕೆ ಪಡೆದಿರುವ ಗದಗ, ಶೌಚಾಲಯ ಅಗತ್ಯತೆ ಬಗ್ಗೆ ಪರಿಣಾಮಕಾರಿಯಾಗಿ ಜನಜಾಗೃತಿ ಮೂಡಿಸಿದ್ದಕ್ಕೆ ಇದೀಗ ರಾಷ್ಟ್ರಮಟ್ಟದ ಪ್ರಶಸ್ತಿಗೆ ಪಾತ್ರವಾಗಿದೆ.

‘ಸ್ವಚ್ಛ ಭಾರತ ಮಿಷನ್‌ ಗ್ರಾಮೀಣ ಯೋಜನೆ ಅನುಷ್ಠಾನಕ್ಕೆ ಬಂದು ಐದು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಕುಡಿಯುವ ನೀರು ಮುತ್ತು ನೈರ್ಮಲ್ಯ ಮಂತ್ರಾಲಯದಿಂದ 2018ರ ನ. 19ರಿಂದ 10 ದಿನಗಳ ಕಾಲ ದೇಶದ ಎಲ್ಲ ಜಿಲ್ಲೆಗಳಿಗೆ ‘ಸ್ವಚ್ಛ ಭಾರತ ಮಿಷನ್‌-ವಿಶ್ವ ಶೌಚಾಲಯ ದಿನಾಚರಣೆ-2018’ರ ಸ್ಪರ್ಧೆ ಆಯೋಜಿಸಿತ್ತು. ಗ್ರಾಮೀಣ ಭಾಗದಲ್ಲಿ ಶುಚಿತ್ವ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಜನಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

2012ರಲ್ಲಿ ನಡೆದ ಸಮೀಕ್ಷೆಯಂತೆ ಜಿಲ್ಲೆಯ 327 ಗ್ರಾಮಗಳಲ್ಲಿ ನಿರ್ಮಿಸಬೇಕಿದ್ದ ಒಟ್ಟು 1,35,434 ಶೌಚಾಲಯ ಗುರಿ ತಲುಪುವಲ್ಲಿ ಯಶಸ್ವಿಯಾಗಿದ್ದ ಗದಗ ಜಿಲ್ಲೆ, ಉತ್ತರ ಕರ್ನಾಟಕದ ಮೊದಲ ಬಯಲು ಬಹಿರ್ದೆಸೆ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಅದಕ್ಕೂ ಮುನ್ನ ನರಗುಂದ ತಾಲೂಕನ್ನು ರಾಜ್ಯದ ಮೊದಲ ಬಯಲು ಶೌಚಮುಕ್ತ ತಾಲೂಕು ಎಂದು 2017ರ ಸೆ. 26ರಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಘೋಷಿಸಿದ್ದರು. ಹೀಗಾಗಿ ಅದೇ ಹುರುಪಿನಲ್ಲಿದ್ದ ಜಿಪಂ ಅಧಿಕಾರಿಗಳು ವಿಶ್ವ ಶೌಚಾಲಯ ದಿನಾಚರಣೆ ಹತ್ತು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲರ ಗಮನ ಸೆಳೆದಿದ್ದರು.

ಪ್ರಶಸ್ತಿಗೆ ಆಯ್ಕೆ ವಿಧಾನ: ಗ್ರಾಮ ಮಟ್ಟದಲ್ಲಿ ಧಾರ್ಮಿಕ ಮುಖಂಡರು, ಜನಪ್ರನಿಧಿಗಳಿಂದ ಮನೆ ಮನೆ ಭೇಟಿ, ಮೇಣದ ಬತ್ತಿ ಜಾಥಾ ಮತ್ತು ಸ್ವಚ್ಛತಾ ರಥ, ಸಾಕ್ಷ್ಯಚಿತ್ರ ಪ್ರದರ್ಶನ, ಸಾಧಕರಿಗೆ ಸನ್ಮಾನ, ಗ್ರಾಮಗಳಲ್ಲಿ ಶಾಲಾ ಮಕ್ಕಳಿಂದ ಸೈಕಲ್‌ ಜಾಥಾ, ಶಾಲಾ ಮಕ್ಕಳಿಗೆ ಬಯಲು ಶೌಚಾಲಯ ಅಪಾಯಗಳು, ಬಯಲು ಮುಕ್ತ ಶೌಚಾಲಯ ಲಾಭಗಳ ಕುರಿತು ಪ್ರಬಂಧ, ಭಾಷಣ, ಮಹಿಳಾ ಸ್ವಸಹಾಯ ಸಂಘಗಳು, ಅಂಗನವಾಡಿ ಮತ್ತು ಆಶಾ ಕಾರ್ಯ ಕರ್ತೆಯರ ಮೂಲಕ ಜಾಗೃತಿ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅವುಗಳ ಆಯ್ದ ಚಿತ್ರ ಮತ್ತು ಮಾಹಿತಿಯೊಂದಿಗೆ ಕೇಂದ್ರ ಸರಕಾರದ ಸ್ವಚ್ಛ ಭಾರತ ಮಿಷನ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಅದರಂತೆ ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 412 ಜಿಲ್ಲೆಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.

ಈ ಕುರಿತು ಮೌಲ್ಯಮಾಪನ ನಡೆಸಿದ ಸ್ವಚ್ಛ ಭಾರತ ಅಭಿಯಾನದ ಅಧಿಕಾರಿಗಳು, ಅಗ್ರ ಶ್ರೇಯಾಂಕಿತ-12 ಜಿಲ್ಲೆಗಳಲ್ಲಿ ರಾಜ್ಯ ಕೊಡಗು 7ನೇ ಸ್ಥಾನ ಪಡೆದಿದೆ. ಅದರೊಂದಿಗೆ 13ನೇ ಸ್ಥಾನಕ್ಕೆ ಅರ್ಹತೆ ಪಡೆಯಬಹುದಾದಂಥ ಒಟ್ಟು 30 ಜಿಲ್ಲೆಗಳನ್ನು ವಿಶೇಷ ಜಿಲ್ಲೆಗಳೆಂದು ಪರಿಗಣಿಸಲಾಗಿದೆ. ಅದರಲ್ಲಿ ಗದಗ ಜಿಲ್ಲೆ ಆಯ್ಕೆಯಾಗಿರುವುದು ಸಂತಸದ ಸಂಗತಿ.

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಗೆ ಸ್ಥಾನ ಲಭಿಸಿರುವುದು ಖುಷಿ ತಂದಿದೆ. ಬಯಲು ಮುಕ್ತ ಶೌಚಾಲಯ ಕುರಿತು ಇನ್ನೂ ಹೆಚ್ಚಿನ ಜನಜಾಗೃತಿ ಮೂಡಿಸಬೇಕಿದೆ.
·ಮಂಜುನಾಥ ಚವ್ಹಾಣ,
ಜಿಪಂ ಸಿಇಒ

•ವಿಶೇಷ ವರದಿ

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.