ಜಲಕ್ಷಾಮ


Team Udayavani, Jan 11, 2019, 11:20 AM IST

11-january-23.jpg

ಗಜೇಂದ್ರಗಡ: ಪಟ್ಟಣದಲ್ಲಿ ಬೇಸಿಗೆಗೂ ಮುನ್ನವೇ ಜಲ ಕ್ಷಾಮ ಎದುರಾಗಿದೆ. ಈ ಹಿಂದೆ 10 ದಿನಕ್ಕೊಮ್ಮೆ ಪೂರೈಕೆಯಾಗುತ್ತಿದ್ದ ಕುಡಿಯುವ ನೀರು ಇದೀಗ 20 ದಿನಕ್ಕೆ ತಲುಪಿರುವುದು ಸಾರ್ವಜನಿಕರ ನಿದ್ದೆಗೆಡಿಸಿದೆ.

ಕೋಟೆ ಕೊತ್ತಲುಗಳ ನಾಡು ಎಂದೇ ಖ್ಯಾತಿ ಪಡೆದ ಗಜೇಂದ್ರಗಡದಲ್ಲಿ ಜೀವ ಜಲಕ್ಕಾಗಿ ಕಳೆದ ಮೂರು ತಿಂಗಳ ಹಿಂದೆ ಜನರು ಜಗಳ ಮಾಡುವ ದುಸ್ಥಿತಿ ಎದುರಾಗಿತ್ತು. ನೀರಿನ ಬವಣೆ ಕಂಡರಿಯದ ಈ ಭಾಗದ ಜನರು ಸಮಸ್ಯೆಯಿಂದ ಬಸವಳಿದು ನೀರಿಗಾಗಿ ನಿತ್ಯ ಪರದಾಡುವ ಅನಿವಾರ್ಯತೆ ಎದುರಾಗಿತ್ತು. ಆದರೆ ಪುರಸಭೆ ಅಧಿಕಾರಿಗಳು ಪಟ್ಟಣದೆಲ್ಲೆಡೆ ಕೊಳವೆಬಾವಿ ಕೊರೆಯಿಸಿ ನೀರು ಸಂಗ್ರಹಿಸಿ 10 ದಿನಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿದ್ದರು. ಆದರೆ ಬರದ ಛಾಯೆಯಿಂದ ಇದೀಗ ಮತ್ತೆ 20 ದಿನಕ್ಕೊಮ್ಮೆ ನೀರು ಸರಬರಾಜಾಗುತ್ತಿರುವುದು ಜನರನ್ನು ಚಿಂತೆಗೆ ಜಾರುವಂತೆ ಮಾಡಿದೆ. ಅಂತರ್ಜಲ ಕುಸಿದ ಪರಿಣಾಮ ನೀರಿನ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿಂದೆ ಪುರಸಭೆ ಪಟ್ಟಣದಲ್ಲಿ 8ರಿಂದ 10 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿತ್ತು. ಇದರಿಂದ ಜನರಿಗೆ ನೀರಿನ ಯಾವುದೇ ತೊಂದರೆ ಕಾಡಿರಲಿಲ್ಲ. ಆದರೆ ಪಟ್ಟಣದ ಅನೇಕ ಬಡಾವಣೆಗಳಲ್ಲಿ ಕುಡಿಯುವ ನೀರಿಗೆ ಸಂಚಕಾರ ಎದುರಾಗಿದೆ. ಕುಡಿಯುವ ನೀರು ವ್ಯತ್ಯಯದಿಂದಾಗಿ ಎಲ್ಲ ಓಣಿಗಳ ನಿವಾಸಿಗಳು ಕೊಡ ಹಿಡಿದು ಅಲೆದಾಡುವುದು ಸಾಮಾನ್ಯವಾಗಿದೆ.

ಪಟ್ಟಣದ ಗುಡ್ಡದ ಕೆಳಭಾಗದಲ್ಲಿರುವ ವಾಜಪೇಯಿ ಬಡಾವಣೆಯಲ್ಲಿ 199 ಕುಟುಂಬಗಳು ವಾಸಿಸುತ್ತಿವೆ. ಅಲ್ಲಿನ ಜನರಿಗೆ ಇರುವುದು 8 ನಳಗಳು ಮಾತ್ರ. ನೀರು ಪೂರೈಕೆಯಾದ ಸಂದರ್ಭದಲ್ಲಿ ಪರಸ್ಪರ ಕಚ್ಚಾಡಿ ನೀರು ಪಡೆಯುವ ಸ್ಥಿತಿ ಉದ್ಭವಿಸಿದೆ. ಹಲವು ವರ್ಷಗಳಿಂದ ಇದೇ ಪರಿಸ್ಥಿತಿ ಅನುಭವಿಸುತ್ತಿರುವ ಬಡಾವಣೆ ನಿವಾಸಿಗಳ ಆರ್ಥನಾದ ಕೇಳುವವರಿಲ್ಲದಂತಾಗಿದೆ.

ಕುಡಿಯುವ ನೀರಿಗಾಗಿ ನಿತ್ಯ ಒಂದಿಲ್ಲೊಂದು ವಾರ್ಡ್‌ಗಳ ನಿವಾಸಿಗಳು ಖಾಲಿ ಕೊಡ ಹಿಡಿದು ಪುರಸಭೆ ಮುಂದೆ ಪ್ರತಿಭಟನೆ ನಡೆಸುವುದು ಸಾಮಾನ್ಯವಾಗಿದೆ. ಸಮರ್ಪಕ ನೀರು ಬಾರದಿದ್ದರೂ ಪ್ರತಿ ವರ್ಷ ಪುರಸಭೆಗೆ ನೀರಿನ ಕರ ಭರಿಸುವುದು ತಪ್ಪಿಲ್ಲ. ಹಣ ನೀಡಿ ಖಾಸಗಿಯವರಿಂದ ನೀರು ಹಾಕಿಸಿಕೊಳ್ಳುವುದು ತಪ್ಪ್ಪಿಲ್ಲ ಎಂದು ಸಾರ್ವಜನಿಕರು ಪುರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಪಟ್ಟಣದ ವಿವಿಧ ವಾರ್ಡ್‌ ಜತೆ ಹೊರ ವಲಯದಲ್ಲಿ ಪುರಸಭೆಯಿಂದ ಕೊರೆಸಿದ 63 ಕೊಳವೆ ಬಾವಿಗಳಲ್ಲಿ 33 ಕೊಳವೆ ಬಾವಿಗಳಲ್ಲಿ ಮಾತ್ರ ನಿತ್ಯ 6. 5 ಲಕ್ಷ ಲೀಟರ ನೀರು ಸಂಗ್ರಹವಾಗುತ್ತಿದೆ. ಹೀಗಾಗಿ ಪಟ್ಟಣದ 23 ವಾರ್ಡ್‌ಗಳಿಗೆ ಸಮರ್ಪಕ ನೀರು ಪೂರೈಸಲಾಗದಂತಾಗಿದೆ ಎನ್ನುವುದು ಅಧಿಕಾರಿಗಳ ಮಾತಾಗಿದೆ. ಪಟ್ಟಣದಲ್ಲಿನ ಜಲಕ್ಷಾಮವನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಖಾಸಗಿ ಟ್ಯಾಂಕರ್‌ ನೀರು ಸರಬರಾಜುದಾರರು 300ರಿಂದ 350 ರುಪಾಯಿ ನೀಡಿದರೂ ಸಮಯಕ್ಕೆ ಸರಿಯಾಗಿ ನೀರು ತರದೇ ಸತಾಯಿಸುತ್ತಾರೆ. ಹೀಗಾಗಿ ಟ್ಯಾಂಕರ್‌ ನೀರು ಸರಬರಾಜುದಾರರಿಗೆ ಈಗ ಬಹಳಷ್ಟು ಬೇಡಿಕೆ ಬಂದಿದೆ.

ಪಟ್ಟಣದಲ್ಲಿ ಪುರಸಭೆ 20 ದಿನಕ್ಕೊಮ್ಮೆ ನೀರು ಪೂರೈಸುತ್ತಿದೆ. ನೀರು ಶೇಖರಣೆ ಮಾಡಿಕೊಳ್ಳುವುದು ಕಷ್ಟಕರವಾಗಿದೆ. ಯಾವ ಬಡಾವಣೆಯಲ್ಲಿ ನೀರು ಬಿಡುತ್ತಾರೋ ಅಲ್ಲಿ ನಿತ್ಯ ಕೊಡ ಹಿಡಿದು ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ.
•ಯಲ್ಲವ್ವ ಬಂಡಿವಡ್ಡರ

ಪಟ್ಟಣದಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ ಮಾಡುವ ನಿಟ್ಟಿನಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆಯುವುದರ ಜತೆಗೆ ಬಡಾವಣೆಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಕುರಿತು ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ಜಿಲ್ಲಾಡಳಿತ ನಿರ್ದೇಶಿಸಿದ್ದು, ಸಮರ್ಪಕ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು.
ಹನಮಂತಮ್ಮ ನಾಯಕ,
ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.